Homeಅಂತರಾಷ್ಟ್ರೀಯವರ್ಜೀನಿಯಾ: ಗುಂಡಿನ ದಾಳಿ ನಡೆಸಿ 10 ಜನರ ಹತ್ಯೆ

ವರ್ಜೀನಿಯಾ: ಗುಂಡಿನ ದಾಳಿ ನಡೆಸಿ 10 ಜನರ ಹತ್ಯೆ

- Advertisement -
- Advertisement -

ವರ್ಜೀನಿಯಾದ ಚೆಸಾಪೀಕ್‌ನಲ್ಲಿರುವ ವಾಲ್‌ಮಾರ್ಟ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ 10 ಜನರು ಸಾವನ್ನಪ್ಪಿದ್ದಾರೆ ಹಾಗೂ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಶೂಟರ್ ಕೂಡ ಸಾವನ್ನಪ್ಪಿದ್ದಾನೆ ಎಂದು ಚೆಸಾಪೀಕ್ ನಗರದ ಅಧಿಕಾರಿಗಳು ಮಂಗಳವಾರ ಟ್ವೀಟ್ ಮಾಡಿದ್ದಾರೆ. “ಸ್ಯಾಮ್ಸ್ ಸರ್ಕಲ್‌ನಲ್ಲಿರುವ ವಾಲ್‌ಮಾರ್ಟ್‌ನಲ್ಲಿ ಸಾವುನೋವುಗಳಾಗುವಂತೆ ಗುಂಡಿನ ದಾಳಿ ನಡೆಸಿರುವುದನ್ನು ಚೆಸಾಪೀಕ್ ಪೊಲೀಸರು ಖಚಿತಪಡಿಸಿದ್ದಾರೆ. ಶೂಟರ್ ಸತ್ತಿದ್ದಾನೆ” ಎಂದು ಟ್ವೀಟರ್‌ನಲ್ಲಿ ಪ್ರತಿಕ್ರಿಯಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪೊಲೀಸ್ ಇಲಾಖೆಯ ವಕ್ತಾರರಾದ ಲಿಯೋ ಕೊಸಿನ್ಸ್ಕಿ ಅವರು ಸಂಕ್ಷಿಪ್ತ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ರಾತ್ರಿ 10 ಗಂಟೆಯ ವೇಳೆಗೆ ಗುಂಡಿನ ದಾಳಿಯ ಕುರಿತ ಮಾಹಿತಿ ಸಿಕ್ಕಿತು. ಅನೇಕ ಸಾವುನೋವುಗಳ ಸ್ಥಳಕ್ಕೆ ತಕ್ಷಣವೇ ತೆರಳಲಾಯಿತು” ಎಂದಿದ್ದಾರೆ.

“ಪೊಲೀಸರು ಆಗಮಿಸಿದ ನಂತರ ಗುಂಡಿನ ದಾಳಿ ನಿಲ್ಲಿಸಲಾಗಿದೆ ಎಂದು ಭಾವಿಸಲಾಗಿದೆ” ಎಂದು ಕೊಸಿನ್ಸ್ಕಿ ಹೇಳಿದ್ದಾರೆ. “ಪೊಲೀಸರು ಗುಂಡು ಹಾರಿಸಿದ್ದಾರೆ ಎಂದು ಹೇಳಲಾಗುವುದಿಲ್ಲ, ಆದರೆ ಶೂಟರ್ ಸ್ವಯಂ ಪ್ರೇರಿತ ಗುಂಡೇಟಿನಿಂದ ಸಾವನ್ನಪ್ಪಿದ್ದಾನೆಯೇ ಎಂದು ಹೇಳಲೂ ಸಾಧ್ಯವಿಲ್ಲ” ಎಂದಿದ್ದಾರೆ.

ಎಷ್ಟು ಜನರು ಸತ್ತರು ಎಂಬುದು ಸ್ಪಷ್ಟವಾಗಿಲ್ಲ, ಆದರೆ ಕೊಸಿನ್ಸ್ಕಿಯವರು, “10ಕ್ಕಿಂತ ಹೆಚ್ಚು ಜನರನ್ನು ಹತ್ಯೆ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

“ನಮ್ಮ ಚೆಸಾಪೀಕ್‌ನ ವರ್ಜೀನಿಯಾ ಅಂಗಡಿಯಲ್ಲಿ ನಡೆದ ಈ ದುರಂತ ಘಟನೆಯಿಂದ ನಾವು ಆಘಾತಕ್ಕೊಳಗಾಗಿದ್ದೇವೆ” ಎಂದು ವಾಲ್ಮಾರ್ಟ್ ಬುಧವಾರ ಮುಂಜಾನೆ ಟ್ವೀಟ್ ಮಾಡಿದೆ.

“ತೊಂದರೆಗೊಳಗಾದ ಜನರಿಗಾಗಿ, ಸಮುದಾಯಕ್ಕಾಗಿ, ಸಹವರ್ತಿಗಳಿಗಾಗಿ ಪ್ರಾರ್ಥಿಸುತ್ತಿದ್ದೇವೆ. ನಾವು ಕಾನೂನು ಕ್ರಮ ಜರುಗಿಸುವ ಕೆಲಸ ಮಾಡುತ್ತಿದ್ದೇವೆ. ನಮ್ಮ ಸಹವರ್ತಿಗಳನ್ನು ಬೆಂಬಲಿಸುವತ್ತ ನಾವು ಗಮನಹರಿಸಿದ್ದೇವೆ” ಎಂದು ವಾಲ್ಮಾರ್ಟ್ ತಿಳಿಸಿದೆ.

