Homeಅಂತರಾಷ್ಟ್ರೀಯಅಗ್ರೆಸ್ಸಿವ್ ಅಪೀಲ್ ಕೊಹ್ಲಿಗೆ ದಂಡ: ವಿರಾಟ್ ಹೀಗೇಕೆ ಮಾಡಿದರು?

ಅಗ್ರೆಸ್ಸಿವ್ ಅಪೀಲ್ ಕೊಹ್ಲಿಗೆ ದಂಡ: ವಿರಾಟ್ ಹೀಗೇಕೆ ಮಾಡಿದರು?

- Advertisement -
- Advertisement -

| ನಾನುಗೌರಿ ಡೆಸ್ಕ್ |

ಶನಿವಾರ ನಡೆದ ಆಫ್ಘಾನಿಸ್ಥಾನದ ವಿರುದ್ಧದ ಪಂದ್ಯದಲ್ಲಿ 29 ಒವರ್ ನಲ್ಲಿ ಜಸ್ಪ್ರಿತ್ ಬೂಮ್ರ ಎಸೆದ ಬಾಲ್ ಆಫ್ಘನ್‍ನ ಬ್ಯಾಟ್ಸ್‍ಮನ್ ರಹಮತ್ ಶಾ ಅವರ ಪ್ಯಾಡ್‍ಗೆ ಬಡಿದಿತ್ತು. ಔಟ್‍ಗೆ ಮನವಿ ಮಾಡಿದಾಗ ಅಂಪೈಲ್ ಅಲಿಮ್‍ದರ್ ಔಟ್ ನೀಡಲಿಲ್ಲ. ಇದರಿಂದ ಕುಪಿತನಾದ ಭಾರತದ ಕ್ಯಾಪ್ಟನ್ ಕೊಹ್ಲಿ ಅಂಪೈರ್‍ರತ್ತ ಧಾವಿಸಿದ್ದಲ್ಲದೇ ಮತ್ತಷ್ಟು ಆಕ್ರೋಶದಿಂದ ಡಿ.ಆರ್.ಎಸ್ ಅಪೀಲ್ ಮಾಡಿದರು.

ಪಂದ್ಯದ ನಂತರ ಕೊಹ್ಲಿಗೆ ಐಸಿಸಿ ಪಂದ್ಯದ ಶೇ.25ರಷ್ಟು ಸಂಭಾವನೆಯನ್ನು ದಂಡವಾಗಿ ವಿಧಿಸಿದ್ದಲ್ಲದೇ ಅವರಿಗೆ ಒಂದು ಅನರ್ಹತಾ ಅಂಕ ನೀಡಲಾಗಿದೆ. 18 ತಿಂಗಳ ಅವಧಿಯಲ್ಲಿ ಇದು ಅವರು ಪಡೆಯುತ್ತಿರುವ ಎರಡನೇ ಅನರ್ಹತಾ ಅಂಕವಾಗಿದೆ. ಎರಡು ವರ್ಷದ ಅವಧಿಯಲ್ಲಿ ನಾಲ್ಕು ಅನರ್ಹತಾ ಅಂಕಗಳು ಬಂದರೆ ಒಂದು ಅಮಾನತು ಅಂಕ ಎಂದು ಪರಿಗಣಿಸಲಾಗುತ್ತದೆ. ಒಂದು ವೇಳೆ ಎರಡು ಅಮಾನತು ಅಂಕ ಪಡೆದಲ್ಲಿ ಅವರು 2 ಏಕದಿನ ಅಥವಾ ಒಂದು ಟೆಸ್ಟ್ ಪಂದ್ಯದಿಂದ ಅಮಾನತ್ತಾಗುವ ಅಪಾಯವಿರುತ್ತದೆ.

ಕಳೆದ ವರ್ಷ ಜನವರಿ 16ರಂದು ದಕ್ಷಿಣ ಆಫ್ರಿಕಾ ವಿರುದ್ಧದ ಕೇಪ್ ಟೌನ್ ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಮಳೆ ಮತ್ತು ಮಂದಬೆಳಕಿನ ಕಾರಣದಿಂದ ಪಂದ್ಯವನ್ನು ಸ್ಥಗಿತಗೊಳಿಸಲು ಅಂಪೈಲ್ ಮುಂದಾದರು. ಆಗ ಕೊಹ್ಲಿ ಬೇಸರದಿಂದ ತನ್ನ ಕೈಲಿದ್ದ ಬಾಲ್ ಅನ್ನು ನೆಲಕ್ಕೆ ಜೋರಾಗಿ ಎಸೆದಿದ್ದಲ್ಲದೇ ಅಂಪೈರ್ ಜೊತೆ ವಾಗ್ವಾದಕ್ಕೆ ಮುಂದಾಗಿದ್ದಾರು. ಆಗ ಐಸಿಸಿ ಪಂದ್ಯದ ಶೇ.25ರಷ್ಟು ಸಂಭಾವನೆಯನ್ನು ದಂಡವಾಗಿ ವಿಧಿಸಿದ್ದರು.

