Homeಅಂತರಾಷ್ಟ್ರೀಯ‘ಬಾಹ್ಯಾಕಾಶಕ್ಕೆ ಪ್ರವಾಸ ಹೊರಡುವ ಸಮಯ!’- ಇತಿಹಾಸ ನಿರ್ಮಿಸಲಿರುವ ‘ವರ್ಜಿನ್‌ ಗ್ಯಾಲಾಕ್ಟಿಕ್‌’

‘ಬಾಹ್ಯಾಕಾಶಕ್ಕೆ ಪ್ರವಾಸ ಹೊರಡುವ ಸಮಯ!’- ಇತಿಹಾಸ ನಿರ್ಮಿಸಲಿರುವ ‘ವರ್ಜಿನ್‌ ಗ್ಯಾಲಾಕ್ಟಿಕ್‌’

ತಂಡದಲ್ಲಿ ಭಾರತೀಯ ಮೂಲದ ಸಿರಿಶಾ ಬಾಂಡ್ಲಾ ಕೂಡಾ ಇರಲಿದ್ದಾರೆ.

- Advertisement -
- Advertisement -

ಬ್ರಿಟಿಷ್ ಕೋಟ್ಯಾಧಿಪತಿ ರಿಚರ್ಡ್ ಬ್ರಾನ್ಸನ್ ಅವರ ‘ವರ್ಜಿನ್‌ ಗ್ಯಾಲಾಕ್ಟಿಕ್‌’ ನ ಮೊದಲ ಬಾಹ್ಯಾಕಾಶ ತಂಡ ನಭಕ್ಕೆ ಹಾರಲು ತಯಾರಾಗಿದೆ. ಈ ಹಿಂದೆ ನಿಗದಿ ಪಡಿಸಿದಂತೆ ಭಾನುವಾರ ಭಾರತೀಯ ಕಾಲಮಾನ ಸಂಜೆ 6:30 ಕ್ಕೆ ಹೊರಡಬೇಕಿತ್ತಾದರೂ ಹವಾಮಾನ ವೈಪರೀತ್ಯದಿಂದಾಗಿ ರಾತ್ರಿ 8 ಗಂಟೆಗೆ ಹೊರಡಲಿದೆ. ವಿಶೇಷವೇನೆಂದರೆ ಈ ಪ್ರಯಾಣದ ತಂಡದಲ್ಲಿ ಭಾರತೀಯ ಮೂಲದ ಸಿರಿಶಾ ಬಾಂಡ್ಲಾ ಕೂಡಾ ಇದ್ದಾರೆ.

ಬಾಹ್ಯಾಕಾಶಕ್ಕೆ ಹೊರಟಿರುವ ‘ವರ್ಜಿನ್‌ ಗ್ಯಾಲಾಕ್ಟಿಕ್‌’ ಸಂಸ್ಥೆಯ ಆರು ಉದ್ಯೋಗಿಗಳಲ್ಲಿ ಒಬ್ಬರಾದ 71 ವರ್ಷದ ಬ್ರಾನ್ಸನ್, ಭವಿಷ್ಯದಲ್ಲಿ ‘ಬಾಹ್ಯಾಕಾಶ ಪ್ರವಾಸೋದ್ಯಮ’ದ ಹೊಸ ಪ್ರಯೋಗದ ಪೂರ್ವಭಾವಿಯಾಗಿ ಪ್ರಸ್ತುತ ಹಾರಾಟವನ್ನು ನಡೆಸುತ್ತಿದ್ದಾರೆ. ಅವರು ಸ್ಥಾಪಿಸಿದ ಕಂಪನಿಯು ಮುಂದಿನ ವರ್ಷದಿಂದ ತನ್ನ ಪ್ರವಾಸೋದ್ಯಮದ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಲು ಮುಂದಾಗಿದೆ.

ಇದನ್ನೂ ಓದಿ: ಮಂಗಳ ಗ್ರಹಕ್ಕೆ ಇಳಿದ ಬಾಹ್ಯಾಕಾಶ ನೌಕೆಯ ಮೈನವಿರೇಳಿಸುವ ವಿಡಿಯೋ ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶದ ಪ್ರವಾಸವು ದುಬಾರಿಯಾಗಿದ್ದರೂ, ಈಗಾಗಲೆ ನೂರಾರು ಶ್ರೀಮಂತ ಜನರು ಬ್ರಾನ್ಸನ್‌ ಅವರ ಸಂಸ್ಥೆಯಲ್ಲಿ ಮುಂಗಡ ಬುಕ್ಕಿಂಗ್ ಮಾಡಿದ್ದಾರೆ. ಆದರೆ ಪ್ರತಿ ಟಿಕೆಟ್‌ಗೆ 2.5 ಲಕ್ಷ ಡಾಲರ್‌ ವ್ಯಯಿಸಬೇಕಾಗುತ್ತದೆ. 2030 ರ ಹೊತ್ತಿಗೆ ಬಾಹ್ಯಾಕಾಶ ಪ್ರವಾಸೋದ್ಯಮದ ಮಾರುಕಟ್ಟೆ ವಾರ್ಷಿಕವಾಗಿ 300 ಕೋಟಿ ಡಾಲರ್‌ಗೆ ಬೆಳೆಯುತ್ತದೆ ಎಂದು ಸ್ವಿಸ್‌ ಬ್ಯಾಂಕ್‌ ಅಂದಾಜಿಸಿದೆ.