ವಾಲ್‌ಮಾರ್ಟ್‌ಗೆ ಸೇರಿದ ಐವರು ನಾರ್ಫೋಕ್ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸೆಂಟಾರಾ ಹೆಲ್ತ್‌ಕೇರ್‌ನ ವಕ್ತಾರ ಮೈಕ್ ಕಾಫ್ಕಾ ಹೇಳಿದ್ದಾರೆ. ಅವರ ಪರಿಸ್ಥಿತಿಯ ಬಗ್ಗೆ ಸರಿಯಾದ ಮಾಹಿತಿ ದೊರೆತಿಲ್ಲ.

ವರ್ಜೀನಿಯಾ ರಾಜ್ಯದ ಸೆನೆಟರ್ ಲೂಯಿಸ್ ಲ್ಯೂಕಾಸ್, “ಅಮೆರಿಕದ ಇತ್ತೀಚಿನ ಸಾಮೂಹಿಕ ಗುಂಡಿನ ದಾಳಿಯು ವರ್ಜೀನಿಯಾದ ಚೆಸಾಪೀಕ್‌ನಲ್ಲಿರುವ ವಾಲ್‌ಮಾರ್ಟ್‌ನಲ್ಲಿ ನಡೆದಿರುವುದು ಸಂಪೂರ್ಣವಾಗಿ ಎದೆಗುಂದುವಂತೆ ಮಾಡಿದೆ” ಎಂದಿದ್ದಾರೆ.

ಇದನ್ನೂ ಓದಿರಿ: ನವೆಂಬರ್‌ 26ರ ಸಂವಿಧಾನ ದಿನವನ್ನು ‘ಜಾತಿ ಪದ್ದತಿಯ ಸಮರ್ಥನೆ ಮತ್ತು ವೈಭವೀಕರಣ’ ದಿನವಾಗಿ ಆಚರಿಸಲು ತಯಾರಿ ನಡೆಸುತ್ತಿರುವ ಸರ್ಕಾರ!

“ನಮ್ಮ ದೇಶದಲ್ಲಿ ಹಲವಾರು ಜೀವಗಳನ್ನು ಬಲಿ ತೆಗೆದುಕೊಂಡ ಈ ಬಂದೂಕು ಹಿಂಸಾಚಾರದ ಸಾಂಕ್ರಾಮಿಕವನ್ನು ಕೊನೆಗೊಳಿಸಲು ನಾವು ಪರಿಹಾರಗಳನ್ನು ಕಂಡುಕೊಳ್ಳುವವರೆಗೆ ನಾನು ವಿಶ್ರಾಂತಿ ಪಡೆಯುವುದಿಲ್ಲ” ಎಂದಿದ್ದಾರೆ.

ಕೊಲೊರಾಡೋದಲ್ಲಿನ ಸಲಿಂಗಿಗಳ ನೈಟ್‌ಕ್ಲಬ್‌ನಲ್ಲಿ ವ್ಯಕ್ತಿಯೊಬ್ಬ ಗುಂಡು ಹಾರಿಸಿ ಐದು ಜನರನ್ನು ಕೊಂದು 17 ಜನರನ್ನು ಗಾಯಗೊಳಿಸಿದ ಮೂರು ದಿನಗಳ ನಂತರ ವರ್ಜೀನಿಯಾದಲ್ಲಿ ಈ ಘಟನೆ ನಡೆದಿದೆ. ಶೂಟರ್‌ನನ್ನು ಬಂಧಿಸಲಾಗಿತ್ತು. ಟೆಕ್ಸಾಸ್‌ನ ಉವಾಲ್ಡೆಯಲ್ಲಿ ಶಾಲೆಯೊಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ 21 ಮಂದಿ ಸಾವಿಗೀಡಾದ ಘಟನೆ ನಡೆದಿತ್ತು. ಒಂದೇ ವರ್ಷದ ಅವಧಿಯಲ್ಲಿ ಮತ್ತೊಂದು ಗುಂಡಿನ ದಾಳಿ ನಡೆದಿದೆ.

ಮಂಗಳವಾರದ ಗುಂಡಿನ ದಾಳಿಯು 2019ರಲ್ಲಿ ವಾಲ್‌ಮಾರ್ಟ್‌ನಲ್ಲಿ ನಡೆದ ಮತ್ತೊಂದು ಗುಂಡಿನ ದಾಳಿಯ ನೆನಪುಗಳನ್ನು ತಂದಿತು. ಮೆಕ್ಸಿಕನ್ನರನ್ನು ಗುರಿಯಾಗಿಸಿಕೊಂಡು ಬಂದೂಕುಧಾರಿಯು ಎಲ್ ಪಾಸೊದಲ್ಲಿನ ಅಂಗಡಿಯೊಂದರಲ್ಲಿ ಗುಂಡು ಹಾರಿಸಿ 22 ಜನರನ್ನು ಕೊಂದಿದ್ದನು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...