Homeಅಂತರಾಷ್ಟ್ರೀಯಅಗ್ರೆಸ್ಸಿವ್ ಅಪೀಲ್ ಕೊಹ್ಲಿಗೆ ದಂಡ: ವಿರಾಟ್ ಹೀಗೇಕೆ ಮಾಡಿದರು?

ಅಗ್ರೆಸ್ಸಿವ್ ಅಪೀಲ್ ಕೊಹ್ಲಿಗೆ ದಂಡ: ವಿರಾಟ್ ಹೀಗೇಕೆ ಮಾಡಿದರು?

- Advertisement -
- Advertisement -

| ನಾನುಗೌರಿ ಡೆಸ್ಕ್ |

ಶನಿವಾರ ನಡೆದ ಆಫ್ಘಾನಿಸ್ಥಾನದ ವಿರುದ್ಧದ ಪಂದ್ಯದಲ್ಲಿ 29 ಒವರ್ ನಲ್ಲಿ ಜಸ್ಪ್ರಿತ್ ಬೂಮ್ರ ಎಸೆದ ಬಾಲ್ ಆಫ್ಘನ್‍ನ ಬ್ಯಾಟ್ಸ್‍ಮನ್ ರಹಮತ್ ಶಾ ಅವರ ಪ್ಯಾಡ್‍ಗೆ ಬಡಿದಿತ್ತು. ಔಟ್‍ಗೆ ಮನವಿ ಮಾಡಿದಾಗ ಅಂಪೈಲ್ ಅಲಿಮ್‍ದರ್ ಔಟ್ ನೀಡಲಿಲ್ಲ. ಇದರಿಂದ ಕುಪಿತನಾದ ಭಾರತದ ಕ್ಯಾಪ್ಟನ್ ಕೊಹ್ಲಿ ಅಂಪೈರ್‍ರತ್ತ ಧಾವಿಸಿದ್ದಲ್ಲದೇ ಮತ್ತಷ್ಟು ಆಕ್ರೋಶದಿಂದ ಡಿ.ಆರ್.ಎಸ್ ಅಪೀಲ್ ಮಾಡಿದರು.

ಪಂದ್ಯದ ನಂತರ ಕೊಹ್ಲಿಗೆ ಐಸಿಸಿ ಪಂದ್ಯದ ಶೇ.25ರಷ್ಟು ಸಂಭಾವನೆಯನ್ನು ದಂಡವಾಗಿ ವಿಧಿಸಿದ್ದಲ್ಲದೇ ಅವರಿಗೆ ಒಂದು ಅನರ್ಹತಾ ಅಂಕ ನೀಡಲಾಗಿದೆ. 18 ತಿಂಗಳ ಅವಧಿಯಲ್ಲಿ ಇದು ಅವರು ಪಡೆಯುತ್ತಿರುವ ಎರಡನೇ ಅನರ್ಹತಾ ಅಂಕವಾಗಿದೆ. ಎರಡು ವರ್ಷದ ಅವಧಿಯಲ್ಲಿ ನಾಲ್ಕು ಅನರ್ಹತಾ ಅಂಕಗಳು ಬಂದರೆ ಒಂದು ಅಮಾನತು ಅಂಕ ಎಂದು ಪರಿಗಣಿಸಲಾಗುತ್ತದೆ. ಒಂದು ವೇಳೆ ಎರಡು ಅಮಾನತು ಅಂಕ ಪಡೆದಲ್ಲಿ ಅವರು 2 ಏಕದಿನ ಅಥವಾ ಒಂದು ಟೆಸ್ಟ್ ಪಂದ್ಯದಿಂದ ಅಮಾನತ್ತಾಗುವ ಅಪಾಯವಿರುತ್ತದೆ.

