Homeಮುಖಪುಟಅನುಷ್ಕ ಶರ್ಮಾಗೆ ವಿರಾಟ್‌ ಕೊಹ್ಲಿ ವಿಚ್ಛೇದನ ನೀಡಬೇಕೆಂದು ಪಟ್ಟು ಹಿಡಿದ BJP ಶಾಸಕ: ಕಾರಣವೇನು ಗೊತ್ತ?

ಅನುಷ್ಕ ಶರ್ಮಾಗೆ ವಿರಾಟ್‌ ಕೊಹ್ಲಿ ವಿಚ್ಛೇದನ ನೀಡಬೇಕೆಂದು ಪಟ್ಟು ಹಿಡಿದ BJP ಶಾಸಕ: ಕಾರಣವೇನು ಗೊತ್ತ?

- Advertisement -
- Advertisement -

ಉತ್ತರಪ್ರದೇಶದ ಗಾಜಿಯಾಬಾದ್‌ನ ಲೋನಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ನಂದಕಿಶೋರ್ ಗುರ್ಜರ್, ವಿರಾಟ್‌ ಕೊಹ್ಲಿ ಪತ್ನಿ ಅನುಷ್ಕ ಶರ್ಮಾಗೆ ವಿಚ್ಛೇದನ ನೀಡಬೇಕೆಂದು ಆಗ್ರಹಿಸಿದ್ದಾರೆ. ಆ ಮೂಲಕ ಅವರು ನಟಿ ಮತ್ತು ನಿರ್ಮಾಪಕಿಯಾಗಿರುವ  ಅನುಷ್ಕಾ ಶರ್ಮಾ ಮತ್ತು ಕೊಹ್ಲಿ ವಿರುದ್ಧ ಕಿಡಿಕಾರಿದ್ದಾರೆ.

ಭಾರತ ಕ್ರಿಕೆಟ್‌ ತಂಡದ ವಿರಾಟ್‌ ಕೊಹ್ಲಿ ರಾಷ್ಟ್ರೀಯವಾದಿ ಕ್ರಿಕೆಟ್‌ ಆಟಗಾರರಾಗಿದ್ದಾರೆ. ಅವರು ಅಪ್ರತಿಮ ದೇಶಭಕ್ತರಾಗಿದ್ದು, ದೇಶಕ್ಕಾಗಿ ಆಡುತ್ತಾರೆ. ಹಾಗಾಗಿ ಕೂಡಲೇ ಅವರು ಅನುಷ್ಕ ಶರ್ಮಾಗೆ ವಿಚ್ಛೇದನ ನೀಡಬೇಕೆಂದು ಆ ಶಾಸಕ ತನ್ನ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾನೆ. ಆಂಟಿ ಹಿಂದೂ ಅನುಷ್ಕಾ ಶರ್ಮಾ ಎಂಬ ಹ್ಯಾಸ್‌ಟ್ಯಾಗ್‌ ಅನ್ನು ಸಹ ಬಳಸಿದ್ದಾನೆ.

ಅಷ್ಟು ಮಾತ್ರವಲ್ಲದೇ ಅವರು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್‌ ಜಾವ್ಡೇಕರ್‌ ರವರಿಗೆ ಪತ್ರ ಬರೆದು, ಸ್ಥಳೀಯ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕಾರಣವೇನು?

ಒಟಿಟಿ ಫ್ಲಾಟ್‌ಫಾರಂ ಅಮೆಜಾನ್ ಪ್ರೈಮ್‌ನಲ್ಲಿ ಪ್ರಸಾರವಾಗುತ್ತಿರುವ ‘ಪಾತಾಳ್ ಲೋಕ್’ ವೆಬ್ ಸೀರೀಸ್ ಸಾಕಷ್ಟು ಜನರ ಮೆಚ್ಚುಗೆ ಪಡೆದಿದೆ. ಇದರ ನಿರ್ಮಾಪಕ ಅನುಷ್ಕ ಶರ್ಮಾ. ಇದರಲ್ಲಿ ಸನಾತನ ಧರ್ಮ ನಿಂದನೆಯಾಗಿದೆ, ಪಕ್ಷ ನಿಂದನೆಯಾಗಿದೆ, ಕೋಮು ಕೋಲಾಹಲವೆಬ್ಬಿಸಿದೆ. ಇದರಲ್ಲಿ ನನ್ನ ಫೋಟೊ ಸಹ ಬಳಕೆಯಾಗಿದೆ. ಹಾಗಾಗಿ ಇದರ ನಿರ್ಮಾಪಕಿಯ ಮೆಲೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ದೇಶದ್ರೋಹದ ಕೇಸು ದಾಖಲಿಸಿಬೇಕೆಂಬುದು ಬಿಜೆಪಿ ಶಾಸಕನ ಒತ್ತಾಯವಾಗಿದೆ.

