Homeಮುಖಪುಟವಿಶಾಖಪಟ್ಟಣ ಆಂಧ್ರಪ್ರದೇಶದ ಹೊಸ ರಾಜಧಾನಿ: ಸಿಎಂ ಜಗನ್ ಘೋಷಣೆ

ವಿಶಾಖಪಟ್ಟಣ ಆಂಧ್ರಪ್ರದೇಶದ ಹೊಸ ರಾಜಧಾನಿ: ಸಿಎಂ ಜಗನ್ ಘೋಷಣೆ

- Advertisement -
- Advertisement -

ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ವಿಶಾಖಪಟ್ಟಣವನ್ನು ರಾಜ್ಯದ ಹೊಸ ರಾಜಧಾನಿಯಾಗಲಿದೆ ಎಂದು ಘೋಷಿಸಿದ್ದಾರೆ.

ಈ ಬಗ್ಗೆ ಮಂಗಳವಾರ ದೆಹಲಿಯಲ್ಲಿ ಆಯೋಜಿಸಿದ್ದ ಅಂತರಾಷ್ಟ್ರೀಯ ರಾಜತಾಂತ್ರಿಕ ಒಕ್ಕೂಟದ ದುಂಡುಮೇಜಿನ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ”ನಮ್ಮ ರಾಜಧಾನಿ ವಿಶಾಖಪಟ್ಟಣಕ್ಕೆ ನಿಮ್ಮನ್ನು ಆಹ್ವಾನಿಸುತ್ತಿದ್ದೇನೆ. ನಾನು ಕೂಡ ಅಲ್ಲಿಗೆ ಶಿಫ್ಟ್ ಆಗುತ್ತೇನೆ. ಆಂಧ್ರಪ್ರದೇಶದಲ್ಲಿ ವ್ಯಾಪಾರ ಮಾಡುವುದು ಎಷ್ಟು ಸುಲಭ ಎಂಬುದನ್ನು ನೋಡಲು ನಿಮಗೆ ಮತ್ತು ನಿಮ್ಮ ಸಹೋದ್ಯೋಗಿಗಳಿಗೆ ನಾನು ಆಹ್ವಾನ ನೀಡುತ್ತಿದ್ದೇನೆ” ಎಂದು ಸಿಎಂ ರೆಡ್ಡಿ ಹೇಳಿದರು.

ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು, ವ್ಯಾಪಾರವನ್ನು ಸುಲಭಗೊಳಿಸಲು ರಾಜ್ಯವು ಹೇಗೆ ಸತತವಾಗಿ ಮೂರು ಬಾರಿ ದೇಶದಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಒತ್ತಿ ಹೇಳಿದರು.

ಮಾರ್ಚ್ 3 ಮತ್ತು 4 ರಂದು ಎಪಿಯ ಕಾರ್ಯಕಾರಿ ರಾಜಧಾನಿಯಾಗಲಿದೆ ಎಂದು ಸಿಎಂ ಹೇಳಿದ ವಿಶಾಖಪಟ್ಟಣಂನಲ್ಲಿ ಆಯೋಜಿಸಲಾಗುವ ಜಾಗತಿಕ ಹೂಡಿಕೆದಾರರ ಶೃಂಗಸಭೆಗೆ ಹೂಡಿಕೆದಾರರನ್ನು ಸ್ವಾಗತಿಸಿದ ಅವರು, ಈ ಕಾರ್ಯಕ್ರಮವು ರಾಜ್ಯದ ಸಾಮರ್ಥ್ಯ ಮತ್ತು ಲಭ್ಯವಿರುವ ಅವಕಾಶಗಳನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದರು.

ಇದನ್ನೂ ಓದಿ: ತಿರುಪತಿ ದೇವಸ್ಥಾನ: 12.75 ಟನ್‌ ಚಿನ್ನ; ₹16 ಸಾವಿರ ಕೋಟಿ ಠೇವಣಿ; ಒಟ್ಟು ₹2.5 ಲಕ್ಷ ಕೋಟಿಗೂ ಅಧಿಕ…

ಮಾರ್ಚ್ 3 ಮತ್ತು 4 ರಂದು ವಿಶಾಖಪಟ್ಟಣಂ ಆಂದ್ರಪ್ರದೇಶದ ಕಾರ್ಯನಿರ್ವಾಹಕ ರಾಜಧಾನಿಯಾಗಲಿದೆ. ಈ ಕಾರ್ಯಕ್ರಮವು ರಾಜ್ಯದ ಸಾಮರ್ಥ್ಯ ಮತ್ತು ಲಭ್ಯವಿರುವ ಅವಕಾಶಗಳ ಸಮೃದ್ಧಿಯನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿದೆ. ಹಾಗಾಗಿ ಜಾಗತಿಕ ಹೂಡಿಕೆದಾರರ ಶೃಂಗಸಭೆಗೆ ಹೂಡಿಕೆದಾರರನ್ನು ಸ್ವಾಗತಿಸಲಾಗುತ್ತಿದೆ ಎಂದು ಸಿಎಂ ಹೇಳಿದರು.

