Homeಮುಖಪುಟವೀಸಾ ವಂಚನೆ: ಭಾರತೀಯ ವಿದ್ಯಾರ್ಥಿಗಳಿಗೆ ನಿಷೇಧ ಹೇರಿದ ಆಸ್ಟ್ರೇಲಿಯಾದ ಎರಡು ವಿಶ್ವವಿದ್ಯಾಲಯಗಳು

ವೀಸಾ ವಂಚನೆ: ಭಾರತೀಯ ವಿದ್ಯಾರ್ಥಿಗಳಿಗೆ ನಿಷೇಧ ಹೇರಿದ ಆಸ್ಟ್ರೇಲಿಯಾದ ಎರಡು ವಿಶ್ವವಿದ್ಯಾಲಯಗಳು

- Advertisement -
- Advertisement -

ಭಾರತೀಯ ವಿದ್ಯಾರ್ಥಿಗಳ ವೀಸಾ ವಂಚನೆಯ ಬಗ್ಗೆ ಆಸ್ಟ್ರೇಲಿಯಾದ ಸರ್ಕಾರವು ಕಳವಳ ವ್ಯಕ್ತಪಡಿಸಿದ ನಂತರ ಅಲ್ಲಿಯ ಇನ್ನೂ ಎರಡು ವಿಶ್ವವಿದ್ಯಾಲಯಗಳು ಪಂಜಾಬ್ ಮತ್ತು ಹರಿಯಾಣ ಸೇರಿದಂತೆ ಕೆಲವು ರಾಜ್ಯಗಳ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳುವುದಕ್ಕೆ ನಿಷೇಧ ಹೇರಿವೆ ಎಂದು ದಿ ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ವರದಿ ಮಾಡಿದೆ.

ವಿಕ್ಟೋರಿಯಾದಲ್ಲಿನ ಫೆಡರೇಶನ್ ವಿಶ್ವವಿದ್ಯಾನಿಲಯ ಮತ್ತು ನ್ಯೂ ಸೌತ್ ವೇಲ್ಸ್‌ನ ವೆಸ್ಟರ್ನ್ ಸಿಡ್ನಿ ವಿಶ್ವವಿದ್ಯಾನಿಲಯವು ಈ ನಿರ್ಧಾರವನ್ನು ತೆಗೆದುಕೊಂಡಿವೆ. ಆಸ್ಟ್ರೇಲಿಯಾದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಭಾರತೀಯ ವಿದ್ಯಾರ್ಥಿಗಳ ಅರ್ಜಿಗಳನ್ನು ನಿರಾಕರಿಸಲಾಗುತ್ತಿದೆ. ಗೃಹ ವ್ಯವಹಾರಗಳ ಇಲಾಖೆಯ ಪ್ರಕಾರ, ಈಗ ನಾಲ್ಕು ಅರ್ಜಿಗಳಲ್ಲಿ ಒಂದು ನಕಲಿ ವೀಸಾ ಹೊಂದಿರುವವರದ್ದಾಗಿರುತ್ತದೆ ಎಂದು ಹೇಳಿದೆ.

ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು, ಬುಧವಾರ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬೆನೀಸ್ ಅವರೊಂದಿಗೆ ಆಸ್ಟ್ರೇಲಿಯಾಕ್ಕೆ ಬರುವ ಭಾರತೀಯ ವಿದ್ಯಾರ್ಥಿಗಳು ಮತ್ತು ವ್ಯಾಪಾರ ಪ್ರಯಾಣವನ್ನು ಹೆಚ್ಚಿಸಲು ವಲಸೆ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಈ ನಡುವೆ ಈ ಬೆಳವಣಿಗೆ ನಡೆದಿದೆ.

ಅಗ್ಗದ ದರದಲ್ಲಿ ವೃತ್ತಿಪರ ಶಿಕ್ಷಣ ನೀಡುವುದಾಗಿ ವಿಶ್ವವಿದ್ಯಾನಿಲಯಗಳಿಂದ ವಿದ್ಯಾರ್ಥಿಗಳನ್ನು ಸಂಸ್ಥೆಗಳಿಗೆ ತೆರಳಲು ಪ್ರೇರಣೆಗಳನ್ನು ನೀಡುತ್ತಿರುವ ಶಿಕ್ಷಣ ಏಜೆಂಟ್‌ಗಳ ”ನಿರ್ಲಜ್ಜ ವರ್ತನೆ”ಯ ಬಗ್ಗೆ ತನಗೆ ತಿಳಿದಿದೆ ಎಂದು ಆಸ್ಟ್ರೇಲಿಯನ್ ಶಿಕ್ಷಣ ಇಲಾಖೆ ಹೇಳಿದೆ.

ಇದನ್ನೂ ಓದಿ: ನಕಲಿ ಶೈಕ್ಷಣಿಕ ದಾಖಲಾತಿ ಪತ್ರ ಸಲ್ಲಿಕೆ: ಕೆನಡಾದಿಂದ 700ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳ ಗಡಿಪಾರು!

ಅಂತರರಾಷ್ಟ್ರೀಯ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯಗಳಿಗೆ ಸೇರಲು ಶಿಕ್ಷಣ ಏಜೆಂಟ್‌ಗಳು ಪ್ರಮುಖ ಸಾಧನವಾಗಿದೆ. ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳಿಗೆ ಸೇರಿಸಲು ಪ್ರತಿ ವಿದ್ಯಾರ್ಥಿಯು ದಾಖಲಾತಿಗಳಿಗಾಗಿ ಏಜೆಂಟರ್‌ಗೆ ಸಾವಿರಾರು ಡಾಲರ್‌ಗಳ ಕಮಿಷನ್‌ಗಳನ್ನು ನೀಡುತ್ತಾರೆ.

