Homeಮುಖಪುಟಸಿಎಂ ಸಿದ್ದರಾಮಯ್ಯನವರನ್ನು ಕಟ್ಟಿ ಹಾಕಲು ವೀರೇಂದ್ರ ಹೆಗಡೆ ಪತ್ರ ಬರೆದಿದ್ದಾರೆ: ಮಹೇಶ್ ತಿಮರೋಡಿ

ಸಿಎಂ ಸಿದ್ದರಾಮಯ್ಯನವರನ್ನು ಕಟ್ಟಿ ಹಾಕಲು ವೀರೇಂದ್ರ ಹೆಗಡೆ ಪತ್ರ ಬರೆದಿದ್ದಾರೆ: ಮಹೇಶ್ ತಿಮರೋಡಿ

ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಜುಲೈ 17 ರಂದು ಮೈಸೂರಿನಲ್ಲಿ ಪ್ರತಿಭಟನೆ ನಡೆಸಲು ಒಡನಾಡಿ ಸಂಸ್ಥೆ ತೀರ್ಮಾನಿಸಿದೆ.

- Advertisement -
- Advertisement -

2012ರ ಅಕ್ಟೋಬರ್‌ 9ರಂದು ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಹೋರಾಟ ಮತ್ತೆ ಭುಗಿಲೆದ್ದಿದೆ. ಸೌಜನ್ಯಗೆ ನ್ಯಾಯ ಸಿಗಬೇಕು. ದುರುಳ ಅಪರಾಧಿಗಳಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯ ಜೋರಾದ ಕೂಡಲೇ ಸಿಎಂ ಸಿದ್ದರಾಮಯ್ಯನವರನ್ನು ಕಟ್ಟಿ ಹಾಕಲು ಅವರಿಗೆ ವೀರೇಂದ್ರ ಹೆಗಡೆ ಪತ್ರ ಬರೆದಿದ್ದಾರೆ ಎಂದು ಹೋರಾಟಗಾರ ಮಹೇಶ್ ತಿಮರೋಡಿ ಆರೋಪಿಸಿದ್ದಾರೆ.

ಜಲದರ್ಶಿನಿ ಅತಿಥಿಗೃಹದಲ್ಲಿ ಒಡನಾಡಿ ಸೇವಾ ಸಂಸ್ಥೆ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸೌಜನ್ಯ ಪ್ರಕರಣ ಮತ್ತೆ ಮುನ್ನೆಲೆಗೆ ಬರುತ್ತಿದ್ದಂತೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೆಂದ್ರ ಹೆಗ್ಡೆ ಅವರು ಶಕ್ತಿಯೋಜನೆಯನ್ನು ಹೊಗಳುವ ನೆಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪ್ರಕರಣದಲ್ಲಿ ತಲೆಹಾಕದಂತೆ ಕಟ್ಟಿಹಾಕುವ ಉದ್ದೇಶದಿಂದ ಅವರಿಗೆ ಪತ್ರ ಬರೆದಿದ್ದಾರೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಗಳ ಇವರ ಮಾತಿಗೆ ಮರುಳಾಗದೇ ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಆದೇಶ ಮಾಡುವ ಮೂಲಕ ಧರ್ಮಸ್ಥಳದಲ್ಲಿ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಯಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಧರ್ಮಸ್ಥದಲ್ಲಿ ಸೌಜನ್ಯ ಪ್ರಕರಣದಂತಹ ನೂರಾರು ಕೊಲೆ, ಅತ್ಯಾಚಾರಗಳು ನಡೆದು ಬೆಳಕಿಗೆ ಬಾರದೆ ಕತ್ತಲಲ್ಲೇ ಕರಗಿ ಹೋಗಿವೆ. ಇಂತಹ ಪ್ರಕರಣಗಳು ಮರುಕಳಿಸುತ್ತಿರುವುದು ರಾಜ್ಯದ ಜನರು ತಲೆ ತಗ್ಗಿಸುವಂತ ವಿಚಾರ.  ಧರ್ಮಸ್ಥಳದಲ್ಲಿ ಸೌಜನ್ಯ ಪ್ರಕರಣದಂತೆ, ಪದ್ಮ, ನೇತ್ರಾವತಿಯಂತಹ ನೂರಾರು ಹಿಂದೂ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆದಾಗ ಈ ನಕಲಿ ಹಿಂದುತ್ವಾದಿಗಳಾದ ಬಜರಂಗದಳ, ವಿಶ್ವಹಿಂದೂ ಪರಿಷತ್, ಆರೆಸ್‍ಎಸ್ ಸಂಘಟನೆಗಳು ದೌರ್ಜನ್ಯಗಳ ವಿರುದ್ಧ ಧ್ವನಿ ಎತ್ತಲೇ ಇಲ್ಲ. ಇವರೆಲ್ಲ ಬಾಡಿಗೆ ಹೋರಾಟಗಾರರು ಎಂದು ಮಹೇಶ್ ಶೆಟ್ಟಿ ಆರೋಪಿಸಿದ್ದಾರೆ.

