Homeಕರ್ನಾಟಕದೀಪದ ಶಾಖಕ್ಕೆ ಕ್ರಿಮಿ ಸಾಯುತ್ತದೆ ಎಂದು ಬಿಜೆಪಿ ಶಾಸಕ ರಾಮದಾಸ್: ವ್ಯಾಪಕ ಟ್ರೋಲ್‌

ದೀಪದ ಶಾಖಕ್ಕೆ ಕ್ರಿಮಿ ಸಾಯುತ್ತದೆ ಎಂದು ಬಿಜೆಪಿ ಶಾಸಕ ರಾಮದಾಸ್: ವ್ಯಾಪಕ ಟ್ರೋಲ್‌

- Advertisement -
- Advertisement -

ದೀಪ ಹಚ್ಚಿದರೆ ವೈರಸ್ ದೀಪದ ಬಳಿ ಬಂದು ಶಾಖಕ್ಕೆ ಸಾಯುತ್ತದೆ ಎಂದು ಮೈಸೂರಿನ ಬಿಜೆಪಿ ಶಾಸಕ ರಾಮದಾಸ್ ಹೇಳಿದ್ದಾರೆ. ನಿನ್ನೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ದೀಪ, ಬ್ಯಾಟರಿ, ಮೊಬೈಲ್ ಟಾರ್ಚ್ ಹೊತ್ತಿಸಿ ಕೊರೊನ ವಿರುದ್ದ ದೇಶದ ಒಗ್ಗಟ್ಟು ಪ್ರದರ್ಶಿಸುವಂತೆ ಮನವಿ ಮಾಡಿದ್ದಕ್ಕೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

ಶಾಸಕ ರಾಮದಾಸ್ ಜನರಿಗೆ ದೀಪ, ಕ್ಯಾಂಡಲ್ ಹಂಚಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ “ಕೊರೊನಾ ವಿರುದ್ದ ಕಳೆದ ಬಾರಿ ಜನರು ಚಪ್ಪಾಳೆ ತಟ್ಟಿ, ಶಂಖ-ಜಾಗಟೆ ಊದುವ ಮೂಲಕ ಇಡೀ ದೇಶ ಕೊರೊನಾ ವಿರುದ್ದ ಯುದ್ದ ಮಾಡಿದೆ. ಚಪ್ಪಾಳೆ ಹೊಡಿದ ಶಬ್ದ ತರಂಗದ ಮುಖಾಂತರ ವೈರಸ್ ಸಾಯುತ್ತದೆ ಎಂದು ವೈಜ್ಞಾನಿಕವಾಗಿ ಸಾಬಿತಾಗಿದೆ” ಎಂದು ಹೇಳಿದರು.

“ಕಳೆದ ಭಾರಿಯಂತೆ ಈ ಭಾರಿಯೂ ಪ್ರಧಾನ ಮಂತ್ರಿಯ ಮನವಿಯಂತೆ ಭಾನುವಾರ ರಾತ್ರಿ ವಿದ್ಯುತ್ ಆಫ್ ಮಾಡಿ ಕತ್ತಲಲ್ಲಿದ್ದು 9 ಗಂಟೆಗೆ ಒಂಬತ್ತು ನಿಮಿಷಗಳ ಕಾಲ ದೀಪ, ಕ್ಯಾಂಡಲ್ ಅಥವಾ ಮೊಬೈಲ್ ಟಾರ್ಚ್ ಬೆಳಕನ್ನು ಹಾಕಬೇಕು. ಇದು ಕೊರೊನ ವಿರುದ್ದ ದೇಶ ಇದೆ ಎನ್ನುವ ಜಾಗೃತಿ ಮಾಡುವ ಕೆಲಸವಾಗಿದೆ. ಜಾಗೃತಿ ಮಾಡುದಲ್ಲದೆ ದೀಪದ ಬೆಳಕಿಗೆ ಕ್ರಿಮಿ-ಕೀಟಗಳು ಆಕರ್ಷಣೆಯಾಗುವಂತೆ ಕ್ರಿಮಿಯೂ ಅದರ ಬಳಿ ಬಂದು ಸಾಯುತ್ತದೆ. ದೀಪವೂ ಕತ್ತಲಲ್ಲಿ ಕೇವಲ ಬೆಳಕಾಗಿ ಇರದೆ ಅದು ಒಂದು ಶಕ್ತಿಯಾಗಿ ಪರಿವರ್ತನೆಯಾಗುತ್ತದೆ” ಎಂದು ಹೇಳಿದರಲ್ಲದೆ, “ಮನೆಯೊಳಗಡೆ ಇರುವ ಕ್ರಿಮಿಯನ್ನು ಕೂಡಾ ಸಾಯಿಸುವುದಕ್ಕಾಗಿ ನಾವು ನಮ್ಮದೇ ಜಾಲಗಳ ಮೂಲಕ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ” ಎಂದು ಹೇಳಿದ್ದಾರೆ.

