Homeಅಂತರಾಷ್ಟ್ರೀಯಅಗ್ರೆಸ್ಸಿವ್ ಅಪೀಲ್ ಕೊಹ್ಲಿಗೆ ದಂಡ: ವಿರಾಟ್ ಹೀಗೇಕೆ ಮಾಡಿದರು?

ಅಗ್ರೆಸ್ಸಿವ್ ಅಪೀಲ್ ಕೊಹ್ಲಿಗೆ ದಂಡ: ವಿರಾಟ್ ಹೀಗೇಕೆ ಮಾಡಿದರು?

- Advertisement -
- Advertisement -

| ನಾನುಗೌರಿ ಡೆಸ್ಕ್ |

ಶನಿವಾರ ನಡೆದ ಆಫ್ಘಾನಿಸ್ಥಾನದ ವಿರುದ್ಧದ ಪಂದ್ಯದಲ್ಲಿ 29 ಒವರ್ ನಲ್ಲಿ ಜಸ್ಪ್ರಿತ್ ಬೂಮ್ರ ಎಸೆದ ಬಾಲ್ ಆಫ್ಘನ್‍ನ ಬ್ಯಾಟ್ಸ್‍ಮನ್ ರಹಮತ್ ಶಾ ಅವರ ಪ್ಯಾಡ್‍ಗೆ ಬಡಿದಿತ್ತು. ಔಟ್‍ಗೆ ಮನವಿ ಮಾಡಿದಾಗ ಅಂಪೈಲ್ ಅಲಿಮ್‍ದರ್ ಔಟ್ ನೀಡಲಿಲ್ಲ. ಇದರಿಂದ ಕುಪಿತನಾದ ಭಾರತದ ಕ್ಯಾಪ್ಟನ್ ಕೊಹ್ಲಿ ಅಂಪೈರ್‍ರತ್ತ ಧಾವಿಸಿದ್ದಲ್ಲದೇ ಮತ್ತಷ್ಟು ಆಕ್ರೋಶದಿಂದ ಡಿ.ಆರ್.ಎಸ್ ಅಪೀಲ್ ಮಾಡಿದರು.

ಪಂದ್ಯದ ನಂತರ ಕೊಹ್ಲಿಗೆ ಐಸಿಸಿ ಪಂದ್ಯದ ಶೇ.25ರಷ್ಟು ಸಂಭಾವನೆಯನ್ನು ದಂಡವಾಗಿ ವಿಧಿಸಿದ್ದಲ್ಲದೇ ಅವರಿಗೆ ಒಂದು ಅನರ್ಹತಾ ಅಂಕ ನೀಡಲಾಗಿದೆ. 18 ತಿಂಗಳ ಅವಧಿಯಲ್ಲಿ ಇದು ಅವರು ಪಡೆಯುತ್ತಿರುವ ಎರಡನೇ ಅನರ್ಹತಾ ಅಂಕವಾಗಿದೆ. ಎರಡು ವರ್ಷದ ಅವಧಿಯಲ್ಲಿ ನಾಲ್ಕು ಅನರ್ಹತಾ ಅಂಕಗಳು ಬಂದರೆ ಒಂದು ಅಮಾನತು ಅಂಕ ಎಂದು ಪರಿಗಣಿಸಲಾಗುತ್ತದೆ. ಒಂದು ವೇಳೆ ಎರಡು ಅಮಾನತು ಅಂಕ ಪಡೆದಲ್ಲಿ ಅವರು 2 ಏಕದಿನ ಅಥವಾ ಒಂದು ಟೆಸ್ಟ್ ಪಂದ್ಯದಿಂದ ಅಮಾನತ್ತಾಗುವ ಅಪಾಯವಿರುತ್ತದೆ.

ಕಳೆದ ವರ್ಷ ಜನವರಿ 16ರಂದು ದಕ್ಷಿಣ ಆಫ್ರಿಕಾ ವಿರುದ್ಧದ ಕೇಪ್ ಟೌನ್ ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಮಳೆ ಮತ್ತು ಮಂದಬೆಳಕಿನ ಕಾರಣದಿಂದ ಪಂದ್ಯವನ್ನು ಸ್ಥಗಿತಗೊಳಿಸಲು ಅಂಪೈಲ್ ಮುಂದಾದರು. ಆಗ ಕೊಹ್ಲಿ ಬೇಸರದಿಂದ ತನ್ನ ಕೈಲಿದ್ದ ಬಾಲ್ ಅನ್ನು ನೆಲಕ್ಕೆ ಜೋರಾಗಿ ಎಸೆದಿದ್ದಲ್ಲದೇ ಅಂಪೈರ್ ಜೊತೆ ವಾಗ್ವಾದಕ್ಕೆ ಮುಂದಾಗಿದ್ದಾರು. ಆಗ ಐಸಿಸಿ ಪಂದ್ಯದ ಶೇ.25ರಷ್ಟು ಸಂಭಾವನೆಯನ್ನು ದಂಡವಾಗಿ ವಿಧಿಸಿದ್ದರು.

