Homeಮುಖಪುಟಅನುಷ್ಕ ಶರ್ಮಾಗೆ ವಿರಾಟ್‌ ಕೊಹ್ಲಿ ವಿಚ್ಛೇದನ ನೀಡಬೇಕೆಂದು ಪಟ್ಟು ಹಿಡಿದ BJP ಶಾಸಕ: ಕಾರಣವೇನು ಗೊತ್ತ?

ಅನುಷ್ಕ ಶರ್ಮಾಗೆ ವಿರಾಟ್‌ ಕೊಹ್ಲಿ ವಿಚ್ಛೇದನ ನೀಡಬೇಕೆಂದು ಪಟ್ಟು ಹಿಡಿದ BJP ಶಾಸಕ: ಕಾರಣವೇನು ಗೊತ್ತ?

- Advertisement -
- Advertisement -

ಉತ್ತರಪ್ರದೇಶದ ಗಾಜಿಯಾಬಾದ್‌ನ ಲೋನಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ನಂದಕಿಶೋರ್ ಗುರ್ಜರ್, ವಿರಾಟ್‌ ಕೊಹ್ಲಿ ಪತ್ನಿ ಅನುಷ್ಕ ಶರ್ಮಾಗೆ ವಿಚ್ಛೇದನ ನೀಡಬೇಕೆಂದು ಆಗ್ರಹಿಸಿದ್ದಾರೆ. ಆ ಮೂಲಕ ಅವರು ನಟಿ ಮತ್ತು ನಿರ್ಮಾಪಕಿಯಾಗಿರುವ  ಅನುಷ್ಕಾ ಶರ್ಮಾ ಮತ್ತು ಕೊಹ್ಲಿ ವಿರುದ್ಧ ಕಿಡಿಕಾರಿದ್ದಾರೆ.

ಭಾರತ ಕ್ರಿಕೆಟ್‌ ತಂಡದ ವಿರಾಟ್‌ ಕೊಹ್ಲಿ ರಾಷ್ಟ್ರೀಯವಾದಿ ಕ್ರಿಕೆಟ್‌ ಆಟಗಾರರಾಗಿದ್ದಾರೆ. ಅವರು ಅಪ್ರತಿಮ ದೇಶಭಕ್ತರಾಗಿದ್ದು, ದೇಶಕ್ಕಾಗಿ ಆಡುತ್ತಾರೆ. ಹಾಗಾಗಿ ಕೂಡಲೇ ಅವರು ಅನುಷ್ಕ ಶರ್ಮಾಗೆ ವಿಚ್ಛೇದನ ನೀಡಬೇಕೆಂದು ಆ ಶಾಸಕ ತನ್ನ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾನೆ. ಆಂಟಿ ಹಿಂದೂ ಅನುಷ್ಕಾ ಶರ್ಮಾ ಎಂಬ ಹ್ಯಾಸ್‌ಟ್ಯಾಗ್‌ ಅನ್ನು ಸಹ ಬಳಸಿದ್ದಾನೆ.

ಅಷ್ಟು ಮಾತ್ರವಲ್ಲದೇ ಅವರು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್‌ ಜಾವ್ಡೇಕರ್‌ ರವರಿಗೆ ಪತ್ರ ಬರೆದು, ಸ್ಥಳೀಯ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕಾರಣವೇನು?

ಒಟಿಟಿ ಫ್ಲಾಟ್‌ಫಾರಂ ಅಮೆಜಾನ್ ಪ್ರೈಮ್‌ನಲ್ಲಿ ಪ್ರಸಾರವಾಗುತ್ತಿರುವ ‘ಪಾತಾಳ್ ಲೋಕ್’ ವೆಬ್ ಸೀರೀಸ್ ಸಾಕಷ್ಟು ಜನರ ಮೆಚ್ಚುಗೆ ಪಡೆದಿದೆ. ಇದರ ನಿರ್ಮಾಪಕ ಅನುಷ್ಕ ಶರ್ಮಾ. ಇದರಲ್ಲಿ ಸನಾತನ ಧರ್ಮ ನಿಂದನೆಯಾಗಿದೆ, ಪಕ್ಷ ನಿಂದನೆಯಾಗಿದೆ, ಕೋಮು ಕೋಲಾಹಲವೆಬ್ಬಿಸಿದೆ. ಇದರಲ್ಲಿ ನನ್ನ ಫೋಟೊ ಸಹ ಬಳಕೆಯಾಗಿದೆ. ಹಾಗಾಗಿ ಇದರ ನಿರ್ಮಾಪಕಿಯ ಮೆಲೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ದೇಶದ್ರೋಹದ ಕೇಸು ದಾಖಲಿಸಿಬೇಕೆಂಬುದು ಬಿಜೆಪಿ ಶಾಸಕನ ಒತ್ತಾಯವಾಗಿದೆ.

