Homeರಾಷ್ಟ್ರೀಯ‘ನಿಮ್ಮ ನೋವು ನಮ್ಮದೂ ಕೂಡಾ’: ಬಹುಸಂಖ್ಯಾತ ಹಿಂದೂಗಳ ಪರವಾಗಿ ಭಾರತೀಯ ಮುಸ್ಲಿಮರನ್ನು ಬೆಂಬಲಿಸಿದ ಸಂಗೀತಗಾರ ವಿಶಾಲ್...

‘ನಿಮ್ಮ ನೋವು ನಮ್ಮದೂ ಕೂಡಾ’: ಬಹುಸಂಖ್ಯಾತ ಹಿಂದೂಗಳ ಪರವಾಗಿ ಭಾರತೀಯ ಮುಸ್ಲಿಮರನ್ನು ಬೆಂಬಲಿಸಿದ ಸಂಗೀತಗಾರ ವಿಶಾಲ್ ದದ್ಲಾನಿ

- Advertisement -
- Advertisement -

ಬಿಜೆಪಿಯ ಮಾಜಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರು ಪ್ರವಾದಿ ಮುಹಮ್ಮದ್ ಅವರನ್ನು ಅವಹೇಳನ ಮಾಡಿರುವ ಕುರಿತು ನಡೆಯುತ್ತಿರುವ ವಿವಾದಗಳ ನಡುವೆ, ಭಾರತದ ಮುಸ್ಲಿಮರ ಪರವಾಗಿ ಮಾತನಾಡಿದ್ದಕ್ಕಾಗಿ ಸಂಗೀತಗಾರ ವಿಶಾಲ್ ದದ್ಲಾನಿ ಅವರನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಗುರುವಾರ ಶ್ಲಾಘಿಸಿದ್ದಾರೆ.

ಸಂಗೀತಗಾರ ವಿಶಾಲ್ ದಾದ್ಲಾನಿ ಅವರು ಟ್ವೀಟರ್‌‌ನಲ್ಲಿ, “ಬಹುಸಂಖ್ಯಾತ ಭಾರತೀಯ ಹಿಂದೂಗಳ ಪರವಾಗಿ ನಾನು ಭಾರತೀಯ ಮುಸ್ಲಿಮರಿಗೆ ಇದನ್ನು ಹೇಳಲು ಬಯಸುತ್ತೇನೆ. ನಿಮ್ಮನ್ನು ನೋಡಿಕೊಳ್ಳಲಾಗಿದೆ, ಕೇಳಿಸಿಕೊಳ್ಳಲಾಗಿದೆ, ಪ್ರೀತಿಸಲಾಗಿದೆ ಮತ್ತು ಸಲಹಲಾಗಿದೆ. ನಿಮ್ಮ ನೋವು ನಮ್ಮ ನೋವೇ ಆಗಿದೆ. ನಿಮ್ಮ ದೇಶಭಕ್ತಿ ಪ್ರಶ್ನಾರ್ಹವಲ್ಲ. ನಿಮ್ಮ ಗುರುತು ಭಾರತಕ್ಕೆ ಅಥವಾ ಬೇರೆ ಯಾವುದೇ ಧರ್ಮಕ್ಕೆ ಬೆದರಿಕೆಯಲ್ಲ. ನಾವು ಒಂದು ರಾಷ್ಟ್ರವಾಗಿದ್ದು, ಒಂದು ಕುಟುಂಬವಾಗಿದ್ದೇವೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದಕ್ಕೆ ಪ್ರತಿಕ್ರಿಯಿಸಿರುವ ಸಂಸದ ಶಶಿ ತರೂರ್‌‌, ವಿಶಾಲ್ ದದ್ಲಾನಿ ಅವರ ಭಾವನೆಗಳನ್ನು ನಾನು ಆತ್ಮೀಯವಾಗಿ ಪ್ರತಿಧ್ವನಿಸುತ್ತೇನೆ ಎಂದು ಹೇಳಿದ್ದು, “ಮೌನವಾಗಿರುವ ದೊಡ್ಡ ಬಹುಸಂಖ್ಯಾತರ ಪರವಾಗಿ ಮಾಡಿದ್ದಕ್ಕೆ ಶಭಾಷ್‌” ಎಂದು ಹೇಳಿದ್ದಾರೆ.