2021-22ರ ಆರ್ಥಿಕ ವರ್ಷದಲ್ಲಿ ಆಂಧ್ರ ಪ್ರದೇಶವು 11.43% ವರ್ಷದಿಂದ ವರ್ಷಕ್ಕೆ GSDP ಬೆಳವಣಿಗೆ ದರದೊಂದಿಗೆ ದೇಶದಲ್ಲಿ ವೇಗವಾಗಿ ಬೆಳೆಯುತ್ತಿರುವ ರಾಜ್ಯವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿ ಉದ್ಯಮ-ಸ್ನೇಹಿ ಸರ್ಕಾರವಿದೆ. ಹಾಗಾಗಿ ಆಂಧ್ರ ಪ್ರದೇಶವು ಯಾವಾಗಲೂ ಪ್ರಪಂಚದಾದ್ಯಂತದ ವ್ಯವಹಾರಗಳಿಗೆ ಆಕರ್ಷಕ ಆಯ್ಕೆಯಾಗಿದೆ. ನಾವು ಎಲ್ಲಾ ಅನುಮೋದನೆಗಳನ್ನು 21 ದಿನಗಳಿಗಿಂತ ಕಡಿಮೆ ಸಮಯದಲ್ಲೇ ತೆಗೆದುಕೊಳ್ಳುತ್ತದೆ, ಹೀಗಾಗಿ ವ್ಯಾಪಾರ ಮಾಡಲು ಸುಲಭವಾಗುತ್ತದೆ ಎಂದು ಸಿಎಂ ಹೇಳಿದರು.

ರಾಜ್ಯದ ಭವಿಷ್ಯದ ದೃಷ್ಟಿಯಿಂದ ವಿಕೇಂದ್ರೀಕೃತ ಅಭಿವೃದ್ಧಿಯಲ್ಲಿರುವುದರಿಂದ ವಿಶಾಖಪಟ್ಟಣವನ್ನು ರಾಜ್ಯದ ಆಡಳಿತದ ಕೇಂದ್ರವನ್ನಾಗಿ ಈ ಹಿಂದೆಯೇ ರೆಡ್ಡಿ ಸ್ಪಷ್ಟಪಡಿಸಿದ್ದರು.

ವಿಶಾಖಪಟ್ಟಣವು ಪ್ರಧಾನ ಕಛೇರಿಯಾಗಿ, ರಾಜ್ಯದ ರಾಜ್ಯಪಾಲರ ನೆಲೆಯೂ ಆಗಿರುತ್ತದೆ. ಆದರೆ ಶಾಸಕಾಂಗವು ಅಮರಾವತಿಯಿಂದ ಕಾರ್ಯನಿರ್ವಹಿಸುತ್ತದೆ. 1956 ರಲ್ಲಿ ಆಂಧ್ರವನ್ನು ಹಿಂದಿನ ಮದ್ರಾಸ್ ರಾಜ್ಯದಿಂದ ಪ್ರತ್ಯೇಕಿಸಿದಾಗ ರಾಜಧಾನಿಯಾಗಿದ್ದ ಕರ್ನೂಲ್‌ಗೆ ಹೈಕೋರ್ಟ್ ಅನ್ನು ಸ್ಥಳಾಂತರಿಸಲಾಗುವುದು ಎಂದು ಅವರು ಹೇಳಿದ್ದರು.

ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗ ಕಾರ್ಯಗಳ ಸ್ಥಾನಗಳನ್ನು ರಾಜ್ಯಾದ್ಯಂತ ವಿತರಿಸುವುದು, ಸಮಾನವಾದ ಪ್ರಾದೇಶಿಕ ಅಭಿವೃದ್ಧಿಯನ್ನು ಉತ್ತೇಜಿಸುತ್ತದೆ ಎಂದು ರೆಡ್ಡಿ ನಂಬಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...