Homeಮುಖಪುಟಅನುಷ್ಕ ಶರ್ಮಾಗೆ ವಿರಾಟ್‌ ಕೊಹ್ಲಿ ವಿಚ್ಛೇದನ ನೀಡಬೇಕೆಂದು ಪಟ್ಟು ಹಿಡಿದ BJP ಶಾಸಕ: ಕಾರಣವೇನು ಗೊತ್ತ?

ಅನುಷ್ಕ ಶರ್ಮಾಗೆ ವಿರಾಟ್‌ ಕೊಹ್ಲಿ ವಿಚ್ಛೇದನ ನೀಡಬೇಕೆಂದು ಪಟ್ಟು ಹಿಡಿದ BJP ಶಾಸಕ: ಕಾರಣವೇನು ಗೊತ್ತ?

- Advertisement -
- Advertisement -

ಉತ್ತರಪ್ರದೇಶದ ಗಾಜಿಯಾಬಾದ್‌ನ ಲೋನಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ನಂದಕಿಶೋರ್ ಗುರ್ಜರ್, ವಿರಾಟ್‌ ಕೊಹ್ಲಿ ಪತ್ನಿ ಅನುಷ್ಕ ಶರ್ಮಾಗೆ ವಿಚ್ಛೇದನ ನೀಡಬೇಕೆಂದು ಆಗ್ರಹಿಸಿದ್ದಾರೆ. ಆ ಮೂಲಕ ಅವರು ನಟಿ ಮತ್ತು ನಿರ್ಮಾಪಕಿಯಾಗಿರುವ  ಅನುಷ್ಕಾ ಶರ್ಮಾ ಮತ್ತು ಕೊಹ್ಲಿ ವಿರುದ್ಧ ಕಿಡಿಕಾರಿದ್ದಾರೆ.

ಭಾರತ ಕ್ರಿಕೆಟ್‌ ತಂಡದ ವಿರಾಟ್‌ ಕೊಹ್ಲಿ ರಾಷ್ಟ್ರೀಯವಾದಿ ಕ್ರಿಕೆಟ್‌ ಆಟಗಾರರಾಗಿದ್ದಾರೆ. ಅವರು ಅಪ್ರತಿಮ ದೇಶಭಕ್ತರಾಗಿದ್ದು, ದೇಶಕ್ಕಾಗಿ ಆಡುತ್ತಾರೆ. ಹಾಗಾಗಿ ಕೂಡಲೇ ಅವರು ಅನುಷ್ಕ ಶರ್ಮಾಗೆ ವಿಚ್ಛೇದನ ನೀಡಬೇಕೆಂದು ಆ ಶಾಸಕ ತನ್ನ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾನೆ. ಆಂಟಿ ಹಿಂದೂ ಅನುಷ್ಕಾ ಶರ್ಮಾ ಎಂಬ ಹ್ಯಾಸ್‌ಟ್ಯಾಗ್‌ ಅನ್ನು ಸಹ ಬಳಸಿದ್ದಾನೆ.

ಅಷ್ಟು ಮಾತ್ರವಲ್ಲದೇ ಅವರು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್‌ ಜಾವ್ಡೇಕರ್‌ ರವರಿಗೆ ಪತ್ರ ಬರೆದು, ಸ್ಥಳೀಯ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕಾರಣವೇನು?

ಒಟಿಟಿ ಫ್ಲಾಟ್‌ಫಾರಂ ಅಮೆಜಾನ್ ಪ್ರೈಮ್‌ನಲ್ಲಿ ಪ್ರಸಾರವಾಗುತ್ತಿರುವ ‘ಪಾತಾಳ್ ಲೋಕ್’ ವೆಬ್ ಸೀರೀಸ್ ಸಾಕಷ್ಟು ಜನರ ಮೆಚ್ಚುಗೆ ಪಡೆದಿದೆ. ಇದರ ನಿರ್ಮಾಪಕ ಅನುಷ್ಕ ಶರ್ಮಾ. ಇದರಲ್ಲಿ ಸನಾತನ ಧರ್ಮ ನಿಂದನೆಯಾಗಿದೆ, ಪಕ್ಷ ನಿಂದನೆಯಾಗಿದೆ, ಕೋಮು ಕೋಲಾಹಲವೆಬ್ಬಿಸಿದೆ. ಇದರಲ್ಲಿ ನನ್ನ ಫೋಟೊ ಸಹ ಬಳಕೆಯಾಗಿದೆ. ಹಾಗಾಗಿ ಇದರ ನಿರ್ಮಾಪಕಿಯ ಮೆಲೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ದೇಶದ್ರೋಹದ ಕೇಸು ದಾಖಲಿಸಿಬೇಕೆಂಬುದು ಬಿಜೆಪಿ ಶಾಸಕನ ಒತ್ತಾಯವಾಗಿದೆ.

