Homeಅಂತರಾಷ್ಟ್ರೀಯ‘ಬಾಹ್ಯಾಕಾಶಕ್ಕೆ ಪ್ರವಾಸ ಹೊರಡುವ ಸಮಯ!’- ಇತಿಹಾಸ ನಿರ್ಮಿಸಲಿರುವ ‘ವರ್ಜಿನ್‌ ಗ್ಯಾಲಾಕ್ಟಿಕ್‌’

‘ಬಾಹ್ಯಾಕಾಶಕ್ಕೆ ಪ್ರವಾಸ ಹೊರಡುವ ಸಮಯ!’- ಇತಿಹಾಸ ನಿರ್ಮಿಸಲಿರುವ ‘ವರ್ಜಿನ್‌ ಗ್ಯಾಲಾಕ್ಟಿಕ್‌’

ತಂಡದಲ್ಲಿ ಭಾರತೀಯ ಮೂಲದ ಸಿರಿಶಾ ಬಾಂಡ್ಲಾ ಕೂಡಾ ಇರಲಿದ್ದಾರೆ.

- Advertisement -
- Advertisement -

ಬ್ರಿಟಿಷ್ ಕೋಟ್ಯಾಧಿಪತಿ ರಿಚರ್ಡ್ ಬ್ರಾನ್ಸನ್ ಅವರ ‘ವರ್ಜಿನ್‌ ಗ್ಯಾಲಾಕ್ಟಿಕ್‌’ ನ ಮೊದಲ ಬಾಹ್ಯಾಕಾಶ ತಂಡ ನಭಕ್ಕೆ ಹಾರಲು ತಯಾರಾಗಿದೆ. ಈ ಹಿಂದೆ ನಿಗದಿ ಪಡಿಸಿದಂತೆ ಭಾನುವಾರ ಭಾರತೀಯ ಕಾಲಮಾನ ಸಂಜೆ 6:30 ಕ್ಕೆ ಹೊರಡಬೇಕಿತ್ತಾದರೂ ಹವಾಮಾನ ವೈಪರೀತ್ಯದಿಂದಾಗಿ ರಾತ್ರಿ 8 ಗಂಟೆಗೆ ಹೊರಡಲಿದೆ. ವಿಶೇಷವೇನೆಂದರೆ ಈ ಪ್ರಯಾಣದ ತಂಡದಲ್ಲಿ ಭಾರತೀಯ ಮೂಲದ ಸಿರಿಶಾ ಬಾಂಡ್ಲಾ ಕೂಡಾ ಇದ್ದಾರೆ.

ಬಾಹ್ಯಾಕಾಶಕ್ಕೆ ಹೊರಟಿರುವ ‘ವರ್ಜಿನ್‌ ಗ್ಯಾಲಾಕ್ಟಿಕ್‌’ ಸಂಸ್ಥೆಯ ಆರು ಉದ್ಯೋಗಿಗಳಲ್ಲಿ ಒಬ್ಬರಾದ 71 ವರ್ಷದ ಬ್ರಾನ್ಸನ್, ಭವಿಷ್ಯದಲ್ಲಿ ‘ಬಾಹ್ಯಾಕಾಶ ಪ್ರವಾಸೋದ್ಯಮ’ದ ಹೊಸ ಪ್ರಯೋಗದ ಪೂರ್ವಭಾವಿಯಾಗಿ ಪ್ರಸ್ತುತ ಹಾರಾಟವನ್ನು ನಡೆಸುತ್ತಿದ್ದಾರೆ. ಅವರು ಸ್ಥಾಪಿಸಿದ ಕಂಪನಿಯು ಮುಂದಿನ ವರ್ಷದಿಂದ ತನ್ನ ಪ್ರವಾಸೋದ್ಯಮದ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಲು ಮುಂದಾಗಿದೆ.

ಇದನ್ನೂ ಓದಿ: ಮಂಗಳ ಗ್ರಹಕ್ಕೆ ಇಳಿದ ಬಾಹ್ಯಾಕಾಶ ನೌಕೆಯ ಮೈನವಿರೇಳಿಸುವ ವಿಡಿಯೋ ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶದ ಪ್ರವಾಸವು ದುಬಾರಿಯಾಗಿದ್ದರೂ, ಈಗಾಗಲೆ ನೂರಾರು ಶ್ರೀಮಂತ ಜನರು ಬ್ರಾನ್ಸನ್‌ ಅವರ ಸಂಸ್ಥೆಯಲ್ಲಿ ಮುಂಗಡ ಬುಕ್ಕಿಂಗ್ ಮಾಡಿದ್ದಾರೆ. ಆದರೆ ಪ್ರತಿ ಟಿಕೆಟ್‌ಗೆ 2.5 ಲಕ್ಷ ಡಾಲರ್‌ ವ್ಯಯಿಸಬೇಕಾಗುತ್ತದೆ. 2030 ರ ಹೊತ್ತಿಗೆ ಬಾಹ್ಯಾಕಾಶ ಪ್ರವಾಸೋದ್ಯಮದ ಮಾರುಕಟ್ಟೆ ವಾರ್ಷಿಕವಾಗಿ 300 ಕೋಟಿ ಡಾಲರ್‌ಗೆ ಬೆಳೆಯುತ್ತದೆ ಎಂದು ಸ್ವಿಸ್‌ ಬ್ಯಾಂಕ್‌ ಅಂದಾಜಿಸಿದೆ.