‘ವರ್ಜಿನ್‌ ಗ್ಯಾಲಾಕ್ಟಿಕ್‌’ ನ ರಾಕೆಟ್‌ ಒಂದು 2014 ರಲ್ಲಿ ಕ್ಯಾಲಿಫೋರ್ನಿಯಾದ ಮೊಜಾವೆ ಮರುಭೂಮಿಯ ಮೇಲೆ ಪರೀಕ್ಷಾ ಹಾರಾಟದ ಸಂದರ್ಭದಲ್ಲಿ ಅಪಘಾತಕ್ಕೀಡಾಗಿತ್ತು. ಅದರಲ್ಲಿ ಒಬ್ಬ ಪೈಲಟ್ ಸಾವನ್ನಪ್ಪಿದ್ದು, ಇನ್ನೊಬ್ಬನಿಗೆ ಗಂಭೀರವಾಗಿ ಗಾಯವಾಗಿತ್ತು.

ಪ್ರಸ್ತುತ ಪ್ರಯಾಣದಲ್ಲಿ ಆಂಧ್ರಪ್ರದೇಶದ ಗುಂಟೂರು ಮೂಲದ 34 ವರ್ಷದ ಸಿರಿಶಾ ಬಾಂಡ್ಲಾ ಕೂಡಾ ತಂಡದಲ್ಲಿದ್ದಾರೆ. ಸಿರಿಶಾ ಅವರು ಏರೋನಾಟಿಕಲ್ ಎಂಜಿನಿಯರ್ ಆಗಿದ್ದು, ಬಾಹ್ಯಾಕಾಶಕ್ಕೆ ತೆರಳುತ್ತಿರುವ ಭಾರತೀಯ ಮೂಲದ ಮೂರನೇ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇದನ್ನೂ ಓದಿ: ಬೆಳ್ಳಿಚುಕ್ಕಿ: ಸೌರ ಮಂಡಲದಲ್ಲಿ ಅತ್ಯಂತ ವೇಗವಾಗಿ ಸೂರ್ಯನ ಸುತ್ತ ಸುತ್ತವ ಗ್ರಹ!

ಈ ಹಿಂದೆ ಭಾರತೀಯ ಮೂಲದ ಕಲ್ಪನಾ ಚಾವ್ಲಾ ಮತ್ತು ಸುನೀತಾ ವಿಲಿಯಮ್ಸ್‌‌ ಬಾಹ್ಯಾಕಾಶಕ್ಕೆ ಹಾರಿದ್ದರು. ಪ್ರಸ್ತುತ ಬಾಹ್ಯಾಕಾಶ ಪ್ರಯಾಣದಲ್ಲಿ ಸಿರಿಶಾ ಗಗನಯಾತ್ರಿ ಸಂಖ್ಯೆ 004 ಆಗಲಿದ್ದಾರೆ.

ಸಿರಿಶಾ ಅವರು ಜನವರಿ 2021 ರಲ್ಲಿ ವರ್ಜಿನ್‌ ಗ್ಯಾಲಾಕ್ಟಿಕ್‌ ಸರ್ಕಾರಿ ವ್ಯವಹಾರ ಮತ್ತು ಸಂಶೋಧನಾ ಕಾರ್ಯಾಚರಣೆಗಳ ಉಪಾಧ್ಯಕ್ಷರಾಗಿ ತಮ್ಮ ಕೆಲಸವನ್ನು ಪ್ರಾರಂಭಿಸಿದ್ದರು.

ಪ್ರಸ್ತುತ ಬಾಹ್ಯಾಕಾಶ ಪ್ರಯಾಣಲ್ಲಿ, ಸಂಸ್ಥೆಯ ಸಂಸ್ಥಾಪಕ ಸರ್ ರಿಚರ್ಡ್ ಬ್ರಾನ್ಸನ್ ಜೊತೆಗೆ ಇತರ ಐದು ಜನರು ಇರಲಿದ್ದಾರೆ. ಬೆತ್ ಮೋಸೆಸ್, ಕಾಲಿನ್ ಬೆನೆಟ್, ಸಿರಿಶಾ ಬಾಂಡ್ಲಾ, ಸಿಜೆ ಸ್ಟರ್ಕೊ ಮತ್ತು ಕೆಲ್ಲಿ ಲ್ಯಾಟಿಮರ್ ಇರಲಿದ್ದಾರೆ.

ಭಾನುವಾರ ಹೊರಡುತ್ತಿರುವ ಈ ಪ್ರಯಾಣವನ್ನು ಕೆಳಗಿನ ವಿಡಿಯೊದಲ್ಲಿ ನೋಡಬಹುದಾಗಿದೆ.


ಇದನ್ನೂ ಓದಿ: ಬೆಳ್ಳಿಚುಕ್ಕಿ: ಅನ್ಯಗ್ರಹದಲ್ಲಿ ನಡೆದ ಮೊದಲ ವೈಮಾನಿಕ ಹಾರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....