ಕಳೆದ ವರ್ಷ ಜನವರಿ 16ರಂದು ದಕ್ಷಿಣ ಆಫ್ರಿಕಾ ವಿರುದ್ಧದ ಕೇಪ್ ಟೌನ್ ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಮಳೆ ಮತ್ತು ಮಂದಬೆಳಕಿನ ಕಾರಣದಿಂದ ಪಂದ್ಯವನ್ನು ಸ್ಥಗಿತಗೊಳಿಸಲು ಅಂಪೈಲ್ ಮುಂದಾದರು. ಆಗ ಕೊಹ್ಲಿ ಬೇಸರದಿಂದ ತನ್ನ ಕೈಲಿದ್ದ ಬಾಲ್ ಅನ್ನು ನೆಲಕ್ಕೆ ಜೋರಾಗಿ ಎಸೆದಿದ್ದಲ್ಲದೇ ಅಂಪೈರ್ ಜೊತೆ ವಾಗ್ವಾದಕ್ಕೆ ಮುಂದಾಗಿದ್ದಾರು. ಆಗ ಐಸಿಸಿ ಪಂದ್ಯದ ಶೇ.25ರಷ್ಟು ಸಂಭಾವನೆಯನ್ನು ದಂಡವಾಗಿ ವಿಧಿಸಿದ್ದರು.

ತಂಡದ ಕ್ಯಾಪ್ಟನ್ ಆಗಿ ಗೆಲುವಿಗಾಗಿ ಹಂಬಲಿಸುವ ವೇಳೆ ಅವರಿಗೆ ಸಾಕಷ್ಟು ಒತ್ತಡ ಇರುತ್ತದೆ. ಹಾಗಾಗಿ ಈ ರೀತಿಯಾಗಿ ಕೊಹ್ಲಿ ವರ್ತಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಡಿಆರ್‍ಎಸ್ ಬಗ್ಗೆ ನಿಮಗೆ ಗೊತ್ತೆ?
ಡಿಆರ್‍ಎಸ್ ಡಿಸಿಷನ್ ರಿವ್ಯೂ ಸಿಸ್ಟಮ್ ಅನ್ನು ಕ್ರಿಕೆಟ್‍ನಲ್ಲಿ ಪರಿಚಯಿಸಲಾಗಿದೆ. ಪ್ರತಿ ತಂಡಕ್ಕೆ ಬ್ಯಾಟಿಂಗ್‍ನಲ್ಲೊಂದು ಮತ್ತು ಬೌಲಂಗ್ ವಿಭಾಗದಲ್ಲೊಂದು ರಿವ್ಯೂ ಕೇಳಲು ಅವಕಾಶ ಡಿಆರ್‍ಎಸ್ ನಲ್ಲಿ ಅವಕಾಶವಿದೆ. ಆ ರಿವ್ಯೂ ಯಶಸ್ವಿಯಾದಲ್ಲಿ ರಿವ್ಯೂ ಉಳಿದುಕೊಂಡಿರುತ್ತದೆ. ಒಂದು ವೇಳೆ ರಿವ್ಯೂ ವಿಫಲವಾದಲ್ಲಿ ಆ ತಂಡ ರಿವ್ಯೂ ಕಳೆದುಕೊಳ್ಳಲ್ಲಿದ್ದು ನಂತರ ಅಂಪೈರ್ ತೀರ್ಮಾನಕ್ಕೆ ಬದ್ಧವಾಗಿರಬೇಕಾಗುತ್ತದೆ. ಎಲ್.ಬಿ.ಡಬ್ಲೂ, ಕ್ಯಾಚ್ ಮುಂತಾದವುಗಳಿಗೆ ಅಂಪೈರ್ ಔಟ್ ನೀಡಿದೀಗ ಬ್ಯಾಟ್ಸ್‍ಮನ್ ಗಳ ಕಡೆಯಿಂದಲೂ, ಒಂದು ವೇಳೆ ನಾಟೌಟ್ ನೀಡಿದರೆ ಬೌಲರ್‍ಗಳ ಕಡೆಯಿಂದಲೂ ಡಿ.ಆರ್.ಎಸ್ ಕೇಳಬಹುದಾಗಿದೆ.

