Homeಅಂತರಾಷ್ಟ್ರೀಯ‘ಬಾಹ್ಯಾಕಾಶಕ್ಕೆ ಪ್ರವಾಸ ಹೊರಡುವ ಸಮಯ!’- ಇತಿಹಾಸ ನಿರ್ಮಿಸಲಿರುವ ‘ವರ್ಜಿನ್‌ ಗ್ಯಾಲಾಕ್ಟಿಕ್‌’

‘ಬಾಹ್ಯಾಕಾಶಕ್ಕೆ ಪ್ರವಾಸ ಹೊರಡುವ ಸಮಯ!’- ಇತಿಹಾಸ ನಿರ್ಮಿಸಲಿರುವ ‘ವರ್ಜಿನ್‌ ಗ್ಯಾಲಾಕ್ಟಿಕ್‌’

ತಂಡದಲ್ಲಿ ಭಾರತೀಯ ಮೂಲದ ಸಿರಿಶಾ ಬಾಂಡ್ಲಾ ಕೂಡಾ ಇರಲಿದ್ದಾರೆ.

- Advertisement -
- Advertisement -

ಬ್ರಿಟಿಷ್ ಕೋಟ್ಯಾಧಿಪತಿ ರಿಚರ್ಡ್ ಬ್ರಾನ್ಸನ್ ಅವರ ‘ವರ್ಜಿನ್‌ ಗ್ಯಾಲಾಕ್ಟಿಕ್‌’ ನ ಮೊದಲ ಬಾಹ್ಯಾಕಾಶ ತಂಡ ನಭಕ್ಕೆ ಹಾರಲು ತಯಾರಾಗಿದೆ. ಈ ಹಿಂದೆ ನಿಗದಿ ಪಡಿಸಿದಂತೆ ಭಾನುವಾರ ಭಾರತೀಯ ಕಾಲಮಾನ ಸಂಜೆ 6:30 ಕ್ಕೆ ಹೊರಡಬೇಕಿತ್ತಾದರೂ ಹವಾಮಾನ ವೈಪರೀತ್ಯದಿಂದಾಗಿ ರಾತ್ರಿ 8 ಗಂಟೆಗೆ ಹೊರಡಲಿದೆ. ವಿಶೇಷವೇನೆಂದರೆ ಈ ಪ್ರಯಾಣದ ತಂಡದಲ್ಲಿ ಭಾರತೀಯ ಮೂಲದ ಸಿರಿಶಾ ಬಾಂಡ್ಲಾ ಕೂಡಾ ಇದ್ದಾರೆ.

ಬಾಹ್ಯಾಕಾಶಕ್ಕೆ ಹೊರಟಿರುವ ‘ವರ್ಜಿನ್‌ ಗ್ಯಾಲಾಕ್ಟಿಕ್‌’ ಸಂಸ್ಥೆಯ ಆರು ಉದ್ಯೋಗಿಗಳಲ್ಲಿ ಒಬ್ಬರಾದ 71 ವರ್ಷದ ಬ್ರಾನ್ಸನ್, ಭವಿಷ್ಯದಲ್ಲಿ ‘ಬಾಹ್ಯಾಕಾಶ ಪ್ರವಾಸೋದ್ಯಮ’ದ ಹೊಸ ಪ್ರಯೋಗದ ಪೂರ್ವಭಾವಿಯಾಗಿ ಪ್ರಸ್ತುತ ಹಾರಾಟವನ್ನು ನಡೆಸುತ್ತಿದ್ದಾರೆ. ಅವರು ಸ್ಥಾಪಿಸಿದ ಕಂಪನಿಯು ಮುಂದಿನ ವರ್ಷದಿಂದ ತನ್ನ ಪ್ರವಾಸೋದ್ಯಮದ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಲು ಮುಂದಾಗಿದೆ.

ಇದನ್ನೂ ಓದಿ: ಮಂಗಳ ಗ್ರಹಕ್ಕೆ ಇಳಿದ ಬಾಹ್ಯಾಕಾಶ ನೌಕೆಯ ಮೈನವಿರೇಳಿಸುವ ವಿಡಿಯೋ ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶದ ಪ್ರವಾಸವು ದುಬಾರಿಯಾಗಿದ್ದರೂ, ಈಗಾಗಲೆ ನೂರಾರು ಶ್ರೀಮಂತ ಜನರು ಬ್ರಾನ್ಸನ್‌ ಅವರ ಸಂಸ್ಥೆಯಲ್ಲಿ ಮುಂಗಡ ಬುಕ್ಕಿಂಗ್ ಮಾಡಿದ್ದಾರೆ. ಆದರೆ ಪ್ರತಿ ಟಿಕೆಟ್‌ಗೆ 2.5 ಲಕ್ಷ ಡಾಲರ್‌ ವ್ಯಯಿಸಬೇಕಾಗುತ್ತದೆ. 2030 ರ ಹೊತ್ತಿಗೆ ಬಾಹ್ಯಾಕಾಶ ಪ್ರವಾಸೋದ್ಯಮದ ಮಾರುಕಟ್ಟೆ ವಾರ್ಷಿಕವಾಗಿ 300 ಕೋಟಿ ಡಾಲರ್‌ಗೆ ಬೆಳೆಯುತ್ತದೆ ಎಂದು ಸ್ವಿಸ್‌ ಬ್ಯಾಂಕ್‌ ಅಂದಾಜಿಸಿದೆ.