ತಂಡದ ಕ್ಯಾಪ್ಟನ್ ಆಗಿ ಗೆಲುವಿಗಾಗಿ ಹಂಬಲಿಸುವ ವೇಳೆ ಅವರಿಗೆ ಸಾಕಷ್ಟು ಒತ್ತಡ ಇರುತ್ತದೆ. ಹಾಗಾಗಿ ಈ ರೀತಿಯಾಗಿ ಕೊಹ್ಲಿ ವರ್ತಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಡಿಆರ್‍ಎಸ್ ಬಗ್ಗೆ ನಿಮಗೆ ಗೊತ್ತೆ?
ಡಿಆರ್‍ಎಸ್ ಡಿಸಿಷನ್ ರಿವ್ಯೂ ಸಿಸ್ಟಮ್ ಅನ್ನು ಕ್ರಿಕೆಟ್‍ನಲ್ಲಿ ಪರಿಚಯಿಸಲಾಗಿದೆ. ಪ್ರತಿ ತಂಡಕ್ಕೆ ಬ್ಯಾಟಿಂಗ್‍ನಲ್ಲೊಂದು ಮತ್ತು ಬೌಲಂಗ್ ವಿಭಾಗದಲ್ಲೊಂದು ರಿವ್ಯೂ ಕೇಳಲು ಅವಕಾಶ ಡಿಆರ್‍ಎಸ್ ನಲ್ಲಿ ಅವಕಾಶವಿದೆ. ಆ ರಿವ್ಯೂ ಯಶಸ್ವಿಯಾದಲ್ಲಿ ರಿವ್ಯೂ ಉಳಿದುಕೊಂಡಿರುತ್ತದೆ. ಒಂದು ವೇಳೆ ರಿವ್ಯೂ ವಿಫಲವಾದಲ್ಲಿ ಆ ತಂಡ ರಿವ್ಯೂ ಕಳೆದುಕೊಳ್ಳಲ್ಲಿದ್ದು ನಂತರ ಅಂಪೈರ್ ತೀರ್ಮಾನಕ್ಕೆ ಬದ್ಧವಾಗಿರಬೇಕಾಗುತ್ತದೆ. ಎಲ್.ಬಿ.ಡಬ್ಲೂ, ಕ್ಯಾಚ್ ಮುಂತಾದವುಗಳಿಗೆ ಅಂಪೈರ್ ಔಟ್ ನೀಡಿದೀಗ ಬ್ಯಾಟ್ಸ್‍ಮನ್ ಗಳ ಕಡೆಯಿಂದಲೂ, ಒಂದು ವೇಳೆ ನಾಟೌಟ್ ನೀಡಿದರೆ ಬೌಲರ್‍ಗಳ ಕಡೆಯಿಂದಲೂ ಡಿ.ಆರ್.ಎಸ್ ಕೇಳಬಹುದಾಗಿದೆ.

ಮೊನ್ನೆಯ ಒಂದು ಪಂದ್ಯದಲ್ಲಿ ಆಸ್ಟ್ರೇಲಿಯಾ ಐದು ಬಾರಿ ಡಿಆರ್‍ಎಸ್ ಕೇಳಿ ಯಶಸ್ವಿಯಾಗಿದೆ. ಕೆಲವೊಂದು ತಂಡಗಳು ಮೊದಲ ಪ್ರಯತ್ನದಲ್ಲಿಯೇ ವಿಫಲವಾಗಿ ಡಿಆರ್‍ಎಸ್ ಕಳೆದುಕೊಂಡ ಉದಾಹರಣೆಗಳು ಇವೆ. ಬೌಲ್ ಆದ 15 ಸೆಕೆಂಡ್ ಒಳಗೆ ರಿವ್ಯೂ ಕೇಳಲು ಅವಕಾಸವಿರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...