ಫೆಡರೇಶನ್ ವಿಶ್ವವಿದ್ಯಾಲಯವು ಪಂಜಾಬ್, ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ಉತ್ತರಾಖಂಡ ಮತ್ತು ಉತ್ತರ ಪ್ರದೇಶದ ವಿದ್ಯಾರ್ಥಿಗಳನ್ನು ನೇಮಿಸಿಕೊಳ್ಳದಂತೆ ಏಜೆಂಟರಿಗೆ ನಿರ್ದೇಶನ ನೀಡಿದೆ ಎಂದು ಪತ್ರಿಕೆ ವರದಿ ಮಾಡಿದೆ.

ಫೆಡರೇಶನ್ ವಿಶ್ವವಿದ್ಯಾನಿಲಯದಲ್ಲಿ ಓದುತ್ತಿರುವ ಜನರಲ್ಲಿ ನಾಲ್ಕನೇ ಒಂದು ಭಾಗದಷ್ಟು ಜನರು ಅಂತರರಾಷ್ಟ್ರೀಯ ವಿದ್ಯಾರ್ಥಿಗಳು ಎಂದು ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ವರದಿ ಮಾಡಿದೆ. ಅವರಲ್ಲಿ ಎಷ್ಟು ವಿದ್ಯಾರ್ಥಿಗಳು ಭಾರತೀಯರು ಎಂಬುದು ಸ್ಪಷ್ಟವಾಗಿಲ್ಲ.

ವೆಸ್ಟರ್ನ್ ಸಿಡ್ನಿ ವಿಶ್ವವಿದ್ಯಾನಿಲಯವು ಪಂಜಾಬ್, ಹರಿಯಾಣ ಮತ್ತು ಗುಜರಾತ್‌ನ ವಿದ್ಯಾರ್ಥಿಗಳ ನೇಮಕಾತಿಯನ್ನು ನಿಲ್ಲಿಸಿದೆ. 2022 ರಲ್ಲಿ ದಾಖಲಾದವರಲ್ಲಿ ಹೆಚ್ಚಿನ ಸಂಖ್ಯೆಯವರು ಹೊರಗುಳಿದಿದ್ದಾರೆ ಎಂದು ಹೇಳಿದೆ.

ಕಳೆದ ವಾರ, ಗೃಹ ವ್ಯವಹಾರಗಳ ಇಲಾಖೆಯು ಫೆಡರಲ್ ಸಂಸದೀಯ ವಿಚಾರಣೆಯ ಸಮಯದಲ್ಲಿ ಆಸ್ಟ್ರೇಲಿಯಾದ ವಿಶ್ವವಿದ್ಯಾಲಯಗಳು 2019ರಲ್ಲಿ, 12.5% ರಿಂದ 20.1% ಅರ್ಜಿಗಳನ್ನು ನಿರಾಕರಿಸುತ್ತಿವೆ ಎಂದು ಹೇಳಿತ್ತು. ಆದರೆ ಈಗ ಭಾರತದಿಂದ ಅರ್ಜಿಗಳ ನಿರಾಕರಣೆ ಪ್ರಮಾಣವು 24.3% ಆಗಿದೆ, ಇದು 2012 ರಿಂದ ಅತ್ಯಧಿಕವಾಗಿದೆ ಎಂದು ಹೇಳಿದೆ.

ಆಸ್ಟ್ರೇಲಿಯಾದ ಇಂಟರ್‌ನ್ಯಾಶನಲ್ ಎಜುಕೇಶನ್ ಅಸೋಸಿಯೇಷನ್‌ನ ಮುಖ್ಯ ಕಾರ್ಯನಿರ್ವಾಹಕ ಫಿಲ್ ಹನಿವುಡ್ ವಿಚಾರಣೆಯ ಸಮಯದಲ್ಲಿ, ”ಬೇರೆ ದೇಶಗಳ ಅನೇಕ ಪೋಷಕರು ತಮ್ಮ ಮಕ್ಕಳನ್ನು ವಿದೇಶಕ್ಕೆ ಕಳುಹಿಸಲು ಬಯಸುತ್ತಾರೆ ಮತ್ತು ಸಾಮಾನ್ಯವಾಗಿ ಶಿಕ್ಷಣ ಏಜೆಂಟ್‌ಗಳ ಸಹಾಯವನ್ನು ತೆಗೆದುಕೊಳ್ಳುತ್ತಾರೆ” ಎಂದು ಹೇಳಿದರು.

ಕಳೆದ ತಿಂಗಳು, ನಾಲ್ಕು ವಿಶ್ವವಿದ್ಯಾನಿಲಯಗಳು ಪಂಜಾಬ್ ಮತ್ತು ಹರಿಯಾಣದಂತಹ ನಿರ್ದಿಷ್ಟ ಭಾರತೀಯ ರಾಜ್ಯಗಳಿಂದ ವಿದ್ಯಾರ್ಥಿಗಳ ದಾಖಲಾತಿಯನ್ನು ನಿಷೇಧಿಸಿವೆ ಎಂದು ದಿ ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ವರದಿ ಮಾಡಿದೆ. ಇತರ ಎರಡು ವಿಶ್ವವಿದ್ಯಾನಿಲಯಗಳು ದಾಖಲಾತಿಯನ್ನು ನಿಷೇಧಿಸಿವೆ ಆದರೆ ಯಾವುದೇ ನಿರ್ದಿಷ್ಟ ರಾಜ್ಯವನ್ನು ಉಲ್ಲೇಖಿಸಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...