Homeಅಂತರಾಷ್ಟ್ರೀಯ‘ಬಾಹ್ಯಾಕಾಶಕ್ಕೆ ಪ್ರವಾಸ ಹೊರಡುವ ಸಮಯ!’- ಇತಿಹಾಸ ನಿರ್ಮಿಸಲಿರುವ ‘ವರ್ಜಿನ್‌ ಗ್ಯಾಲಾಕ್ಟಿಕ್‌’

‘ಬಾಹ್ಯಾಕಾಶಕ್ಕೆ ಪ್ರವಾಸ ಹೊರಡುವ ಸಮಯ!’- ಇತಿಹಾಸ ನಿರ್ಮಿಸಲಿರುವ ‘ವರ್ಜಿನ್‌ ಗ್ಯಾಲಾಕ್ಟಿಕ್‌’

ತಂಡದಲ್ಲಿ ಭಾರತೀಯ ಮೂಲದ ಸಿರಿಶಾ ಬಾಂಡ್ಲಾ ಕೂಡಾ ಇರಲಿದ್ದಾರೆ.

- Advertisement -
- Advertisement -

ಬ್ರಿಟಿಷ್ ಕೋಟ್ಯಾಧಿಪತಿ ರಿಚರ್ಡ್ ಬ್ರಾನ್ಸನ್ ಅವರ ‘ವರ್ಜಿನ್‌ ಗ್ಯಾಲಾಕ್ಟಿಕ್‌’ ನ ಮೊದಲ ಬಾಹ್ಯಾಕಾಶ ತಂಡ ನಭಕ್ಕೆ ಹಾರಲು ತಯಾರಾಗಿದೆ. ಈ ಹಿಂದೆ ನಿಗದಿ ಪಡಿಸಿದಂತೆ ಭಾನುವಾರ ಭಾರತೀಯ ಕಾಲಮಾನ ಸಂಜೆ 6:30 ಕ್ಕೆ ಹೊರಡಬೇಕಿತ್ತಾದರೂ ಹವಾಮಾನ ವೈಪರೀತ್ಯದಿಂದಾಗಿ ರಾತ್ರಿ 8 ಗಂಟೆಗೆ ಹೊರಡಲಿದೆ. ವಿಶೇಷವೇನೆಂದರೆ ಈ ಪ್ರಯಾಣದ ತಂಡದಲ್ಲಿ ಭಾರತೀಯ ಮೂಲದ ಸಿರಿಶಾ ಬಾಂಡ್ಲಾ ಕೂಡಾ ಇದ್ದಾರೆ.

ಬಾಹ್ಯಾಕಾಶಕ್ಕೆ ಹೊರಟಿರುವ ‘ವರ್ಜಿನ್‌ ಗ್ಯಾಲಾಕ್ಟಿಕ್‌’ ಸಂಸ್ಥೆಯ ಆರು ಉದ್ಯೋಗಿಗಳಲ್ಲಿ ಒಬ್ಬರಾದ 71 ವರ್ಷದ ಬ್ರಾನ್ಸನ್, ಭವಿಷ್ಯದಲ್ಲಿ ‘ಬಾಹ್ಯಾಕಾಶ ಪ್ರವಾಸೋದ್ಯಮ’ದ ಹೊಸ ಪ್ರಯೋಗದ ಪೂರ್ವಭಾವಿಯಾಗಿ ಪ್ರಸ್ತುತ ಹಾರಾಟವನ್ನು ನಡೆಸುತ್ತಿದ್ದಾರೆ. ಅವರು ಸ್ಥಾಪಿಸಿದ ಕಂಪನಿಯು ಮುಂದಿನ ವರ್ಷದಿಂದ ತನ್ನ ಪ್ರವಾಸೋದ್ಯಮದ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಲು ಮುಂದಾಗಿದೆ.

ಇದನ್ನೂ ಓದಿ: ಮಂಗಳ ಗ್ರಹಕ್ಕೆ ಇಳಿದ ಬಾಹ್ಯಾಕಾಶ ನೌಕೆಯ ಮೈನವಿರೇಳಿಸುವ ವಿಡಿಯೋ ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶದ ಪ್ರವಾಸವು ದುಬಾರಿಯಾಗಿದ್ದರೂ, ಈಗಾಗಲೆ ನೂರಾರು ಶ್ರೀಮಂತ ಜನರು ಬ್ರಾನ್ಸನ್‌ ಅವರ ಸಂಸ್ಥೆಯಲ್ಲಿ ಮುಂಗಡ ಬುಕ್ಕಿಂಗ್ ಮಾಡಿದ್ದಾರೆ. ಆದರೆ ಪ್ರತಿ ಟಿಕೆಟ್‌ಗೆ 2.5 ಲಕ್ಷ ಡಾಲರ್‌ ವ್ಯಯಿಸಬೇಕಾಗುತ್ತದೆ. 2030 ರ ಹೊತ್ತಿಗೆ ಬಾಹ್ಯಾಕಾಶ ಪ್ರವಾಸೋದ್ಯಮದ ಮಾರುಕಟ್ಟೆ ವಾರ್ಷಿಕವಾಗಿ 300 ಕೋಟಿ ಡಾಲರ್‌ಗೆ ಬೆಳೆಯುತ್ತದೆ ಎಂದು ಸ್ವಿಸ್‌ ಬ್ಯಾಂಕ್‌ ಅಂದಾಜಿಸಿದೆ.

