Homeಕರ್ನಾಟಕವೀಸಾ ರದ್ದು ಪ್ರಕರಣ: ಕೇಂದ್ರದ ಕ್ರಮಕ್ಕೆ ಹೈಕೋರ್ಟ್ ತಡೆ; ನಟ ಚೇತನ್‌ಗೆ ಬಿಗ್ ರಿಲೀಫ್

ವೀಸಾ ರದ್ದು ಪ್ರಕರಣ: ಕೇಂದ್ರದ ಕ್ರಮಕ್ಕೆ ಹೈಕೋರ್ಟ್ ತಡೆ; ನಟ ಚೇತನ್‌ಗೆ ಬಿಗ್ ರಿಲೀಫ್

- Advertisement -
- Advertisement -

ನಟ ಚೇತನ್​ ಅಹಿಂಸಾ ಇತ್ತಿಚೇಗೆ ಹಿಂದುತ್ವವಾದದ ಸುಳ್ಳುಗಳ ಬಗ್ಗೆ ಟ್ವೀಟ್ ಮಾಡಿ, ಜೈಲಿಗೆ ಹೋಗಿಬಂದಿದ್ದರು. ಇದಾದ ಕೆಲವೇ ದಿನಗಳಲ್ಲಿ ಚೇತನ್​ ಅವರ ಓವರ್ಸೀಸ್ ಸಿಟಿಜನ್ ಆಫ್ ಇಂಡಿಯಾ (ಒಸಿಐ) ಕಾರ್ಡ್ ಅನ್ನು ರದ್ದು ಮಾಡುವುದಾಗಿ ಕೇಂದ್ರ ಸರ್ಕಾರ ನೋಟಿಸ್​ ನೀಡಿತ್ತು. ಆದರೆ ಈಗ ಈ ವಿಚಾರದಲ್ಲಿ ಚೇತನ್​ ಅವರಿಗೆ ರಿಲೀಫ್​ ಸಿಕ್ಕಿದೆ.

ಕೇಂದ್ರದ ನೋಟಿಸ್ ವಿರುದ್ಧ ಚೇತನ್ ಅವರು, ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು, ”ಜೂನ್​ 2ರವರೆಗೆ ನಟ ಚೇತನ್ ವಿರುದ್ಧ ಕ್ರಮ ಬೇಡ ಎಂದು ಆದೇಶ ನೀಡಿದೆ.

ಕೇಂದ್ರ ಸರ್ಕಾರ ಚೇತನ್ ಅವರನ್ನು ಗಡಿಪಾರು ಮಾಡಲು ಮುಂದಾಗಿತ್ತು. 2018ರಲ್ಲಿ ಅವರಿಗೆ ಓವರ್ಸೀಸ್ ಸಿಟಿಜನ್ ಆಫ್ ಇಂಡಿಯಾ ಕಾರ್ಡ್ ನೀಡಲಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಅವರ ಸೋಶಿಯಲ್​ ಮೀಡಿಯಾ ಪೋಸ್ಟ್​ ಮತ್ತು ಸಾರ್ವಜನಿಕ ಹೇಳಿಕೆಗಳು ವಿವಾದ ಹುಟ್ಟುಹಾಕಿದ್ದರಿಂದ ಕೇಂದ್ರ ಸರ್ಕಾರವು ಒಸಿಐ ಮಾನ್ಯತೆ ರದ್ದು ಮಾಡಿತ್ತು. ಆದರೆ ಕೇಂದ್ರದ ಕ್ರಮಕ್ಕೆ ಇದೀಗ ಹೈಕೋರ್ಟ್​ ತಡೆ ನೀಡಿದೆ.

ಇದನ್ನೂ ಓದಿ: ನಟ ಚೇತನ್ ವೀಸಾ ರದ್ದು: ಸರ್ಕಾರದ ನಡೆ ವಿರುದ್ಧ ನಟ ಕಿಶೋರ್ ಪೋಸ್ಟ್

ಚೇತನ್‌ ಅವರ ಮೇಲೆ, ಸಮುದಾಯಗಳ ನಡುವೆ ದ್ವೇ‍ಷ ಮೂಡಿಸುವ ಯತ್ನ, ಭಾರತ ವಿರೋಧಿ ಚಟುವಟಿಕೆ ಮುಂತಾದ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನೋಟಿಸ್ ನೀಡಿತ್ತು. ಆ ಬಳಿಕ ಚೇತನ್​ ಕೂಡ ಅವರ ಪ್ರಶ್ನೆಗಳಿಗೆ ಉತ್ತರ ನೀಡಿದ್ದರು. ಆದರೆ ಚೇತನ್ ನೀಡಿದ್ದ ಉತ್ತರ ಸಮಾಧಾನಕರವಾಗಿಲ್ಲ ಎಂಬ ಕಾರಣವನ್ನು ನೀಡಿ ಕೇಂದ್ರ ಸರ್ಕಾರವು ಒಸಿಐ ಕಾರ್ಡ್ ರದ್ದುಪಡಿಸಿತ್ತು.

