Homeಮುಖಪುಟವೀಸಾ ವಂಚನೆ: ಭಾರತೀಯ ವಿದ್ಯಾರ್ಥಿಗಳಿಗೆ ನಿಷೇಧ ಹೇರಿದ ಆಸ್ಟ್ರೇಲಿಯಾದ ಎರಡು ವಿಶ್ವವಿದ್ಯಾಲಯಗಳು

ವೀಸಾ ವಂಚನೆ: ಭಾರತೀಯ ವಿದ್ಯಾರ್ಥಿಗಳಿಗೆ ನಿಷೇಧ ಹೇರಿದ ಆಸ್ಟ್ರೇಲಿಯಾದ ಎರಡು ವಿಶ್ವವಿದ್ಯಾಲಯಗಳು

- Advertisement -
- Advertisement -

ಭಾರತೀಯ ವಿದ್ಯಾರ್ಥಿಗಳ ವೀಸಾ ವಂಚನೆಯ ಬಗ್ಗೆ ಆಸ್ಟ್ರೇಲಿಯಾದ ಸರ್ಕಾರವು ಕಳವಳ ವ್ಯಕ್ತಪಡಿಸಿದ ನಂತರ ಅಲ್ಲಿಯ ಇನ್ನೂ ಎರಡು ವಿಶ್ವವಿದ್ಯಾಲಯಗಳು ಪಂಜಾಬ್ ಮತ್ತು ಹರಿಯಾಣ ಸೇರಿದಂತೆ ಕೆಲವು ರಾಜ್ಯಗಳ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳುವುದಕ್ಕೆ ನಿಷೇಧ ಹೇರಿವೆ ಎಂದು ದಿ ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ವರದಿ ಮಾಡಿದೆ.

ವಿಕ್ಟೋರಿಯಾದಲ್ಲಿನ ಫೆಡರೇಶನ್ ವಿಶ್ವವಿದ್ಯಾನಿಲಯ ಮತ್ತು ನ್ಯೂ ಸೌತ್ ವೇಲ್ಸ್‌ನ ವೆಸ್ಟರ್ನ್ ಸಿಡ್ನಿ ವಿಶ್ವವಿದ್ಯಾನಿಲಯವು ಈ ನಿರ್ಧಾರವನ್ನು ತೆಗೆದುಕೊಂಡಿವೆ. ಆಸ್ಟ್ರೇಲಿಯಾದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಭಾರತೀಯ ವಿದ್ಯಾರ್ಥಿಗಳ ಅರ್ಜಿಗಳನ್ನು ನಿರಾಕರಿಸಲಾಗುತ್ತಿದೆ. ಗೃಹ ವ್ಯವಹಾರಗಳ ಇಲಾಖೆಯ ಪ್ರಕಾರ, ಈಗ ನಾಲ್ಕು ಅರ್ಜಿಗಳಲ್ಲಿ ಒಂದು ನಕಲಿ ವೀಸಾ ಹೊಂದಿರುವವರದ್ದಾಗಿರುತ್ತದೆ ಎಂದು ಹೇಳಿದೆ.

ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು, ಬುಧವಾರ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬೆನೀಸ್ ಅವರೊಂದಿಗೆ ಆಸ್ಟ್ರೇಲಿಯಾಕ್ಕೆ ಬರುವ ಭಾರತೀಯ ವಿದ್ಯಾರ್ಥಿಗಳು ಮತ್ತು ವ್ಯಾಪಾರ ಪ್ರಯಾಣವನ್ನು ಹೆಚ್ಚಿಸಲು ವಲಸೆ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಈ ನಡುವೆ ಈ ಬೆಳವಣಿಗೆ ನಡೆದಿದೆ.

ಅಗ್ಗದ ದರದಲ್ಲಿ ವೃತ್ತಿಪರ ಶಿಕ್ಷಣ ನೀಡುವುದಾಗಿ ವಿಶ್ವವಿದ್ಯಾನಿಲಯಗಳಿಂದ ವಿದ್ಯಾರ್ಥಿಗಳನ್ನು ಸಂಸ್ಥೆಗಳಿಗೆ ತೆರಳಲು ಪ್ರೇರಣೆಗಳನ್ನು ನೀಡುತ್ತಿರುವ ಶಿಕ್ಷಣ ಏಜೆಂಟ್‌ಗಳ ”ನಿರ್ಲಜ್ಜ ವರ್ತನೆ”ಯ ಬಗ್ಗೆ ತನಗೆ ತಿಳಿದಿದೆ ಎಂದು ಆಸ್ಟ್ರೇಲಿಯನ್ ಶಿಕ್ಷಣ ಇಲಾಖೆ ಹೇಳಿದೆ.

ಇದನ್ನೂ ಓದಿ: ನಕಲಿ ಶೈಕ್ಷಣಿಕ ದಾಖಲಾತಿ ಪತ್ರ ಸಲ್ಲಿಕೆ: ಕೆನಡಾದಿಂದ 700ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳ ಗಡಿಪಾರು!

ಅಂತರರಾಷ್ಟ್ರೀಯ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯಗಳಿಗೆ ಸೇರಲು ಶಿಕ್ಷಣ ಏಜೆಂಟ್‌ಗಳು ಪ್ರಮುಖ ಸಾಧನವಾಗಿದೆ. ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳಿಗೆ ಸೇರಿಸಲು ಪ್ರತಿ ವಿದ್ಯಾರ್ಥಿಯು ದಾಖಲಾತಿಗಳಿಗಾಗಿ ಏಜೆಂಟರ್‌ಗೆ ಸಾವಿರಾರು ಡಾಲರ್‌ಗಳ ಕಮಿಷನ್‌ಗಳನ್ನು ನೀಡುತ್ತಾರೆ.

