Homeಮುಖಪುಟವಿಶಾಖಪಟ್ಟಣ ಆಂಧ್ರಪ್ರದೇಶದ ಹೊಸ ರಾಜಧಾನಿ: ಸಿಎಂ ಜಗನ್ ಘೋಷಣೆ

ವಿಶಾಖಪಟ್ಟಣ ಆಂಧ್ರಪ್ರದೇಶದ ಹೊಸ ರಾಜಧಾನಿ: ಸಿಎಂ ಜಗನ್ ಘೋಷಣೆ

- Advertisement -
- Advertisement -

ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ವಿಶಾಖಪಟ್ಟಣವನ್ನು ರಾಜ್ಯದ ಹೊಸ ರಾಜಧಾನಿಯಾಗಲಿದೆ ಎಂದು ಘೋಷಿಸಿದ್ದಾರೆ.

ಈ ಬಗ್ಗೆ ಮಂಗಳವಾರ ದೆಹಲಿಯಲ್ಲಿ ಆಯೋಜಿಸಿದ್ದ ಅಂತರಾಷ್ಟ್ರೀಯ ರಾಜತಾಂತ್ರಿಕ ಒಕ್ಕೂಟದ ದುಂಡುಮೇಜಿನ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ”ನಮ್ಮ ರಾಜಧಾನಿ ವಿಶಾಖಪಟ್ಟಣಕ್ಕೆ ನಿಮ್ಮನ್ನು ಆಹ್ವಾನಿಸುತ್ತಿದ್ದೇನೆ. ನಾನು ಕೂಡ ಅಲ್ಲಿಗೆ ಶಿಫ್ಟ್ ಆಗುತ್ತೇನೆ. ಆಂಧ್ರಪ್ರದೇಶದಲ್ಲಿ ವ್ಯಾಪಾರ ಮಾಡುವುದು ಎಷ್ಟು ಸುಲಭ ಎಂಬುದನ್ನು ನೋಡಲು ನಿಮಗೆ ಮತ್ತು ನಿಮ್ಮ ಸಹೋದ್ಯೋಗಿಗಳಿಗೆ ನಾನು ಆಹ್ವಾನ ನೀಡುತ್ತಿದ್ದೇನೆ” ಎಂದು ಸಿಎಂ ರೆಡ್ಡಿ ಹೇಳಿದರು.

ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು, ವ್ಯಾಪಾರವನ್ನು ಸುಲಭಗೊಳಿಸಲು ರಾಜ್ಯವು ಹೇಗೆ ಸತತವಾಗಿ ಮೂರು ಬಾರಿ ದೇಶದಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಒತ್ತಿ ಹೇಳಿದರು.

ಮಾರ್ಚ್ 3 ಮತ್ತು 4 ರಂದು ಎಪಿಯ ಕಾರ್ಯಕಾರಿ ರಾಜಧಾನಿಯಾಗಲಿದೆ ಎಂದು ಸಿಎಂ ಹೇಳಿದ ವಿಶಾಖಪಟ್ಟಣಂನಲ್ಲಿ ಆಯೋಜಿಸಲಾಗುವ ಜಾಗತಿಕ ಹೂಡಿಕೆದಾರರ ಶೃಂಗಸಭೆಗೆ ಹೂಡಿಕೆದಾರರನ್ನು ಸ್ವಾಗತಿಸಿದ ಅವರು, ಈ ಕಾರ್ಯಕ್ರಮವು ರಾಜ್ಯದ ಸಾಮರ್ಥ್ಯ ಮತ್ತು ಲಭ್ಯವಿರುವ ಅವಕಾಶಗಳನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದರು.

ಇದನ್ನೂ ಓದಿ: ತಿರುಪತಿ ದೇವಸ್ಥಾನ: 12.75 ಟನ್‌ ಚಿನ್ನ; ₹16 ಸಾವಿರ ಕೋಟಿ ಠೇವಣಿ; ಒಟ್ಟು ₹2.5 ಲಕ್ಷ ಕೋಟಿಗೂ ಅಧಿಕ…

ಮಾರ್ಚ್ 3 ಮತ್ತು 4 ರಂದು ವಿಶಾಖಪಟ್ಟಣಂ ಆಂದ್ರಪ್ರದೇಶದ ಕಾರ್ಯನಿರ್ವಾಹಕ ರಾಜಧಾನಿಯಾಗಲಿದೆ. ಈ ಕಾರ್ಯಕ್ರಮವು ರಾಜ್ಯದ ಸಾಮರ್ಥ್ಯ ಮತ್ತು ಲಭ್ಯವಿರುವ ಅವಕಾಶಗಳ ಸಮೃದ್ಧಿಯನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿದೆ. ಹಾಗಾಗಿ ಜಾಗತಿಕ ಹೂಡಿಕೆದಾರರ ಶೃಂಗಸಭೆಗೆ ಹೂಡಿಕೆದಾರರನ್ನು ಸ್ವಾಗತಿಸಲಾಗುತ್ತಿದೆ ಎಂದು ಸಿಎಂ ಹೇಳಿದರು.