ಮೊನ್ನೆಯ ಒಂದು ಪಂದ್ಯದಲ್ಲಿ ಆಸ್ಟ್ರೇಲಿಯಾ ಐದು ಬಾರಿ ಡಿಆರ್‍ಎಸ್ ಕೇಳಿ ಯಶಸ್ವಿಯಾಗಿದೆ. ಕೆಲವೊಂದು ತಂಡಗಳು ಮೊದಲ ಪ್ರಯತ್ನದಲ್ಲಿಯೇ ವಿಫಲವಾಗಿ ಡಿಆರ್‍ಎಸ್ ಕಳೆದುಕೊಂಡ ಉದಾಹರಣೆಗಳು ಇವೆ. ಬೌಲ್ ಆದ 15 ಸೆಕೆಂಡ್ ಒಳಗೆ ರಿವ್ಯೂ ಕೇಳಲು ಅವಕಾಸವಿರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.9) ಹಲವಾರು ನಿರ್ದೇಶನಗಳನ್ನು ನೀಡಿದೆ. ಚುನಾವಣಾ ಆಯೋಗವು ನಿಯೋಜಿಸಿರುವ ಮೈಕ್ರೋ-ಅಬ್ಸರ್ವರ್‌ಗಳ (ಸೂಕ್ಷ್ಮ ವೀಕ್ಷಕರು) ಬದಲಿಗೆ ಗ್ರೂಪ್...

ಮುಸ್ಲಿಮರಿಗೆ ಗುಂಡಿಕ್ಕುವಂತೆ ವಿಡಿಯೋ ಹಂಚಿಕೆ: ಅಸ್ಸಾಂ ಸಿಎಂ ವಿರುದ್ಧ ಓವೈಸಿ ದೂರು: ದ್ವೇಷ ಭಾಷಣ ಆದೇಶ ಉಲ್ಲೇಖ 

ಅಸ್ಸಾಂ ಬಿಜೆಪಿ ಘಟಕದ ಅಧಿಕೃತ 'ಎಕ್ಸ್' ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾದ ಮತ್ತು ಈಗ ಅಳಿಸಲಾದ ವೀಡಿಯೊದಲ್ಲಿ, ಮುಸ್ಲಿಮರ ಮೇಲೆ ಸಾಂಕೇತಿಕವಾಗಿ ಗುಂಡು ಹಾರಿಸುತ್ತಿರುವುದನ್ನು ತೋರಿಸಲಾಗಿದೆ ಎಂದು ಆರೋಪಿಸಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ...

ನರವಾಣೆ ಪುಸ್ತಕಕ್ಕೆ ಹೆದರಿ ಪ್ರಧಾನಿ ಲೋಕಸಭೆಗೆ ಬರುತ್ತಿಲ್ಲ : ರಾಹುಲ್ ಗಾಂಧಿ

ಪ್ರತಿಪಕ್ಷಗಳು ಎತ್ತಿರುವ ವಿಷಯಗಳಿಂದ, ವಿಶೇಷವಾಗಿ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಪುಸ್ತಕದ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭಯಗೊಂಡಿದ್ದಾರೆ. ಹಾಗಾಗಿ, ಅವರು ರಾಷ್ಟ್ರಪತಿಯ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ...

ಡಿಜಿಟಲ್ ‘ಡಕಾಯಿತಿ’: 54,000 ಕೋಟಿಗೂ ಹೆಚ್ಚಿನ ಹಣ ವಂಚನೆ: ಎಸ್‌ಒಪಿ ರಚಿಸಲು ಕೇಂದ್ರಕ್ಕೆ ಸೂಚನೆ ನೀಡಿದ ಸುಪ್ರೀಂ

ನವದೆಹಲಿ: ಡಿಜಿಟಲ್ ವಂಚನೆಯಿಂದ 54,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವಂಚಿಸುವುದು ಸಂಪೂರ್ಣ "ದರೋಡೆ ಅಥವಾ ಡಕಾಯಿತಿ" ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಣ್ಣಿಸಿದೆ ಮತ್ತು ಅಂತಹ ಪ್ರಕರಣಗಳನ್ನು ನಿಭಾಯಿಸಲು ಆರ್‌ಬಿಐ, ಬ್ಯಾಂಕುಗಳು...

ಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

ತಮಗೂ ಪಾಕಿಸ್ತಾನಕ್ಕೂ ಸಂಬಂಧವಿದೆ ಎಂಬ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆರೋಪಗಳನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ತಳ್ಳಿಹಾಕಿದ್ದು, ಎಸ್‌ಐಟಿ ವರದಿಯು ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಬಳಿಯೇ ಇದೆ....

ಪಂಜಾಬ್: ತರಗತಿಯೊಳಗೆ ವಿದ್ಯಾರ್ಥಿನಿಯನ್ನು ಕೊಂದು, ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

ಚಂಡೀಗಢ: ಪಂಜಾಬ್‌ನ ತರ್ನ್ ತರಣ್ ಜಿಲ್ಲೆಯಲ್ಲಿ ಕಾನೂನು ವಿದ್ಯಾರ್ಥಿಯೊಬ್ಬ ಶಾಲಾ ಕೋಣೆಯೊಳಗೆ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಕೊಂದ ಘಟನೆ ಸೋಮವಾರ ನಡೆದಿದೆ. ಸಹಪಾಠಿಗಳು ಭಯಭೀತರಾಗಿ ನೋಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು...

ಅಸ್ಸಾಂ ಸಿಎಂ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ : ಗೌರವ್ ಗೊಗೊಯ್

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಮುಸ್ಲಿಮರ ವಿರುದ್ದ ದ್ವೇಷ ಹರಡುತ್ತಿದ್ದಾರೆ, ಅವರ ಜನಾಂಗೀಯ ಹತ್ಯೆಗೆ ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಹಾಗೂ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ. ಅಸ್ಸಾಂ...

‘ಎಂಡಿಎಂಎ ಡ್ರಗ್ಸ್ ಕೇಂದ್ರವಾಗಿ ಮಾರ್ಪಟ್ಟ ಮಧ್ಯಪ್ರದೇಶ-ರಾಜಸ್ಥಾನ ಗಡಿ’: 13ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದ ಪೊಲೀಸರು. 

ಭೋಪಾಲ್: ದೇಶದ ಅಫೀಮು ಕೃಷಿ ಮತ್ತು ಕಳ್ಳಸಾಗಣೆ ಮಾರ್ಗವಾಗಿ ದೀರ್ಘಕಾಲದಿಂದ ಕುಖ್ಯಾತಿ ಗಳಿಸಿರುವ ಪಶ್ಚಿಮ ಮಧ್ಯಪ್ರದೇಶ ಮತ್ತು ಪಕ್ಕದ ಆಗ್ನೇಯ ರಾಜಸ್ಥಾನದ ಜಿಲ್ಲೆಗಳು ಈಗ MDMA ಸಂಶ್ಲೇಷಿತ ಡ್ರಗ್ಸ್ ಅಕ್ರಮ ಉತ್ಪಾದನೆ ಮತ್ತು...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ವಿರೋಧ ಪಕ್ಷಗಳು: ವರದಿ

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ವಿಪಕ್ಷ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ 'ಅನಿರೀಕ್ಷಿತ ಕೃತ್ಯ' ಎಸಗಲು ಸಂಚು...

ಮೆಟಾ-ವಾಟ್ಸಾಪ್ ಗೌಪ್ಯತೆ ನೀತಿ ಪ್ರಕರಣ: ಸುಪ್ರೀಂ ಕೋರ್ಟ್ ವಿಚಾರಣೆ ಫೆಬ್ರವರಿ 23ಕ್ಕೆ ಮುಂದೂಡಿಕೆ 

ನವದೆಹಲಿ: ಗೌಪ್ಯತೆ ನೀತಿಯ ಮೇಲೆ 213.14 ಕೋಟಿ ರೂ. ದಂಡ ವಿಧಿಸಿದ ಭಾರತೀಯ ಸ್ಪರ್ಧಾ ಆಯೋಗದ (ಸಿಸಿಐ) ಆದೇಶದ ವಿರುದ್ಧ ಮೆಟಾ ಪ್ಲಾಟ್‌ಫಾರ್ಮ್ಸ್ ಇಂಕ್ ಮತ್ತು ವಾಟ್ಸಾಪ್ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್...