Homeಅಂತರಾಷ್ಟ್ರೀಯ‘ಬಾಹ್ಯಾಕಾಶಕ್ಕೆ ಪ್ರವಾಸ ಹೊರಡುವ ಸಮಯ!’- ಇತಿಹಾಸ ನಿರ್ಮಿಸಲಿರುವ ‘ವರ್ಜಿನ್‌ ಗ್ಯಾಲಾಕ್ಟಿಕ್‌’

‘ಬಾಹ್ಯಾಕಾಶಕ್ಕೆ ಪ್ರವಾಸ ಹೊರಡುವ ಸಮಯ!’- ಇತಿಹಾಸ ನಿರ್ಮಿಸಲಿರುವ ‘ವರ್ಜಿನ್‌ ಗ್ಯಾಲಾಕ್ಟಿಕ್‌’

ತಂಡದಲ್ಲಿ ಭಾರತೀಯ ಮೂಲದ ಸಿರಿಶಾ ಬಾಂಡ್ಲಾ ಕೂಡಾ ಇರಲಿದ್ದಾರೆ.

- Advertisement -
- Advertisement -

ಬ್ರಿಟಿಷ್ ಕೋಟ್ಯಾಧಿಪತಿ ರಿಚರ್ಡ್ ಬ್ರಾನ್ಸನ್ ಅವರ ‘ವರ್ಜಿನ್‌ ಗ್ಯಾಲಾಕ್ಟಿಕ್‌’ ನ ಮೊದಲ ಬಾಹ್ಯಾಕಾಶ ತಂಡ ನಭಕ್ಕೆ ಹಾರಲು ತಯಾರಾಗಿದೆ. ಈ ಹಿಂದೆ ನಿಗದಿ ಪಡಿಸಿದಂತೆ ಭಾನುವಾರ ಭಾರತೀಯ ಕಾಲಮಾನ ಸಂಜೆ 6:30 ಕ್ಕೆ ಹೊರಡಬೇಕಿತ್ತಾದರೂ ಹವಾಮಾನ ವೈಪರೀತ್ಯದಿಂದಾಗಿ ರಾತ್ರಿ 8 ಗಂಟೆಗೆ ಹೊರಡಲಿದೆ. ವಿಶೇಷವೇನೆಂದರೆ ಈ ಪ್ರಯಾಣದ ತಂಡದಲ್ಲಿ ಭಾರತೀಯ ಮೂಲದ ಸಿರಿಶಾ ಬಾಂಡ್ಲಾ ಕೂಡಾ ಇದ್ದಾರೆ.

ಬಾಹ್ಯಾಕಾಶಕ್ಕೆ ಹೊರಟಿರುವ ‘ವರ್ಜಿನ್‌ ಗ್ಯಾಲಾಕ್ಟಿಕ್‌’ ಸಂಸ್ಥೆಯ ಆರು ಉದ್ಯೋಗಿಗಳಲ್ಲಿ ಒಬ್ಬರಾದ 71 ವರ್ಷದ ಬ್ರಾನ್ಸನ್, ಭವಿಷ್ಯದಲ್ಲಿ ‘ಬಾಹ್ಯಾಕಾಶ ಪ್ರವಾಸೋದ್ಯಮ’ದ ಹೊಸ ಪ್ರಯೋಗದ ಪೂರ್ವಭಾವಿಯಾಗಿ ಪ್ರಸ್ತುತ ಹಾರಾಟವನ್ನು ನಡೆಸುತ್ತಿದ್ದಾರೆ. ಅವರು ಸ್ಥಾಪಿಸಿದ ಕಂಪನಿಯು ಮುಂದಿನ ವರ್ಷದಿಂದ ತನ್ನ ಪ್ರವಾಸೋದ್ಯಮದ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಲು ಮುಂದಾಗಿದೆ.

ಇದನ್ನೂ ಓದಿ: ಮಂಗಳ ಗ್ರಹಕ್ಕೆ ಇಳಿದ ಬಾಹ್ಯಾಕಾಶ ನೌಕೆಯ ಮೈನವಿರೇಳಿಸುವ ವಿಡಿಯೋ ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶದ ಪ್ರವಾಸವು ದುಬಾರಿಯಾಗಿದ್ದರೂ, ಈಗಾಗಲೆ ನೂರಾರು ಶ್ರೀಮಂತ ಜನರು ಬ್ರಾನ್ಸನ್‌ ಅವರ ಸಂಸ್ಥೆಯಲ್ಲಿ ಮುಂಗಡ ಬುಕ್ಕಿಂಗ್ ಮಾಡಿದ್ದಾರೆ. ಆದರೆ ಪ್ರತಿ ಟಿಕೆಟ್‌ಗೆ 2.5 ಲಕ್ಷ ಡಾಲರ್‌ ವ್ಯಯಿಸಬೇಕಾಗುತ್ತದೆ. 2030 ರ ಹೊತ್ತಿಗೆ ಬಾಹ್ಯಾಕಾಶ ಪ್ರವಾಸೋದ್ಯಮದ ಮಾರುಕಟ್ಟೆ ವಾರ್ಷಿಕವಾಗಿ 300 ಕೋಟಿ ಡಾಲರ್‌ಗೆ ಬೆಳೆಯುತ್ತದೆ ಎಂದು ಸ್ವಿಸ್‌ ಬ್ಯಾಂಕ್‌ ಅಂದಾಜಿಸಿದೆ.