ತಂಡದ ಕ್ಯಾಪ್ಟನ್ ಆಗಿ ಗೆಲುವಿಗಾಗಿ ಹಂಬಲಿಸುವ ವೇಳೆ ಅವರಿಗೆ ಸಾಕಷ್ಟು ಒತ್ತಡ ಇರುತ್ತದೆ. ಹಾಗಾಗಿ ಈ ರೀತಿಯಾಗಿ ಕೊಹ್ಲಿ ವರ್ತಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಡಿಆರ್‍ಎಸ್ ಬಗ್ಗೆ ನಿಮಗೆ ಗೊತ್ತೆ?
ಡಿಆರ್‍ಎಸ್ ಡಿಸಿಷನ್ ರಿವ್ಯೂ ಸಿಸ್ಟಮ್ ಅನ್ನು ಕ್ರಿಕೆಟ್‍ನಲ್ಲಿ ಪರಿಚಯಿಸಲಾಗಿದೆ. ಪ್ರತಿ ತಂಡಕ್ಕೆ ಬ್ಯಾಟಿಂಗ್‍ನಲ್ಲೊಂದು ಮತ್ತು ಬೌಲಂಗ್ ವಿಭಾಗದಲ್ಲೊಂದು ರಿವ್ಯೂ ಕೇಳಲು ಅವಕಾಶ ಡಿಆರ್‍ಎಸ್ ನಲ್ಲಿ ಅವಕಾಶವಿದೆ. ಆ ರಿವ್ಯೂ ಯಶಸ್ವಿಯಾದಲ್ಲಿ ರಿವ್ಯೂ ಉಳಿದುಕೊಂಡಿರುತ್ತದೆ. ಒಂದು ವೇಳೆ ರಿವ್ಯೂ ವಿಫಲವಾದಲ್ಲಿ ಆ ತಂಡ ರಿವ್ಯೂ ಕಳೆದುಕೊಳ್ಳಲ್ಲಿದ್ದು ನಂತರ ಅಂಪೈರ್ ತೀರ್ಮಾನಕ್ಕೆ ಬದ್ಧವಾಗಿರಬೇಕಾಗುತ್ತದೆ. ಎಲ್.ಬಿ.ಡಬ್ಲೂ, ಕ್ಯಾಚ್ ಮುಂತಾದವುಗಳಿಗೆ ಅಂಪೈರ್ ಔಟ್ ನೀಡಿದೀಗ ಬ್ಯಾಟ್ಸ್‍ಮನ್ ಗಳ ಕಡೆಯಿಂದಲೂ, ಒಂದು ವೇಳೆ ನಾಟೌಟ್ ನೀಡಿದರೆ ಬೌಲರ್‍ಗಳ ಕಡೆಯಿಂದಲೂ ಡಿ.ಆರ್.ಎಸ್ ಕೇಳಬಹುದಾಗಿದೆ.

ಮೊನ್ನೆಯ ಒಂದು ಪಂದ್ಯದಲ್ಲಿ ಆಸ್ಟ್ರೇಲಿಯಾ ಐದು ಬಾರಿ ಡಿಆರ್‍ಎಸ್ ಕೇಳಿ ಯಶಸ್ವಿಯಾಗಿದೆ. ಕೆಲವೊಂದು ತಂಡಗಳು ಮೊದಲ ಪ್ರಯತ್ನದಲ್ಲಿಯೇ ವಿಫಲವಾಗಿ ಡಿಆರ್‍ಎಸ್ ಕಳೆದುಕೊಂಡ ಉದಾಹರಣೆಗಳು ಇವೆ. ಬೌಲ್ ಆದ 15 ಸೆಕೆಂಡ್ ಒಳಗೆ ರಿವ್ಯೂ ಕೇಳಲು ಅವಕಾಸವಿರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...