‘ವರ್ಜಿನ್‌ ಗ್ಯಾಲಾಕ್ಟಿಕ್‌’ ನ ರಾಕೆಟ್‌ ಒಂದು 2014 ರಲ್ಲಿ ಕ್ಯಾಲಿಫೋರ್ನಿಯಾದ ಮೊಜಾವೆ ಮರುಭೂಮಿಯ ಮೇಲೆ ಪರೀಕ್ಷಾ ಹಾರಾಟದ ಸಂದರ್ಭದಲ್ಲಿ ಅಪಘಾತಕ್ಕೀಡಾಗಿತ್ತು. ಅದರಲ್ಲಿ ಒಬ್ಬ ಪೈಲಟ್ ಸಾವನ್ನಪ್ಪಿದ್ದು, ಇನ್ನೊಬ್ಬನಿಗೆ ಗಂಭೀರವಾಗಿ ಗಾಯವಾಗಿತ್ತು.

ಪ್ರಸ್ತುತ ಪ್ರಯಾಣದಲ್ಲಿ ಆಂಧ್ರಪ್ರದೇಶದ ಗುಂಟೂರು ಮೂಲದ 34 ವರ್ಷದ ಸಿರಿಶಾ ಬಾಂಡ್ಲಾ ಕೂಡಾ ತಂಡದಲ್ಲಿದ್ದಾರೆ. ಸಿರಿಶಾ ಅವರು ಏರೋನಾಟಿಕಲ್ ಎಂಜಿನಿಯರ್ ಆಗಿದ್ದು, ಬಾಹ್ಯಾಕಾಶಕ್ಕೆ ತೆರಳುತ್ತಿರುವ ಭಾರತೀಯ ಮೂಲದ ಮೂರನೇ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇದನ್ನೂ ಓದಿ: ಬೆಳ್ಳಿಚುಕ್ಕಿ: ಸೌರ ಮಂಡಲದಲ್ಲಿ ಅತ್ಯಂತ ವೇಗವಾಗಿ ಸೂರ್ಯನ ಸುತ್ತ ಸುತ್ತವ ಗ್ರಹ!

ಈ ಹಿಂದೆ ಭಾರತೀಯ ಮೂಲದ ಕಲ್ಪನಾ ಚಾವ್ಲಾ ಮತ್ತು ಸುನೀತಾ ವಿಲಿಯಮ್ಸ್‌‌ ಬಾಹ್ಯಾಕಾಶಕ್ಕೆ ಹಾರಿದ್ದರು. ಪ್ರಸ್ತುತ ಬಾಹ್ಯಾಕಾಶ ಪ್ರಯಾಣದಲ್ಲಿ ಸಿರಿಶಾ ಗಗನಯಾತ್ರಿ ಸಂಖ್ಯೆ 004 ಆಗಲಿದ್ದಾರೆ.

ಸಿರಿಶಾ ಅವರು ಜನವರಿ 2021 ರಲ್ಲಿ ವರ್ಜಿನ್‌ ಗ್ಯಾಲಾಕ್ಟಿಕ್‌ ಸರ್ಕಾರಿ ವ್ಯವಹಾರ ಮತ್ತು ಸಂಶೋಧನಾ ಕಾರ್ಯಾಚರಣೆಗಳ ಉಪಾಧ್ಯಕ್ಷರಾಗಿ ತಮ್ಮ ಕೆಲಸವನ್ನು ಪ್ರಾರಂಭಿಸಿದ್ದರು.

ಪ್ರಸ್ತುತ ಬಾಹ್ಯಾಕಾಶ ಪ್ರಯಾಣಲ್ಲಿ, ಸಂಸ್ಥೆಯ ಸಂಸ್ಥಾಪಕ ಸರ್ ರಿಚರ್ಡ್ ಬ್ರಾನ್ಸನ್ ಜೊತೆಗೆ ಇತರ ಐದು ಜನರು ಇರಲಿದ್ದಾರೆ. ಬೆತ್ ಮೋಸೆಸ್, ಕಾಲಿನ್ ಬೆನೆಟ್, ಸಿರಿಶಾ ಬಾಂಡ್ಲಾ, ಸಿಜೆ ಸ್ಟರ್ಕೊ ಮತ್ತು ಕೆಲ್ಲಿ ಲ್ಯಾಟಿಮರ್ ಇರಲಿದ್ದಾರೆ.

ಭಾನುವಾರ ಹೊರಡುತ್ತಿರುವ ಈ ಪ್ರಯಾಣವನ್ನು ಕೆಳಗಿನ ವಿಡಿಯೊದಲ್ಲಿ ನೋಡಬಹುದಾಗಿದೆ.


ಇದನ್ನೂ ಓದಿ: ಬೆಳ್ಳಿಚುಕ್ಕಿ: ಅನ್ಯಗ್ರಹದಲ್ಲಿ ನಡೆದ ಮೊದಲ ವೈಮಾನಿಕ ಹಾರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...