Homeಅಂತರಾಷ್ಟ್ರೀಯ‘ಬಾಹ್ಯಾಕಾಶಕ್ಕೆ ಪ್ರವಾಸ ಹೊರಡುವ ಸಮಯ!’- ಇತಿಹಾಸ ನಿರ್ಮಿಸಲಿರುವ ‘ವರ್ಜಿನ್‌ ಗ್ಯಾಲಾಕ್ಟಿಕ್‌’

‘ಬಾಹ್ಯಾಕಾಶಕ್ಕೆ ಪ್ರವಾಸ ಹೊರಡುವ ಸಮಯ!’- ಇತಿಹಾಸ ನಿರ್ಮಿಸಲಿರುವ ‘ವರ್ಜಿನ್‌ ಗ್ಯಾಲಾಕ್ಟಿಕ್‌’

ತಂಡದಲ್ಲಿ ಭಾರತೀಯ ಮೂಲದ ಸಿರಿಶಾ ಬಾಂಡ್ಲಾ ಕೂಡಾ ಇರಲಿದ್ದಾರೆ.

- Advertisement -
- Advertisement -

ಬ್ರಿಟಿಷ್ ಕೋಟ್ಯಾಧಿಪತಿ ರಿಚರ್ಡ್ ಬ್ರಾನ್ಸನ್ ಅವರ ‘ವರ್ಜಿನ್‌ ಗ್ಯಾಲಾಕ್ಟಿಕ್‌’ ನ ಮೊದಲ ಬಾಹ್ಯಾಕಾಶ ತಂಡ ನಭಕ್ಕೆ ಹಾರಲು ತಯಾರಾಗಿದೆ. ಈ ಹಿಂದೆ ನಿಗದಿ ಪಡಿಸಿದಂತೆ ಭಾನುವಾರ ಭಾರತೀಯ ಕಾಲಮಾನ ಸಂಜೆ 6:30 ಕ್ಕೆ ಹೊರಡಬೇಕಿತ್ತಾದರೂ ಹವಾಮಾನ ವೈಪರೀತ್ಯದಿಂದಾಗಿ ರಾತ್ರಿ 8 ಗಂಟೆಗೆ ಹೊರಡಲಿದೆ. ವಿಶೇಷವೇನೆಂದರೆ ಈ ಪ್ರಯಾಣದ ತಂಡದಲ್ಲಿ ಭಾರತೀಯ ಮೂಲದ ಸಿರಿಶಾ ಬಾಂಡ್ಲಾ ಕೂಡಾ ಇದ್ದಾರೆ.

ಬಾಹ್ಯಾಕಾಶಕ್ಕೆ ಹೊರಟಿರುವ ‘ವರ್ಜಿನ್‌ ಗ್ಯಾಲಾಕ್ಟಿಕ್‌’ ಸಂಸ್ಥೆಯ ಆರು ಉದ್ಯೋಗಿಗಳಲ್ಲಿ ಒಬ್ಬರಾದ 71 ವರ್ಷದ ಬ್ರಾನ್ಸನ್, ಭವಿಷ್ಯದಲ್ಲಿ ‘ಬಾಹ್ಯಾಕಾಶ ಪ್ರವಾಸೋದ್ಯಮ’ದ ಹೊಸ ಪ್ರಯೋಗದ ಪೂರ್ವಭಾವಿಯಾಗಿ ಪ್ರಸ್ತುತ ಹಾರಾಟವನ್ನು ನಡೆಸುತ್ತಿದ್ದಾರೆ. ಅವರು ಸ್ಥಾಪಿಸಿದ ಕಂಪನಿಯು ಮುಂದಿನ ವರ್ಷದಿಂದ ತನ್ನ ಪ್ರವಾಸೋದ್ಯಮದ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಲು ಮುಂದಾಗಿದೆ.

ಇದನ್ನೂ ಓದಿ: ಮಂಗಳ ಗ್ರಹಕ್ಕೆ ಇಳಿದ ಬಾಹ್ಯಾಕಾಶ ನೌಕೆಯ ಮೈನವಿರೇಳಿಸುವ ವಿಡಿಯೋ ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶದ ಪ್ರವಾಸವು ದುಬಾರಿಯಾಗಿದ್ದರೂ, ಈಗಾಗಲೆ ನೂರಾರು ಶ್ರೀಮಂತ ಜನರು ಬ್ರಾನ್ಸನ್‌ ಅವರ ಸಂಸ್ಥೆಯಲ್ಲಿ ಮುಂಗಡ ಬುಕ್ಕಿಂಗ್ ಮಾಡಿದ್ದಾರೆ. ಆದರೆ ಪ್ರತಿ ಟಿಕೆಟ್‌ಗೆ 2.5 ಲಕ್ಷ ಡಾಲರ್‌ ವ್ಯಯಿಸಬೇಕಾಗುತ್ತದೆ. 2030 ರ ಹೊತ್ತಿಗೆ ಬಾಹ್ಯಾಕಾಶ ಪ್ರವಾಸೋದ್ಯಮದ ಮಾರುಕಟ್ಟೆ ವಾರ್ಷಿಕವಾಗಿ 300 ಕೋಟಿ ಡಾಲರ್‌ಗೆ ಬೆಳೆಯುತ್ತದೆ ಎಂದು ಸ್ವಿಸ್‌ ಬ್ಯಾಂಕ್‌ ಅಂದಾಜಿಸಿದೆ.

