Homeಅಂತರಾಷ್ಟ್ರೀಯವರ್ಜೀನಿಯಾ: ಗುಂಡಿನ ದಾಳಿ ನಡೆಸಿ 10 ಜನರ ಹತ್ಯೆ

ವರ್ಜೀನಿಯಾ: ಗುಂಡಿನ ದಾಳಿ ನಡೆಸಿ 10 ಜನರ ಹತ್ಯೆ

- Advertisement -
- Advertisement -

ವರ್ಜೀನಿಯಾದ ಚೆಸಾಪೀಕ್‌ನಲ್ಲಿರುವ ವಾಲ್‌ಮಾರ್ಟ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ 10 ಜನರು ಸಾವನ್ನಪ್ಪಿದ್ದಾರೆ ಹಾಗೂ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಶೂಟರ್ ಕೂಡ ಸಾವನ್ನಪ್ಪಿದ್ದಾನೆ ಎಂದು ಚೆಸಾಪೀಕ್ ನಗರದ ಅಧಿಕಾರಿಗಳು ಮಂಗಳವಾರ ಟ್ವೀಟ್ ಮಾಡಿದ್ದಾರೆ. “ಸ್ಯಾಮ್ಸ್ ಸರ್ಕಲ್‌ನಲ್ಲಿರುವ ವಾಲ್‌ಮಾರ್ಟ್‌ನಲ್ಲಿ ಸಾವುನೋವುಗಳಾಗುವಂತೆ ಗುಂಡಿನ ದಾಳಿ ನಡೆಸಿರುವುದನ್ನು ಚೆಸಾಪೀಕ್ ಪೊಲೀಸರು ಖಚಿತಪಡಿಸಿದ್ದಾರೆ. ಶೂಟರ್ ಸತ್ತಿದ್ದಾನೆ” ಎಂದು ಟ್ವೀಟರ್‌ನಲ್ಲಿ ಪ್ರತಿಕ್ರಿಯಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪೊಲೀಸ್ ಇಲಾಖೆಯ ವಕ್ತಾರರಾದ ಲಿಯೋ ಕೊಸಿನ್ಸ್ಕಿ ಅವರು ಸಂಕ್ಷಿಪ್ತ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ರಾತ್ರಿ 10 ಗಂಟೆಯ ವೇಳೆಗೆ ಗುಂಡಿನ ದಾಳಿಯ ಕುರಿತ ಮಾಹಿತಿ ಸಿಕ್ಕಿತು. ಅನೇಕ ಸಾವುನೋವುಗಳ ಸ್ಥಳಕ್ಕೆ ತಕ್ಷಣವೇ ತೆರಳಲಾಯಿತು” ಎಂದಿದ್ದಾರೆ.

“ಪೊಲೀಸರು ಆಗಮಿಸಿದ ನಂತರ ಗುಂಡಿನ ದಾಳಿ ನಿಲ್ಲಿಸಲಾಗಿದೆ ಎಂದು ಭಾವಿಸಲಾಗಿದೆ” ಎಂದು ಕೊಸಿನ್ಸ್ಕಿ ಹೇಳಿದ್ದಾರೆ. “ಪೊಲೀಸರು ಗುಂಡು ಹಾರಿಸಿದ್ದಾರೆ ಎಂದು ಹೇಳಲಾಗುವುದಿಲ್ಲ, ಆದರೆ ಶೂಟರ್ ಸ್ವಯಂ ಪ್ರೇರಿತ ಗುಂಡೇಟಿನಿಂದ ಸಾವನ್ನಪ್ಪಿದ್ದಾನೆಯೇ ಎಂದು ಹೇಳಲೂ ಸಾಧ್ಯವಿಲ್ಲ” ಎಂದಿದ್ದಾರೆ.

ಎಷ್ಟು ಜನರು ಸತ್ತರು ಎಂಬುದು ಸ್ಪಷ್ಟವಾಗಿಲ್ಲ, ಆದರೆ ಕೊಸಿನ್ಸ್ಕಿಯವರು, “10ಕ್ಕಿಂತ ಹೆಚ್ಚು ಜನರನ್ನು ಹತ್ಯೆ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

“ನಮ್ಮ ಚೆಸಾಪೀಕ್‌ನ ವರ್ಜೀನಿಯಾ ಅಂಗಡಿಯಲ್ಲಿ ನಡೆದ ಈ ದುರಂತ ಘಟನೆಯಿಂದ ನಾವು ಆಘಾತಕ್ಕೊಳಗಾಗಿದ್ದೇವೆ” ಎಂದು ವಾಲ್ಮಾರ್ಟ್ ಬುಧವಾರ ಮುಂಜಾನೆ ಟ್ವೀಟ್ ಮಾಡಿದೆ.

“ತೊಂದರೆಗೊಳಗಾದ ಜನರಿಗಾಗಿ, ಸಮುದಾಯಕ್ಕಾಗಿ, ಸಹವರ್ತಿಗಳಿಗಾಗಿ ಪ್ರಾರ್ಥಿಸುತ್ತಿದ್ದೇವೆ. ನಾವು ಕಾನೂನು ಕ್ರಮ ಜರುಗಿಸುವ ಕೆಲಸ ಮಾಡುತ್ತಿದ್ದೇವೆ. ನಮ್ಮ ಸಹವರ್ತಿಗಳನ್ನು ಬೆಂಬಲಿಸುವತ್ತ ನಾವು ಗಮನಹರಿಸಿದ್ದೇವೆ” ಎಂದು ವಾಲ್ಮಾರ್ಟ್ ತಿಳಿಸಿದೆ.

