HomeUncategorized"ವಿಷಯಾಂತರ" ಸಣ್ಣ ಕತೆ...

“ವಿಷಯಾಂತರ” ಸಣ್ಣ ಕತೆ…

- Advertisement -
- Advertisement -

ತುಮಕೂರಿನ ಒಂದು ರಸ್ತೆ. ರಸ್ತೆ ಬದಿಯಲ್ಲಿ ದೊಂಬರಾಟ ನಡೆಯುತ್ತಿತ್ತು. ಒಬ್ಬ ವ್ಯಕ್ತಿ ಒಂದು ಉದ್ದದ ಕಟ್ಟಿಗೆಯ ಕಂಬವೊಂದನ್ನು ತನ್ನ ಬಾಯಲ್ಲಿ ಎತ್ತಿಹಿಡಿದಿದ್ದ. ಆ ಕೋಲಿನ ತುದಿಯಲ್ಲಿ ಒಂದು ಪುಟ್ಟ ಮಗು, ಒಂದು ವರ್ಷದ್ದಿರಬಹುದು. ಆ ಮಗುವನ್ನು ಕೋಲಿನ ತುದಿಯಲ್ಲಿ ಇರಿಸಿ ಬ್ಯಾಲೆನ್ಸ್ ಮಾಡಿದ. ಸುತ್ತ ಒಂದು ಹದಿನೈದು ಜನರು ನೋಡುತ್ತಿದ್ದರು. ಆ ಕೋಲನ್ನು ಸಾವಕಾಶವಾಗಿ ಕೆಳಗಿಳಿಸಿ ಮಗುವನ್ನು ಹಿಡಿದುಕೊಂಡ. ಪುಟ್ಟ ಬಾಲಕಿಯೊಬ್ಬಳು ತಂತಿಯ ಮೇಲೆ ನಡೆದು ತನ್ನ ಬ್ಯಾಲೆನ್ಸ್ ಪ್ರದರ್ಶಿಸಿದಳು. ಆ ವ್ಯಕ್ತಿ ಅವಳು ನಡೆದಾಡುತ್ತಿದ್ದಂತೆ ಕೆಳಗಿನಿಂದ ಹಿಂಬಾಲಿಸುತ್ತಿದ್ದ. ತನ್ನ ನಡೆದಾಟವನ್ನು ಯಶಸ್ವಿಯಾಗಿ ಮುಗಿಸಿ ಕೆಳಗಿಳಿದಳು. ಅಷ್ಟರಲ್ಲಿ ಒಬ್ಬ ಮಧ್ಯವಯಸ್ಕ ವ್ಯಕ್ತಿಯೂ ನೋಡುಗರಲ್ಲಿ ಬಂದು ಸೇರಿದ್ದ. ಅವನು ನೋಡುಗರ ಕಡೆ ಒಂದು ಸಲ ಕಣ್ಣಾಡಿಸಿದ. ನೋಡುಗರಲ್ಲಿ ಅಷ್ಟೇನೂ ಉತ್ಸಾಹ ಕಂಡುಬರುತ್ತಿರಲಿಲ್ಲ. ಒಂದೆರಡು ಚಪ್ಪಾಳೆ ಕೇಳಿತೇನೋ ಎನ್ನುವಷ್ಟು ಕಡಿಮೆಯಾಗಿತ್ತು ನೋಡುಗರ ಉತ್ಸಾಹ. ದೊಂಬರಾಟ ಮಾಡುವ ಜನರಿಗೂ ಉತ್ಸಾಹದ ಕೊರತೆ ಕಾಣಿಸಿತ್ತೋ ಇಲ್ಲವೋ, ಅವರು ತಮ್ಮ ಆಟವನ್ನು ಮುಂದುವರೆಸಿದರು. ಇತ್ತ ರಸ್ತೆಯಲ್ಲಿ ಹೆಚ್ಚಿನ ಜನರು ತಮ್ಮ ಸಂಚಾರವನ್ನು ಮುಂದುವರೆಸಿದ್ದರು. ನಡೆದುಕೊಂಡು ಹೋಗುವವರು ಒಂದು ಸಲ ಕಣ್ಣು ಹಾಯಿಸಿ ಮುಂದುಹೋದರೆ, ವಾಹನದಲ್ಲಿರುವವರಿಗೆ ಈ ಆಟ ಕಾಣಲೇ ಇಲ್ಲ.

