Homeಮುಖಪುಟಅನುಷ್ಕ ಶರ್ಮಾಗೆ ವಿರಾಟ್‌ ಕೊಹ್ಲಿ ವಿಚ್ಛೇದನ ನೀಡಬೇಕೆಂದು ಪಟ್ಟು ಹಿಡಿದ BJP ಶಾಸಕ: ಕಾರಣವೇನು ಗೊತ್ತ?

ಅನುಷ್ಕ ಶರ್ಮಾಗೆ ವಿರಾಟ್‌ ಕೊಹ್ಲಿ ವಿಚ್ಛೇದನ ನೀಡಬೇಕೆಂದು ಪಟ್ಟು ಹಿಡಿದ BJP ಶಾಸಕ: ಕಾರಣವೇನು ಗೊತ್ತ?

- Advertisement -
- Advertisement -

ಉತ್ತರಪ್ರದೇಶದ ಗಾಜಿಯಾಬಾದ್‌ನ ಲೋನಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ನಂದಕಿಶೋರ್ ಗುರ್ಜರ್, ವಿರಾಟ್‌ ಕೊಹ್ಲಿ ಪತ್ನಿ ಅನುಷ್ಕ ಶರ್ಮಾಗೆ ವಿಚ್ಛೇದನ ನೀಡಬೇಕೆಂದು ಆಗ್ರಹಿಸಿದ್ದಾರೆ. ಆ ಮೂಲಕ ಅವರು ನಟಿ ಮತ್ತು ನಿರ್ಮಾಪಕಿಯಾಗಿರುವ  ಅನುಷ್ಕಾ ಶರ್ಮಾ ಮತ್ತು ಕೊಹ್ಲಿ ವಿರುದ್ಧ ಕಿಡಿಕಾರಿದ್ದಾರೆ.

ಭಾರತ ಕ್ರಿಕೆಟ್‌ ತಂಡದ ವಿರಾಟ್‌ ಕೊಹ್ಲಿ ರಾಷ್ಟ್ರೀಯವಾದಿ ಕ್ರಿಕೆಟ್‌ ಆಟಗಾರರಾಗಿದ್ದಾರೆ. ಅವರು ಅಪ್ರತಿಮ ದೇಶಭಕ್ತರಾಗಿದ್ದು, ದೇಶಕ್ಕಾಗಿ ಆಡುತ್ತಾರೆ. ಹಾಗಾಗಿ ಕೂಡಲೇ ಅವರು ಅನುಷ್ಕ ಶರ್ಮಾಗೆ ವಿಚ್ಛೇದನ ನೀಡಬೇಕೆಂದು ಆ ಶಾಸಕ ತನ್ನ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾನೆ. ಆಂಟಿ ಹಿಂದೂ ಅನುಷ್ಕಾ ಶರ್ಮಾ ಎಂಬ ಹ್ಯಾಸ್‌ಟ್ಯಾಗ್‌ ಅನ್ನು ಸಹ ಬಳಸಿದ್ದಾನೆ.

ಅಷ್ಟು ಮಾತ್ರವಲ್ಲದೇ ಅವರು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್‌ ಜಾವ್ಡೇಕರ್‌ ರವರಿಗೆ ಪತ್ರ ಬರೆದು, ಸ್ಥಳೀಯ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕಾರಣವೇನು?

ಒಟಿಟಿ ಫ್ಲಾಟ್‌ಫಾರಂ ಅಮೆಜಾನ್ ಪ್ರೈಮ್‌ನಲ್ಲಿ ಪ್ರಸಾರವಾಗುತ್ತಿರುವ ‘ಪಾತಾಳ್ ಲೋಕ್’ ವೆಬ್ ಸೀರೀಸ್ ಸಾಕಷ್ಟು ಜನರ ಮೆಚ್ಚುಗೆ ಪಡೆದಿದೆ. ಇದರ ನಿರ್ಮಾಪಕ ಅನುಷ್ಕ ಶರ್ಮಾ. ಇದರಲ್ಲಿ ಸನಾತನ ಧರ್ಮ ನಿಂದನೆಯಾಗಿದೆ, ಪಕ್ಷ ನಿಂದನೆಯಾಗಿದೆ, ಕೋಮು ಕೋಲಾಹಲವೆಬ್ಬಿಸಿದೆ. ಇದರಲ್ಲಿ ನನ್ನ ಫೋಟೊ ಸಹ ಬಳಕೆಯಾಗಿದೆ. ಹಾಗಾಗಿ ಇದರ ನಿರ್ಮಾಪಕಿಯ ಮೆಲೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ದೇಶದ್ರೋಹದ ಕೇಸು ದಾಖಲಿಸಿಬೇಕೆಂಬುದು ಬಿಜೆಪಿ ಶಾಸಕನ ಒತ್ತಾಯವಾಗಿದೆ.

