Homeಮುಖಪುಟವಿಶಾಖಪಟ್ಟಣ ಆಂಧ್ರಪ್ರದೇಶದ ಹೊಸ ರಾಜಧಾನಿ: ಸಿಎಂ ಜಗನ್ ಘೋಷಣೆ

ವಿಶಾಖಪಟ್ಟಣ ಆಂಧ್ರಪ್ರದೇಶದ ಹೊಸ ರಾಜಧಾನಿ: ಸಿಎಂ ಜಗನ್ ಘೋಷಣೆ

- Advertisement -
- Advertisement -

ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ವಿಶಾಖಪಟ್ಟಣವನ್ನು ರಾಜ್ಯದ ಹೊಸ ರಾಜಧಾನಿಯಾಗಲಿದೆ ಎಂದು ಘೋಷಿಸಿದ್ದಾರೆ.

ಈ ಬಗ್ಗೆ ಮಂಗಳವಾರ ದೆಹಲಿಯಲ್ಲಿ ಆಯೋಜಿಸಿದ್ದ ಅಂತರಾಷ್ಟ್ರೀಯ ರಾಜತಾಂತ್ರಿಕ ಒಕ್ಕೂಟದ ದುಂಡುಮೇಜಿನ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ”ನಮ್ಮ ರಾಜಧಾನಿ ವಿಶಾಖಪಟ್ಟಣಕ್ಕೆ ನಿಮ್ಮನ್ನು ಆಹ್ವಾನಿಸುತ್ತಿದ್ದೇನೆ. ನಾನು ಕೂಡ ಅಲ್ಲಿಗೆ ಶಿಫ್ಟ್ ಆಗುತ್ತೇನೆ. ಆಂಧ್ರಪ್ರದೇಶದಲ್ಲಿ ವ್ಯಾಪಾರ ಮಾಡುವುದು ಎಷ್ಟು ಸುಲಭ ಎಂಬುದನ್ನು ನೋಡಲು ನಿಮಗೆ ಮತ್ತು ನಿಮ್ಮ ಸಹೋದ್ಯೋಗಿಗಳಿಗೆ ನಾನು ಆಹ್ವಾನ ನೀಡುತ್ತಿದ್ದೇನೆ” ಎಂದು ಸಿಎಂ ರೆಡ್ಡಿ ಹೇಳಿದರು.

ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು, ವ್ಯಾಪಾರವನ್ನು ಸುಲಭಗೊಳಿಸಲು ರಾಜ್ಯವು ಹೇಗೆ ಸತತವಾಗಿ ಮೂರು ಬಾರಿ ದೇಶದಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಒತ್ತಿ ಹೇಳಿದರು.

ಮಾರ್ಚ್ 3 ಮತ್ತು 4 ರಂದು ಎಪಿಯ ಕಾರ್ಯಕಾರಿ ರಾಜಧಾನಿಯಾಗಲಿದೆ ಎಂದು ಸಿಎಂ ಹೇಳಿದ ವಿಶಾಖಪಟ್ಟಣಂನಲ್ಲಿ ಆಯೋಜಿಸಲಾಗುವ ಜಾಗತಿಕ ಹೂಡಿಕೆದಾರರ ಶೃಂಗಸಭೆಗೆ ಹೂಡಿಕೆದಾರರನ್ನು ಸ್ವಾಗತಿಸಿದ ಅವರು, ಈ ಕಾರ್ಯಕ್ರಮವು ರಾಜ್ಯದ ಸಾಮರ್ಥ್ಯ ಮತ್ತು ಲಭ್ಯವಿರುವ ಅವಕಾಶಗಳನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದರು.

ಇದನ್ನೂ ಓದಿ: ತಿರುಪತಿ ದೇವಸ್ಥಾನ: 12.75 ಟನ್‌ ಚಿನ್ನ; ₹16 ಸಾವಿರ ಕೋಟಿ ಠೇವಣಿ; ಒಟ್ಟು ₹2.5 ಲಕ್ಷ ಕೋಟಿಗೂ ಅಧಿಕ…

ಮಾರ್ಚ್ 3 ಮತ್ತು 4 ರಂದು ವಿಶಾಖಪಟ್ಟಣಂ ಆಂದ್ರಪ್ರದೇಶದ ಕಾರ್ಯನಿರ್ವಾಹಕ ರಾಜಧಾನಿಯಾಗಲಿದೆ. ಈ ಕಾರ್ಯಕ್ರಮವು ರಾಜ್ಯದ ಸಾಮರ್ಥ್ಯ ಮತ್ತು ಲಭ್ಯವಿರುವ ಅವಕಾಶಗಳ ಸಮೃದ್ಧಿಯನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿದೆ. ಹಾಗಾಗಿ ಜಾಗತಿಕ ಹೂಡಿಕೆದಾರರ ಶೃಂಗಸಭೆಗೆ ಹೂಡಿಕೆದಾರರನ್ನು ಸ್ವಾಗತಿಸಲಾಗುತ್ತಿದೆ ಎಂದು ಸಿಎಂ ಹೇಳಿದರು.

