Homeಮುಖಪುಟಅನುಷ್ಕ ಶರ್ಮಾಗೆ ವಿರಾಟ್‌ ಕೊಹ್ಲಿ ವಿಚ್ಛೇದನ ನೀಡಬೇಕೆಂದು ಪಟ್ಟು ಹಿಡಿದ BJP ಶಾಸಕ: ಕಾರಣವೇನು ಗೊತ್ತ?

ಅನುಷ್ಕ ಶರ್ಮಾಗೆ ವಿರಾಟ್‌ ಕೊಹ್ಲಿ ವಿಚ್ಛೇದನ ನೀಡಬೇಕೆಂದು ಪಟ್ಟು ಹಿಡಿದ BJP ಶಾಸಕ: ಕಾರಣವೇನು ಗೊತ್ತ?

- Advertisement -
- Advertisement -

ಉತ್ತರಪ್ರದೇಶದ ಗಾಜಿಯಾಬಾದ್‌ನ ಲೋನಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ನಂದಕಿಶೋರ್ ಗುರ್ಜರ್, ವಿರಾಟ್‌ ಕೊಹ್ಲಿ ಪತ್ನಿ ಅನುಷ್ಕ ಶರ್ಮಾಗೆ ವಿಚ್ಛೇದನ ನೀಡಬೇಕೆಂದು ಆಗ್ರಹಿಸಿದ್ದಾರೆ. ಆ ಮೂಲಕ ಅವರು ನಟಿ ಮತ್ತು ನಿರ್ಮಾಪಕಿಯಾಗಿರುವ  ಅನುಷ್ಕಾ ಶರ್ಮಾ ಮತ್ತು ಕೊಹ್ಲಿ ವಿರುದ್ಧ ಕಿಡಿಕಾರಿದ್ದಾರೆ.

ಭಾರತ ಕ್ರಿಕೆಟ್‌ ತಂಡದ ವಿರಾಟ್‌ ಕೊಹ್ಲಿ ರಾಷ್ಟ್ರೀಯವಾದಿ ಕ್ರಿಕೆಟ್‌ ಆಟಗಾರರಾಗಿದ್ದಾರೆ. ಅವರು ಅಪ್ರತಿಮ ದೇಶಭಕ್ತರಾಗಿದ್ದು, ದೇಶಕ್ಕಾಗಿ ಆಡುತ್ತಾರೆ. ಹಾಗಾಗಿ ಕೂಡಲೇ ಅವರು ಅನುಷ್ಕ ಶರ್ಮಾಗೆ ವಿಚ್ಛೇದನ ನೀಡಬೇಕೆಂದು ಆ ಶಾಸಕ ತನ್ನ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾನೆ. ಆಂಟಿ ಹಿಂದೂ ಅನುಷ್ಕಾ ಶರ್ಮಾ ಎಂಬ ಹ್ಯಾಸ್‌ಟ್ಯಾಗ್‌ ಅನ್ನು ಸಹ ಬಳಸಿದ್ದಾನೆ.

ಅಷ್ಟು ಮಾತ್ರವಲ್ಲದೇ ಅವರು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್‌ ಜಾವ್ಡೇಕರ್‌ ರವರಿಗೆ ಪತ್ರ ಬರೆದು, ಸ್ಥಳೀಯ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕಾರಣವೇನು?

ಒಟಿಟಿ ಫ್ಲಾಟ್‌ಫಾರಂ ಅಮೆಜಾನ್ ಪ್ರೈಮ್‌ನಲ್ಲಿ ಪ್ರಸಾರವಾಗುತ್ತಿರುವ ‘ಪಾತಾಳ್ ಲೋಕ್’ ವೆಬ್ ಸೀರೀಸ್ ಸಾಕಷ್ಟು ಜನರ ಮೆಚ್ಚುಗೆ ಪಡೆದಿದೆ. ಇದರ ನಿರ್ಮಾಪಕ ಅನುಷ್ಕ ಶರ್ಮಾ. ಇದರಲ್ಲಿ ಸನಾತನ ಧರ್ಮ ನಿಂದನೆಯಾಗಿದೆ, ಪಕ್ಷ ನಿಂದನೆಯಾಗಿದೆ, ಕೋಮು ಕೋಲಾಹಲವೆಬ್ಬಿಸಿದೆ. ಇದರಲ್ಲಿ ನನ್ನ ಫೋಟೊ ಸಹ ಬಳಕೆಯಾಗಿದೆ. ಹಾಗಾಗಿ ಇದರ ನಿರ್ಮಾಪಕಿಯ ಮೆಲೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ದೇಶದ್ರೋಹದ ಕೇಸು ದಾಖಲಿಸಿಬೇಕೆಂಬುದು ಬಿಜೆಪಿ ಶಾಸಕನ ಒತ್ತಾಯವಾಗಿದೆ.