ಯಾರು ಈ ನಂದಕಿಶೋರ್‌ ಗುರ್ಜರ್‌?

ನಂದಕಿಶೋರ್ ಗುರ್ಜರ್ ಉತ್ತರಪ್ರದೇಶದ ಗಾಜಿಯಾಬಾದ್‌ನ ಲೋನಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ. ಈತನ ಮೇಲೆ ಈಗಾಗಲೇ IPC 147, 148, 149 ಸೆಕ್ಷನ್ ಸೇರಿದಂತೆ ಹಲವಾರು ಕ್ರಿಮಿನಲ್‌ ಪ್ರಕರಣಗಳಿವೆ. ಈತನ ಅಪ್ರಾಪ್ತ ವಯಸ್ಸಿನ ಮಗನೂ ಸಹ ಕುಡಿದು ವಾಹನ ಚಲಾಯಿಸಿ ಅಪಘಾತ ಮಾಡಿ ಕೇಸು ಎದುರಿಸುತ್ತಿದ್ದಾನೆ. ನಂದಕಿಶೋರ್ ಗುರ್ಜರ್ ಈ ಹಿಂದೆ ಆರೋಗ್ಯ ಇಲಾಖೆ ಅಧಿಕಾರಿಯೊಬ್ಬರನ್ನು ಸಾರ್ವಜನಿಕವಾಗಿ ಥಳಿಸಿ ಸುದ್ದಿಯಾಗಿದ್ದರು.

ಪಾತಾಳ್‌ ಲೋಕ್‌ ಬಗ್ಗೆ

ಸುದೀಪ್‌ ಶರ್ಮಾ, ಸಾಗರ್‌ ಹಾವೆಲಿ, ಹಾರ್ದಿಕ್‌ ಮೆಹ್ತಾ ಮತ್ತು ಗುಂಜಿತ್‌ ಚೋಪ್ರಾ ರಚನೆಯ ಈ ವೆಬ್‌ ಧಾರವಾಹಿಯನ್ನು ಅವಿನಾಶ್‌ ಅರುಣ್ ಮತ್ತು ಪ್ರೊಸಿತ್‌ ರಾಯ್‌ ನಿರ್ದೇಶಿಸಿದ್ದಾರೆ. ದೆಹಲಿಯ ಹೆಸರಾಂತ ಪತ್ರಕರ್ತನೊಬ್ಬನ ಕೊಲೆ ಪ್ರಯತ್ನದ ಪ್ರಕರಣದ ಜಾಡುಹಿಡಿದ ಹೊರಟ ದೆಹಲಿ ಪೊಲೀಸ್‌ ಕಣ್ಣಿಗೆ ಕಾಣುವ ಅಪರಾಧ ಲೋಕದ ಅನಾವರಣ ಇಲ್ಲಿದೆ. ಪೊಲೀಸರ ಭ್ರಷ್ಟಾಚಾರ ಮತ್ತು ಅಪರಾಧಿಗಳಿಗೆ ರಕ್ಷಣೆ, ಅಮಾಯಕರ ಬಲಿಪಶು, ಎಲ್ಲಕ್ಕೂ ಭಯೋತ್ಪಾದನೆಯ ನಂಟು ಹೊರಿಸಿ ನಿಜವಾದ ಅಪರಾಧಿಗಳು ತಪ್ಪಿಸಿಕೊಳ್ಳುವುದನ್ನು ಈ ಧಾರಾವಾಹಿ ಸಮರ್ಥವಾಗಿ ಕಟ್ಟಿಕೊಟ್ಟಿದೆ. ಜೈದೀಪ್‌ ಅಹ್ಲವಾತ್‌, ಗುಲ್‌ ಪನಾಗ್‌, ನೀರಜ್‌ ಕಬಿ, ಅಭಿಷೇಕ್‌ ಬ್ಯಾನರ್ಜಿ ಮುಂತಾದವರು ಇದರಲ್ಲಿ ನಟಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ವಿರುದ್ದ ಹೋರಾಡಲು ಮಹಾರಾಷ್ಟ್ರಕ್ಕೆ ವೈದ್ಯರ ತಂಡ ಕಳುಹಿಸಲಿರುವ ಕೇರಳ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...