ದದ್ಲಾನಿ ಅವರು ಅದೇ ವಿಚಾರವಾಗಿ ಮತ್ತೊಂದು ಟ್ವೀಟ್ ಕೂಡಾ ಮಾಡಿದ್ದು, ನಮ್ಮನ್ನು ವಿಭಜಿಸಲು ಪ್ರಯತ್ನಿಸುತ್ತಿರುವವರನ್ನು ಗೆಲ್ಲಲು ಬಿಡಬೇಡಿ ಎಂದು ಎಲ್ಲಾ ಭಾರತೀಯರನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: “ವಿವೇಕಾನಂದರು ಮುಸ್ಲಿಂ ದೇಹಶಕ್ತಿಯಿಂದ, ಹಿಂದೂ ಬುದ್ಧಿಶಕ್ತಿಯಿಂದ ದೇಶ ಕಟ್ಟಿ ಅಂದವುರೆ ಸಾ”

ಟ್ವೀಟ್‌ನಲ್ಲಿ ಅವರು, “ನಾನು ಇದನ್ನು ಎಲ್ಲಾ ಭಾರತೀಯರಿಗೆ ಹೇಳಲು ಬಯಸುತ್ತೇನೆ. ಭಾರತೀಯ ರಾಜಕೀಯದ ಕೊಳಕು ಸ್ವಭಾವದ ಬಗ್ಗೆ ನಾನು ನಿಜವಾಗಿಯೂ ವಿಷಾದಿಸುತ್ತೇನೆ. ನಾವು ಪ್ರತಿಯೊಬ್ಬರೂ ಏಕಾಂಗಿಯಾಗಿ ನಿಲ್ಲುವವರೆಗೆ ಅದು ನಮ್ಮನ್ನು ಸಣ್ಣ ಮತ್ತು ಸಣ್ಣ ಗುಂಪುಗಳಾಗಿ ವಿಭಜಿಸುತ್ತದೆ” ಎಂದು ಅವರು ಹೇಳಿದ್ದಾರೆ.

“ವಿಭಜನೆ ಮಾಡುವವರು ವೈಯಕ್ತಿಕ ಲಾಭಕ್ಕಾಗಿ ಇದನ್ನು ಮಾಡುತ್ತಿದ್ದಾರೆಯೆ ಹೊರತು, ಜನರಿಗಾಗಿ ಅಲ್ಲ, ಅವರನ್ನು ಗೆಲ್ಲಲು ಬಿಡಬೇಡಿ” ಎಂದು ಅವರು ಹೇಳಿದ್ದಾರೆ.

ಇರಾನ್, ಇರಾಕ್, ಕುವೈತ್, ಕತಾರ್, ಸೌದಿ ಅರೇಬಿಯಾ, ಒಮಾನ್, ಯುಎಇ ಸೇರಿದಂತೆ ಕನಿಷ್ಠ 15 ರಾಷ್ಟ್ರಗಳಿಂದ ತೀವ್ರ ಪ್ರತಿಕ್ರಿಯೆಗಳು ಮತ್ತು ಅಧಿಕೃತ ಪ್ರತಿಭಟನೆಗಳನ್ನು ಉಂಟುಮಾಡಿದ ನೂಪುರ್ ಶರ್ಮಾ ಅವರು ಹೇಳಿಕೆಯ ಬಗ್ಗೆ ಬಿಜೆಪಿ ಕ್ರಮ ಕೈಗೊಂಡಿದ್ದು, ಪಕ್ಷದಿಂದ ಅಮಾನತುಗೊಳಿಸಿದೆ.

ಇದನ್ನೂ ಓದಿ: ದನ ಸಾಗಿಸುತ್ತಿದ್ದ ಮುಸ್ಲಿಂ ವ್ಯಕ್ತಿಯನ್ನು ಹೊಡೆದು ಕೊಂದಿದ್ದು ಮತ್ತು ಕಾಶ್ಮೀರ ನರಮೇಧಕ್ಕೂ ಯಾವುದೇ ವ್ಯತ್ಯಾಸ ಇಲ್ಲ: ಖ್ಯಾತ ನಟಿ ಸಾಯಿ ಪಲ್ಲವಿ

ನೂಪುರ್ ಶರ್ಮಾ ವಿರುದ್ಧ ಮಹಾರಾಷ್ಟ್ರ ಮತ್ತು ಇತರ ರಾಜ್ಯಗಳಲ್ಲಿ ಹಲವಾರು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಪ್ರವಾದಿ ಮುಹಮ್ಮದ್ ಅವರ ಕುರಿತು ಹೇಳಿಕೆ ನೀಡಿದ ಮತ್ತೊಬ್ಬ ವಕ್ತಾರ ನವೀನ್ ಜಿಂದಾಲ್ ಅವರನ್ನೂ ಬಿಜೆಪಿ ವಜಾಗೊಳಿಸಿದೆ. ಈ ಮಧ್ಯೆ, ನೂಪುರ್ ಶರ್ಮಾ ಅವರು ತಮ್ಮ ಹೇಳಿಕೆಯನ್ನು ದಾಖಲಿಸಲು ಮಹಾರಾಷ್ಟ್ರ ಪೊಲೀಸರ ಮುಂದೆ ಹಾಜರಾಗಲು ನಾಲ್ಕು ವಾರಗಳ ಕಾಲಾವಕಾಶ ಕೋರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...