ಯಾರು ಈ ನಂದಕಿಶೋರ್‌ ಗುರ್ಜರ್‌?

ನಂದಕಿಶೋರ್ ಗುರ್ಜರ್ ಉತ್ತರಪ್ರದೇಶದ ಗಾಜಿಯಾಬಾದ್‌ನ ಲೋನಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ. ಈತನ ಮೇಲೆ ಈಗಾಗಲೇ IPC 147, 148, 149 ಸೆಕ್ಷನ್ ಸೇರಿದಂತೆ ಹಲವಾರು ಕ್ರಿಮಿನಲ್‌ ಪ್ರಕರಣಗಳಿವೆ. ಈತನ ಅಪ್ರಾಪ್ತ ವಯಸ್ಸಿನ ಮಗನೂ ಸಹ ಕುಡಿದು ವಾಹನ ಚಲಾಯಿಸಿ ಅಪಘಾತ ಮಾಡಿ ಕೇಸು ಎದುರಿಸುತ್ತಿದ್ದಾನೆ. ನಂದಕಿಶೋರ್ ಗುರ್ಜರ್ ಈ ಹಿಂದೆ ಆರೋಗ್ಯ ಇಲಾಖೆ ಅಧಿಕಾರಿಯೊಬ್ಬರನ್ನು ಸಾರ್ವಜನಿಕವಾಗಿ ಥಳಿಸಿ ಸುದ್ದಿಯಾಗಿದ್ದರು.

ಪಾತಾಳ್‌ ಲೋಕ್‌ ಬಗ್ಗೆ

ಸುದೀಪ್‌ ಶರ್ಮಾ, ಸಾಗರ್‌ ಹಾವೆಲಿ, ಹಾರ್ದಿಕ್‌ ಮೆಹ್ತಾ ಮತ್ತು ಗುಂಜಿತ್‌ ಚೋಪ್ರಾ ರಚನೆಯ ಈ ವೆಬ್‌ ಧಾರವಾಹಿಯನ್ನು ಅವಿನಾಶ್‌ ಅರುಣ್ ಮತ್ತು ಪ್ರೊಸಿತ್‌ ರಾಯ್‌ ನಿರ್ದೇಶಿಸಿದ್ದಾರೆ. ದೆಹಲಿಯ ಹೆಸರಾಂತ ಪತ್ರಕರ್ತನೊಬ್ಬನ ಕೊಲೆ ಪ್ರಯತ್ನದ ಪ್ರಕರಣದ ಜಾಡುಹಿಡಿದ ಹೊರಟ ದೆಹಲಿ ಪೊಲೀಸ್‌ ಕಣ್ಣಿಗೆ ಕಾಣುವ ಅಪರಾಧ ಲೋಕದ ಅನಾವರಣ ಇಲ್ಲಿದೆ. ಪೊಲೀಸರ ಭ್ರಷ್ಟಾಚಾರ ಮತ್ತು ಅಪರಾಧಿಗಳಿಗೆ ರಕ್ಷಣೆ, ಅಮಾಯಕರ ಬಲಿಪಶು, ಎಲ್ಲಕ್ಕೂ ಭಯೋತ್ಪಾದನೆಯ ನಂಟು ಹೊರಿಸಿ ನಿಜವಾದ ಅಪರಾಧಿಗಳು ತಪ್ಪಿಸಿಕೊಳ್ಳುವುದನ್ನು ಈ ಧಾರಾವಾಹಿ ಸಮರ್ಥವಾಗಿ ಕಟ್ಟಿಕೊಟ್ಟಿದೆ. ಜೈದೀಪ್‌ ಅಹ್ಲವಾತ್‌, ಗುಲ್‌ ಪನಾಗ್‌, ನೀರಜ್‌ ಕಬಿ, ಅಭಿಷೇಕ್‌ ಬ್ಯಾನರ್ಜಿ ಮುಂತಾದವರು ಇದರಲ್ಲಿ ನಟಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ವಿರುದ್ದ ಹೋರಾಡಲು ಮಹಾರಾಷ್ಟ್ರಕ್ಕೆ ವೈದ್ಯರ ತಂಡ ಕಳುಹಿಸಲಿರುವ ಕೇರಳ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...