Homeಅಂತರಾಷ್ಟ್ರೀಯ‘ಬಾಹ್ಯಾಕಾಶಕ್ಕೆ ಪ್ರವಾಸ ಹೊರಡುವ ಸಮಯ!’- ಇತಿಹಾಸ ನಿರ್ಮಿಸಲಿರುವ ‘ವರ್ಜಿನ್‌ ಗ್ಯಾಲಾಕ್ಟಿಕ್‌’

‘ಬಾಹ್ಯಾಕಾಶಕ್ಕೆ ಪ್ರವಾಸ ಹೊರಡುವ ಸಮಯ!’- ಇತಿಹಾಸ ನಿರ್ಮಿಸಲಿರುವ ‘ವರ್ಜಿನ್‌ ಗ್ಯಾಲಾಕ್ಟಿಕ್‌’

ತಂಡದಲ್ಲಿ ಭಾರತೀಯ ಮೂಲದ ಸಿರಿಶಾ ಬಾಂಡ್ಲಾ ಕೂಡಾ ಇರಲಿದ್ದಾರೆ.

- Advertisement -
- Advertisement -

ಬ್ರಿಟಿಷ್ ಕೋಟ್ಯಾಧಿಪತಿ ರಿಚರ್ಡ್ ಬ್ರಾನ್ಸನ್ ಅವರ ‘ವರ್ಜಿನ್‌ ಗ್ಯಾಲಾಕ್ಟಿಕ್‌’ ನ ಮೊದಲ ಬಾಹ್ಯಾಕಾಶ ತಂಡ ನಭಕ್ಕೆ ಹಾರಲು ತಯಾರಾಗಿದೆ. ಈ ಹಿಂದೆ ನಿಗದಿ ಪಡಿಸಿದಂತೆ ಭಾನುವಾರ ಭಾರತೀಯ ಕಾಲಮಾನ ಸಂಜೆ 6:30 ಕ್ಕೆ ಹೊರಡಬೇಕಿತ್ತಾದರೂ ಹವಾಮಾನ ವೈಪರೀತ್ಯದಿಂದಾಗಿ ರಾತ್ರಿ 8 ಗಂಟೆಗೆ ಹೊರಡಲಿದೆ. ವಿಶೇಷವೇನೆಂದರೆ ಈ ಪ್ರಯಾಣದ ತಂಡದಲ್ಲಿ ಭಾರತೀಯ ಮೂಲದ ಸಿರಿಶಾ ಬಾಂಡ್ಲಾ ಕೂಡಾ ಇದ್ದಾರೆ.

ಬಾಹ್ಯಾಕಾಶಕ್ಕೆ ಹೊರಟಿರುವ ‘ವರ್ಜಿನ್‌ ಗ್ಯಾಲಾಕ್ಟಿಕ್‌’ ಸಂಸ್ಥೆಯ ಆರು ಉದ್ಯೋಗಿಗಳಲ್ಲಿ ಒಬ್ಬರಾದ 71 ವರ್ಷದ ಬ್ರಾನ್ಸನ್, ಭವಿಷ್ಯದಲ್ಲಿ ‘ಬಾಹ್ಯಾಕಾಶ ಪ್ರವಾಸೋದ್ಯಮ’ದ ಹೊಸ ಪ್ರಯೋಗದ ಪೂರ್ವಭಾವಿಯಾಗಿ ಪ್ರಸ್ತುತ ಹಾರಾಟವನ್ನು ನಡೆಸುತ್ತಿದ್ದಾರೆ. ಅವರು ಸ್ಥಾಪಿಸಿದ ಕಂಪನಿಯು ಮುಂದಿನ ವರ್ಷದಿಂದ ತನ್ನ ಪ್ರವಾಸೋದ್ಯಮದ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಲು ಮುಂದಾಗಿದೆ.

ಇದನ್ನೂ ಓದಿ: ಮಂಗಳ ಗ್ರಹಕ್ಕೆ ಇಳಿದ ಬಾಹ್ಯಾಕಾಶ ನೌಕೆಯ ಮೈನವಿರೇಳಿಸುವ ವಿಡಿಯೋ ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶದ ಪ್ರವಾಸವು ದುಬಾರಿಯಾಗಿದ್ದರೂ, ಈಗಾಗಲೆ ನೂರಾರು ಶ್ರೀಮಂತ ಜನರು ಬ್ರಾನ್ಸನ್‌ ಅವರ ಸಂಸ್ಥೆಯಲ್ಲಿ ಮುಂಗಡ ಬುಕ್ಕಿಂಗ್ ಮಾಡಿದ್ದಾರೆ. ಆದರೆ ಪ್ರತಿ ಟಿಕೆಟ್‌ಗೆ 2.5 ಲಕ್ಷ ಡಾಲರ್‌ ವ್ಯಯಿಸಬೇಕಾಗುತ್ತದೆ. 2030 ರ ಹೊತ್ತಿಗೆ ಬಾಹ್ಯಾಕಾಶ ಪ್ರವಾಸೋದ್ಯಮದ ಮಾರುಕಟ್ಟೆ ವಾರ್ಷಿಕವಾಗಿ 300 ಕೋಟಿ ಡಾಲರ್‌ಗೆ ಬೆಳೆಯುತ್ತದೆ ಎಂದು ಸ್ವಿಸ್‌ ಬ್ಯಾಂಕ್‌ ಅಂದಾಜಿಸಿದೆ.

