Homeಕರ್ನಾಟಕದೀಪದ ಶಾಖಕ್ಕೆ ಕ್ರಿಮಿ ಸಾಯುತ್ತದೆ ಎಂದು ಬಿಜೆಪಿ ಶಾಸಕ ರಾಮದಾಸ್: ವ್ಯಾಪಕ ಟ್ರೋಲ್‌

ದೀಪದ ಶಾಖಕ್ಕೆ ಕ್ರಿಮಿ ಸಾಯುತ್ತದೆ ಎಂದು ಬಿಜೆಪಿ ಶಾಸಕ ರಾಮದಾಸ್: ವ್ಯಾಪಕ ಟ್ರೋಲ್‌

- Advertisement -
- Advertisement -

ದೀಪ ಹಚ್ಚಿದರೆ ವೈರಸ್ ದೀಪದ ಬಳಿ ಬಂದು ಶಾಖಕ್ಕೆ ಸಾಯುತ್ತದೆ ಎಂದು ಮೈಸೂರಿನ ಬಿಜೆಪಿ ಶಾಸಕ ರಾಮದಾಸ್ ಹೇಳಿದ್ದಾರೆ. ನಿನ್ನೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ದೀಪ, ಬ್ಯಾಟರಿ, ಮೊಬೈಲ್ ಟಾರ್ಚ್ ಹೊತ್ತಿಸಿ ಕೊರೊನ ವಿರುದ್ದ ದೇಶದ ಒಗ್ಗಟ್ಟು ಪ್ರದರ್ಶಿಸುವಂತೆ ಮನವಿ ಮಾಡಿದ್ದಕ್ಕೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

ಶಾಸಕ ರಾಮದಾಸ್ ಜನರಿಗೆ ದೀಪ, ಕ್ಯಾಂಡಲ್ ಹಂಚಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ “ಕೊರೊನಾ ವಿರುದ್ದ ಕಳೆದ ಬಾರಿ ಜನರು ಚಪ್ಪಾಳೆ ತಟ್ಟಿ, ಶಂಖ-ಜಾಗಟೆ ಊದುವ ಮೂಲಕ ಇಡೀ ದೇಶ ಕೊರೊನಾ ವಿರುದ್ದ ಯುದ್ದ ಮಾಡಿದೆ. ಚಪ್ಪಾಳೆ ಹೊಡಿದ ಶಬ್ದ ತರಂಗದ ಮುಖಾಂತರ ವೈರಸ್ ಸಾಯುತ್ತದೆ ಎಂದು ವೈಜ್ಞಾನಿಕವಾಗಿ ಸಾಬಿತಾಗಿದೆ” ಎಂದು ಹೇಳಿದರು.

“ಕಳೆದ ಭಾರಿಯಂತೆ ಈ ಭಾರಿಯೂ ಪ್ರಧಾನ ಮಂತ್ರಿಯ ಮನವಿಯಂತೆ ಭಾನುವಾರ ರಾತ್ರಿ ವಿದ್ಯುತ್ ಆಫ್ ಮಾಡಿ ಕತ್ತಲಲ್ಲಿದ್ದು 9 ಗಂಟೆಗೆ ಒಂಬತ್ತು ನಿಮಿಷಗಳ ಕಾಲ ದೀಪ, ಕ್ಯಾಂಡಲ್ ಅಥವಾ ಮೊಬೈಲ್ ಟಾರ್ಚ್ ಬೆಳಕನ್ನು ಹಾಕಬೇಕು. ಇದು ಕೊರೊನ ವಿರುದ್ದ ದೇಶ ಇದೆ ಎನ್ನುವ ಜಾಗೃತಿ ಮಾಡುವ ಕೆಲಸವಾಗಿದೆ. ಜಾಗೃತಿ ಮಾಡುದಲ್ಲದೆ ದೀಪದ ಬೆಳಕಿಗೆ ಕ್ರಿಮಿ-ಕೀಟಗಳು ಆಕರ್ಷಣೆಯಾಗುವಂತೆ ಕ್ರಿಮಿಯೂ ಅದರ ಬಳಿ ಬಂದು ಸಾಯುತ್ತದೆ. ದೀಪವೂ ಕತ್ತಲಲ್ಲಿ ಕೇವಲ ಬೆಳಕಾಗಿ ಇರದೆ ಅದು ಒಂದು ಶಕ್ತಿಯಾಗಿ ಪರಿವರ್ತನೆಯಾಗುತ್ತದೆ” ಎಂದು ಹೇಳಿದರಲ್ಲದೆ, “ಮನೆಯೊಳಗಡೆ ಇರುವ ಕ್ರಿಮಿಯನ್ನು ಕೂಡಾ ಸಾಯಿಸುವುದಕ್ಕಾಗಿ ನಾವು ನಮ್ಮದೇ ಜಾಲಗಳ ಮೂಲಕ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ” ಎಂದು ಹೇಳಿದ್ದಾರೆ.