2021-22ರ ಆರ್ಥಿಕ ವರ್ಷದಲ್ಲಿ ಆಂಧ್ರ ಪ್ರದೇಶವು 11.43% ವರ್ಷದಿಂದ ವರ್ಷಕ್ಕೆ GSDP ಬೆಳವಣಿಗೆ ದರದೊಂದಿಗೆ ದೇಶದಲ್ಲಿ ವೇಗವಾಗಿ ಬೆಳೆಯುತ್ತಿರುವ ರಾಜ್ಯವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿ ಉದ್ಯಮ-ಸ್ನೇಹಿ ಸರ್ಕಾರವಿದೆ. ಹಾಗಾಗಿ ಆಂಧ್ರ ಪ್ರದೇಶವು ಯಾವಾಗಲೂ ಪ್ರಪಂಚದಾದ್ಯಂತದ ವ್ಯವಹಾರಗಳಿಗೆ ಆಕರ್ಷಕ ಆಯ್ಕೆಯಾಗಿದೆ. ನಾವು ಎಲ್ಲಾ ಅನುಮೋದನೆಗಳನ್ನು 21 ದಿನಗಳಿಗಿಂತ ಕಡಿಮೆ ಸಮಯದಲ್ಲೇ ತೆಗೆದುಕೊಳ್ಳುತ್ತದೆ, ಹೀಗಾಗಿ ವ್ಯಾಪಾರ ಮಾಡಲು ಸುಲಭವಾಗುತ್ತದೆ ಎಂದು ಸಿಎಂ ಹೇಳಿದರು.

ರಾಜ್ಯದ ಭವಿಷ್ಯದ ದೃಷ್ಟಿಯಿಂದ ವಿಕೇಂದ್ರೀಕೃತ ಅಭಿವೃದ್ಧಿಯಲ್ಲಿರುವುದರಿಂದ ವಿಶಾಖಪಟ್ಟಣವನ್ನು ರಾಜ್ಯದ ಆಡಳಿತದ ಕೇಂದ್ರವನ್ನಾಗಿ ಈ ಹಿಂದೆಯೇ ರೆಡ್ಡಿ ಸ್ಪಷ್ಟಪಡಿಸಿದ್ದರು.

ವಿಶಾಖಪಟ್ಟಣವು ಪ್ರಧಾನ ಕಛೇರಿಯಾಗಿ, ರಾಜ್ಯದ ರಾಜ್ಯಪಾಲರ ನೆಲೆಯೂ ಆಗಿರುತ್ತದೆ. ಆದರೆ ಶಾಸಕಾಂಗವು ಅಮರಾವತಿಯಿಂದ ಕಾರ್ಯನಿರ್ವಹಿಸುತ್ತದೆ. 1956 ರಲ್ಲಿ ಆಂಧ್ರವನ್ನು ಹಿಂದಿನ ಮದ್ರಾಸ್ ರಾಜ್ಯದಿಂದ ಪ್ರತ್ಯೇಕಿಸಿದಾಗ ರಾಜಧಾನಿಯಾಗಿದ್ದ ಕರ್ನೂಲ್‌ಗೆ ಹೈಕೋರ್ಟ್ ಅನ್ನು ಸ್ಥಳಾಂತರಿಸಲಾಗುವುದು ಎಂದು ಅವರು ಹೇಳಿದ್ದರು.

ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗ ಕಾರ್ಯಗಳ ಸ್ಥಾನಗಳನ್ನು ರಾಜ್ಯಾದ್ಯಂತ ವಿತರಿಸುವುದು, ಸಮಾನವಾದ ಪ್ರಾದೇಶಿಕ ಅಭಿವೃದ್ಧಿಯನ್ನು ಉತ್ತೇಜಿಸುತ್ತದೆ ಎಂದು ರೆಡ್ಡಿ ನಂಬಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...