ಯಾರು ಈ ನಂದಕಿಶೋರ್‌ ಗುರ್ಜರ್‌?

ನಂದಕಿಶೋರ್ ಗುರ್ಜರ್ ಉತ್ತರಪ್ರದೇಶದ ಗಾಜಿಯಾಬಾದ್‌ನ ಲೋನಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ. ಈತನ ಮೇಲೆ ಈಗಾಗಲೇ IPC 147, 148, 149 ಸೆಕ್ಷನ್ ಸೇರಿದಂತೆ ಹಲವಾರು ಕ್ರಿಮಿನಲ್‌ ಪ್ರಕರಣಗಳಿವೆ. ಈತನ ಅಪ್ರಾಪ್ತ ವಯಸ್ಸಿನ ಮಗನೂ ಸಹ ಕುಡಿದು ವಾಹನ ಚಲಾಯಿಸಿ ಅಪಘಾತ ಮಾಡಿ ಕೇಸು ಎದುರಿಸುತ್ತಿದ್ದಾನೆ. ನಂದಕಿಶೋರ್ ಗುರ್ಜರ್ ಈ ಹಿಂದೆ ಆರೋಗ್ಯ ಇಲಾಖೆ ಅಧಿಕಾರಿಯೊಬ್ಬರನ್ನು ಸಾರ್ವಜನಿಕವಾಗಿ ಥಳಿಸಿ ಸುದ್ದಿಯಾಗಿದ್ದರು.

ಪಾತಾಳ್‌ ಲೋಕ್‌ ಬಗ್ಗೆ

ಸುದೀಪ್‌ ಶರ್ಮಾ, ಸಾಗರ್‌ ಹಾವೆಲಿ, ಹಾರ್ದಿಕ್‌ ಮೆಹ್ತಾ ಮತ್ತು ಗುಂಜಿತ್‌ ಚೋಪ್ರಾ ರಚನೆಯ ಈ ವೆಬ್‌ ಧಾರವಾಹಿಯನ್ನು ಅವಿನಾಶ್‌ ಅರುಣ್ ಮತ್ತು ಪ್ರೊಸಿತ್‌ ರಾಯ್‌ ನಿರ್ದೇಶಿಸಿದ್ದಾರೆ. ದೆಹಲಿಯ ಹೆಸರಾಂತ ಪತ್ರಕರ್ತನೊಬ್ಬನ ಕೊಲೆ ಪ್ರಯತ್ನದ ಪ್ರಕರಣದ ಜಾಡುಹಿಡಿದ ಹೊರಟ ದೆಹಲಿ ಪೊಲೀಸ್‌ ಕಣ್ಣಿಗೆ ಕಾಣುವ ಅಪರಾಧ ಲೋಕದ ಅನಾವರಣ ಇಲ್ಲಿದೆ. ಪೊಲೀಸರ ಭ್ರಷ್ಟಾಚಾರ ಮತ್ತು ಅಪರಾಧಿಗಳಿಗೆ ರಕ್ಷಣೆ, ಅಮಾಯಕರ ಬಲಿಪಶು, ಎಲ್ಲಕ್ಕೂ ಭಯೋತ್ಪಾದನೆಯ ನಂಟು ಹೊರಿಸಿ ನಿಜವಾದ ಅಪರಾಧಿಗಳು ತಪ್ಪಿಸಿಕೊಳ್ಳುವುದನ್ನು ಈ ಧಾರಾವಾಹಿ ಸಮರ್ಥವಾಗಿ ಕಟ್ಟಿಕೊಟ್ಟಿದೆ. ಜೈದೀಪ್‌ ಅಹ್ಲವಾತ್‌, ಗುಲ್‌ ಪನಾಗ್‌, ನೀರಜ್‌ ಕಬಿ, ಅಭಿಷೇಕ್‌ ಬ್ಯಾನರ್ಜಿ ಮುಂತಾದವರು ಇದರಲ್ಲಿ ನಟಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ವಿರುದ್ದ ಹೋರಾಡಲು ಮಹಾರಾಷ್ಟ್ರಕ್ಕೆ ವೈದ್ಯರ ತಂಡ ಕಳುಹಿಸಲಿರುವ ಕೇರಳ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...