Homeಕರ್ನಾಟಕವೀಸಾ ರದ್ದು ಪ್ರಕರಣ: ಕೇಂದ್ರದ ಕ್ರಮಕ್ಕೆ ಹೈಕೋರ್ಟ್ ತಡೆ; ನಟ ಚೇತನ್‌ಗೆ ಬಿಗ್ ರಿಲೀಫ್

ವೀಸಾ ರದ್ದು ಪ್ರಕರಣ: ಕೇಂದ್ರದ ಕ್ರಮಕ್ಕೆ ಹೈಕೋರ್ಟ್ ತಡೆ; ನಟ ಚೇತನ್‌ಗೆ ಬಿಗ್ ರಿಲೀಫ್

- Advertisement -
- Advertisement -

ನಟ ಚೇತನ್​ ಅಹಿಂಸಾ ಇತ್ತಿಚೇಗೆ ಹಿಂದುತ್ವವಾದದ ಸುಳ್ಳುಗಳ ಬಗ್ಗೆ ಟ್ವೀಟ್ ಮಾಡಿ, ಜೈಲಿಗೆ ಹೋಗಿಬಂದಿದ್ದರು. ಇದಾದ ಕೆಲವೇ ದಿನಗಳಲ್ಲಿ ಚೇತನ್​ ಅವರ ಓವರ್ಸೀಸ್ ಸಿಟಿಜನ್ ಆಫ್ ಇಂಡಿಯಾ (ಒಸಿಐ) ಕಾರ್ಡ್ ಅನ್ನು ರದ್ದು ಮಾಡುವುದಾಗಿ ಕೇಂದ್ರ ಸರ್ಕಾರ ನೋಟಿಸ್​ ನೀಡಿತ್ತು. ಆದರೆ ಈಗ ಈ ವಿಚಾರದಲ್ಲಿ ಚೇತನ್​ ಅವರಿಗೆ ರಿಲೀಫ್​ ಸಿಕ್ಕಿದೆ.

ಕೇಂದ್ರದ ನೋಟಿಸ್ ವಿರುದ್ಧ ಚೇತನ್ ಅವರು, ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು, ”ಜೂನ್​ 2ರವರೆಗೆ ನಟ ಚೇತನ್ ವಿರುದ್ಧ ಕ್ರಮ ಬೇಡ ಎಂದು ಆದೇಶ ನೀಡಿದೆ.

ಕೇಂದ್ರ ಸರ್ಕಾರ ಚೇತನ್ ಅವರನ್ನು ಗಡಿಪಾರು ಮಾಡಲು ಮುಂದಾಗಿತ್ತು. 2018ರಲ್ಲಿ ಅವರಿಗೆ ಓವರ್ಸೀಸ್ ಸಿಟಿಜನ್ ಆಫ್ ಇಂಡಿಯಾ ಕಾರ್ಡ್ ನೀಡಲಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಅವರ ಸೋಶಿಯಲ್​ ಮೀಡಿಯಾ ಪೋಸ್ಟ್​ ಮತ್ತು ಸಾರ್ವಜನಿಕ ಹೇಳಿಕೆಗಳು ವಿವಾದ ಹುಟ್ಟುಹಾಕಿದ್ದರಿಂದ ಕೇಂದ್ರ ಸರ್ಕಾರವು ಒಸಿಐ ಮಾನ್ಯತೆ ರದ್ದು ಮಾಡಿತ್ತು. ಆದರೆ ಕೇಂದ್ರದ ಕ್ರಮಕ್ಕೆ ಇದೀಗ ಹೈಕೋರ್ಟ್​ ತಡೆ ನೀಡಿದೆ.

ಇದನ್ನೂ ಓದಿ: ನಟ ಚೇತನ್ ವೀಸಾ ರದ್ದು: ಸರ್ಕಾರದ ನಡೆ ವಿರುದ್ಧ ನಟ ಕಿಶೋರ್ ಪೋಸ್ಟ್

ಚೇತನ್‌ ಅವರ ಮೇಲೆ, ಸಮುದಾಯಗಳ ನಡುವೆ ದ್ವೇ‍ಷ ಮೂಡಿಸುವ ಯತ್ನ, ಭಾರತ ವಿರೋಧಿ ಚಟುವಟಿಕೆ ಮುಂತಾದ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನೋಟಿಸ್ ನೀಡಿತ್ತು. ಆ ಬಳಿಕ ಚೇತನ್​ ಕೂಡ ಅವರ ಪ್ರಶ್ನೆಗಳಿಗೆ ಉತ್ತರ ನೀಡಿದ್ದರು. ಆದರೆ ಚೇತನ್ ನೀಡಿದ್ದ ಉತ್ತರ ಸಮಾಧಾನಕರವಾಗಿಲ್ಲ ಎಂಬ ಕಾರಣವನ್ನು ನೀಡಿ ಕೇಂದ್ರ ಸರ್ಕಾರವು ಒಸಿಐ ಕಾರ್ಡ್ ರದ್ದುಪಡಿಸಿತ್ತು.