‘ವರ್ಜಿನ್‌ ಗ್ಯಾಲಾಕ್ಟಿಕ್‌’ ನ ರಾಕೆಟ್‌ ಒಂದು 2014 ರಲ್ಲಿ ಕ್ಯಾಲಿಫೋರ್ನಿಯಾದ ಮೊಜಾವೆ ಮರುಭೂಮಿಯ ಮೇಲೆ ಪರೀಕ್ಷಾ ಹಾರಾಟದ ಸಂದರ್ಭದಲ್ಲಿ ಅಪಘಾತಕ್ಕೀಡಾಗಿತ್ತು. ಅದರಲ್ಲಿ ಒಬ್ಬ ಪೈಲಟ್ ಸಾವನ್ನಪ್ಪಿದ್ದು, ಇನ್ನೊಬ್ಬನಿಗೆ ಗಂಭೀರವಾಗಿ ಗಾಯವಾಗಿತ್ತು.

ಪ್ರಸ್ತುತ ಪ್ರಯಾಣದಲ್ಲಿ ಆಂಧ್ರಪ್ರದೇಶದ ಗುಂಟೂರು ಮೂಲದ 34 ವರ್ಷದ ಸಿರಿಶಾ ಬಾಂಡ್ಲಾ ಕೂಡಾ ತಂಡದಲ್ಲಿದ್ದಾರೆ. ಸಿರಿಶಾ ಅವರು ಏರೋನಾಟಿಕಲ್ ಎಂಜಿನಿಯರ್ ಆಗಿದ್ದು, ಬಾಹ್ಯಾಕಾಶಕ್ಕೆ ತೆರಳುತ್ತಿರುವ ಭಾರತೀಯ ಮೂಲದ ಮೂರನೇ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇದನ್ನೂ ಓದಿ: ಬೆಳ್ಳಿಚುಕ್ಕಿ: ಸೌರ ಮಂಡಲದಲ್ಲಿ ಅತ್ಯಂತ ವೇಗವಾಗಿ ಸೂರ್ಯನ ಸುತ್ತ ಸುತ್ತವ ಗ್ರಹ!

ಈ ಹಿಂದೆ ಭಾರತೀಯ ಮೂಲದ ಕಲ್ಪನಾ ಚಾವ್ಲಾ ಮತ್ತು ಸುನೀತಾ ವಿಲಿಯಮ್ಸ್‌‌ ಬಾಹ್ಯಾಕಾಶಕ್ಕೆ ಹಾರಿದ್ದರು. ಪ್ರಸ್ತುತ ಬಾಹ್ಯಾಕಾಶ ಪ್ರಯಾಣದಲ್ಲಿ ಸಿರಿಶಾ ಗಗನಯಾತ್ರಿ ಸಂಖ್ಯೆ 004 ಆಗಲಿದ್ದಾರೆ.

ಸಿರಿಶಾ ಅವರು ಜನವರಿ 2021 ರಲ್ಲಿ ವರ್ಜಿನ್‌ ಗ್ಯಾಲಾಕ್ಟಿಕ್‌ ಸರ್ಕಾರಿ ವ್ಯವಹಾರ ಮತ್ತು ಸಂಶೋಧನಾ ಕಾರ್ಯಾಚರಣೆಗಳ ಉಪಾಧ್ಯಕ್ಷರಾಗಿ ತಮ್ಮ ಕೆಲಸವನ್ನು ಪ್ರಾರಂಭಿಸಿದ್ದರು.

ಪ್ರಸ್ತುತ ಬಾಹ್ಯಾಕಾಶ ಪ್ರಯಾಣಲ್ಲಿ, ಸಂಸ್ಥೆಯ ಸಂಸ್ಥಾಪಕ ಸರ್ ರಿಚರ್ಡ್ ಬ್ರಾನ್ಸನ್ ಜೊತೆಗೆ ಇತರ ಐದು ಜನರು ಇರಲಿದ್ದಾರೆ. ಬೆತ್ ಮೋಸೆಸ್, ಕಾಲಿನ್ ಬೆನೆಟ್, ಸಿರಿಶಾ ಬಾಂಡ್ಲಾ, ಸಿಜೆ ಸ್ಟರ್ಕೊ ಮತ್ತು ಕೆಲ್ಲಿ ಲ್ಯಾಟಿಮರ್ ಇರಲಿದ್ದಾರೆ.

ಭಾನುವಾರ ಹೊರಡುತ್ತಿರುವ ಈ ಪ್ರಯಾಣವನ್ನು ಕೆಳಗಿನ ವಿಡಿಯೊದಲ್ಲಿ ನೋಡಬಹುದಾಗಿದೆ.


ಇದನ್ನೂ ಓದಿ: ಬೆಳ್ಳಿಚುಕ್ಕಿ: ಅನ್ಯಗ್ರಹದಲ್ಲಿ ನಡೆದ ಮೊದಲ ವೈಮಾನಿಕ ಹಾರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...