Homeಕರ್ನಾಟಕದೀಪದ ಶಾಖಕ್ಕೆ ಕ್ರಿಮಿ ಸಾಯುತ್ತದೆ ಎಂದು ಬಿಜೆಪಿ ಶಾಸಕ ರಾಮದಾಸ್: ವ್ಯಾಪಕ ಟ್ರೋಲ್‌

ದೀಪದ ಶಾಖಕ್ಕೆ ಕ್ರಿಮಿ ಸಾಯುತ್ತದೆ ಎಂದು ಬಿಜೆಪಿ ಶಾಸಕ ರಾಮದಾಸ್: ವ್ಯಾಪಕ ಟ್ರೋಲ್‌

- Advertisement -
- Advertisement -

ದೀಪ ಹಚ್ಚಿದರೆ ವೈರಸ್ ದೀಪದ ಬಳಿ ಬಂದು ಶಾಖಕ್ಕೆ ಸಾಯುತ್ತದೆ ಎಂದು ಮೈಸೂರಿನ ಬಿಜೆಪಿ ಶಾಸಕ ರಾಮದಾಸ್ ಹೇಳಿದ್ದಾರೆ. ನಿನ್ನೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ದೀಪ, ಬ್ಯಾಟರಿ, ಮೊಬೈಲ್ ಟಾರ್ಚ್ ಹೊತ್ತಿಸಿ ಕೊರೊನ ವಿರುದ್ದ ದೇಶದ ಒಗ್ಗಟ್ಟು ಪ್ರದರ್ಶಿಸುವಂತೆ ಮನವಿ ಮಾಡಿದ್ದಕ್ಕೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

ಶಾಸಕ ರಾಮದಾಸ್ ಜನರಿಗೆ ದೀಪ, ಕ್ಯಾಂಡಲ್ ಹಂಚಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ “ಕೊರೊನಾ ವಿರುದ್ದ ಕಳೆದ ಬಾರಿ ಜನರು ಚಪ್ಪಾಳೆ ತಟ್ಟಿ, ಶಂಖ-ಜಾಗಟೆ ಊದುವ ಮೂಲಕ ಇಡೀ ದೇಶ ಕೊರೊನಾ ವಿರುದ್ದ ಯುದ್ದ ಮಾಡಿದೆ. ಚಪ್ಪಾಳೆ ಹೊಡಿದ ಶಬ್ದ ತರಂಗದ ಮುಖಾಂತರ ವೈರಸ್ ಸಾಯುತ್ತದೆ ಎಂದು ವೈಜ್ಞಾನಿಕವಾಗಿ ಸಾಬಿತಾಗಿದೆ” ಎಂದು ಹೇಳಿದರು.

“ಕಳೆದ ಭಾರಿಯಂತೆ ಈ ಭಾರಿಯೂ ಪ್ರಧಾನ ಮಂತ್ರಿಯ ಮನವಿಯಂತೆ ಭಾನುವಾರ ರಾತ್ರಿ ವಿದ್ಯುತ್ ಆಫ್ ಮಾಡಿ ಕತ್ತಲಲ್ಲಿದ್ದು 9 ಗಂಟೆಗೆ ಒಂಬತ್ತು ನಿಮಿಷಗಳ ಕಾಲ ದೀಪ, ಕ್ಯಾಂಡಲ್ ಅಥವಾ ಮೊಬೈಲ್ ಟಾರ್ಚ್ ಬೆಳಕನ್ನು ಹಾಕಬೇಕು. ಇದು ಕೊರೊನ ವಿರುದ್ದ ದೇಶ ಇದೆ ಎನ್ನುವ ಜಾಗೃತಿ ಮಾಡುವ ಕೆಲಸವಾಗಿದೆ. ಜಾಗೃತಿ ಮಾಡುದಲ್ಲದೆ ದೀಪದ ಬೆಳಕಿಗೆ ಕ್ರಿಮಿ-ಕೀಟಗಳು ಆಕರ್ಷಣೆಯಾಗುವಂತೆ ಕ್ರಿಮಿಯೂ ಅದರ ಬಳಿ ಬಂದು ಸಾಯುತ್ತದೆ. ದೀಪವೂ ಕತ್ತಲಲ್ಲಿ ಕೇವಲ ಬೆಳಕಾಗಿ ಇರದೆ ಅದು ಒಂದು ಶಕ್ತಿಯಾಗಿ ಪರಿವರ್ತನೆಯಾಗುತ್ತದೆ” ಎಂದು ಹೇಳಿದರಲ್ಲದೆ, “ಮನೆಯೊಳಗಡೆ ಇರುವ ಕ್ರಿಮಿಯನ್ನು ಕೂಡಾ ಸಾಯಿಸುವುದಕ್ಕಾಗಿ ನಾವು ನಮ್ಮದೇ ಜಾಲಗಳ ಮೂಲಕ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ” ಎಂದು ಹೇಳಿದ್ದಾರೆ.