ಬಾಲಕಿ ಕೆಳಗಿಳಿದ ಮೇಲೆ, ದೊಂಬರಾಟದ ಆ ವ್ಯಕ್ತಿ ಹಣ ಸಂಗ್ರಹಿಸಲು ಆರಂಭಿಸಿದ. ನೋಡುಗರಾರೂ ಸ್ಥಿತಿವಂತರಂತೆ ಕಾಣುತ್ತಿರಲಿಲ್ಲ. ಆದರೂ ಕೆಲವರು ಐದು, ಹತ್ತು ರೂಪಾಯಿಗಳನ್ನು ಆ ವ್ಯಕ್ತಿಯ ಕೈಗಿಟ್ಟರು. ಒಂದು ಬ್ಯಾಗ್ ಅನ್ನು ಹೆಗಲಿಗೆ ಹಾಕಿ ನಿಂತಿದ್ದ ಮಧ್ಯ ವಯಸ್ಕ ವ್ಯಕ್ತಿಯ ಹತ್ತಿರ ದೊಂಬರಾಟದವನು ಬಂದ. ಆಗ ಆ ಮಧ್ಯವಯಸ್ಕ ವ್ಯಕ್ತಿ ನೂರರ ಒಂದು ನೋಟನ್ನು ಇತರರಿಗೆ ಕಾಣದಂತೆ ಕೈಗಿತ್ತ. ದೊಂಬರಾಟದವನು ಒಂದುಕ್ಷಣ ಅನುಮಾನದಿಂದ ನೋಡಿದ. ಈವಯ್ಯ ನೂರರ ನೋಟನ್ನು ಕೊಟ್ಟು ತೊಂಬತ್ತು ರೂಪಾಯಿ ಕೇಳುವನೋ ಎನ್ನುವಂತಿತ್ತು ಅವನ ನೋಟ. ಮಧ್ಯವಯಸ್ಕ ವ್ಯಕ್ತಿ ಒಂದುಕ್ಷಣ ತಡವರಿಸಿ ದೊಂಬರಾಟದವನ ಹತ್ತಿರಕ್ಕೆ ಬಂದು ಅವನನ್ನು ಅಪ್ಪಿಕೊಂಡ. ಅಪ್ಪಿಕೊಳ್ಳಲು ಹೊರಟಾಗ ಕಂಡ ಹಿಂಜರಿಕೆ ಅಪ್ಪಿಕೊಂಡಾಗ ಇರಲಿಲ್ಲ. ದೊಂಬರಾಟದವನೂ ಈ ಅಪರಿಚಿತ ವ್ಯಕ್ತಿಯ ಅಪ್ಪುಗೆಯನ್ನು ಸಹಜವೆಂಬಂತೆ ಸ್ವೀಕರಿಸಿದ.

ದೊಂಬರಾಟದವನ ಹೆಂಗಸು, ಅಪರಿಚಿತ ವ್ಯಕ್ತಿಯ ಕಣ್ಣಲ್ಲಿ ನೀರು ಜಿನುಗಿದ್ದು ಕಂಡಳು. ಇವನು ತಾನು ಭಾವುಕನಾದದ್ದು ಗೊತ್ತಾದೊಡನೇ ಸಾವರಿಸಿಕೊಂಡು ಮುಗುಳ್ನಕ್ಕ. ಹನಿ ಜಿನುಗತೊಡಗಿ ಅಲ್ಲಿಯ ಜನರು ಕಾಲ್ಕೀಳಲು ಶುರು ಮಾಡಿದರು. ಮಧ್ಯವಯಸ್ಕ ವ್ಯಕ್ತಿಯೂ ಹೊರಡಲು ಅಣಿಯಾದ. ‘ಒಂದೀಟು ಚಾ ಕುಡುದು ಹೋಗಣ್ಣ’ ಹೆಣ್ಣಿನ ಧ್ವನಿ ಕೇಳಿತು; ದೊಂಬರಾಟದ ಹೆಂಗಸು. ಹೊರಡಲು ಅಣಿಯಾದ ಮಧ್ಯವಯಸ್ಕ ವ್ಯಕ್ತಿ ನಿಂತ. ಪಕ್ಕದಲ್ಲಿಯ ಚಾದಂಗಡಿಯಲ್ಲಿ ಎಲ್ಲರೂ ಸೇರಿದರು. ‘ಎಲ್ಲರಿಗೂ ಚಾ ಕೊಡು’ ಎಂದು ಆದೇಶಿಸಿದ ಮಧ್ಯವಯಸ್ಕ ವ್ಯಕ್ತಿ. ಅಲ್ಲಿಯೇ ಇದ್ದ ಒಂದು ಕಟ್ಟಿಗೆಯ ಬೆಂಚಿನ ಮೇಲೆ ಕುಳಿತುಕೊಂಡ. ದೊಂಬರಾಟದವನೂ ಆ ಬೆಂಚಿನ ಇನ್ನೊಂದು ತುದಿಯಲ್ಲಿ ಕುಳಿತ. ಹೆಂಗಸು, ಮಗುವನ್ನು ತೊಡೆಯ ಮೇಲಿರಿಸಿ ನೆಲದ ಮೇಲೆ ಕುಳಿತು ಚಾ ಕುಡಿಯತೊಡಗಿದಳು. ಬಾಲಕಿ ಚಾ ಕುಡಿಯುತ್ತ ಈ ಅಪರಿಚಿತ ವ್ಯಕ್ತಿಯನ್ನು ನೋಡುತ್ತಿದ್ದಳು.