‘ವರ್ಜಿನ್‌ ಗ್ಯಾಲಾಕ್ಟಿಕ್‌’ ನ ರಾಕೆಟ್‌ ಒಂದು 2014 ರಲ್ಲಿ ಕ್ಯಾಲಿಫೋರ್ನಿಯಾದ ಮೊಜಾವೆ ಮರುಭೂಮಿಯ ಮೇಲೆ ಪರೀಕ್ಷಾ ಹಾರಾಟದ ಸಂದರ್ಭದಲ್ಲಿ ಅಪಘಾತಕ್ಕೀಡಾಗಿತ್ತು. ಅದರಲ್ಲಿ ಒಬ್ಬ ಪೈಲಟ್ ಸಾವನ್ನಪ್ಪಿದ್ದು, ಇನ್ನೊಬ್ಬನಿಗೆ ಗಂಭೀರವಾಗಿ ಗಾಯವಾಗಿತ್ತು.

ಪ್ರಸ್ತುತ ಪ್ರಯಾಣದಲ್ಲಿ ಆಂಧ್ರಪ್ರದೇಶದ ಗುಂಟೂರು ಮೂಲದ 34 ವರ್ಷದ ಸಿರಿಶಾ ಬಾಂಡ್ಲಾ ಕೂಡಾ ತಂಡದಲ್ಲಿದ್ದಾರೆ. ಸಿರಿಶಾ ಅವರು ಏರೋನಾಟಿಕಲ್ ಎಂಜಿನಿಯರ್ ಆಗಿದ್ದು, ಬಾಹ್ಯಾಕಾಶಕ್ಕೆ ತೆರಳುತ್ತಿರುವ ಭಾರತೀಯ ಮೂಲದ ಮೂರನೇ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇದನ್ನೂ ಓದಿ: ಬೆಳ್ಳಿಚುಕ್ಕಿ: ಸೌರ ಮಂಡಲದಲ್ಲಿ ಅತ್ಯಂತ ವೇಗವಾಗಿ ಸೂರ್ಯನ ಸುತ್ತ ಸುತ್ತವ ಗ್ರಹ!

ಈ ಹಿಂದೆ ಭಾರತೀಯ ಮೂಲದ ಕಲ್ಪನಾ ಚಾವ್ಲಾ ಮತ್ತು ಸುನೀತಾ ವಿಲಿಯಮ್ಸ್‌‌ ಬಾಹ್ಯಾಕಾಶಕ್ಕೆ ಹಾರಿದ್ದರು. ಪ್ರಸ್ತುತ ಬಾಹ್ಯಾಕಾಶ ಪ್ರಯಾಣದಲ್ಲಿ ಸಿರಿಶಾ ಗಗನಯಾತ್ರಿ ಸಂಖ್ಯೆ 004 ಆಗಲಿದ್ದಾರೆ.

ಸಿರಿಶಾ ಅವರು ಜನವರಿ 2021 ರಲ್ಲಿ ವರ್ಜಿನ್‌ ಗ್ಯಾಲಾಕ್ಟಿಕ್‌ ಸರ್ಕಾರಿ ವ್ಯವಹಾರ ಮತ್ತು ಸಂಶೋಧನಾ ಕಾರ್ಯಾಚರಣೆಗಳ ಉಪಾಧ್ಯಕ್ಷರಾಗಿ ತಮ್ಮ ಕೆಲಸವನ್ನು ಪ್ರಾರಂಭಿಸಿದ್ದರು.

ಪ್ರಸ್ತುತ ಬಾಹ್ಯಾಕಾಶ ಪ್ರಯಾಣಲ್ಲಿ, ಸಂಸ್ಥೆಯ ಸಂಸ್ಥಾಪಕ ಸರ್ ರಿಚರ್ಡ್ ಬ್ರಾನ್ಸನ್ ಜೊತೆಗೆ ಇತರ ಐದು ಜನರು ಇರಲಿದ್ದಾರೆ. ಬೆತ್ ಮೋಸೆಸ್, ಕಾಲಿನ್ ಬೆನೆಟ್, ಸಿರಿಶಾ ಬಾಂಡ್ಲಾ, ಸಿಜೆ ಸ್ಟರ್ಕೊ ಮತ್ತು ಕೆಲ್ಲಿ ಲ್ಯಾಟಿಮರ್ ಇರಲಿದ್ದಾರೆ.

ಭಾನುವಾರ ಹೊರಡುತ್ತಿರುವ ಈ ಪ್ರಯಾಣವನ್ನು ಕೆಳಗಿನ ವಿಡಿಯೊದಲ್ಲಿ ನೋಡಬಹುದಾಗಿದೆ.


ಇದನ್ನೂ ಓದಿ: ಬೆಳ್ಳಿಚುಕ್ಕಿ: ಅನ್ಯಗ್ರಹದಲ್ಲಿ ನಡೆದ ಮೊದಲ ವೈಮಾನಿಕ ಹಾರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...