ಶಾಸಕರ ಈ ನಡೆ ಸಾರ್ವಜನಿಕ ವಲಯದಲ್ಲಿ ಭಾರೀ ಟೀಕೆಗೆ ಒಳಗಾಗಿದೆ. ವೈದ್ಯರು ಕೊರೊನ ಶಾಖಕ್ಕೆ ಸಾಯುವುದಿಲ್ಲ ಎಂದು ಹೇಳುತ್ತಾ ಬರುತ್ತಿದ್ದಾರೆ, ಅದಲ್ಲದೆ ಸಾಮಾಜಿಕ ಅಂತರದ ಬಗ್ಗೆ ಹೇಳುತ್ತಾರೆ ಆದರೆ ಶಾಸಕರು ಜನಸಂದಣಿಯ ನಡುವೆ ಓಡಾಡಿ ದೀಪ ಹಂಚುತ್ತಿದ್ದಾರೆ ಇದು ಕೊರೊನ ವಿರುದ್ದದ ಹೋರಾಟಕ್ಕೆ ದೊಡ್ಡ ಹೊಡೆತ ನೀಡುತ್ತದೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ರೇಖಾ ಶ್ರೀನಿವಾಸ್ ಎಂಬವರು “ಡಿ ಗ್ರೂಪ್ ಹುದ್ದೆಗೂ ಕೂಡ ಸಾಮಾನ್ಯ ಜ್ಞಾನ, ಕನ್ನಡ, ಇಂಗ್ಲಿಷ್, ವಿಜ್ಞಾನ, ಗಣಿತ ಎಲ್ಲದರಲ್ಲೂ ಪರಿಣಿತರಾಗಿರಬೇಕು. ಸ್ಪಧಾ೯ತ್ಮಕ ಪರೀಕ್ಷೆ, ಸಂದಶ೯ನಗಳ ಮೂಲಕ ನೇಮಕಾತಿ ನಡೆಯುತ್ತದೆ. ಆದರೆ ನಮ್ಮ ಜನಪ್ರತಿನಿಧಿಗಳಿಗೆ ಯಾಕೆ ಇವೆಲ್ಲ ಪರೀಕ್ಷೆಗಳಿಲ್ಲ” ಎಂದು ಪ್ರಶ್ನಿಸುತ್ತಾ “ಸರಿಯಾದ ಮಾಹಿತಿ ಗೊತ್ತಿದ್ದರೆ ಮಾತಾಡಿ, ಇಲ್ಲವೇ ಸುಮ್ಮನಿರಿ ಅದು ಬಿಟ್ಟು ಮೂಖ೯ತನದ ಪ್ರದಶ೯ನ ಮಾಡಬೇಡಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಾರ್ಟೆಡ್ ಅಕೌಂಟೆಂಟ್ ಆಗಿರುವ ಮುಧೋಳದ ಶುಭಾಶ್ ಸಂಗಣ್ಣನವರ್ ಅವರು “ರಾಮದಾಸ್ ಅವರ ಸಮರ್ಥನೆ ಸರಿಯಾಗಿಲ್ಲ, ಸುಮ್ಮನೆ ಏನೇನೋ ಹೇಳುತ್ತಾರೆ. ನಮ್ಮ ಹಳ್ಳಿ ಜನಾ ವಿದ್ಯುತ್ ಕಡಿತದಿಂದ ಪ್ರತಿ ದಿನ ಕ್ಯಾಂಡಲ್ ಹಚ್ಚುತ್ತಾರೆ. ಪ್ರತಾಪಸಿಂಹ ಅವರು ಕೂಡಾ ಸಾರ್ವಜನಿಕರಿಗೆ ಕ್ಯಾಂಡಲ್ ವಿತರಿಸುವ ಬಗ್ಗೆ ಹೇಳುತ್ತಾರೆ ಆದರೆ ಅದರ ಬದಲಿಗೆ ಮಾಸ್ಕ್, ಸ್ಯಾನಿಟೇಷನ್ ಹಂಚಿಲಿ” ಎಂದು ಹೇಳಿದ್ದಾರೆ.

