Homeಮುಖಪುಟವಿಶಾಖಪಟ್ಟಣ ಆಂಧ್ರಪ್ರದೇಶದ ಹೊಸ ರಾಜಧಾನಿ: ಸಿಎಂ ಜಗನ್ ಘೋಷಣೆ

ವಿಶಾಖಪಟ್ಟಣ ಆಂಧ್ರಪ್ರದೇಶದ ಹೊಸ ರಾಜಧಾನಿ: ಸಿಎಂ ಜಗನ್ ಘೋಷಣೆ

- Advertisement -
- Advertisement -

ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ವಿಶಾಖಪಟ್ಟಣವನ್ನು ರಾಜ್ಯದ ಹೊಸ ರಾಜಧಾನಿಯಾಗಲಿದೆ ಎಂದು ಘೋಷಿಸಿದ್ದಾರೆ.

ಈ ಬಗ್ಗೆ ಮಂಗಳವಾರ ದೆಹಲಿಯಲ್ಲಿ ಆಯೋಜಿಸಿದ್ದ ಅಂತರಾಷ್ಟ್ರೀಯ ರಾಜತಾಂತ್ರಿಕ ಒಕ್ಕೂಟದ ದುಂಡುಮೇಜಿನ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ”ನಮ್ಮ ರಾಜಧಾನಿ ವಿಶಾಖಪಟ್ಟಣಕ್ಕೆ ನಿಮ್ಮನ್ನು ಆಹ್ವಾನಿಸುತ್ತಿದ್ದೇನೆ. ನಾನು ಕೂಡ ಅಲ್ಲಿಗೆ ಶಿಫ್ಟ್ ಆಗುತ್ತೇನೆ. ಆಂಧ್ರಪ್ರದೇಶದಲ್ಲಿ ವ್ಯಾಪಾರ ಮಾಡುವುದು ಎಷ್ಟು ಸುಲಭ ಎಂಬುದನ್ನು ನೋಡಲು ನಿಮಗೆ ಮತ್ತು ನಿಮ್ಮ ಸಹೋದ್ಯೋಗಿಗಳಿಗೆ ನಾನು ಆಹ್ವಾನ ನೀಡುತ್ತಿದ್ದೇನೆ” ಎಂದು ಸಿಎಂ ರೆಡ್ಡಿ ಹೇಳಿದರು.

ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು, ವ್ಯಾಪಾರವನ್ನು ಸುಲಭಗೊಳಿಸಲು ರಾಜ್ಯವು ಹೇಗೆ ಸತತವಾಗಿ ಮೂರು ಬಾರಿ ದೇಶದಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಒತ್ತಿ ಹೇಳಿದರು.

ಮಾರ್ಚ್ 3 ಮತ್ತು 4 ರಂದು ಎಪಿಯ ಕಾರ್ಯಕಾರಿ ರಾಜಧಾನಿಯಾಗಲಿದೆ ಎಂದು ಸಿಎಂ ಹೇಳಿದ ವಿಶಾಖಪಟ್ಟಣಂನಲ್ಲಿ ಆಯೋಜಿಸಲಾಗುವ ಜಾಗತಿಕ ಹೂಡಿಕೆದಾರರ ಶೃಂಗಸಭೆಗೆ ಹೂಡಿಕೆದಾರರನ್ನು ಸ್ವಾಗತಿಸಿದ ಅವರು, ಈ ಕಾರ್ಯಕ್ರಮವು ರಾಜ್ಯದ ಸಾಮರ್ಥ್ಯ ಮತ್ತು ಲಭ್ಯವಿರುವ ಅವಕಾಶಗಳನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದರು.

ಇದನ್ನೂ ಓದಿ: ತಿರುಪತಿ ದೇವಸ್ಥಾನ: 12.75 ಟನ್‌ ಚಿನ್ನ; ₹16 ಸಾವಿರ ಕೋಟಿ ಠೇವಣಿ; ಒಟ್ಟು ₹2.5 ಲಕ್ಷ ಕೋಟಿಗೂ ಅಧಿಕ…

ಮಾರ್ಚ್ 3 ಮತ್ತು 4 ರಂದು ವಿಶಾಖಪಟ್ಟಣಂ ಆಂದ್ರಪ್ರದೇಶದ ಕಾರ್ಯನಿರ್ವಾಹಕ ರಾಜಧಾನಿಯಾಗಲಿದೆ. ಈ ಕಾರ್ಯಕ್ರಮವು ರಾಜ್ಯದ ಸಾಮರ್ಥ್ಯ ಮತ್ತು ಲಭ್ಯವಿರುವ ಅವಕಾಶಗಳ ಸಮೃದ್ಧಿಯನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿದೆ. ಹಾಗಾಗಿ ಜಾಗತಿಕ ಹೂಡಿಕೆದಾರರ ಶೃಂಗಸಭೆಗೆ ಹೂಡಿಕೆದಾರರನ್ನು ಸ್ವಾಗತಿಸಲಾಗುತ್ತಿದೆ ಎಂದು ಸಿಎಂ ಹೇಳಿದರು.

