Homeಅಂತರಾಷ್ಟ್ರೀಯಅಗ್ರೆಸ್ಸಿವ್ ಅಪೀಲ್ ಕೊಹ್ಲಿಗೆ ದಂಡ: ವಿರಾಟ್ ಹೀಗೇಕೆ ಮಾಡಿದರು?

ಅಗ್ರೆಸ್ಸಿವ್ ಅಪೀಲ್ ಕೊಹ್ಲಿಗೆ ದಂಡ: ವಿರಾಟ್ ಹೀಗೇಕೆ ಮಾಡಿದರು?

- Advertisement -
- Advertisement -

| ನಾನುಗೌರಿ ಡೆಸ್ಕ್ |

ಶನಿವಾರ ನಡೆದ ಆಫ್ಘಾನಿಸ್ಥಾನದ ವಿರುದ್ಧದ ಪಂದ್ಯದಲ್ಲಿ 29 ಒವರ್ ನಲ್ಲಿ ಜಸ್ಪ್ರಿತ್ ಬೂಮ್ರ ಎಸೆದ ಬಾಲ್ ಆಫ್ಘನ್‍ನ ಬ್ಯಾಟ್ಸ್‍ಮನ್ ರಹಮತ್ ಶಾ ಅವರ ಪ್ಯಾಡ್‍ಗೆ ಬಡಿದಿತ್ತು. ಔಟ್‍ಗೆ ಮನವಿ ಮಾಡಿದಾಗ ಅಂಪೈಲ್ ಅಲಿಮ್‍ದರ್ ಔಟ್ ನೀಡಲಿಲ್ಲ. ಇದರಿಂದ ಕುಪಿತನಾದ ಭಾರತದ ಕ್ಯಾಪ್ಟನ್ ಕೊಹ್ಲಿ ಅಂಪೈರ್‍ರತ್ತ ಧಾವಿಸಿದ್ದಲ್ಲದೇ ಮತ್ತಷ್ಟು ಆಕ್ರೋಶದಿಂದ ಡಿ.ಆರ್.ಎಸ್ ಅಪೀಲ್ ಮಾಡಿದರು.

ಪಂದ್ಯದ ನಂತರ ಕೊಹ್ಲಿಗೆ ಐಸಿಸಿ ಪಂದ್ಯದ ಶೇ.25ರಷ್ಟು ಸಂಭಾವನೆಯನ್ನು ದಂಡವಾಗಿ ವಿಧಿಸಿದ್ದಲ್ಲದೇ ಅವರಿಗೆ ಒಂದು ಅನರ್ಹತಾ ಅಂಕ ನೀಡಲಾಗಿದೆ. 18 ತಿಂಗಳ ಅವಧಿಯಲ್ಲಿ ಇದು ಅವರು ಪಡೆಯುತ್ತಿರುವ ಎರಡನೇ ಅನರ್ಹತಾ ಅಂಕವಾಗಿದೆ. ಎರಡು ವರ್ಷದ ಅವಧಿಯಲ್ಲಿ ನಾಲ್ಕು ಅನರ್ಹತಾ ಅಂಕಗಳು ಬಂದರೆ ಒಂದು ಅಮಾನತು ಅಂಕ ಎಂದು ಪರಿಗಣಿಸಲಾಗುತ್ತದೆ. ಒಂದು ವೇಳೆ ಎರಡು ಅಮಾನತು ಅಂಕ ಪಡೆದಲ್ಲಿ ಅವರು 2 ಏಕದಿನ ಅಥವಾ ಒಂದು ಟೆಸ್ಟ್ ಪಂದ್ಯದಿಂದ ಅಮಾನತ್ತಾಗುವ ಅಪಾಯವಿರುತ್ತದೆ.

ಕಳೆದ ವರ್ಷ ಜನವರಿ 16ರಂದು ದಕ್ಷಿಣ ಆಫ್ರಿಕಾ ವಿರುದ್ಧದ ಕೇಪ್ ಟೌನ್ ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಮಳೆ ಮತ್ತು ಮಂದಬೆಳಕಿನ ಕಾರಣದಿಂದ ಪಂದ್ಯವನ್ನು ಸ್ಥಗಿತಗೊಳಿಸಲು ಅಂಪೈಲ್ ಮುಂದಾದರು. ಆಗ ಕೊಹ್ಲಿ ಬೇಸರದಿಂದ ತನ್ನ ಕೈಲಿದ್ದ ಬಾಲ್ ಅನ್ನು ನೆಲಕ್ಕೆ ಜೋರಾಗಿ ಎಸೆದಿದ್ದಲ್ಲದೇ ಅಂಪೈರ್ ಜೊತೆ ವಾಗ್ವಾದಕ್ಕೆ ಮುಂದಾಗಿದ್ದಾರು. ಆಗ ಐಸಿಸಿ ಪಂದ್ಯದ ಶೇ.25ರಷ್ಟು ಸಂಭಾವನೆಯನ್ನು ದಂಡವಾಗಿ ವಿಧಿಸಿದ್ದರು.