ಯಾರು ಈ ನಂದಕಿಶೋರ್‌ ಗುರ್ಜರ್‌?

ನಂದಕಿಶೋರ್ ಗುರ್ಜರ್ ಉತ್ತರಪ್ರದೇಶದ ಗಾಜಿಯಾಬಾದ್‌ನ ಲೋನಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ. ಈತನ ಮೇಲೆ ಈಗಾಗಲೇ IPC 147, 148, 149 ಸೆಕ್ಷನ್ ಸೇರಿದಂತೆ ಹಲವಾರು ಕ್ರಿಮಿನಲ್‌ ಪ್ರಕರಣಗಳಿವೆ. ಈತನ ಅಪ್ರಾಪ್ತ ವಯಸ್ಸಿನ ಮಗನೂ ಸಹ ಕುಡಿದು ವಾಹನ ಚಲಾಯಿಸಿ ಅಪಘಾತ ಮಾಡಿ ಕೇಸು ಎದುರಿಸುತ್ತಿದ್ದಾನೆ. ನಂದಕಿಶೋರ್ ಗುರ್ಜರ್ ಈ ಹಿಂದೆ ಆರೋಗ್ಯ ಇಲಾಖೆ ಅಧಿಕಾರಿಯೊಬ್ಬರನ್ನು ಸಾರ್ವಜನಿಕವಾಗಿ ಥಳಿಸಿ ಸುದ್ದಿಯಾಗಿದ್ದರು.

ಪಾತಾಳ್‌ ಲೋಕ್‌ ಬಗ್ಗೆ

ಸುದೀಪ್‌ ಶರ್ಮಾ, ಸಾಗರ್‌ ಹಾವೆಲಿ, ಹಾರ್ದಿಕ್‌ ಮೆಹ್ತಾ ಮತ್ತು ಗುಂಜಿತ್‌ ಚೋಪ್ರಾ ರಚನೆಯ ಈ ವೆಬ್‌ ಧಾರವಾಹಿಯನ್ನು ಅವಿನಾಶ್‌ ಅರುಣ್ ಮತ್ತು ಪ್ರೊಸಿತ್‌ ರಾಯ್‌ ನಿರ್ದೇಶಿಸಿದ್ದಾರೆ. ದೆಹಲಿಯ ಹೆಸರಾಂತ ಪತ್ರಕರ್ತನೊಬ್ಬನ ಕೊಲೆ ಪ್ರಯತ್ನದ ಪ್ರಕರಣದ ಜಾಡುಹಿಡಿದ ಹೊರಟ ದೆಹಲಿ ಪೊಲೀಸ್‌ ಕಣ್ಣಿಗೆ ಕಾಣುವ ಅಪರಾಧ ಲೋಕದ ಅನಾವರಣ ಇಲ್ಲಿದೆ. ಪೊಲೀಸರ ಭ್ರಷ್ಟಾಚಾರ ಮತ್ತು ಅಪರಾಧಿಗಳಿಗೆ ರಕ್ಷಣೆ, ಅಮಾಯಕರ ಬಲಿಪಶು, ಎಲ್ಲಕ್ಕೂ ಭಯೋತ್ಪಾದನೆಯ ನಂಟು ಹೊರಿಸಿ ನಿಜವಾದ ಅಪರಾಧಿಗಳು ತಪ್ಪಿಸಿಕೊಳ್ಳುವುದನ್ನು ಈ ಧಾರಾವಾಹಿ ಸಮರ್ಥವಾಗಿ ಕಟ್ಟಿಕೊಟ್ಟಿದೆ. ಜೈದೀಪ್‌ ಅಹ್ಲವಾತ್‌, ಗುಲ್‌ ಪನಾಗ್‌, ನೀರಜ್‌ ಕಬಿ, ಅಭಿಷೇಕ್‌ ಬ್ಯಾನರ್ಜಿ ಮುಂತಾದವರು ಇದರಲ್ಲಿ ನಟಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ವಿರುದ್ದ ಹೋರಾಡಲು ಮಹಾರಾಷ್ಟ್ರಕ್ಕೆ ವೈದ್ಯರ ತಂಡ ಕಳುಹಿಸಲಿರುವ ಕೇರಳ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...