‘ವರ್ಜಿನ್‌ ಗ್ಯಾಲಾಕ್ಟಿಕ್‌’ ನ ರಾಕೆಟ್‌ ಒಂದು 2014 ರಲ್ಲಿ ಕ್ಯಾಲಿಫೋರ್ನಿಯಾದ ಮೊಜಾವೆ ಮರುಭೂಮಿಯ ಮೇಲೆ ಪರೀಕ್ಷಾ ಹಾರಾಟದ ಸಂದರ್ಭದಲ್ಲಿ ಅಪಘಾತಕ್ಕೀಡಾಗಿತ್ತು. ಅದರಲ್ಲಿ ಒಬ್ಬ ಪೈಲಟ್ ಸಾವನ್ನಪ್ಪಿದ್ದು, ಇನ್ನೊಬ್ಬನಿಗೆ ಗಂಭೀರವಾಗಿ ಗಾಯವಾಗಿತ್ತು.

ಪ್ರಸ್ತುತ ಪ್ರಯಾಣದಲ್ಲಿ ಆಂಧ್ರಪ್ರದೇಶದ ಗುಂಟೂರು ಮೂಲದ 34 ವರ್ಷದ ಸಿರಿಶಾ ಬಾಂಡ್ಲಾ ಕೂಡಾ ತಂಡದಲ್ಲಿದ್ದಾರೆ. ಸಿರಿಶಾ ಅವರು ಏರೋನಾಟಿಕಲ್ ಎಂಜಿನಿಯರ್ ಆಗಿದ್ದು, ಬಾಹ್ಯಾಕಾಶಕ್ಕೆ ತೆರಳುತ್ತಿರುವ ಭಾರತೀಯ ಮೂಲದ ಮೂರನೇ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇದನ್ನೂ ಓದಿ: ಬೆಳ್ಳಿಚುಕ್ಕಿ: ಸೌರ ಮಂಡಲದಲ್ಲಿ ಅತ್ಯಂತ ವೇಗವಾಗಿ ಸೂರ್ಯನ ಸುತ್ತ ಸುತ್ತವ ಗ್ರಹ!

ಈ ಹಿಂದೆ ಭಾರತೀಯ ಮೂಲದ ಕಲ್ಪನಾ ಚಾವ್ಲಾ ಮತ್ತು ಸುನೀತಾ ವಿಲಿಯಮ್ಸ್‌‌ ಬಾಹ್ಯಾಕಾಶಕ್ಕೆ ಹಾರಿದ್ದರು. ಪ್ರಸ್ತುತ ಬಾಹ್ಯಾಕಾಶ ಪ್ರಯಾಣದಲ್ಲಿ ಸಿರಿಶಾ ಗಗನಯಾತ್ರಿ ಸಂಖ್ಯೆ 004 ಆಗಲಿದ್ದಾರೆ.

ಸಿರಿಶಾ ಅವರು ಜನವರಿ 2021 ರಲ್ಲಿ ವರ್ಜಿನ್‌ ಗ್ಯಾಲಾಕ್ಟಿಕ್‌ ಸರ್ಕಾರಿ ವ್ಯವಹಾರ ಮತ್ತು ಸಂಶೋಧನಾ ಕಾರ್ಯಾಚರಣೆಗಳ ಉಪಾಧ್ಯಕ್ಷರಾಗಿ ತಮ್ಮ ಕೆಲಸವನ್ನು ಪ್ರಾರಂಭಿಸಿದ್ದರು.

ಪ್ರಸ್ತುತ ಬಾಹ್ಯಾಕಾಶ ಪ್ರಯಾಣಲ್ಲಿ, ಸಂಸ್ಥೆಯ ಸಂಸ್ಥಾಪಕ ಸರ್ ರಿಚರ್ಡ್ ಬ್ರಾನ್ಸನ್ ಜೊತೆಗೆ ಇತರ ಐದು ಜನರು ಇರಲಿದ್ದಾರೆ. ಬೆತ್ ಮೋಸೆಸ್, ಕಾಲಿನ್ ಬೆನೆಟ್, ಸಿರಿಶಾ ಬಾಂಡ್ಲಾ, ಸಿಜೆ ಸ್ಟರ್ಕೊ ಮತ್ತು ಕೆಲ್ಲಿ ಲ್ಯಾಟಿಮರ್ ಇರಲಿದ್ದಾರೆ.

ಭಾನುವಾರ ಹೊರಡುತ್ತಿರುವ ಈ ಪ್ರಯಾಣವನ್ನು ಕೆಳಗಿನ ವಿಡಿಯೊದಲ್ಲಿ ನೋಡಬಹುದಾಗಿದೆ.


ಇದನ್ನೂ ಓದಿ: ಬೆಳ್ಳಿಚುಕ್ಕಿ: ಅನ್ಯಗ್ರಹದಲ್ಲಿ ನಡೆದ ಮೊದಲ ವೈಮಾನಿಕ ಹಾರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...