ತಂಡದ ಕ್ಯಾಪ್ಟನ್ ಆಗಿ ಗೆಲುವಿಗಾಗಿ ಹಂಬಲಿಸುವ ವೇಳೆ ಅವರಿಗೆ ಸಾಕಷ್ಟು ಒತ್ತಡ ಇರುತ್ತದೆ. ಹಾಗಾಗಿ ಈ ರೀತಿಯಾಗಿ ಕೊಹ್ಲಿ ವರ್ತಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಡಿಆರ್‍ಎಸ್ ಬಗ್ಗೆ ನಿಮಗೆ ಗೊತ್ತೆ?
ಡಿಆರ್‍ಎಸ್ ಡಿಸಿಷನ್ ರಿವ್ಯೂ ಸಿಸ್ಟಮ್ ಅನ್ನು ಕ್ರಿಕೆಟ್‍ನಲ್ಲಿ ಪರಿಚಯಿಸಲಾಗಿದೆ. ಪ್ರತಿ ತಂಡಕ್ಕೆ ಬ್ಯಾಟಿಂಗ್‍ನಲ್ಲೊಂದು ಮತ್ತು ಬೌಲಂಗ್ ವಿಭಾಗದಲ್ಲೊಂದು ರಿವ್ಯೂ ಕೇಳಲು ಅವಕಾಶ ಡಿಆರ್‍ಎಸ್ ನಲ್ಲಿ ಅವಕಾಶವಿದೆ. ಆ ರಿವ್ಯೂ ಯಶಸ್ವಿಯಾದಲ್ಲಿ ರಿವ್ಯೂ ಉಳಿದುಕೊಂಡಿರುತ್ತದೆ. ಒಂದು ವೇಳೆ ರಿವ್ಯೂ ವಿಫಲವಾದಲ್ಲಿ ಆ ತಂಡ ರಿವ್ಯೂ ಕಳೆದುಕೊಳ್ಳಲ್ಲಿದ್ದು ನಂತರ ಅಂಪೈರ್ ತೀರ್ಮಾನಕ್ಕೆ ಬದ್ಧವಾಗಿರಬೇಕಾಗುತ್ತದೆ. ಎಲ್.ಬಿ.ಡಬ್ಲೂ, ಕ್ಯಾಚ್ ಮುಂತಾದವುಗಳಿಗೆ ಅಂಪೈರ್ ಔಟ್ ನೀಡಿದೀಗ ಬ್ಯಾಟ್ಸ್‍ಮನ್ ಗಳ ಕಡೆಯಿಂದಲೂ, ಒಂದು ವೇಳೆ ನಾಟೌಟ್ ನೀಡಿದರೆ ಬೌಲರ್‍ಗಳ ಕಡೆಯಿಂದಲೂ ಡಿ.ಆರ್.ಎಸ್ ಕೇಳಬಹುದಾಗಿದೆ.

ಮೊನ್ನೆಯ ಒಂದು ಪಂದ್ಯದಲ್ಲಿ ಆಸ್ಟ್ರೇಲಿಯಾ ಐದು ಬಾರಿ ಡಿಆರ್‍ಎಸ್ ಕೇಳಿ ಯಶಸ್ವಿಯಾಗಿದೆ. ಕೆಲವೊಂದು ತಂಡಗಳು ಮೊದಲ ಪ್ರಯತ್ನದಲ್ಲಿಯೇ ವಿಫಲವಾಗಿ ಡಿಆರ್‍ಎಸ್ ಕಳೆದುಕೊಂಡ ಉದಾಹರಣೆಗಳು ಇವೆ. ಬೌಲ್ ಆದ 15 ಸೆಕೆಂಡ್ ಒಳಗೆ ರಿವ್ಯೂ ಕೇಳಲು ಅವಕಾಸವಿರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...