‘ವರ್ಜಿನ್‌ ಗ್ಯಾಲಾಕ್ಟಿಕ್‌’ ನ ರಾಕೆಟ್‌ ಒಂದು 2014 ರಲ್ಲಿ ಕ್ಯಾಲಿಫೋರ್ನಿಯಾದ ಮೊಜಾವೆ ಮರುಭೂಮಿಯ ಮೇಲೆ ಪರೀಕ್ಷಾ ಹಾರಾಟದ ಸಂದರ್ಭದಲ್ಲಿ ಅಪಘಾತಕ್ಕೀಡಾಗಿತ್ತು. ಅದರಲ್ಲಿ ಒಬ್ಬ ಪೈಲಟ್ ಸಾವನ್ನಪ್ಪಿದ್ದು, ಇನ್ನೊಬ್ಬನಿಗೆ ಗಂಭೀರವಾಗಿ ಗಾಯವಾಗಿತ್ತು.

ಪ್ರಸ್ತುತ ಪ್ರಯಾಣದಲ್ಲಿ ಆಂಧ್ರಪ್ರದೇಶದ ಗುಂಟೂರು ಮೂಲದ 34 ವರ್ಷದ ಸಿರಿಶಾ ಬಾಂಡ್ಲಾ ಕೂಡಾ ತಂಡದಲ್ಲಿದ್ದಾರೆ. ಸಿರಿಶಾ ಅವರು ಏರೋನಾಟಿಕಲ್ ಎಂಜಿನಿಯರ್ ಆಗಿದ್ದು, ಬಾಹ್ಯಾಕಾಶಕ್ಕೆ ತೆರಳುತ್ತಿರುವ ಭಾರತೀಯ ಮೂಲದ ಮೂರನೇ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇದನ್ನೂ ಓದಿ: ಬೆಳ್ಳಿಚುಕ್ಕಿ: ಸೌರ ಮಂಡಲದಲ್ಲಿ ಅತ್ಯಂತ ವೇಗವಾಗಿ ಸೂರ್ಯನ ಸುತ್ತ ಸುತ್ತವ ಗ್ರಹ!

ಈ ಹಿಂದೆ ಭಾರತೀಯ ಮೂಲದ ಕಲ್ಪನಾ ಚಾವ್ಲಾ ಮತ್ತು ಸುನೀತಾ ವಿಲಿಯಮ್ಸ್‌‌ ಬಾಹ್ಯಾಕಾಶಕ್ಕೆ ಹಾರಿದ್ದರು. ಪ್ರಸ್ತುತ ಬಾಹ್ಯಾಕಾಶ ಪ್ರಯಾಣದಲ್ಲಿ ಸಿರಿಶಾ ಗಗನಯಾತ್ರಿ ಸಂಖ್ಯೆ 004 ಆಗಲಿದ್ದಾರೆ.

ಸಿರಿಶಾ ಅವರು ಜನವರಿ 2021 ರಲ್ಲಿ ವರ್ಜಿನ್‌ ಗ್ಯಾಲಾಕ್ಟಿಕ್‌ ಸರ್ಕಾರಿ ವ್ಯವಹಾರ ಮತ್ತು ಸಂಶೋಧನಾ ಕಾರ್ಯಾಚರಣೆಗಳ ಉಪಾಧ್ಯಕ್ಷರಾಗಿ ತಮ್ಮ ಕೆಲಸವನ್ನು ಪ್ರಾರಂಭಿಸಿದ್ದರು.

ಪ್ರಸ್ತುತ ಬಾಹ್ಯಾಕಾಶ ಪ್ರಯಾಣಲ್ಲಿ, ಸಂಸ್ಥೆಯ ಸಂಸ್ಥಾಪಕ ಸರ್ ರಿಚರ್ಡ್ ಬ್ರಾನ್ಸನ್ ಜೊತೆಗೆ ಇತರ ಐದು ಜನರು ಇರಲಿದ್ದಾರೆ. ಬೆತ್ ಮೋಸೆಸ್, ಕಾಲಿನ್ ಬೆನೆಟ್, ಸಿರಿಶಾ ಬಾಂಡ್ಲಾ, ಸಿಜೆ ಸ್ಟರ್ಕೊ ಮತ್ತು ಕೆಲ್ಲಿ ಲ್ಯಾಟಿಮರ್ ಇರಲಿದ್ದಾರೆ.

ಭಾನುವಾರ ಹೊರಡುತ್ತಿರುವ ಈ ಪ್ರಯಾಣವನ್ನು ಕೆಳಗಿನ ವಿಡಿಯೊದಲ್ಲಿ ನೋಡಬಹುದಾಗಿದೆ.


ಇದನ್ನೂ ಓದಿ: ಬೆಳ್ಳಿಚುಕ್ಕಿ: ಅನ್ಯಗ್ರಹದಲ್ಲಿ ನಡೆದ ಮೊದಲ ವೈಮಾನಿಕ ಹಾರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...