ಚೇತನ್ ವಾದ ಆಲಿಸದೇ ಕ್ರಮ ಕೈಗೊಂಡಿದ್ದು ಸರಿಯಲ್ಲ ಎಂದು ಅವರ ಪರ ವಕೀಲರು ವಾದಿಸಿದ್ದಾರೆ. ಮತ್ತೊಂದೆಡೆ ಎಎಜಿ ಅರುಣ್ ಶ್ಯಾಮ್, ಎಎಸ್​​ಜಿ ಶಾಂತಿಭೂಷಣ್ ಅವರು, ”ಚೇತನ್​ ಅವರು ನ್ಯಾಯಾಂಗದ ವಿರುದ್ಧವೂ ಆಕ್ಷೇಪಾರ್ಹ ಹೇಳಿಕೆ ನೀಡಿರುವುದರಿಂದ ಕೇಂದ್ರದ ಕ್ರಮಕ್ಕೆ ತಡೆ ನೀಡಬಾರದು” ಎಂದು ವಾದ ಮಾಡಿದರು. ಆದರೆ ಅಂತಿಮವಾಗಿ ಚೇತನ್​ ಅವರಿಗೆ ನ್ಯಾಯಾಲಯ ಷರತ್ತು ಬದ್ಧ ರಿಲೀಫ್​ ನೀಡಿದೆ. ನ್ಯಾಯಾಂಗದ ಬಗ್ಗೆ ಚೇತನ್ ಟ್ವೀಟ್ ಮಾಡುವಂತಿಲ್ಲ. ವಿಚಾರಣೆಗೆ ಬಾಕಿಯಿರುವ ಕೇಸ್​​ಗಳ ಬಗ್ಗೆ ಕೂಡ ಅವರು ಪೋಸ್ಟ್ ಮಾಡುವಂತಿಲ್ಲ ಎಂದು ಷರತ್ತು ವಿಧಿಸಿ ಕೇಂದ್ರದ ಆದೇಶಕ್ಕೆ ತಡೆ ನೀಡಿ ಹೈಕೋರ್ಟ್​ ಆದೇಶ ಹೊರಡಿಸಿದೆ.

ಚೇತನ್ ಅಂಹಿಸಾ ಪರ ಪೋಸ್ಟ್ ಮಾಡಿದ್ದ ನಟ ಕಿಶೋರ್:

ನಟ ಕಿಶೋರ್ ತಮ್ಮ ಇನ್ ಸ್ಟಾಗ್ರಾಮ್‌ನಲ್ಲಿ ಧೀರ್ಘ ಬಹರದ ಪೋಸ್ಟ್ ಹಂಚಿಕೊಂಡಿದ್ದಾರೆ. ”ಹಿಂದುತ್ವ ಎನ್ನುವ ಪದ ವರ್ತಮಾನದ ರಾಜಕೀಯ ಪರಿಸ್ಥಿತಿಯಲ್ಲಿ ಹಿಂದೂ ಧರ್ಮ ಅಲ್ಲ. ನಿಜವಾದ ಹಿಂದೂ ಧರ್ಮ, ಸಕಲರನ್ನೂ ಒಳಗೊಂಡ ವಸುಧೆಯೇ ಒಂದು ಕುಟುಂಬವೆಂದು ನೋಡುವ ವಿಶಾಲ ಮನಸ್ಥಿತಿ ಇರುವಂತಹದ್ದು. ಆದರೆ ‘ಹಿಂದುತ್ವ’ ಎನ್ನುವ ಪದ ಬಳಕೆಯಾಗುತ್ತಿರುವುದು ಒಂದು ಪಕ್ಷದ, ಒಂದು ಸಂಘದ, ಅಧಿಕಾರಕ್ಕಾಗಿ ಒಡೆದಾಳುವ, ಪರದ್ವೇಷದ, ಮೂಲಭೂತವಾದಿ ವೈದಿಕ ಸಂಪ್ರದಾಯದ ಸಂಕುಚಿತ ಪರಿಕಲ್ಪನೆಯಾಗಿಯಷ್ಟೇ. ಹಾಗಾಗಿ ಈ ಜೀವ ವಿರೋಧಿ ರಾಜಕೀಯದ ಟೀಕೆಯಿಂದ ಹಿಂದೂಗಳಿಗೆಲ್ಲರಿಗೂ ಅಪಮಾನವಾಯಿತೇ ಎನ್ನುವುದು ಎಷ್ಟು ಉಚಿತ?? ಹಾಗೆ ಅವಮಾನ ಪಡಲೇಬೇಕೆಂದರೆ ವೈದಿಕ ಪರಂಪರೆ ಇಂದಿಗೂ ಪ್ರತಿಪಾದಿಸುತ್ತಿರುವ ನಮ್ಮಲ್ಲೇ ಇರುವ ಜಾತಿ ಪದ್ಧತಿ, ಅಸ್ಪೃಶ್ಯತೆ, ಲಿಂಗ ಬೇಧ ಇವುಗಳಿಂದಲ್ಲವೇ?. ಆ ನಿಟ್ಟಿನಲ್ಲಿ ನಮ್ಮನ್ನು ನಾವು ತಿದ್ದಿಕೊಂಡು ಹಿಂದೂ ಧರ್ಮವನ್ನು ಎಲ್ಲರಿಗೂ ಮಾದರಿಯಾಗಿಸಬೇಕಲ್ಲವೇ?. ನಮ್ಮ ತಪ್ಪುಗಳನ್ನು ಎತ್ತಿ ತೋರಿಸುವ ನಮ್ಮದೇ ಜನರನ್ನು ನಿಂದಿಸುವ, ಆರೋಪಿಸುವ, ಜೈಲಿಗೆ ಹಾಕುವ ಅಥವಾ ಗಡಿಪಾರು ಮಾಡುವ ಅತಿರೇಕಕ್ಕೆ ಹೋಗುವ ಬದಲು?” ಎಂದು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...