Homeರಾಷ್ಟ್ರೀಯ‘ನಿಮ್ಮ ನೋವು ನಮ್ಮದೂ ಕೂಡಾ’: ಬಹುಸಂಖ್ಯಾತ ಹಿಂದೂಗಳ ಪರವಾಗಿ ಭಾರತೀಯ ಮುಸ್ಲಿಮರನ್ನು ಬೆಂಬಲಿಸಿದ ಸಂಗೀತಗಾರ ವಿಶಾಲ್...

‘ನಿಮ್ಮ ನೋವು ನಮ್ಮದೂ ಕೂಡಾ’: ಬಹುಸಂಖ್ಯಾತ ಹಿಂದೂಗಳ ಪರವಾಗಿ ಭಾರತೀಯ ಮುಸ್ಲಿಮರನ್ನು ಬೆಂಬಲಿಸಿದ ಸಂಗೀತಗಾರ ವಿಶಾಲ್ ದದ್ಲಾನಿ

- Advertisement -
- Advertisement -

ಬಿಜೆಪಿಯ ಮಾಜಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರು ಪ್ರವಾದಿ ಮುಹಮ್ಮದ್ ಅವರನ್ನು ಅವಹೇಳನ ಮಾಡಿರುವ ಕುರಿತು ನಡೆಯುತ್ತಿರುವ ವಿವಾದಗಳ ನಡುವೆ, ಭಾರತದ ಮುಸ್ಲಿಮರ ಪರವಾಗಿ ಮಾತನಾಡಿದ್ದಕ್ಕಾಗಿ ಸಂಗೀತಗಾರ ವಿಶಾಲ್ ದದ್ಲಾನಿ ಅವರನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಗುರುವಾರ ಶ್ಲಾಘಿಸಿದ್ದಾರೆ.

ಸಂಗೀತಗಾರ ವಿಶಾಲ್ ದಾದ್ಲಾನಿ ಅವರು ಟ್ವೀಟರ್‌‌ನಲ್ಲಿ, “ಬಹುಸಂಖ್ಯಾತ ಭಾರತೀಯ ಹಿಂದೂಗಳ ಪರವಾಗಿ ನಾನು ಭಾರತೀಯ ಮುಸ್ಲಿಮರಿಗೆ ಇದನ್ನು ಹೇಳಲು ಬಯಸುತ್ತೇನೆ. ನಿಮ್ಮನ್ನು ನೋಡಿಕೊಳ್ಳಲಾಗಿದೆ, ಕೇಳಿಸಿಕೊಳ್ಳಲಾಗಿದೆ, ಪ್ರೀತಿಸಲಾಗಿದೆ ಮತ್ತು ಸಲಹಲಾಗಿದೆ. ನಿಮ್ಮ ನೋವು ನಮ್ಮ ನೋವೇ ಆಗಿದೆ. ನಿಮ್ಮ ದೇಶಭಕ್ತಿ ಪ್ರಶ್ನಾರ್ಹವಲ್ಲ. ನಿಮ್ಮ ಗುರುತು ಭಾರತಕ್ಕೆ ಅಥವಾ ಬೇರೆ ಯಾವುದೇ ಧರ್ಮಕ್ಕೆ ಬೆದರಿಕೆಯಲ್ಲ. ನಾವು ಒಂದು ರಾಷ್ಟ್ರವಾಗಿದ್ದು, ಒಂದು ಕುಟುಂಬವಾಗಿದ್ದೇವೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದಕ್ಕೆ ಪ್ರತಿಕ್ರಿಯಿಸಿರುವ ಸಂಸದ ಶಶಿ ತರೂರ್‌‌, ವಿಶಾಲ್ ದದ್ಲಾನಿ ಅವರ ಭಾವನೆಗಳನ್ನು ನಾನು ಆತ್ಮೀಯವಾಗಿ ಪ್ರತಿಧ್ವನಿಸುತ್ತೇನೆ ಎಂದು ಹೇಳಿದ್ದು, “ಮೌನವಾಗಿರುವ ದೊಡ್ಡ ಬಹುಸಂಖ್ಯಾತರ ಪರವಾಗಿ ಮಾಡಿದ್ದಕ್ಕೆ ಶಭಾಷ್‌” ಎಂದು ಹೇಳಿದ್ದಾರೆ.