ಶಾಸಕರ ಈ ನಡೆ ಸಾರ್ವಜನಿಕ ವಲಯದಲ್ಲಿ ಭಾರೀ ಟೀಕೆಗೆ ಒಳಗಾಗಿದೆ. ವೈದ್ಯರು ಕೊರೊನ ಶಾಖಕ್ಕೆ ಸಾಯುವುದಿಲ್ಲ ಎಂದು ಹೇಳುತ್ತಾ ಬರುತ್ತಿದ್ದಾರೆ, ಅದಲ್ಲದೆ ಸಾಮಾಜಿಕ ಅಂತರದ ಬಗ್ಗೆ ಹೇಳುತ್ತಾರೆ ಆದರೆ ಶಾಸಕರು ಜನಸಂದಣಿಯ ನಡುವೆ ಓಡಾಡಿ ದೀಪ ಹಂಚುತ್ತಿದ್ದಾರೆ ಇದು ಕೊರೊನ ವಿರುದ್ದದ ಹೋರಾಟಕ್ಕೆ ದೊಡ್ಡ ಹೊಡೆತ ನೀಡುತ್ತದೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ರೇಖಾ ಶ್ರೀನಿವಾಸ್ ಎಂಬವರು “ಡಿ ಗ್ರೂಪ್ ಹುದ್ದೆಗೂ ಕೂಡ ಸಾಮಾನ್ಯ ಜ್ಞಾನ, ಕನ್ನಡ, ಇಂಗ್ಲಿಷ್, ವಿಜ್ಞಾನ, ಗಣಿತ ಎಲ್ಲದರಲ್ಲೂ ಪರಿಣಿತರಾಗಿರಬೇಕು. ಸ್ಪಧಾ೯ತ್ಮಕ ಪರೀಕ್ಷೆ, ಸಂದಶ೯ನಗಳ ಮೂಲಕ ನೇಮಕಾತಿ ನಡೆಯುತ್ತದೆ. ಆದರೆ ನಮ್ಮ ಜನಪ್ರತಿನಿಧಿಗಳಿಗೆ ಯಾಕೆ ಇವೆಲ್ಲ ಪರೀಕ್ಷೆಗಳಿಲ್ಲ” ಎಂದು ಪ್ರಶ್ನಿಸುತ್ತಾ “ಸರಿಯಾದ ಮಾಹಿತಿ ಗೊತ್ತಿದ್ದರೆ ಮಾತಾಡಿ, ಇಲ್ಲವೇ ಸುಮ್ಮನಿರಿ ಅದು ಬಿಟ್ಟು ಮೂಖ೯ತನದ ಪ್ರದಶ೯ನ ಮಾಡಬೇಡಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಾರ್ಟೆಡ್ ಅಕೌಂಟೆಂಟ್ ಆಗಿರುವ ಮುಧೋಳದ ಶುಭಾಶ್ ಸಂಗಣ್ಣನವರ್ ಅವರು “ರಾಮದಾಸ್ ಅವರ ಸಮರ್ಥನೆ ಸರಿಯಾಗಿಲ್ಲ, ಸುಮ್ಮನೆ ಏನೇನೋ ಹೇಳುತ್ತಾರೆ. ನಮ್ಮ ಹಳ್ಳಿ ಜನಾ ವಿದ್ಯುತ್ ಕಡಿತದಿಂದ ಪ್ರತಿ ದಿನ ಕ್ಯಾಂಡಲ್ ಹಚ್ಚುತ್ತಾರೆ. ಪ್ರತಾಪಸಿಂಹ ಅವರು ಕೂಡಾ ಸಾರ್ವಜನಿಕರಿಗೆ ಕ್ಯಾಂಡಲ್ ವಿತರಿಸುವ ಬಗ್ಗೆ ಹೇಳುತ್ತಾರೆ ಆದರೆ ಅದರ ಬದಲಿಗೆ ಮಾಸ್ಕ್, ಸ್ಯಾನಿಟೇಷನ್ ಹಂಚಿಲಿ” ಎಂದು ಹೇಳಿದ್ದಾರೆ.

ರಾಮ್‌ದಾಸ್‌ರವರ ಹೇಳಿಕೆಯನ್ನು ಕೊರೊನಾ ಏನಾದರೂ ಓದಿದರೆ ಕರೋನಾ ಜೀವನದಲ್ಲಿ ಜಿಗುಪ್ಸೆ ಬಂದು ನೇಣು ಹಾಕಿಕೊಂಡು ಅಥವಾ ರೈಲಿಗೆ ತಲೆ ಕೊಟ್ಟು ಸೂಸೈಡ್ ಮಾಡಿಕೊಳ್ಳುತ್ತದೆ ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕುಮಾರ್‌ ದಿನೂ ಟ್ರೋಲ್‌ ಮಾಡಿದ್ದಾರೆ.

ಬಿಜೆಪಿ ಶಾಸಕ ರಾಮದಾಸ್ (ಈತ ಡಾಕ್ಟರ್ ಬೇರೆ) ಪ್ರಕಾರ, ದೀಪದ ಶಾಖಕ್ಕೆ ವೈರಸ್ ಢಮಾರ್!
ಹಂಗಿದ್ರೆ ಮೊದ್ಲೇ ಇದನ್ನ ಹೇಳೋಕೆ ಏನಾಗಿತ್ತೋ ಬೇಕೂಫ? ಡಾಕ್ಟರ್ ಸಮುದಾಯಕ್ಕೆ ಕಳಂಕ ಇಂತಹ ಶಾಖಾ ಪೀಡೆಗಳು ಎಂದು ಪತ್ರಕರ್ತರಾದ ಪಿ.ಕೆ ಮಲ್ಲನಗೌಡರ್‌ರವರು ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...