Homeರಾಷ್ಟ್ರೀಯ‘ನಿಮ್ಮ ನೋವು ನಮ್ಮದೂ ಕೂಡಾ’: ಬಹುಸಂಖ್ಯಾತ ಹಿಂದೂಗಳ ಪರವಾಗಿ ಭಾರತೀಯ ಮುಸ್ಲಿಮರನ್ನು ಬೆಂಬಲಿಸಿದ ಸಂಗೀತಗಾರ ವಿಶಾಲ್...

‘ನಿಮ್ಮ ನೋವು ನಮ್ಮದೂ ಕೂಡಾ’: ಬಹುಸಂಖ್ಯಾತ ಹಿಂದೂಗಳ ಪರವಾಗಿ ಭಾರತೀಯ ಮುಸ್ಲಿಮರನ್ನು ಬೆಂಬಲಿಸಿದ ಸಂಗೀತಗಾರ ವಿಶಾಲ್ ದದ್ಲಾನಿ

- Advertisement -
- Advertisement -

ಬಿಜೆಪಿಯ ಮಾಜಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರು ಪ್ರವಾದಿ ಮುಹಮ್ಮದ್ ಅವರನ್ನು ಅವಹೇಳನ ಮಾಡಿರುವ ಕುರಿತು ನಡೆಯುತ್ತಿರುವ ವಿವಾದಗಳ ನಡುವೆ, ಭಾರತದ ಮುಸ್ಲಿಮರ ಪರವಾಗಿ ಮಾತನಾಡಿದ್ದಕ್ಕಾಗಿ ಸಂಗೀತಗಾರ ವಿಶಾಲ್ ದದ್ಲಾನಿ ಅವರನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಗುರುವಾರ ಶ್ಲಾಘಿಸಿದ್ದಾರೆ.

ಸಂಗೀತಗಾರ ವಿಶಾಲ್ ದಾದ್ಲಾನಿ ಅವರು ಟ್ವೀಟರ್‌‌ನಲ್ಲಿ, “ಬಹುಸಂಖ್ಯಾತ ಭಾರತೀಯ ಹಿಂದೂಗಳ ಪರವಾಗಿ ನಾನು ಭಾರತೀಯ ಮುಸ್ಲಿಮರಿಗೆ ಇದನ್ನು ಹೇಳಲು ಬಯಸುತ್ತೇನೆ. ನಿಮ್ಮನ್ನು ನೋಡಿಕೊಳ್ಳಲಾಗಿದೆ, ಕೇಳಿಸಿಕೊಳ್ಳಲಾಗಿದೆ, ಪ್ರೀತಿಸಲಾಗಿದೆ ಮತ್ತು ಸಲಹಲಾಗಿದೆ. ನಿಮ್ಮ ನೋವು ನಮ್ಮ ನೋವೇ ಆಗಿದೆ. ನಿಮ್ಮ ದೇಶಭಕ್ತಿ ಪ್ರಶ್ನಾರ್ಹವಲ್ಲ. ನಿಮ್ಮ ಗುರುತು ಭಾರತಕ್ಕೆ ಅಥವಾ ಬೇರೆ ಯಾವುದೇ ಧರ್ಮಕ್ಕೆ ಬೆದರಿಕೆಯಲ್ಲ. ನಾವು ಒಂದು ರಾಷ್ಟ್ರವಾಗಿದ್ದು, ಒಂದು ಕುಟುಂಬವಾಗಿದ್ದೇವೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದಕ್ಕೆ ಪ್ರತಿಕ್ರಿಯಿಸಿರುವ ಸಂಸದ ಶಶಿ ತರೂರ್‌‌, ವಿಶಾಲ್ ದದ್ಲಾನಿ ಅವರ ಭಾವನೆಗಳನ್ನು ನಾನು ಆತ್ಮೀಯವಾಗಿ ಪ್ರತಿಧ್ವನಿಸುತ್ತೇನೆ ಎಂದು ಹೇಳಿದ್ದು, “ಮೌನವಾಗಿರುವ ದೊಡ್ಡ ಬಹುಸಂಖ್ಯಾತರ ಪರವಾಗಿ ಮಾಡಿದ್ದಕ್ಕೆ ಶಭಾಷ್‌” ಎಂದು ಹೇಳಿದ್ದಾರೆ.