ವಾಲ್‌ಮಾರ್ಟ್‌ಗೆ ಸೇರಿದ ಐವರು ನಾರ್ಫೋಕ್ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸೆಂಟಾರಾ ಹೆಲ್ತ್‌ಕೇರ್‌ನ ವಕ್ತಾರ ಮೈಕ್ ಕಾಫ್ಕಾ ಹೇಳಿದ್ದಾರೆ. ಅವರ ಪರಿಸ್ಥಿತಿಯ ಬಗ್ಗೆ ಸರಿಯಾದ ಮಾಹಿತಿ ದೊರೆತಿಲ್ಲ.

ವರ್ಜೀನಿಯಾ ರಾಜ್ಯದ ಸೆನೆಟರ್ ಲೂಯಿಸ್ ಲ್ಯೂಕಾಸ್, “ಅಮೆರಿಕದ ಇತ್ತೀಚಿನ ಸಾಮೂಹಿಕ ಗುಂಡಿನ ದಾಳಿಯು ವರ್ಜೀನಿಯಾದ ಚೆಸಾಪೀಕ್‌ನಲ್ಲಿರುವ ವಾಲ್‌ಮಾರ್ಟ್‌ನಲ್ಲಿ ನಡೆದಿರುವುದು ಸಂಪೂರ್ಣವಾಗಿ ಎದೆಗುಂದುವಂತೆ ಮಾಡಿದೆ” ಎಂದಿದ್ದಾರೆ.

ಇದನ್ನೂ ಓದಿರಿ: ನವೆಂಬರ್‌ 26ರ ಸಂವಿಧಾನ ದಿನವನ್ನು ‘ಜಾತಿ ಪದ್ದತಿಯ ಸಮರ್ಥನೆ ಮತ್ತು ವೈಭವೀಕರಣ’ ದಿನವಾಗಿ ಆಚರಿಸಲು ತಯಾರಿ ನಡೆಸುತ್ತಿರುವ ಸರ್ಕಾರ!

“ನಮ್ಮ ದೇಶದಲ್ಲಿ ಹಲವಾರು ಜೀವಗಳನ್ನು ಬಲಿ ತೆಗೆದುಕೊಂಡ ಈ ಬಂದೂಕು ಹಿಂಸಾಚಾರದ ಸಾಂಕ್ರಾಮಿಕವನ್ನು ಕೊನೆಗೊಳಿಸಲು ನಾವು ಪರಿಹಾರಗಳನ್ನು ಕಂಡುಕೊಳ್ಳುವವರೆಗೆ ನಾನು ವಿಶ್ರಾಂತಿ ಪಡೆಯುವುದಿಲ್ಲ” ಎಂದಿದ್ದಾರೆ.

ಕೊಲೊರಾಡೋದಲ್ಲಿನ ಸಲಿಂಗಿಗಳ ನೈಟ್‌ಕ್ಲಬ್‌ನಲ್ಲಿ ವ್ಯಕ್ತಿಯೊಬ್ಬ ಗುಂಡು ಹಾರಿಸಿ ಐದು ಜನರನ್ನು ಕೊಂದು 17 ಜನರನ್ನು ಗಾಯಗೊಳಿಸಿದ ಮೂರು ದಿನಗಳ ನಂತರ ವರ್ಜೀನಿಯಾದಲ್ಲಿ ಈ ಘಟನೆ ನಡೆದಿದೆ. ಶೂಟರ್‌ನನ್ನು ಬಂಧಿಸಲಾಗಿತ್ತು. ಟೆಕ್ಸಾಸ್‌ನ ಉವಾಲ್ಡೆಯಲ್ಲಿ ಶಾಲೆಯೊಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ 21 ಮಂದಿ ಸಾವಿಗೀಡಾದ ಘಟನೆ ನಡೆದಿತ್ತು. ಒಂದೇ ವರ್ಷದ ಅವಧಿಯಲ್ಲಿ ಮತ್ತೊಂದು ಗುಂಡಿನ ದಾಳಿ ನಡೆದಿದೆ.

ಮಂಗಳವಾರದ ಗುಂಡಿನ ದಾಳಿಯು 2019ರಲ್ಲಿ ವಾಲ್‌ಮಾರ್ಟ್‌ನಲ್ಲಿ ನಡೆದ ಮತ್ತೊಂದು ಗುಂಡಿನ ದಾಳಿಯ ನೆನಪುಗಳನ್ನು ತಂದಿತು. ಮೆಕ್ಸಿಕನ್ನರನ್ನು ಗುರಿಯಾಗಿಸಿಕೊಂಡು ಬಂದೂಕುಧಾರಿಯು ಎಲ್ ಪಾಸೊದಲ್ಲಿನ ಅಂಗಡಿಯೊಂದರಲ್ಲಿ ಗುಂಡು ಹಾರಿಸಿ 22 ಜನರನ್ನು ಕೊಂದಿದ್ದನು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...