ಶಾಸಕರ ಈ ನಡೆ ಸಾರ್ವಜನಿಕ ವಲಯದಲ್ಲಿ ಭಾರೀ ಟೀಕೆಗೆ ಒಳಗಾಗಿದೆ. ವೈದ್ಯರು ಕೊರೊನ ಶಾಖಕ್ಕೆ ಸಾಯುವುದಿಲ್ಲ ಎಂದು ಹೇಳುತ್ತಾ ಬರುತ್ತಿದ್ದಾರೆ, ಅದಲ್ಲದೆ ಸಾಮಾಜಿಕ ಅಂತರದ ಬಗ್ಗೆ ಹೇಳುತ್ತಾರೆ ಆದರೆ ಶಾಸಕರು ಜನಸಂದಣಿಯ ನಡುವೆ ಓಡಾಡಿ ದೀಪ ಹಂಚುತ್ತಿದ್ದಾರೆ ಇದು ಕೊರೊನ ವಿರುದ್ದದ ಹೋರಾಟಕ್ಕೆ ದೊಡ್ಡ ಹೊಡೆತ ನೀಡುತ್ತದೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ರೇಖಾ ಶ್ರೀನಿವಾಸ್ ಎಂಬವರು “ಡಿ ಗ್ರೂಪ್ ಹುದ್ದೆಗೂ ಕೂಡ ಸಾಮಾನ್ಯ ಜ್ಞಾನ, ಕನ್ನಡ, ಇಂಗ್ಲಿಷ್, ವಿಜ್ಞಾನ, ಗಣಿತ ಎಲ್ಲದರಲ್ಲೂ ಪರಿಣಿತರಾಗಿರಬೇಕು. ಸ್ಪಧಾ೯ತ್ಮಕ ಪರೀಕ್ಷೆ, ಸಂದಶ೯ನಗಳ ಮೂಲಕ ನೇಮಕಾತಿ ನಡೆಯುತ್ತದೆ. ಆದರೆ ನಮ್ಮ ಜನಪ್ರತಿನಿಧಿಗಳಿಗೆ ಯಾಕೆ ಇವೆಲ್ಲ ಪರೀಕ್ಷೆಗಳಿಲ್ಲ” ಎಂದು ಪ್ರಶ್ನಿಸುತ್ತಾ “ಸರಿಯಾದ ಮಾಹಿತಿ ಗೊತ್ತಿದ್ದರೆ ಮಾತಾಡಿ, ಇಲ್ಲವೇ ಸುಮ್ಮನಿರಿ ಅದು ಬಿಟ್ಟು ಮೂಖ೯ತನದ ಪ್ರದಶ೯ನ ಮಾಡಬೇಡಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಾರ್ಟೆಡ್ ಅಕೌಂಟೆಂಟ್ ಆಗಿರುವ ಮುಧೋಳದ ಶುಭಾಶ್ ಸಂಗಣ್ಣನವರ್ ಅವರು “ರಾಮದಾಸ್ ಅವರ ಸಮರ್ಥನೆ ಸರಿಯಾಗಿಲ್ಲ, ಸುಮ್ಮನೆ ಏನೇನೋ ಹೇಳುತ್ತಾರೆ. ನಮ್ಮ ಹಳ್ಳಿ ಜನಾ ವಿದ್ಯುತ್ ಕಡಿತದಿಂದ ಪ್ರತಿ ದಿನ ಕ್ಯಾಂಡಲ್ ಹಚ್ಚುತ್ತಾರೆ. ಪ್ರತಾಪಸಿಂಹ ಅವರು ಕೂಡಾ ಸಾರ್ವಜನಿಕರಿಗೆ ಕ್ಯಾಂಡಲ್ ವಿತರಿಸುವ ಬಗ್ಗೆ ಹೇಳುತ್ತಾರೆ ಆದರೆ ಅದರ ಬದಲಿಗೆ ಮಾಸ್ಕ್, ಸ್ಯಾನಿಟೇಷನ್ ಹಂಚಿಲಿ” ಎಂದು ಹೇಳಿದ್ದಾರೆ.

ರಾಮ್‌ದಾಸ್‌ರವರ ಹೇಳಿಕೆಯನ್ನು ಕೊರೊನಾ ಏನಾದರೂ ಓದಿದರೆ ಕರೋನಾ ಜೀವನದಲ್ಲಿ ಜಿಗುಪ್ಸೆ ಬಂದು ನೇಣು ಹಾಕಿಕೊಂಡು ಅಥವಾ ರೈಲಿಗೆ ತಲೆ ಕೊಟ್ಟು ಸೂಸೈಡ್ ಮಾಡಿಕೊಳ್ಳುತ್ತದೆ ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕುಮಾರ್‌ ದಿನೂ ಟ್ರೋಲ್‌ ಮಾಡಿದ್ದಾರೆ.

ಬಿಜೆಪಿ ಶಾಸಕ ರಾಮದಾಸ್ (ಈತ ಡಾಕ್ಟರ್ ಬೇರೆ) ಪ್ರಕಾರ, ದೀಪದ ಶಾಖಕ್ಕೆ ವೈರಸ್ ಢಮಾರ್!
ಹಂಗಿದ್ರೆ ಮೊದ್ಲೇ ಇದನ್ನ ಹೇಳೋಕೆ ಏನಾಗಿತ್ತೋ ಬೇಕೂಫ? ಡಾಕ್ಟರ್ ಸಮುದಾಯಕ್ಕೆ ಕಳಂಕ ಇಂತಹ ಶಾಖಾ ಪೀಡೆಗಳು ಎಂದು ಪತ್ರಕರ್ತರಾದ ಪಿ.ಕೆ ಮಲ್ಲನಗೌಡರ್‌ರವರು ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...