ದದ್ಲಾನಿ ಅವರು ಅದೇ ವಿಚಾರವಾಗಿ ಮತ್ತೊಂದು ಟ್ವೀಟ್ ಕೂಡಾ ಮಾಡಿದ್ದು, ನಮ್ಮನ್ನು ವಿಭಜಿಸಲು ಪ್ರಯತ್ನಿಸುತ್ತಿರುವವರನ್ನು ಗೆಲ್ಲಲು ಬಿಡಬೇಡಿ ಎಂದು ಎಲ್ಲಾ ಭಾರತೀಯರನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: “ವಿವೇಕಾನಂದರು ಮುಸ್ಲಿಂ ದೇಹಶಕ್ತಿಯಿಂದ, ಹಿಂದೂ ಬುದ್ಧಿಶಕ್ತಿಯಿಂದ ದೇಶ ಕಟ್ಟಿ ಅಂದವುರೆ ಸಾ”

ಟ್ವೀಟ್‌ನಲ್ಲಿ ಅವರು, “ನಾನು ಇದನ್ನು ಎಲ್ಲಾ ಭಾರತೀಯರಿಗೆ ಹೇಳಲು ಬಯಸುತ್ತೇನೆ. ಭಾರತೀಯ ರಾಜಕೀಯದ ಕೊಳಕು ಸ್ವಭಾವದ ಬಗ್ಗೆ ನಾನು ನಿಜವಾಗಿಯೂ ವಿಷಾದಿಸುತ್ತೇನೆ. ನಾವು ಪ್ರತಿಯೊಬ್ಬರೂ ಏಕಾಂಗಿಯಾಗಿ ನಿಲ್ಲುವವರೆಗೆ ಅದು ನಮ್ಮನ್ನು ಸಣ್ಣ ಮತ್ತು ಸಣ್ಣ ಗುಂಪುಗಳಾಗಿ ವಿಭಜಿಸುತ್ತದೆ” ಎಂದು ಅವರು ಹೇಳಿದ್ದಾರೆ.

“ವಿಭಜನೆ ಮಾಡುವವರು ವೈಯಕ್ತಿಕ ಲಾಭಕ್ಕಾಗಿ ಇದನ್ನು ಮಾಡುತ್ತಿದ್ದಾರೆಯೆ ಹೊರತು, ಜನರಿಗಾಗಿ ಅಲ್ಲ, ಅವರನ್ನು ಗೆಲ್ಲಲು ಬಿಡಬೇಡಿ” ಎಂದು ಅವರು ಹೇಳಿದ್ದಾರೆ.

ಇರಾನ್, ಇರಾಕ್, ಕುವೈತ್, ಕತಾರ್, ಸೌದಿ ಅರೇಬಿಯಾ, ಒಮಾನ್, ಯುಎಇ ಸೇರಿದಂತೆ ಕನಿಷ್ಠ 15 ರಾಷ್ಟ್ರಗಳಿಂದ ತೀವ್ರ ಪ್ರತಿಕ್ರಿಯೆಗಳು ಮತ್ತು ಅಧಿಕೃತ ಪ್ರತಿಭಟನೆಗಳನ್ನು ಉಂಟುಮಾಡಿದ ನೂಪುರ್ ಶರ್ಮಾ ಅವರು ಹೇಳಿಕೆಯ ಬಗ್ಗೆ ಬಿಜೆಪಿ ಕ್ರಮ ಕೈಗೊಂಡಿದ್ದು, ಪಕ್ಷದಿಂದ ಅಮಾನತುಗೊಳಿಸಿದೆ.

ಇದನ್ನೂ ಓದಿ: ದನ ಸಾಗಿಸುತ್ತಿದ್ದ ಮುಸ್ಲಿಂ ವ್ಯಕ್ತಿಯನ್ನು ಹೊಡೆದು ಕೊಂದಿದ್ದು ಮತ್ತು ಕಾಶ್ಮೀರ ನರಮೇಧಕ್ಕೂ ಯಾವುದೇ ವ್ಯತ್ಯಾಸ ಇಲ್ಲ: ಖ್ಯಾತ ನಟಿ ಸಾಯಿ ಪಲ್ಲವಿ

ನೂಪುರ್ ಶರ್ಮಾ ವಿರುದ್ಧ ಮಹಾರಾಷ್ಟ್ರ ಮತ್ತು ಇತರ ರಾಜ್ಯಗಳಲ್ಲಿ ಹಲವಾರು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಪ್ರವಾದಿ ಮುಹಮ್ಮದ್ ಅವರ ಕುರಿತು ಹೇಳಿಕೆ ನೀಡಿದ ಮತ್ತೊಬ್ಬ ವಕ್ತಾರ ನವೀನ್ ಜಿಂದಾಲ್ ಅವರನ್ನೂ ಬಿಜೆಪಿ ವಜಾಗೊಳಿಸಿದೆ. ಈ ಮಧ್ಯೆ, ನೂಪುರ್ ಶರ್ಮಾ ಅವರು ತಮ್ಮ ಹೇಳಿಕೆಯನ್ನು ದಾಖಲಿಸಲು ಮಹಾರಾಷ್ಟ್ರ ಪೊಲೀಸರ ಮುಂದೆ ಹಾಜರಾಗಲು ನಾಲ್ಕು ವಾರಗಳ ಕಾಲಾವಕಾಶ ಕೋರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....