ಚೇತನ್ ವಾದ ಆಲಿಸದೇ ಕ್ರಮ ಕೈಗೊಂಡಿದ್ದು ಸರಿಯಲ್ಲ ಎಂದು ಅವರ ಪರ ವಕೀಲರು ವಾದಿಸಿದ್ದಾರೆ. ಮತ್ತೊಂದೆಡೆ ಎಎಜಿ ಅರುಣ್ ಶ್ಯಾಮ್, ಎಎಸ್​​ಜಿ ಶಾಂತಿಭೂಷಣ್ ಅವರು, ”ಚೇತನ್​ ಅವರು ನ್ಯಾಯಾಂಗದ ವಿರುದ್ಧವೂ ಆಕ್ಷೇಪಾರ್ಹ ಹೇಳಿಕೆ ನೀಡಿರುವುದರಿಂದ ಕೇಂದ್ರದ ಕ್ರಮಕ್ಕೆ ತಡೆ ನೀಡಬಾರದು” ಎಂದು ವಾದ ಮಾಡಿದರು. ಆದರೆ ಅಂತಿಮವಾಗಿ ಚೇತನ್​ ಅವರಿಗೆ ನ್ಯಾಯಾಲಯ ಷರತ್ತು ಬದ್ಧ ರಿಲೀಫ್​ ನೀಡಿದೆ. ನ್ಯಾಯಾಂಗದ ಬಗ್ಗೆ ಚೇತನ್ ಟ್ವೀಟ್ ಮಾಡುವಂತಿಲ್ಲ. ವಿಚಾರಣೆಗೆ ಬಾಕಿಯಿರುವ ಕೇಸ್​​ಗಳ ಬಗ್ಗೆ ಕೂಡ ಅವರು ಪೋಸ್ಟ್ ಮಾಡುವಂತಿಲ್ಲ ಎಂದು ಷರತ್ತು ವಿಧಿಸಿ ಕೇಂದ್ರದ ಆದೇಶಕ್ಕೆ ತಡೆ ನೀಡಿ ಹೈಕೋರ್ಟ್​ ಆದೇಶ ಹೊರಡಿಸಿದೆ.

ಚೇತನ್ ಅಂಹಿಸಾ ಪರ ಪೋಸ್ಟ್ ಮಾಡಿದ್ದ ನಟ ಕಿಶೋರ್:

ನಟ ಕಿಶೋರ್ ತಮ್ಮ ಇನ್ ಸ್ಟಾಗ್ರಾಮ್‌ನಲ್ಲಿ ಧೀರ್ಘ ಬಹರದ ಪೋಸ್ಟ್ ಹಂಚಿಕೊಂಡಿದ್ದಾರೆ. ”ಹಿಂದುತ್ವ ಎನ್ನುವ ಪದ ವರ್ತಮಾನದ ರಾಜಕೀಯ ಪರಿಸ್ಥಿತಿಯಲ್ಲಿ ಹಿಂದೂ ಧರ್ಮ ಅಲ್ಲ. ನಿಜವಾದ ಹಿಂದೂ ಧರ್ಮ, ಸಕಲರನ್ನೂ ಒಳಗೊಂಡ ವಸುಧೆಯೇ ಒಂದು ಕುಟುಂಬವೆಂದು ನೋಡುವ ವಿಶಾಲ ಮನಸ್ಥಿತಿ ಇರುವಂತಹದ್ದು. ಆದರೆ ‘ಹಿಂದುತ್ವ’ ಎನ್ನುವ ಪದ ಬಳಕೆಯಾಗುತ್ತಿರುವುದು ಒಂದು ಪಕ್ಷದ, ಒಂದು ಸಂಘದ, ಅಧಿಕಾರಕ್ಕಾಗಿ ಒಡೆದಾಳುವ, ಪರದ್ವೇಷದ, ಮೂಲಭೂತವಾದಿ ವೈದಿಕ ಸಂಪ್ರದಾಯದ ಸಂಕುಚಿತ ಪರಿಕಲ್ಪನೆಯಾಗಿಯಷ್ಟೇ. ಹಾಗಾಗಿ ಈ ಜೀವ ವಿರೋಧಿ ರಾಜಕೀಯದ ಟೀಕೆಯಿಂದ ಹಿಂದೂಗಳಿಗೆಲ್ಲರಿಗೂ ಅಪಮಾನವಾಯಿತೇ ಎನ್ನುವುದು ಎಷ್ಟು ಉಚಿತ?? ಹಾಗೆ ಅವಮಾನ ಪಡಲೇಬೇಕೆಂದರೆ ವೈದಿಕ ಪರಂಪರೆ ಇಂದಿಗೂ ಪ್ರತಿಪಾದಿಸುತ್ತಿರುವ ನಮ್ಮಲ್ಲೇ ಇರುವ ಜಾತಿ ಪದ್ಧತಿ, ಅಸ್ಪೃಶ್ಯತೆ, ಲಿಂಗ ಬೇಧ ಇವುಗಳಿಂದಲ್ಲವೇ?. ಆ ನಿಟ್ಟಿನಲ್ಲಿ ನಮ್ಮನ್ನು ನಾವು ತಿದ್ದಿಕೊಂಡು ಹಿಂದೂ ಧರ್ಮವನ್ನು ಎಲ್ಲರಿಗೂ ಮಾದರಿಯಾಗಿಸಬೇಕಲ್ಲವೇ?. ನಮ್ಮ ತಪ್ಪುಗಳನ್ನು ಎತ್ತಿ ತೋರಿಸುವ ನಮ್ಮದೇ ಜನರನ್ನು ನಿಂದಿಸುವ, ಆರೋಪಿಸುವ, ಜೈಲಿಗೆ ಹಾಕುವ ಅಥವಾ ಗಡಿಪಾರು ಮಾಡುವ ಅತಿರೇಕಕ್ಕೆ ಹೋಗುವ ಬದಲು?” ಎಂದು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...