ಫೆಡರೇಶನ್ ವಿಶ್ವವಿದ್ಯಾಲಯವು ಪಂಜಾಬ್, ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ಉತ್ತರಾಖಂಡ ಮತ್ತು ಉತ್ತರ ಪ್ರದೇಶದ ವಿದ್ಯಾರ್ಥಿಗಳನ್ನು ನೇಮಿಸಿಕೊಳ್ಳದಂತೆ ಏಜೆಂಟರಿಗೆ ನಿರ್ದೇಶನ ನೀಡಿದೆ ಎಂದು ಪತ್ರಿಕೆ ವರದಿ ಮಾಡಿದೆ.

ಫೆಡರೇಶನ್ ವಿಶ್ವವಿದ್ಯಾನಿಲಯದಲ್ಲಿ ಓದುತ್ತಿರುವ ಜನರಲ್ಲಿ ನಾಲ್ಕನೇ ಒಂದು ಭಾಗದಷ್ಟು ಜನರು ಅಂತರರಾಷ್ಟ್ರೀಯ ವಿದ್ಯಾರ್ಥಿಗಳು ಎಂದು ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ವರದಿ ಮಾಡಿದೆ. ಅವರಲ್ಲಿ ಎಷ್ಟು ವಿದ್ಯಾರ್ಥಿಗಳು ಭಾರತೀಯರು ಎಂಬುದು ಸ್ಪಷ್ಟವಾಗಿಲ್ಲ.

ವೆಸ್ಟರ್ನ್ ಸಿಡ್ನಿ ವಿಶ್ವವಿದ್ಯಾನಿಲಯವು ಪಂಜಾಬ್, ಹರಿಯಾಣ ಮತ್ತು ಗುಜರಾತ್‌ನ ವಿದ್ಯಾರ್ಥಿಗಳ ನೇಮಕಾತಿಯನ್ನು ನಿಲ್ಲಿಸಿದೆ. 2022 ರಲ್ಲಿ ದಾಖಲಾದವರಲ್ಲಿ ಹೆಚ್ಚಿನ ಸಂಖ್ಯೆಯವರು ಹೊರಗುಳಿದಿದ್ದಾರೆ ಎಂದು ಹೇಳಿದೆ.

ಕಳೆದ ವಾರ, ಗೃಹ ವ್ಯವಹಾರಗಳ ಇಲಾಖೆಯು ಫೆಡರಲ್ ಸಂಸದೀಯ ವಿಚಾರಣೆಯ ಸಮಯದಲ್ಲಿ ಆಸ್ಟ್ರೇಲಿಯಾದ ವಿಶ್ವವಿದ್ಯಾಲಯಗಳು 2019ರಲ್ಲಿ, 12.5% ರಿಂದ 20.1% ಅರ್ಜಿಗಳನ್ನು ನಿರಾಕರಿಸುತ್ತಿವೆ ಎಂದು ಹೇಳಿತ್ತು. ಆದರೆ ಈಗ ಭಾರತದಿಂದ ಅರ್ಜಿಗಳ ನಿರಾಕರಣೆ ಪ್ರಮಾಣವು 24.3% ಆಗಿದೆ, ಇದು 2012 ರಿಂದ ಅತ್ಯಧಿಕವಾಗಿದೆ ಎಂದು ಹೇಳಿದೆ.

ಆಸ್ಟ್ರೇಲಿಯಾದ ಇಂಟರ್‌ನ್ಯಾಶನಲ್ ಎಜುಕೇಶನ್ ಅಸೋಸಿಯೇಷನ್‌ನ ಮುಖ್ಯ ಕಾರ್ಯನಿರ್ವಾಹಕ ಫಿಲ್ ಹನಿವುಡ್ ವಿಚಾರಣೆಯ ಸಮಯದಲ್ಲಿ, ”ಬೇರೆ ದೇಶಗಳ ಅನೇಕ ಪೋಷಕರು ತಮ್ಮ ಮಕ್ಕಳನ್ನು ವಿದೇಶಕ್ಕೆ ಕಳುಹಿಸಲು ಬಯಸುತ್ತಾರೆ ಮತ್ತು ಸಾಮಾನ್ಯವಾಗಿ ಶಿಕ್ಷಣ ಏಜೆಂಟ್‌ಗಳ ಸಹಾಯವನ್ನು ತೆಗೆದುಕೊಳ್ಳುತ್ತಾರೆ” ಎಂದು ಹೇಳಿದರು.

ಕಳೆದ ತಿಂಗಳು, ನಾಲ್ಕು ವಿಶ್ವವಿದ್ಯಾನಿಲಯಗಳು ಪಂಜಾಬ್ ಮತ್ತು ಹರಿಯಾಣದಂತಹ ನಿರ್ದಿಷ್ಟ ಭಾರತೀಯ ರಾಜ್ಯಗಳಿಂದ ವಿದ್ಯಾರ್ಥಿಗಳ ದಾಖಲಾತಿಯನ್ನು ನಿಷೇಧಿಸಿವೆ ಎಂದು ದಿ ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ವರದಿ ಮಾಡಿದೆ. ಇತರ ಎರಡು ವಿಶ್ವವಿದ್ಯಾನಿಲಯಗಳು ದಾಖಲಾತಿಯನ್ನು ನಿಷೇಧಿಸಿವೆ ಆದರೆ ಯಾವುದೇ ನಿರ್ದಿಷ್ಟ ರಾಜ್ಯವನ್ನು ಉಲ್ಲೇಖಿಸಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...