ಯಾರು ಈ ನಂದಕಿಶೋರ್‌ ಗುರ್ಜರ್‌?

ನಂದಕಿಶೋರ್ ಗುರ್ಜರ್ ಉತ್ತರಪ್ರದೇಶದ ಗಾಜಿಯಾಬಾದ್‌ನ ಲೋನಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ. ಈತನ ಮೇಲೆ ಈಗಾಗಲೇ IPC 147, 148, 149 ಸೆಕ್ಷನ್ ಸೇರಿದಂತೆ ಹಲವಾರು ಕ್ರಿಮಿನಲ್‌ ಪ್ರಕರಣಗಳಿವೆ. ಈತನ ಅಪ್ರಾಪ್ತ ವಯಸ್ಸಿನ ಮಗನೂ ಸಹ ಕುಡಿದು ವಾಹನ ಚಲಾಯಿಸಿ ಅಪಘಾತ ಮಾಡಿ ಕೇಸು ಎದುರಿಸುತ್ತಿದ್ದಾನೆ. ನಂದಕಿಶೋರ್ ಗುರ್ಜರ್ ಈ ಹಿಂದೆ ಆರೋಗ್ಯ ಇಲಾಖೆ ಅಧಿಕಾರಿಯೊಬ್ಬರನ್ನು ಸಾರ್ವಜನಿಕವಾಗಿ ಥಳಿಸಿ ಸುದ್ದಿಯಾಗಿದ್ದರು.

ಪಾತಾಳ್‌ ಲೋಕ್‌ ಬಗ್ಗೆ

ಸುದೀಪ್‌ ಶರ್ಮಾ, ಸಾಗರ್‌ ಹಾವೆಲಿ, ಹಾರ್ದಿಕ್‌ ಮೆಹ್ತಾ ಮತ್ತು ಗುಂಜಿತ್‌ ಚೋಪ್ರಾ ರಚನೆಯ ಈ ವೆಬ್‌ ಧಾರವಾಹಿಯನ್ನು ಅವಿನಾಶ್‌ ಅರುಣ್ ಮತ್ತು ಪ್ರೊಸಿತ್‌ ರಾಯ್‌ ನಿರ್ದೇಶಿಸಿದ್ದಾರೆ. ದೆಹಲಿಯ ಹೆಸರಾಂತ ಪತ್ರಕರ್ತನೊಬ್ಬನ ಕೊಲೆ ಪ್ರಯತ್ನದ ಪ್ರಕರಣದ ಜಾಡುಹಿಡಿದ ಹೊರಟ ದೆಹಲಿ ಪೊಲೀಸ್‌ ಕಣ್ಣಿಗೆ ಕಾಣುವ ಅಪರಾಧ ಲೋಕದ ಅನಾವರಣ ಇಲ್ಲಿದೆ. ಪೊಲೀಸರ ಭ್ರಷ್ಟಾಚಾರ ಮತ್ತು ಅಪರಾಧಿಗಳಿಗೆ ರಕ್ಷಣೆ, ಅಮಾಯಕರ ಬಲಿಪಶು, ಎಲ್ಲಕ್ಕೂ ಭಯೋತ್ಪಾದನೆಯ ನಂಟು ಹೊರಿಸಿ ನಿಜವಾದ ಅಪರಾಧಿಗಳು ತಪ್ಪಿಸಿಕೊಳ್ಳುವುದನ್ನು ಈ ಧಾರಾವಾಹಿ ಸಮರ್ಥವಾಗಿ ಕಟ್ಟಿಕೊಟ್ಟಿದೆ. ಜೈದೀಪ್‌ ಅಹ್ಲವಾತ್‌, ಗುಲ್‌ ಪನಾಗ್‌, ನೀರಜ್‌ ಕಬಿ, ಅಭಿಷೇಕ್‌ ಬ್ಯಾನರ್ಜಿ ಮುಂತಾದವರು ಇದರಲ್ಲಿ ನಟಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ವಿರುದ್ದ ಹೋರಾಡಲು ಮಹಾರಾಷ್ಟ್ರಕ್ಕೆ ವೈದ್ಯರ ತಂಡ ಕಳುಹಿಸಲಿರುವ ಕೇರಳ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...