Homeಕರ್ನಾಟಕದೀಪದ ಶಾಖಕ್ಕೆ ಕ್ರಿಮಿ ಸಾಯುತ್ತದೆ ಎಂದು ಬಿಜೆಪಿ ಶಾಸಕ ರಾಮದಾಸ್: ವ್ಯಾಪಕ ಟ್ರೋಲ್‌

ದೀಪದ ಶಾಖಕ್ಕೆ ಕ್ರಿಮಿ ಸಾಯುತ್ತದೆ ಎಂದು ಬಿಜೆಪಿ ಶಾಸಕ ರಾಮದಾಸ್: ವ್ಯಾಪಕ ಟ್ರೋಲ್‌

- Advertisement -
- Advertisement -

ದೀಪ ಹಚ್ಚಿದರೆ ವೈರಸ್ ದೀಪದ ಬಳಿ ಬಂದು ಶಾಖಕ್ಕೆ ಸಾಯುತ್ತದೆ ಎಂದು ಮೈಸೂರಿನ ಬಿಜೆಪಿ ಶಾಸಕ ರಾಮದಾಸ್ ಹೇಳಿದ್ದಾರೆ. ನಿನ್ನೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ದೀಪ, ಬ್ಯಾಟರಿ, ಮೊಬೈಲ್ ಟಾರ್ಚ್ ಹೊತ್ತಿಸಿ ಕೊರೊನ ವಿರುದ್ದ ದೇಶದ ಒಗ್ಗಟ್ಟು ಪ್ರದರ್ಶಿಸುವಂತೆ ಮನವಿ ಮಾಡಿದ್ದಕ್ಕೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

ಶಾಸಕ ರಾಮದಾಸ್ ಜನರಿಗೆ ದೀಪ, ಕ್ಯಾಂಡಲ್ ಹಂಚಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ “ಕೊರೊನಾ ವಿರುದ್ದ ಕಳೆದ ಬಾರಿ ಜನರು ಚಪ್ಪಾಳೆ ತಟ್ಟಿ, ಶಂಖ-ಜಾಗಟೆ ಊದುವ ಮೂಲಕ ಇಡೀ ದೇಶ ಕೊರೊನಾ ವಿರುದ್ದ ಯುದ್ದ ಮಾಡಿದೆ. ಚಪ್ಪಾಳೆ ಹೊಡಿದ ಶಬ್ದ ತರಂಗದ ಮುಖಾಂತರ ವೈರಸ್ ಸಾಯುತ್ತದೆ ಎಂದು ವೈಜ್ಞಾನಿಕವಾಗಿ ಸಾಬಿತಾಗಿದೆ” ಎಂದು ಹೇಳಿದರು.

“ಕಳೆದ ಭಾರಿಯಂತೆ ಈ ಭಾರಿಯೂ ಪ್ರಧಾನ ಮಂತ್ರಿಯ ಮನವಿಯಂತೆ ಭಾನುವಾರ ರಾತ್ರಿ ವಿದ್ಯುತ್ ಆಫ್ ಮಾಡಿ ಕತ್ತಲಲ್ಲಿದ್ದು 9 ಗಂಟೆಗೆ ಒಂಬತ್ತು ನಿಮಿಷಗಳ ಕಾಲ ದೀಪ, ಕ್ಯಾಂಡಲ್ ಅಥವಾ ಮೊಬೈಲ್ ಟಾರ್ಚ್ ಬೆಳಕನ್ನು ಹಾಕಬೇಕು. ಇದು ಕೊರೊನ ವಿರುದ್ದ ದೇಶ ಇದೆ ಎನ್ನುವ ಜಾಗೃತಿ ಮಾಡುವ ಕೆಲಸವಾಗಿದೆ. ಜಾಗೃತಿ ಮಾಡುದಲ್ಲದೆ ದೀಪದ ಬೆಳಕಿಗೆ ಕ್ರಿಮಿ-ಕೀಟಗಳು ಆಕರ್ಷಣೆಯಾಗುವಂತೆ ಕ್ರಿಮಿಯೂ ಅದರ ಬಳಿ ಬಂದು ಸಾಯುತ್ತದೆ. ದೀಪವೂ ಕತ್ತಲಲ್ಲಿ ಕೇವಲ ಬೆಳಕಾಗಿ ಇರದೆ ಅದು ಒಂದು ಶಕ್ತಿಯಾಗಿ ಪರಿವರ್ತನೆಯಾಗುತ್ತದೆ” ಎಂದು ಹೇಳಿದರಲ್ಲದೆ, “ಮನೆಯೊಳಗಡೆ ಇರುವ ಕ್ರಿಮಿಯನ್ನು ಕೂಡಾ ಸಾಯಿಸುವುದಕ್ಕಾಗಿ ನಾವು ನಮ್ಮದೇ ಜಾಲಗಳ ಮೂಲಕ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ” ಎಂದು ಹೇಳಿದ್ದಾರೆ.