ದೊಂಬರಾಟದವ ಮತ್ತು ಮಧ್ಯವಯಸ್ಕ ಇಬ್ಬರೂ ಪರಸ್ಪರ ನೋಡಿದರು. ದೊಂಬರಾಟದವನು ಒಂದು ಮಾಸಿದ ಬನಿಯನ್ನು, ಒಂದು ಹಳೆಯ ಪ್ಯಾಂಟ್ ಹಾಕಿಕೊಂಡಿದ್ದ. ಸುಮಾರು ಮೂವತ್ತು ವಯಸ್ಸಾಗಿರಬಹುದು ಆದರೆ ನಲವತ್ತರ ಅಂಚಿನಲ್ಲಿದ್ದಂತೆ ಕಾಣುತ್ತಿದ್ದ. ಜೀವನವಿಡೀ ದೈಹಿಕ ಶ್ರಮ ಮಾಡಿದ್ದು ಒಂದು ಸಲ ನೋಡಿದರೇ ಗೊತ್ತಾಗುತ್ತಿತ್ತು. ಶುಭ್ರವಾದ ಅಂಗಿ, ಕರಿ ಶೂಸ್, ಕರಿ ಪ್ಯಾಂಟ್ ಹಾಕಿಕೊಂಡಿದ್ದ ಈ ಮಧ್ಯವಯಸ್ಕ ವ್ಯಕ್ತಿ ಚಾ ಬಿಸಿಯಾಗಿದ್ದರೂ ಬೇಗ ಬೇಗ ಕುಡಿಯುತ್ತಿದ್ದ. ಒಂದು ರೀತಿಯ ಮುಜುಗರ ಎದ್ದು ಕಾಣುತ್ತಿತ್ತು. ಈಗತಾನೆ ತಂತಿಯ ಮೇಲೆ ನಡೆದ ಬಾಲಕಿ ತನ್ನ ಕಡೆ ನೋಡುತ್ತಿದ್ದನ್ನು ಗಮನಿಸಿ ಮುಗುಳ್ನಕ್ಕ. ‘ಯಾವೂರು ನಿಮ್ದು?’ ಕೇಳಿದ ದೊಂಬರಾಟದವ. ‘ಮೈಸೂರು’ ಎಂದು ತಡವರಿಸಿ ಉತ್ತರ ಬಂತು. ಚಾ ಗ್ಲಾಸು ಖಾಲಿಯಾದೊಡನೇ ಐವತ್ತು ರೂಪಾಯಿಗಳನ್ನು ಚಾದಂಗಡಿಯವನ ಕೈಗಿತ್ತು, ‘ಬರ್ತೀನಿ’ ಎಂದು ಎದ್ದು ಹೊರಟ. ಮಳೆ ನಿಂತಿತ್ತು. ಚಾ ಕುಡಿದು ದೊಂಬರಾಟದವರೂ ಎದ್ದರು. ಚಾದಂಗಡಿಯನ್ನು ಕಾರಣವಿಲ್ಲದೇ ನಕ್ಕ.

ತನ್ನ ಹುಚ್ಚುತನಕ್ಕೆ ಖುಷಿಪಟ್ಟುಕೊಂಡು ಬಿರಬಿರನೇ ಹೆಜ್ಜೆ ಹಾಕುತ್ತಿದ್ದ ಆ ಮಧ್ಯವಯಸ್ಕ. ಇತ್ತ ದೊಂಬರಾಟದವರು ತಮ್ಮ ಸಾಮಾನುಗಳನ್ನು ಒಂದೆಡೆ ಕಲೆಹಾಕುವಲ್ಲಿ ತೊಡಗಿಸಿಕೊಂಡರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...