ಒತ್ತಾಯಿಸಿ ಜುಲೈ 17 ರಂದು ಮೈಸೂರಿನಲ್ಲಿ ಪ್ರತಿಭಟನೆ

ಸೌಜನ್ಯ ಕೊಲೆ ಪ್ರಕರಣದ ಮರುತನಿಖೆ ಹಾಗೂ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಒತ್ತಾಯಿಸಿ ಜುಲೈ 17 ರಂದು ಮೈಸೂರಿನ ನಂಜರಾಜ ಬಹದ್ದೂರ್ ಛತ್ರದಿಂದ ಗಾಂಧಿವೃತ್ತದ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ಒಡನಾಡಿ ಸಂಸ್ಥೆಯ ಮುಖ್ಯಸ್ಥ ಸ್ಟ್ಯಾನ್ಲಿ ತಿಳಿಸಿದ್ದಾರೆ.

“ಸೌಜನ್ಯ ಪ್ರಕರಣಕ್ಕೆ ನ್ಯಾಯ ಸಿಗುವಂತೆ ಜನರಲ್ಲಿ ಹೇಗೆ ಜಾಗೃತ ಮೂಡಿಸಬೇಕು ಎಂಬ ವಿಚಾರವಾಗಿ ಈ ಹಿಂದಿನ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದ್ದು, ಅದರ ಭಾಗವಾಗಿ ಈ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ” ಎಂದರು.

ಹಲವಾರು ಪ್ರಗತಿಪರ ಸಂಘಟನೆಗಳು, ಮಹಿಳಾ ಸಂಘಟನೆಗಳು, ದಲಿತಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನೆಡಸಲಾಗುತ್ತಿದೆ. ಧರ್ಮಸ್ಥಳದಲ್ಲಿ ನಡೆಯುತ್ತಿರುವ ದೌರ್ಜನ್ಯಗಳು, ಅತ್ಯಾಚಾರಗಳು ಮತ್ತೆ ಮರುಕಳಿಸದಂತೆ ತಡೆಯಲು ಈ ಹೋರಾಟ ಅತ್ಯವಶ್ಯಕ ಎಂದು ಅವರು ಹೇಳಿದ್ದಾರೆ.

ಎಂ.ಎಲ್ ಪರಶುರಾಂ ಮಾತನಾಡಿ, ಸೌಜನ್ಯ ಪ್ರಕರಣದಲ್ಲಿ ಸಂತೋಷ್ ರಾವ್ ಎಂಬ ವ್ಯಕ್ತಿಯನ್ನು ಅಪರಾಧಿ ಎಂದು ಸುಳ್ಳು ಪ್ರಕರಣ ದಾಖಲಿಸಿ ಆರುವರೆ ವರ್ಷಗಳ ಕಾಲ ಜೈಲು ಶಿಕ್ಷೆಯನ್ನೂ ವಿಧಿಸಲಾಗಿದೆ. ಆದರೆ ಸಿಬಿಐ ಕೋರ್ಟ್ ಆತನನ್ನು ನಿರಪರಾಧಿ ಎಂದು ಬಿಡುಗಡೆ ಮಾಡಿದೆ. ಅಧಿಕಾರಿಗಳು ಕೊಟ್ಟಿರುವ ಸಾಕ್ಷಿಗಳು ಹಾಗೂ ವೈದ್ಯರು ನೀಡಿರುವ ಡಿಎನ್‍ಎ ವರದಿಗಳು ಹೊಲಿಕೆಯಾಗುತ್ತಿಲ್ಲ ಎಂದು ಹೇಳಿದ್ದು, ನೈಜ ಆರೋಪಿಗಳ ತನಿಖೆ ಮಾಡುವಂತೆ ಆದೇಶವನ್ನೂ ನೀಡಿದೆ. ಅದರಂತೆ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಈ ಸೌಜನ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಜೆಡಿಎಸ್ ಜೊತೆ ಹೊಂದಾಣಿಕೆಯ ಪ್ರಸ್ತಾಪವಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...