Homeಅಂತರಾಷ್ಟ್ರೀಯಅಗ್ರೆಸ್ಸಿವ್ ಅಪೀಲ್ ಕೊಹ್ಲಿಗೆ ದಂಡ: ವಿರಾಟ್ ಹೀಗೇಕೆ ಮಾಡಿದರು?

ಅಗ್ರೆಸ್ಸಿವ್ ಅಪೀಲ್ ಕೊಹ್ಲಿಗೆ ದಂಡ: ವಿರಾಟ್ ಹೀಗೇಕೆ ಮಾಡಿದರು?

- Advertisement -
- Advertisement -

| ನಾನುಗೌರಿ ಡೆಸ್ಕ್ |

ಶನಿವಾರ ನಡೆದ ಆಫ್ಘಾನಿಸ್ಥಾನದ ವಿರುದ್ಧದ ಪಂದ್ಯದಲ್ಲಿ 29 ಒವರ್ ನಲ್ಲಿ ಜಸ್ಪ್ರಿತ್ ಬೂಮ್ರ ಎಸೆದ ಬಾಲ್ ಆಫ್ಘನ್‍ನ ಬ್ಯಾಟ್ಸ್‍ಮನ್ ರಹಮತ್ ಶಾ ಅವರ ಪ್ಯಾಡ್‍ಗೆ ಬಡಿದಿತ್ತು. ಔಟ್‍ಗೆ ಮನವಿ ಮಾಡಿದಾಗ ಅಂಪೈಲ್ ಅಲಿಮ್‍ದರ್ ಔಟ್ ನೀಡಲಿಲ್ಲ. ಇದರಿಂದ ಕುಪಿತನಾದ ಭಾರತದ ಕ್ಯಾಪ್ಟನ್ ಕೊಹ್ಲಿ ಅಂಪೈರ್‍ರತ್ತ ಧಾವಿಸಿದ್ದಲ್ಲದೇ ಮತ್ತಷ್ಟು ಆಕ್ರೋಶದಿಂದ ಡಿ.ಆರ್.ಎಸ್ ಅಪೀಲ್ ಮಾಡಿದರು.

ಪಂದ್ಯದ ನಂತರ ಕೊಹ್ಲಿಗೆ ಐಸಿಸಿ ಪಂದ್ಯದ ಶೇ.25ರಷ್ಟು ಸಂಭಾವನೆಯನ್ನು ದಂಡವಾಗಿ ವಿಧಿಸಿದ್ದಲ್ಲದೇ ಅವರಿಗೆ ಒಂದು ಅನರ್ಹತಾ ಅಂಕ ನೀಡಲಾಗಿದೆ. 18 ತಿಂಗಳ ಅವಧಿಯಲ್ಲಿ ಇದು ಅವರು ಪಡೆಯುತ್ತಿರುವ ಎರಡನೇ ಅನರ್ಹತಾ ಅಂಕವಾಗಿದೆ. ಎರಡು ವರ್ಷದ ಅವಧಿಯಲ್ಲಿ ನಾಲ್ಕು ಅನರ್ಹತಾ ಅಂಕಗಳು ಬಂದರೆ ಒಂದು ಅಮಾನತು ಅಂಕ ಎಂದು ಪರಿಗಣಿಸಲಾಗುತ್ತದೆ. ಒಂದು ವೇಳೆ ಎರಡು ಅಮಾನತು ಅಂಕ ಪಡೆದಲ್ಲಿ ಅವರು 2 ಏಕದಿನ ಅಥವಾ ಒಂದು ಟೆಸ್ಟ್ ಪಂದ್ಯದಿಂದ ಅಮಾನತ್ತಾಗುವ ಅಪಾಯವಿರುತ್ತದೆ.

ಕಳೆದ ವರ್ಷ ಜನವರಿ 16ರಂದು ದಕ್ಷಿಣ ಆಫ್ರಿಕಾ ವಿರುದ್ಧದ ಕೇಪ್ ಟೌನ್ ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಮಳೆ ಮತ್ತು ಮಂದಬೆಳಕಿನ ಕಾರಣದಿಂದ ಪಂದ್ಯವನ್ನು ಸ್ಥಗಿತಗೊಳಿಸಲು ಅಂಪೈಲ್ ಮುಂದಾದರು. ಆಗ ಕೊಹ್ಲಿ ಬೇಸರದಿಂದ ತನ್ನ ಕೈಲಿದ್ದ ಬಾಲ್ ಅನ್ನು ನೆಲಕ್ಕೆ ಜೋರಾಗಿ ಎಸೆದಿದ್ದಲ್ಲದೇ ಅಂಪೈರ್ ಜೊತೆ ವಾಗ್ವಾದಕ್ಕೆ ಮುಂದಾಗಿದ್ದಾರು. ಆಗ ಐಸಿಸಿ ಪಂದ್ಯದ ಶೇ.25ರಷ್ಟು ಸಂಭಾವನೆಯನ್ನು ದಂಡವಾಗಿ ವಿಧಿಸಿದ್ದರು.

