Homeಅಂತರಾಷ್ಟ್ರೀಯಅಗ್ರೆಸ್ಸಿವ್ ಅಪೀಲ್ ಕೊಹ್ಲಿಗೆ ದಂಡ: ವಿರಾಟ್ ಹೀಗೇಕೆ ಮಾಡಿದರು?

ಅಗ್ರೆಸ್ಸಿವ್ ಅಪೀಲ್ ಕೊಹ್ಲಿಗೆ ದಂಡ: ವಿರಾಟ್ ಹೀಗೇಕೆ ಮಾಡಿದರು?

- Advertisement -
- Advertisement -

| ನಾನುಗೌರಿ ಡೆಸ್ಕ್ |

ಶನಿವಾರ ನಡೆದ ಆಫ್ಘಾನಿಸ್ಥಾನದ ವಿರುದ್ಧದ ಪಂದ್ಯದಲ್ಲಿ 29 ಒವರ್ ನಲ್ಲಿ ಜಸ್ಪ್ರಿತ್ ಬೂಮ್ರ ಎಸೆದ ಬಾಲ್ ಆಫ್ಘನ್‍ನ ಬ್ಯಾಟ್ಸ್‍ಮನ್ ರಹಮತ್ ಶಾ ಅವರ ಪ್ಯಾಡ್‍ಗೆ ಬಡಿದಿತ್ತು. ಔಟ್‍ಗೆ ಮನವಿ ಮಾಡಿದಾಗ ಅಂಪೈಲ್ ಅಲಿಮ್‍ದರ್ ಔಟ್ ನೀಡಲಿಲ್ಲ. ಇದರಿಂದ ಕುಪಿತನಾದ ಭಾರತದ ಕ್ಯಾಪ್ಟನ್ ಕೊಹ್ಲಿ ಅಂಪೈರ್‍ರತ್ತ ಧಾವಿಸಿದ್ದಲ್ಲದೇ ಮತ್ತಷ್ಟು ಆಕ್ರೋಶದಿಂದ ಡಿ.ಆರ್.ಎಸ್ ಅಪೀಲ್ ಮಾಡಿದರು.

ಪಂದ್ಯದ ನಂತರ ಕೊಹ್ಲಿಗೆ ಐಸಿಸಿ ಪಂದ್ಯದ ಶೇ.25ರಷ್ಟು ಸಂಭಾವನೆಯನ್ನು ದಂಡವಾಗಿ ವಿಧಿಸಿದ್ದಲ್ಲದೇ ಅವರಿಗೆ ಒಂದು ಅನರ್ಹತಾ ಅಂಕ ನೀಡಲಾಗಿದೆ. 18 ತಿಂಗಳ ಅವಧಿಯಲ್ಲಿ ಇದು ಅವರು ಪಡೆಯುತ್ತಿರುವ ಎರಡನೇ ಅನರ್ಹತಾ ಅಂಕವಾಗಿದೆ. ಎರಡು ವರ್ಷದ ಅವಧಿಯಲ್ಲಿ ನಾಲ್ಕು ಅನರ್ಹತಾ ಅಂಕಗಳು ಬಂದರೆ ಒಂದು ಅಮಾನತು ಅಂಕ ಎಂದು ಪರಿಗಣಿಸಲಾಗುತ್ತದೆ. ಒಂದು ವೇಳೆ ಎರಡು ಅಮಾನತು ಅಂಕ ಪಡೆದಲ್ಲಿ ಅವರು 2 ಏಕದಿನ ಅಥವಾ ಒಂದು ಟೆಸ್ಟ್ ಪಂದ್ಯದಿಂದ ಅಮಾನತ್ತಾಗುವ ಅಪಾಯವಿರುತ್ತದೆ.

ಕಳೆದ ವರ್ಷ ಜನವರಿ 16ರಂದು ದಕ್ಷಿಣ ಆಫ್ರಿಕಾ ವಿರುದ್ಧದ ಕೇಪ್ ಟೌನ್ ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಮಳೆ ಮತ್ತು ಮಂದಬೆಳಕಿನ ಕಾರಣದಿಂದ ಪಂದ್ಯವನ್ನು ಸ್ಥಗಿತಗೊಳಿಸಲು ಅಂಪೈಲ್ ಮುಂದಾದರು. ಆಗ ಕೊಹ್ಲಿ ಬೇಸರದಿಂದ ತನ್ನ ಕೈಲಿದ್ದ ಬಾಲ್ ಅನ್ನು ನೆಲಕ್ಕೆ ಜೋರಾಗಿ ಎಸೆದಿದ್ದಲ್ಲದೇ ಅಂಪೈರ್ ಜೊತೆ ವಾಗ್ವಾದಕ್ಕೆ ಮುಂದಾಗಿದ್ದಾರು. ಆಗ ಐಸಿಸಿ ಪಂದ್ಯದ ಶೇ.25ರಷ್ಟು ಸಂಭಾವನೆಯನ್ನು ದಂಡವಾಗಿ ವಿಧಿಸಿದ್ದರು.