ರಾಮ್‌ದಾಸ್‌ರವರ ಹೇಳಿಕೆಯನ್ನು ಕೊರೊನಾ ಏನಾದರೂ ಓದಿದರೆ ಕರೋನಾ ಜೀವನದಲ್ಲಿ ಜಿಗುಪ್ಸೆ ಬಂದು ನೇಣು ಹಾಕಿಕೊಂಡು ಅಥವಾ ರೈಲಿಗೆ ತಲೆ ಕೊಟ್ಟು ಸೂಸೈಡ್ ಮಾಡಿಕೊಳ್ಳುತ್ತದೆ ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕುಮಾರ್‌ ದಿನೂ ಟ್ರೋಲ್‌ ಮಾಡಿದ್ದಾರೆ.

ಬಿಜೆಪಿ ಶಾಸಕ ರಾಮದಾಸ್ (ಈತ ಡಾಕ್ಟರ್ ಬೇರೆ) ಪ್ರಕಾರ, ದೀಪದ ಶಾಖಕ್ಕೆ ವೈರಸ್ ಢಮಾರ್!
ಹಂಗಿದ್ರೆ ಮೊದ್ಲೇ ಇದನ್ನ ಹೇಳೋಕೆ ಏನಾಗಿತ್ತೋ ಬೇಕೂಫ? ಡಾಕ್ಟರ್ ಸಮುದಾಯಕ್ಕೆ ಕಳಂಕ ಇಂತಹ ಶಾಖಾ ಪೀಡೆಗಳು ಎಂದು ಪತ್ರಕರ್ತರಾದ ಪಿ.ಕೆ ಮಲ್ಲನಗೌಡರ್‌ರವರು ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ: ನವದೆಹಲಿಯಲ್ಲಿ 24×7 ನಿಯಂತ್ರಣ ಕೊಠಡಿ ಸ್ಥಾಪಿಸಿದ ತೆಲಂಗಾಣ

ಹೈದರಾಬಾದ್: ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನಗಳನ್ನು ಅನುಸರಿಸಿ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಮಧ್ಯಪ್ರಾಚ್ಯದಲ್ಲಿರುವ ತೆಲಂಗಾಣ ನಾಗರಿಕರಿಗೆ ಸಹಾಯ ಮಾಡಲು ನವದೆಹಲಿಯ ತೆಲಂಗಾಣ ಭವನದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪ್ರಯಾಣ...

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದೋಣಿ ಡಿಕ್ಕಿ; ಭಾರತೀಯ ಸಿಬ್ಬಂದಿ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಮಾನವರಹಿತ ಡ್ರೋನ್ ದೋಣಿ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಪ್ರದೇಶದಾದ್ಯಂತ ಉಲ್ಬಣಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ...

ನಾಗ್ಪುರ ಕಾರ್ಖಾನೆ ಸ್ಫೋಟ: ಸ್ಫೋಟಕ ಕಂಪನಿಯ ಒಂಬತ್ತು ನಿರ್ದೇಶಕರ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಜನರು ಸಾವನ್ನಪ್ಪಿದ್ದು, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಲ್ಲಿನ ಕಲ್ಮೇಶ್ವರ ಪೊಲೀಸರು ಎಸ್‌ಬಿಎಲ್ ಎನರ್ಜಿ...

ಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್‌ ಹೈಕೋರ್ಟ್

ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ, 2014ರಲ್ಲಿ ತಮ್ಮ ಅಪ್ರಾಪ್ತ ಮಗಳು ಮತ್ತು ಬಾಡಿಗೆದಾರರನ್ನು ಕೊಲೆ ಮಾಡಿದ್ದ ದಂಪತಿಗೆ ಜೀವಾವಧಿ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಖಾಯಂಗೊಳಿಸಿದೆ. ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ...