2021-22ರ ಆರ್ಥಿಕ ವರ್ಷದಲ್ಲಿ ಆಂಧ್ರ ಪ್ರದೇಶವು 11.43% ವರ್ಷದಿಂದ ವರ್ಷಕ್ಕೆ GSDP ಬೆಳವಣಿಗೆ ದರದೊಂದಿಗೆ ದೇಶದಲ್ಲಿ ವೇಗವಾಗಿ ಬೆಳೆಯುತ್ತಿರುವ ರಾಜ್ಯವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿ ಉದ್ಯಮ-ಸ್ನೇಹಿ ಸರ್ಕಾರವಿದೆ. ಹಾಗಾಗಿ ಆಂಧ್ರ ಪ್ರದೇಶವು ಯಾವಾಗಲೂ ಪ್ರಪಂಚದಾದ್ಯಂತದ ವ್ಯವಹಾರಗಳಿಗೆ ಆಕರ್ಷಕ ಆಯ್ಕೆಯಾಗಿದೆ. ನಾವು ಎಲ್ಲಾ ಅನುಮೋದನೆಗಳನ್ನು 21 ದಿನಗಳಿಗಿಂತ ಕಡಿಮೆ ಸಮಯದಲ್ಲೇ ತೆಗೆದುಕೊಳ್ಳುತ್ತದೆ, ಹೀಗಾಗಿ ವ್ಯಾಪಾರ ಮಾಡಲು ಸುಲಭವಾಗುತ್ತದೆ ಎಂದು ಸಿಎಂ ಹೇಳಿದರು.

ರಾಜ್ಯದ ಭವಿಷ್ಯದ ದೃಷ್ಟಿಯಿಂದ ವಿಕೇಂದ್ರೀಕೃತ ಅಭಿವೃದ್ಧಿಯಲ್ಲಿರುವುದರಿಂದ ವಿಶಾಖಪಟ್ಟಣವನ್ನು ರಾಜ್ಯದ ಆಡಳಿತದ ಕೇಂದ್ರವನ್ನಾಗಿ ಈ ಹಿಂದೆಯೇ ರೆಡ್ಡಿ ಸ್ಪಷ್ಟಪಡಿಸಿದ್ದರು.

ವಿಶಾಖಪಟ್ಟಣವು ಪ್ರಧಾನ ಕಛೇರಿಯಾಗಿ, ರಾಜ್ಯದ ರಾಜ್ಯಪಾಲರ ನೆಲೆಯೂ ಆಗಿರುತ್ತದೆ. ಆದರೆ ಶಾಸಕಾಂಗವು ಅಮರಾವತಿಯಿಂದ ಕಾರ್ಯನಿರ್ವಹಿಸುತ್ತದೆ. 1956 ರಲ್ಲಿ ಆಂಧ್ರವನ್ನು ಹಿಂದಿನ ಮದ್ರಾಸ್ ರಾಜ್ಯದಿಂದ ಪ್ರತ್ಯೇಕಿಸಿದಾಗ ರಾಜಧಾನಿಯಾಗಿದ್ದ ಕರ್ನೂಲ್‌ಗೆ ಹೈಕೋರ್ಟ್ ಅನ್ನು ಸ್ಥಳಾಂತರಿಸಲಾಗುವುದು ಎಂದು ಅವರು ಹೇಳಿದ್ದರು.

ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗ ಕಾರ್ಯಗಳ ಸ್ಥಾನಗಳನ್ನು ರಾಜ್ಯಾದ್ಯಂತ ವಿತರಿಸುವುದು, ಸಮಾನವಾದ ಪ್ರಾದೇಶಿಕ ಅಭಿವೃದ್ಧಿಯನ್ನು ಉತ್ತೇಜಿಸುತ್ತದೆ ಎಂದು ರೆಡ್ಡಿ ನಂಬಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...