ದದ್ಲಾನಿ ಅವರು ಅದೇ ವಿಚಾರವಾಗಿ ಮತ್ತೊಂದು ಟ್ವೀಟ್ ಕೂಡಾ ಮಾಡಿದ್ದು, ನಮ್ಮನ್ನು ವಿಭಜಿಸಲು ಪ್ರಯತ್ನಿಸುತ್ತಿರುವವರನ್ನು ಗೆಲ್ಲಲು ಬಿಡಬೇಡಿ ಎಂದು ಎಲ್ಲಾ ಭಾರತೀಯರನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: “ವಿವೇಕಾನಂದರು ಮುಸ್ಲಿಂ ದೇಹಶಕ್ತಿಯಿಂದ, ಹಿಂದೂ ಬುದ್ಧಿಶಕ್ತಿಯಿಂದ ದೇಶ ಕಟ್ಟಿ ಅಂದವುರೆ ಸಾ”

ಟ್ವೀಟ್‌ನಲ್ಲಿ ಅವರು, “ನಾನು ಇದನ್ನು ಎಲ್ಲಾ ಭಾರತೀಯರಿಗೆ ಹೇಳಲು ಬಯಸುತ್ತೇನೆ. ಭಾರತೀಯ ರಾಜಕೀಯದ ಕೊಳಕು ಸ್ವಭಾವದ ಬಗ್ಗೆ ನಾನು ನಿಜವಾಗಿಯೂ ವಿಷಾದಿಸುತ್ತೇನೆ. ನಾವು ಪ್ರತಿಯೊಬ್ಬರೂ ಏಕಾಂಗಿಯಾಗಿ ನಿಲ್ಲುವವರೆಗೆ ಅದು ನಮ್ಮನ್ನು ಸಣ್ಣ ಮತ್ತು ಸಣ್ಣ ಗುಂಪುಗಳಾಗಿ ವಿಭಜಿಸುತ್ತದೆ” ಎಂದು ಅವರು ಹೇಳಿದ್ದಾರೆ.

“ವಿಭಜನೆ ಮಾಡುವವರು ವೈಯಕ್ತಿಕ ಲಾಭಕ್ಕಾಗಿ ಇದನ್ನು ಮಾಡುತ್ತಿದ್ದಾರೆಯೆ ಹೊರತು, ಜನರಿಗಾಗಿ ಅಲ್ಲ, ಅವರನ್ನು ಗೆಲ್ಲಲು ಬಿಡಬೇಡಿ” ಎಂದು ಅವರು ಹೇಳಿದ್ದಾರೆ.

ಇರಾನ್, ಇರಾಕ್, ಕುವೈತ್, ಕತಾರ್, ಸೌದಿ ಅರೇಬಿಯಾ, ಒಮಾನ್, ಯುಎಇ ಸೇರಿದಂತೆ ಕನಿಷ್ಠ 15 ರಾಷ್ಟ್ರಗಳಿಂದ ತೀವ್ರ ಪ್ರತಿಕ್ರಿಯೆಗಳು ಮತ್ತು ಅಧಿಕೃತ ಪ್ರತಿಭಟನೆಗಳನ್ನು ಉಂಟುಮಾಡಿದ ನೂಪುರ್ ಶರ್ಮಾ ಅವರು ಹೇಳಿಕೆಯ ಬಗ್ಗೆ ಬಿಜೆಪಿ ಕ್ರಮ ಕೈಗೊಂಡಿದ್ದು, ಪಕ್ಷದಿಂದ ಅಮಾನತುಗೊಳಿಸಿದೆ.

ಇದನ್ನೂ ಓದಿ: ದನ ಸಾಗಿಸುತ್ತಿದ್ದ ಮುಸ್ಲಿಂ ವ್ಯಕ್ತಿಯನ್ನು ಹೊಡೆದು ಕೊಂದಿದ್ದು ಮತ್ತು ಕಾಶ್ಮೀರ ನರಮೇಧಕ್ಕೂ ಯಾವುದೇ ವ್ಯತ್ಯಾಸ ಇಲ್ಲ: ಖ್ಯಾತ ನಟಿ ಸಾಯಿ ಪಲ್ಲವಿ

ನೂಪುರ್ ಶರ್ಮಾ ವಿರುದ್ಧ ಮಹಾರಾಷ್ಟ್ರ ಮತ್ತು ಇತರ ರಾಜ್ಯಗಳಲ್ಲಿ ಹಲವಾರು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಪ್ರವಾದಿ ಮುಹಮ್ಮದ್ ಅವರ ಕುರಿತು ಹೇಳಿಕೆ ನೀಡಿದ ಮತ್ತೊಬ್ಬ ವಕ್ತಾರ ನವೀನ್ ಜಿಂದಾಲ್ ಅವರನ್ನೂ ಬಿಜೆಪಿ ವಜಾಗೊಳಿಸಿದೆ. ಈ ಮಧ್ಯೆ, ನೂಪುರ್ ಶರ್ಮಾ ಅವರು ತಮ್ಮ ಹೇಳಿಕೆಯನ್ನು ದಾಖಲಿಸಲು ಮಹಾರಾಷ್ಟ್ರ ಪೊಲೀಸರ ಮುಂದೆ ಹಾಜರಾಗಲು ನಾಲ್ಕು ವಾರಗಳ ಕಾಲಾವಕಾಶ ಕೋರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...