ಶಾಸಕರ ಈ ನಡೆ ಸಾರ್ವಜನಿಕ ವಲಯದಲ್ಲಿ ಭಾರೀ ಟೀಕೆಗೆ ಒಳಗಾಗಿದೆ. ವೈದ್ಯರು ಕೊರೊನ ಶಾಖಕ್ಕೆ ಸಾಯುವುದಿಲ್ಲ ಎಂದು ಹೇಳುತ್ತಾ ಬರುತ್ತಿದ್ದಾರೆ, ಅದಲ್ಲದೆ ಸಾಮಾಜಿಕ ಅಂತರದ ಬಗ್ಗೆ ಹೇಳುತ್ತಾರೆ ಆದರೆ ಶಾಸಕರು ಜನಸಂದಣಿಯ ನಡುವೆ ಓಡಾಡಿ ದೀಪ ಹಂಚುತ್ತಿದ್ದಾರೆ ಇದು ಕೊರೊನ ವಿರುದ್ದದ ಹೋರಾಟಕ್ಕೆ ದೊಡ್ಡ ಹೊಡೆತ ನೀಡುತ್ತದೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ರೇಖಾ ಶ್ರೀನಿವಾಸ್ ಎಂಬವರು “ಡಿ ಗ್ರೂಪ್ ಹುದ್ದೆಗೂ ಕೂಡ ಸಾಮಾನ್ಯ ಜ್ಞಾನ, ಕನ್ನಡ, ಇಂಗ್ಲಿಷ್, ವಿಜ್ಞಾನ, ಗಣಿತ ಎಲ್ಲದರಲ್ಲೂ ಪರಿಣಿತರಾಗಿರಬೇಕು. ಸ್ಪಧಾ೯ತ್ಮಕ ಪರೀಕ್ಷೆ, ಸಂದಶ೯ನಗಳ ಮೂಲಕ ನೇಮಕಾತಿ ನಡೆಯುತ್ತದೆ. ಆದರೆ ನಮ್ಮ ಜನಪ್ರತಿನಿಧಿಗಳಿಗೆ ಯಾಕೆ ಇವೆಲ್ಲ ಪರೀಕ್ಷೆಗಳಿಲ್ಲ” ಎಂದು ಪ್ರಶ್ನಿಸುತ್ತಾ “ಸರಿಯಾದ ಮಾಹಿತಿ ಗೊತ್ತಿದ್ದರೆ ಮಾತಾಡಿ, ಇಲ್ಲವೇ ಸುಮ್ಮನಿರಿ ಅದು ಬಿಟ್ಟು ಮೂಖ೯ತನದ ಪ್ರದಶ೯ನ ಮಾಡಬೇಡಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಾರ್ಟೆಡ್ ಅಕೌಂಟೆಂಟ್ ಆಗಿರುವ ಮುಧೋಳದ ಶುಭಾಶ್ ಸಂಗಣ್ಣನವರ್ ಅವರು “ರಾಮದಾಸ್ ಅವರ ಸಮರ್ಥನೆ ಸರಿಯಾಗಿಲ್ಲ, ಸುಮ್ಮನೆ ಏನೇನೋ ಹೇಳುತ್ತಾರೆ. ನಮ್ಮ ಹಳ್ಳಿ ಜನಾ ವಿದ್ಯುತ್ ಕಡಿತದಿಂದ ಪ್ರತಿ ದಿನ ಕ್ಯಾಂಡಲ್ ಹಚ್ಚುತ್ತಾರೆ. ಪ್ರತಾಪಸಿಂಹ ಅವರು ಕೂಡಾ ಸಾರ್ವಜನಿಕರಿಗೆ ಕ್ಯಾಂಡಲ್ ವಿತರಿಸುವ ಬಗ್ಗೆ ಹೇಳುತ್ತಾರೆ ಆದರೆ ಅದರ ಬದಲಿಗೆ ಮಾಸ್ಕ್, ಸ್ಯಾನಿಟೇಷನ್ ಹಂಚಿಲಿ” ಎಂದು ಹೇಳಿದ್ದಾರೆ.

ರಾಮ್‌ದಾಸ್‌ರವರ ಹೇಳಿಕೆಯನ್ನು ಕೊರೊನಾ ಏನಾದರೂ ಓದಿದರೆ ಕರೋನಾ ಜೀವನದಲ್ಲಿ ಜಿಗುಪ್ಸೆ ಬಂದು ನೇಣು ಹಾಕಿಕೊಂಡು ಅಥವಾ ರೈಲಿಗೆ ತಲೆ ಕೊಟ್ಟು ಸೂಸೈಡ್ ಮಾಡಿಕೊಳ್ಳುತ್ತದೆ ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕುಮಾರ್‌ ದಿನೂ ಟ್ರೋಲ್‌ ಮಾಡಿದ್ದಾರೆ.

ಬಿಜೆಪಿ ಶಾಸಕ ರಾಮದಾಸ್ (ಈತ ಡಾಕ್ಟರ್ ಬೇರೆ) ಪ್ರಕಾರ, ದೀಪದ ಶಾಖಕ್ಕೆ ವೈರಸ್ ಢಮಾರ್!
ಹಂಗಿದ್ರೆ ಮೊದ್ಲೇ ಇದನ್ನ ಹೇಳೋಕೆ ಏನಾಗಿತ್ತೋ ಬೇಕೂಫ? ಡಾಕ್ಟರ್ ಸಮುದಾಯಕ್ಕೆ ಕಳಂಕ ಇಂತಹ ಶಾಖಾ ಪೀಡೆಗಳು ಎಂದು ಪತ್ರಕರ್ತರಾದ ಪಿ.ಕೆ ಮಲ್ಲನಗೌಡರ್‌ರವರು ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...