Homeಮುಖಪುಟವಿಶಾಖಪಟ್ಟಣಂ: ಎಕ್ಸ್‌ಪ್ರೆಸ್ ರೈಲಿನ ಮೂರು ಎಸಿ ಕೋಚ್‌ನಲ್ಲಿ ಬೆಂಕಿ, ಯಾವುದೇ ಪ್ರಾಣಹಾನಿ ಇಲ್ಲ

ವಿಶಾಖಪಟ್ಟಣಂ: ಎಕ್ಸ್‌ಪ್ರೆಸ್ ರೈಲಿನ ಮೂರು ಎಸಿ ಕೋಚ್‌ನಲ್ಲಿ ಬೆಂಕಿ, ಯಾವುದೇ ಪ್ರಾಣಹಾನಿ ಇಲ್ಲ

- Advertisement -
- Advertisement -

ವಿಶಾಖಪಟ್ಟಣಂ ರೈಲು ನಿಲ್ದಾಣದಲ್ಲಿ ಭಾನುವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಮೂರು ಹವಾನಿಯಂತ್ರಿತ ಕೋಚ್‌ಗಳು ಸುಟ್ಟು ಭಸ್ಮವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊರ್ಬಾ-ವಿಶಾಖಪಟ್ಟಣಂ ಎಕ್ಸ್‌ಪ್ರೆಸ್‌ನಲ್ಲಿ (18517) ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಏಕೆಂದರೆ, ಬೆಂಕಿ ಹೊತ್ತಿಕೊಳ್ಳುವ ವೇಳೆಗೆ ಎಲ್ಲಾ ಪ್ರಯಾಣಿಕರು ಕೆಳಗೆ ಇಳಿದಿದ್ದರು. ರೈಲು ಬೆಳಿಗ್ಗೆ ಛತ್ತೀಸ್‌ಗಢದ ಕೊರ್ಬಾದಿಂದ ಪ್ಲಾಟ್‌ಫಾರ್ಮ್ ನಂಬರ್ ನಾಲ್ಕಕ್ಕೆ ಬಂದಿತ್ತು ಮತ್ತು ನಂತರ ತಿರುಪತಿಗೆ ಹೊರಡಬೇಕಿತ್ತು.

ಕೊರ್ಬಾ ಎಕ್ಸ್‌ಪ್ರೆಸ್ ಬೆಳಿಗ್ಗೆ 6.30 ಕ್ಕೆ ಆಗಮಿಸಿತು ಮತ್ತು ಕೋಚಿಂಗ್ ಡಿಪೋಗೆ ನಿರ್ವಹಣೆಗಾಗಿ ಹೋಗಬೇಕಾಗಿತ್ತು ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರೈಲಿಗೆ ಬೀಗ ಹಾಕಲಾಗಿದ್ದು, ವಿದ್ಯುತ್ ಸ್ಥಗಿತಗೊಳಿಸಲಾಗಿದೆ ಎಂದರು.

ಬೆಳಗ್ಗೆ 9.20ರ ಸುಮಾರಿಗೆ ಬಿ7 ಬೋಗಿಯಲ್ಲಿ ಹೊಗೆ ಕಾಣಿಸಿಕೊಂಡಿರುವುದನ್ನು ಗಮನಿಸಿದ ರೈಲ್ವೇ ರಕ್ಷಣಾ ಪಡೆ ಸಿಬ್ಬಂದಿ ಅಧಿಕಾರಿಗಳು ಮತ್ತು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. “ಆಗ ಎಲ್ಲಾ ಪ್ರಯಾಣಿಕರು ರೈಲು ಬಂದ ನಂತರ ಅಲ್ಲಿಂದ ಇಳಿದಿದ್ದರು” ಎಂದು ಅಧಿಕಾರಿ ಹೇಳಿದರು.

ರೈಲ್ವೇ ಅಧಿಕಾರಿಗಳ ಪ್ರಕಾರ, ಬೆಂಕಿ ವೇಗವಾಗಿ ಪಕ್ಕದ ಬೋಗಿಗಳಿಗೆ ವ್ಯಾಪಿಸಿದೆ. ಬಿ7 ಕೋಚ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಬಿ6 ಮತ್ತು ಎಂ1 ಬೋಗಿಗಳು ಭಾಗಶಃ ಹಾನಿಗೊಳಗಾಗಿವೆ. ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದವು.

ಅಪಘಾತದಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಜಂಟಿ ಪೊಲೀಸ್ ಆಯುಕ್ತ ಫಕೀರಪ್ಪ ತಿಳಿಸಿದ್ದಾರೆ. ಬೆಂಕಿಯ ಕಾರಣದ ಬಗ್ಗೆ ರೈಲ್ವೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು.

ಹಾನಿಗೊಳಗಾದ ಬೋಗಿಗಳನ್ನು ಹೊರತುಪಡಿಸಿ, ರೈಲ್ವೇ ಸಿಬ್ಬಂದಿ ನಿರ್ವಹಣೆಗಾಗಿ ರೈಲನ್ನು ಡಿಪೋಗೆ ಸ್ಥಳಾಂತರಿಸಿದರು. ವಿಶಾಖಪಟ್ಟಣಂ ಪೊಲೀಸ್ ಆಯುಕ್ತ ಶಂಕಬ್ರತ ಬಾಗ್ಚಿ ರೈಲು ನಿಲ್ದಾಣಕ್ಕೆ ಭೇಟಿ ನೀಡಿದರು. ಕೋಚ್‌ಗಳಲ್ಲಿ ದಹನಕಾರಿ ವಸ್ತುಗಳು ಇರುವುದರಿಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲು ಸ್ವಲ್ಪ ಸಮಯ ತೆಗೆದುಕೊಂಡರು ಎಂದು ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಇದನ್ನೂ ಓದಿ; ಶಿರೂರು ಭೂಕುಸಿತದಲ್ಲಿ ನಾಪತ್ತೆಯಾದ ಅರ್ಜುನ್ ಮನೆಗೆ ಭೇಟಿ ನೀಡಿದ ಸಿಎಂ ಪಿಣರಾಯಿ ವಿಜಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...