ತಂಡದ ಕ್ಯಾಪ್ಟನ್ ಆಗಿ ಗೆಲುವಿಗಾಗಿ ಹಂಬಲಿಸುವ ವೇಳೆ ಅವರಿಗೆ ಸಾಕಷ್ಟು ಒತ್ತಡ ಇರುತ್ತದೆ. ಹಾಗಾಗಿ ಈ ರೀತಿಯಾಗಿ ಕೊಹ್ಲಿ ವರ್ತಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಡಿಆರ್‍ಎಸ್ ಬಗ್ಗೆ ನಿಮಗೆ ಗೊತ್ತೆ?
ಡಿಆರ್‍ಎಸ್ ಡಿಸಿಷನ್ ರಿವ್ಯೂ ಸಿಸ್ಟಮ್ ಅನ್ನು ಕ್ರಿಕೆಟ್‍ನಲ್ಲಿ ಪರಿಚಯಿಸಲಾಗಿದೆ. ಪ್ರತಿ ತಂಡಕ್ಕೆ ಬ್ಯಾಟಿಂಗ್‍ನಲ್ಲೊಂದು ಮತ್ತು ಬೌಲಂಗ್ ವಿಭಾಗದಲ್ಲೊಂದು ರಿವ್ಯೂ ಕೇಳಲು ಅವಕಾಶ ಡಿಆರ್‍ಎಸ್ ನಲ್ಲಿ ಅವಕಾಶವಿದೆ. ಆ ರಿವ್ಯೂ ಯಶಸ್ವಿಯಾದಲ್ಲಿ ರಿವ್ಯೂ ಉಳಿದುಕೊಂಡಿರುತ್ತದೆ. ಒಂದು ವೇಳೆ ರಿವ್ಯೂ ವಿಫಲವಾದಲ್ಲಿ ಆ ತಂಡ ರಿವ್ಯೂ ಕಳೆದುಕೊಳ್ಳಲ್ಲಿದ್ದು ನಂತರ ಅಂಪೈರ್ ತೀರ್ಮಾನಕ್ಕೆ ಬದ್ಧವಾಗಿರಬೇಕಾಗುತ್ತದೆ. ಎಲ್.ಬಿ.ಡಬ್ಲೂ, ಕ್ಯಾಚ್ ಮುಂತಾದವುಗಳಿಗೆ ಅಂಪೈರ್ ಔಟ್ ನೀಡಿದೀಗ ಬ್ಯಾಟ್ಸ್‍ಮನ್ ಗಳ ಕಡೆಯಿಂದಲೂ, ಒಂದು ವೇಳೆ ನಾಟೌಟ್ ನೀಡಿದರೆ ಬೌಲರ್‍ಗಳ ಕಡೆಯಿಂದಲೂ ಡಿ.ಆರ್.ಎಸ್ ಕೇಳಬಹುದಾಗಿದೆ.

ಮೊನ್ನೆಯ ಒಂದು ಪಂದ್ಯದಲ್ಲಿ ಆಸ್ಟ್ರೇಲಿಯಾ ಐದು ಬಾರಿ ಡಿಆರ್‍ಎಸ್ ಕೇಳಿ ಯಶಸ್ವಿಯಾಗಿದೆ. ಕೆಲವೊಂದು ತಂಡಗಳು ಮೊದಲ ಪ್ರಯತ್ನದಲ್ಲಿಯೇ ವಿಫಲವಾಗಿ ಡಿಆರ್‍ಎಸ್ ಕಳೆದುಕೊಂಡ ಉದಾಹರಣೆಗಳು ಇವೆ. ಬೌಲ್ ಆದ 15 ಸೆಕೆಂಡ್ ಒಳಗೆ ರಿವ್ಯೂ ಕೇಳಲು ಅವಕಾಸವಿರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....