‘ವರ್ಜಿನ್‌ ಗ್ಯಾಲಾಕ್ಟಿಕ್‌’ ನ ರಾಕೆಟ್‌ ಒಂದು 2014 ರಲ್ಲಿ ಕ್ಯಾಲಿಫೋರ್ನಿಯಾದ ಮೊಜಾವೆ ಮರುಭೂಮಿಯ ಮೇಲೆ ಪರೀಕ್ಷಾ ಹಾರಾಟದ ಸಂದರ್ಭದಲ್ಲಿ ಅಪಘಾತಕ್ಕೀಡಾಗಿತ್ತು. ಅದರಲ್ಲಿ ಒಬ್ಬ ಪೈಲಟ್ ಸಾವನ್ನಪ್ಪಿದ್ದು, ಇನ್ನೊಬ್ಬನಿಗೆ ಗಂಭೀರವಾಗಿ ಗಾಯವಾಗಿತ್ತು.

ಪ್ರಸ್ತುತ ಪ್ರಯಾಣದಲ್ಲಿ ಆಂಧ್ರಪ್ರದೇಶದ ಗುಂಟೂರು ಮೂಲದ 34 ವರ್ಷದ ಸಿರಿಶಾ ಬಾಂಡ್ಲಾ ಕೂಡಾ ತಂಡದಲ್ಲಿದ್ದಾರೆ. ಸಿರಿಶಾ ಅವರು ಏರೋನಾಟಿಕಲ್ ಎಂಜಿನಿಯರ್ ಆಗಿದ್ದು, ಬಾಹ್ಯಾಕಾಶಕ್ಕೆ ತೆರಳುತ್ತಿರುವ ಭಾರತೀಯ ಮೂಲದ ಮೂರನೇ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇದನ್ನೂ ಓದಿ: ಬೆಳ್ಳಿಚುಕ್ಕಿ: ಸೌರ ಮಂಡಲದಲ್ಲಿ ಅತ್ಯಂತ ವೇಗವಾಗಿ ಸೂರ್ಯನ ಸುತ್ತ ಸುತ್ತವ ಗ್ರಹ!

ಈ ಹಿಂದೆ ಭಾರತೀಯ ಮೂಲದ ಕಲ್ಪನಾ ಚಾವ್ಲಾ ಮತ್ತು ಸುನೀತಾ ವಿಲಿಯಮ್ಸ್‌‌ ಬಾಹ್ಯಾಕಾಶಕ್ಕೆ ಹಾರಿದ್ದರು. ಪ್ರಸ್ತುತ ಬಾಹ್ಯಾಕಾಶ ಪ್ರಯಾಣದಲ್ಲಿ ಸಿರಿಶಾ ಗಗನಯಾತ್ರಿ ಸಂಖ್ಯೆ 004 ಆಗಲಿದ್ದಾರೆ.

ಸಿರಿಶಾ ಅವರು ಜನವರಿ 2021 ರಲ್ಲಿ ವರ್ಜಿನ್‌ ಗ್ಯಾಲಾಕ್ಟಿಕ್‌ ಸರ್ಕಾರಿ ವ್ಯವಹಾರ ಮತ್ತು ಸಂಶೋಧನಾ ಕಾರ್ಯಾಚರಣೆಗಳ ಉಪಾಧ್ಯಕ್ಷರಾಗಿ ತಮ್ಮ ಕೆಲಸವನ್ನು ಪ್ರಾರಂಭಿಸಿದ್ದರು.

ಪ್ರಸ್ತುತ ಬಾಹ್ಯಾಕಾಶ ಪ್ರಯಾಣಲ್ಲಿ, ಸಂಸ್ಥೆಯ ಸಂಸ್ಥಾಪಕ ಸರ್ ರಿಚರ್ಡ್ ಬ್ರಾನ್ಸನ್ ಜೊತೆಗೆ ಇತರ ಐದು ಜನರು ಇರಲಿದ್ದಾರೆ. ಬೆತ್ ಮೋಸೆಸ್, ಕಾಲಿನ್ ಬೆನೆಟ್, ಸಿರಿಶಾ ಬಾಂಡ್ಲಾ, ಸಿಜೆ ಸ್ಟರ್ಕೊ ಮತ್ತು ಕೆಲ್ಲಿ ಲ್ಯಾಟಿಮರ್ ಇರಲಿದ್ದಾರೆ.

ಭಾನುವಾರ ಹೊರಡುತ್ತಿರುವ ಈ ಪ್ರಯಾಣವನ್ನು ಕೆಳಗಿನ ವಿಡಿಯೊದಲ್ಲಿ ನೋಡಬಹುದಾಗಿದೆ.


ಇದನ್ನೂ ಓದಿ: ಬೆಳ್ಳಿಚುಕ್ಕಿ: ಅನ್ಯಗ್ರಹದಲ್ಲಿ ನಡೆದ ಮೊದಲ ವೈಮಾನಿಕ ಹಾರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...