2021-22ರ ಆರ್ಥಿಕ ವರ್ಷದಲ್ಲಿ ಆಂಧ್ರ ಪ್ರದೇಶವು 11.43% ವರ್ಷದಿಂದ ವರ್ಷಕ್ಕೆ GSDP ಬೆಳವಣಿಗೆ ದರದೊಂದಿಗೆ ದೇಶದಲ್ಲಿ ವೇಗವಾಗಿ ಬೆಳೆಯುತ್ತಿರುವ ರಾಜ್ಯವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿ ಉದ್ಯಮ-ಸ್ನೇಹಿ ಸರ್ಕಾರವಿದೆ. ಹಾಗಾಗಿ ಆಂಧ್ರ ಪ್ರದೇಶವು ಯಾವಾಗಲೂ ಪ್ರಪಂಚದಾದ್ಯಂತದ ವ್ಯವಹಾರಗಳಿಗೆ ಆಕರ್ಷಕ ಆಯ್ಕೆಯಾಗಿದೆ. ನಾವು ಎಲ್ಲಾ ಅನುಮೋದನೆಗಳನ್ನು 21 ದಿನಗಳಿಗಿಂತ ಕಡಿಮೆ ಸಮಯದಲ್ಲೇ ತೆಗೆದುಕೊಳ್ಳುತ್ತದೆ, ಹೀಗಾಗಿ ವ್ಯಾಪಾರ ಮಾಡಲು ಸುಲಭವಾಗುತ್ತದೆ ಎಂದು ಸಿಎಂ ಹೇಳಿದರು.

ರಾಜ್ಯದ ಭವಿಷ್ಯದ ದೃಷ್ಟಿಯಿಂದ ವಿಕೇಂದ್ರೀಕೃತ ಅಭಿವೃದ್ಧಿಯಲ್ಲಿರುವುದರಿಂದ ವಿಶಾಖಪಟ್ಟಣವನ್ನು ರಾಜ್ಯದ ಆಡಳಿತದ ಕೇಂದ್ರವನ್ನಾಗಿ ಈ ಹಿಂದೆಯೇ ರೆಡ್ಡಿ ಸ್ಪಷ್ಟಪಡಿಸಿದ್ದರು.

ವಿಶಾಖಪಟ್ಟಣವು ಪ್ರಧಾನ ಕಛೇರಿಯಾಗಿ, ರಾಜ್ಯದ ರಾಜ್ಯಪಾಲರ ನೆಲೆಯೂ ಆಗಿರುತ್ತದೆ. ಆದರೆ ಶಾಸಕಾಂಗವು ಅಮರಾವತಿಯಿಂದ ಕಾರ್ಯನಿರ್ವಹಿಸುತ್ತದೆ. 1956 ರಲ್ಲಿ ಆಂಧ್ರವನ್ನು ಹಿಂದಿನ ಮದ್ರಾಸ್ ರಾಜ್ಯದಿಂದ ಪ್ರತ್ಯೇಕಿಸಿದಾಗ ರಾಜಧಾನಿಯಾಗಿದ್ದ ಕರ್ನೂಲ್‌ಗೆ ಹೈಕೋರ್ಟ್ ಅನ್ನು ಸ್ಥಳಾಂತರಿಸಲಾಗುವುದು ಎಂದು ಅವರು ಹೇಳಿದ್ದರು.

ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗ ಕಾರ್ಯಗಳ ಸ್ಥಾನಗಳನ್ನು ರಾಜ್ಯಾದ್ಯಂತ ವಿತರಿಸುವುದು, ಸಮಾನವಾದ ಪ್ರಾದೇಶಿಕ ಅಭಿವೃದ್ಧಿಯನ್ನು ಉತ್ತೇಜಿಸುತ್ತದೆ ಎಂದು ರೆಡ್ಡಿ ನಂಬಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...