ಇಸ್ರೇಲ್-ಇರಾನ್ ಸಂಘರ್ಷ: ಕೇರಳದ ಗಲ್ಫ್ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ, ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧಾರ

ತಿರುವನಂತಪುರಂ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಚಲಿತ ಅಶಾಂತಿಯನ್ನು ಗಮನದಲ್ಲಿಟ್ಟುಕೊಂಡು, ಸಾಮಾನ್ಯ ಶಿಕ್ಷಣ ಇಲಾಖೆಯು ಗಲ್ಫ್ ರಾಷ್ಟ್ರಗಳಲ್ಲಿನ ಕೇಂದ್ರಗಳಲ್ಲಿ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.   ಮಾರ್ಚ್ 5 ರಂದು ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ...

ಚಿಕ್ಕಬಳ್ಳಾಪುರ| ಆಯತುಲ್ಲಾ ಖಮೇನಿ ಹತ್ಯೆ; ಅಲಿಪುರದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಖಮೇನಿ ಹತ್ಯೆಯಿಂದ ನೊಂದಿರುವ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದ ಶಿಯಾ ಸಮುದಾಯವು, ಗ್ರಾಮದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ...

ಸೌದಿ ಅರೇಬಿಯಾ | ಡ್ರೋನ್ ದಾಳಿ ಬಳಿಕ ರಾಸ್ ತನುರಾ ಸಂಸ್ಕರಣಾಗಾರ ಮುಚ್ಚಿದ ತೈಲ ದೈತ್ಯ ಅರಾಮ್ಕೊ

ಸೌದಿ ಅರೇಬಿಯಾದ ಸರ್ಕಾರಿ ಸ್ವಾಮ್ಯದ ತೈಲ ದೈತ್ಯ ಸಂಸ್ಥೆ ಅರಾಮ್ಕೊ ಡ್ರೋನ್ ದಾಳಿಗೆ ಒಳಗಾದ ನಂತರ ತನ್ನ ರಾಸ್ ತನುರಾ ತೈಲ ಸಂಸ್ಕರಣಾಗಾರವನ್ನು ಮುಚ್ಚಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಯಿಟರ್ಸ್ ಸೋಮವಾರ (ಫೆ.2)...

ದೆಹಲಿ ನ್ಯಾಯಾಲಯದಿಂದ ತಕ್ಷಣ ಬಿಡುಗಡೆ ಆದೇಶ: ತಿಹಾರ್ ಜೈಲಿನಿಂದ ಹೊರಬಂದ 14 ಜೆಎನ್‌ಯು ವಿದ್ಯಾರ್ಥಿಗಳು 

ಫೆಬ್ರವರಿ 26 ರಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು) ಪ್ರತಿಭಟನೆಯ ಸಂದರ್ಭದಲ್ಲಿ ಬಂಧಿಸಲ್ಪಟ್ಟಿದ್ದ ಹದಿನಾಲ್ಕು ವಿದ್ಯಾರ್ಥಿ ನಾಯಕರನ್ನು ದೆಹಲಿ ನ್ಯಾಯಾಲಯವು ಭಾನುವಾರ ತಕ್ಷಣ ಬಿಡುಗಡೆ ಮಾಡಲು ಆದೇಶಿಸಿದ ನಂತರ, 14...

ಉತ್ತರ ಪ್ರದೇಶ| ಇಂಜೆಕ್ಷನ್ ನೀಡಿದ ಗೋರಖ್‌ಪುರದ ಮೆಡಿಕಲ್ ಸ್ಟೋರ್‌ ನಿರ್ವಾಹಕ; ಬಾಲಕಿ ಸಾವು

ಗೋರಖ್‌ಪುರದ ಉರುವಾ ಪ್ರದೇಶದ ಮೆಡಿಕಲ್ ಸ್ಟೋರ್‌ ನಿರ್ವಾಹಕನಿಂದ ಇಂಜೆಕ್ಷನ್ ಪಡೆದ ಒಂಬತ್ತು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಈ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತ ದಿವ್ಯಾ ಬನ್ಸ್‌ಗಾಂವ್ ಪೊಲೀಸ್...