ತಂಡದ ಕ್ಯಾಪ್ಟನ್ ಆಗಿ ಗೆಲುವಿಗಾಗಿ ಹಂಬಲಿಸುವ ವೇಳೆ ಅವರಿಗೆ ಸಾಕಷ್ಟು ಒತ್ತಡ ಇರುತ್ತದೆ. ಹಾಗಾಗಿ ಈ ರೀತಿಯಾಗಿ ಕೊಹ್ಲಿ ವರ್ತಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಡಿಆರ್‍ಎಸ್ ಬಗ್ಗೆ ನಿಮಗೆ ಗೊತ್ತೆ?
ಡಿಆರ್‍ಎಸ್ ಡಿಸಿಷನ್ ರಿವ್ಯೂ ಸಿಸ್ಟಮ್ ಅನ್ನು ಕ್ರಿಕೆಟ್‍ನಲ್ಲಿ ಪರಿಚಯಿಸಲಾಗಿದೆ. ಪ್ರತಿ ತಂಡಕ್ಕೆ ಬ್ಯಾಟಿಂಗ್‍ನಲ್ಲೊಂದು ಮತ್ತು ಬೌಲಂಗ್ ವಿಭಾಗದಲ್ಲೊಂದು ರಿವ್ಯೂ ಕೇಳಲು ಅವಕಾಶ ಡಿಆರ್‍ಎಸ್ ನಲ್ಲಿ ಅವಕಾಶವಿದೆ. ಆ ರಿವ್ಯೂ ಯಶಸ್ವಿಯಾದಲ್ಲಿ ರಿವ್ಯೂ ಉಳಿದುಕೊಂಡಿರುತ್ತದೆ. ಒಂದು ವೇಳೆ ರಿವ್ಯೂ ವಿಫಲವಾದಲ್ಲಿ ಆ ತಂಡ ರಿವ್ಯೂ ಕಳೆದುಕೊಳ್ಳಲ್ಲಿದ್ದು ನಂತರ ಅಂಪೈರ್ ತೀರ್ಮಾನಕ್ಕೆ ಬದ್ಧವಾಗಿರಬೇಕಾಗುತ್ತದೆ. ಎಲ್.ಬಿ.ಡಬ್ಲೂ, ಕ್ಯಾಚ್ ಮುಂತಾದವುಗಳಿಗೆ ಅಂಪೈರ್ ಔಟ್ ನೀಡಿದೀಗ ಬ್ಯಾಟ್ಸ್‍ಮನ್ ಗಳ ಕಡೆಯಿಂದಲೂ, ಒಂದು ವೇಳೆ ನಾಟೌಟ್ ನೀಡಿದರೆ ಬೌಲರ್‍ಗಳ ಕಡೆಯಿಂದಲೂ ಡಿ.ಆರ್.ಎಸ್ ಕೇಳಬಹುದಾಗಿದೆ.

ಮೊನ್ನೆಯ ಒಂದು ಪಂದ್ಯದಲ್ಲಿ ಆಸ್ಟ್ರೇಲಿಯಾ ಐದು ಬಾರಿ ಡಿಆರ್‍ಎಸ್ ಕೇಳಿ ಯಶಸ್ವಿಯಾಗಿದೆ. ಕೆಲವೊಂದು ತಂಡಗಳು ಮೊದಲ ಪ್ರಯತ್ನದಲ್ಲಿಯೇ ವಿಫಲವಾಗಿ ಡಿಆರ್‍ಎಸ್ ಕಳೆದುಕೊಂಡ ಉದಾಹರಣೆಗಳು ಇವೆ. ಬೌಲ್ ಆದ 15 ಸೆಕೆಂಡ್ ಒಳಗೆ ರಿವ್ಯೂ ಕೇಳಲು ಅವಕಾಸವಿರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...