HomeUncategorized"ವಿಷಯಾಂತರ" ಸಣ್ಣ ಕತೆ...

“ವಿಷಯಾಂತರ” ಸಣ್ಣ ಕತೆ…

- Advertisement -
- Advertisement -

ತುಮಕೂರಿನ ಒಂದು ರಸ್ತೆ. ರಸ್ತೆ ಬದಿಯಲ್ಲಿ ದೊಂಬರಾಟ ನಡೆಯುತ್ತಿತ್ತು. ಒಬ್ಬ ವ್ಯಕ್ತಿ ಒಂದು ಉದ್ದದ ಕಟ್ಟಿಗೆಯ ಕಂಬವೊಂದನ್ನು ತನ್ನ ಬಾಯಲ್ಲಿ ಎತ್ತಿಹಿಡಿದಿದ್ದ. ಆ ಕೋಲಿನ ತುದಿಯಲ್ಲಿ ಒಂದು ಪುಟ್ಟ ಮಗು, ಒಂದು ವರ್ಷದ್ದಿರಬಹುದು. ಆ ಮಗುವನ್ನು ಕೋಲಿನ ತುದಿಯಲ್ಲಿ ಇರಿಸಿ ಬ್ಯಾಲೆನ್ಸ್ ಮಾಡಿದ. ಸುತ್ತ ಒಂದು ಹದಿನೈದು ಜನರು ನೋಡುತ್ತಿದ್ದರು. ಆ ಕೋಲನ್ನು ಸಾವಕಾಶವಾಗಿ ಕೆಳಗಿಳಿಸಿ ಮಗುವನ್ನು ಹಿಡಿದುಕೊಂಡ. ಪುಟ್ಟ ಬಾಲಕಿಯೊಬ್ಬಳು ತಂತಿಯ ಮೇಲೆ ನಡೆದು ತನ್ನ ಬ್ಯಾಲೆನ್ಸ್ ಪ್ರದರ್ಶಿಸಿದಳು. ಆ ವ್ಯಕ್ತಿ ಅವಳು ನಡೆದಾಡುತ್ತಿದ್ದಂತೆ ಕೆಳಗಿನಿಂದ ಹಿಂಬಾಲಿಸುತ್ತಿದ್ದ. ತನ್ನ ನಡೆದಾಟವನ್ನು ಯಶಸ್ವಿಯಾಗಿ ಮುಗಿಸಿ ಕೆಳಗಿಳಿದಳು. ಅಷ್ಟರಲ್ಲಿ ಒಬ್ಬ ಮಧ್ಯವಯಸ್ಕ ವ್ಯಕ್ತಿಯೂ ನೋಡುಗರಲ್ಲಿ ಬಂದು ಸೇರಿದ್ದ. ಅವನು ನೋಡುಗರ ಕಡೆ ಒಂದು ಸಲ ಕಣ್ಣಾಡಿಸಿದ. ನೋಡುಗರಲ್ಲಿ ಅಷ್ಟೇನೂ ಉತ್ಸಾಹ ಕಂಡುಬರುತ್ತಿರಲಿಲ್ಲ. ಒಂದೆರಡು ಚಪ್ಪಾಳೆ ಕೇಳಿತೇನೋ ಎನ್ನುವಷ್ಟು ಕಡಿಮೆಯಾಗಿತ್ತು ನೋಡುಗರ ಉತ್ಸಾಹ. ದೊಂಬರಾಟ ಮಾಡುವ ಜನರಿಗೂ ಉತ್ಸಾಹದ ಕೊರತೆ ಕಾಣಿಸಿತ್ತೋ ಇಲ್ಲವೋ, ಅವರು ತಮ್ಮ ಆಟವನ್ನು ಮುಂದುವರೆಸಿದರು. ಇತ್ತ ರಸ್ತೆಯಲ್ಲಿ ಹೆಚ್ಚಿನ ಜನರು ತಮ್ಮ ಸಂಚಾರವನ್ನು ಮುಂದುವರೆಸಿದ್ದರು. ನಡೆದುಕೊಂಡು ಹೋಗುವವರು ಒಂದು ಸಲ ಕಣ್ಣು ಹಾಯಿಸಿ ಮುಂದುಹೋದರೆ, ವಾಹನದಲ್ಲಿರುವವರಿಗೆ ಈ ಆಟ ಕಾಣಲೇ ಇಲ್ಲ.

ಬಾಲಕಿ ಕೆಳಗಿಳಿದ ಮೇಲೆ, ದೊಂಬರಾಟದ ಆ ವ್ಯಕ್ತಿ ಹಣ ಸಂಗ್ರಹಿಸಲು ಆರಂಭಿಸಿದ. ನೋಡುಗರಾರೂ ಸ್ಥಿತಿವಂತರಂತೆ ಕಾಣುತ್ತಿರಲಿಲ್ಲ. ಆದರೂ ಕೆಲವರು ಐದು, ಹತ್ತು ರೂಪಾಯಿಗಳನ್ನು ಆ ವ್ಯಕ್ತಿಯ ಕೈಗಿಟ್ಟರು. ಒಂದು ಬ್ಯಾಗ್ ಅನ್ನು ಹೆಗಲಿಗೆ ಹಾಕಿ ನಿಂತಿದ್ದ ಮಧ್ಯ ವಯಸ್ಕ ವ್ಯಕ್ತಿಯ ಹತ್ತಿರ ದೊಂಬರಾಟದವನು ಬಂದ. ಆಗ ಆ ಮಧ್ಯವಯಸ್ಕ ವ್ಯಕ್ತಿ ನೂರರ ಒಂದು ನೋಟನ್ನು ಇತರರಿಗೆ ಕಾಣದಂತೆ ಕೈಗಿತ್ತ. ದೊಂಬರಾಟದವನು ಒಂದುಕ್ಷಣ ಅನುಮಾನದಿಂದ ನೋಡಿದ. ಈವಯ್ಯ ನೂರರ ನೋಟನ್ನು ಕೊಟ್ಟು ತೊಂಬತ್ತು ರೂಪಾಯಿ ಕೇಳುವನೋ ಎನ್ನುವಂತಿತ್ತು ಅವನ ನೋಟ. ಮಧ್ಯವಯಸ್ಕ ವ್ಯಕ್ತಿ ಒಂದುಕ್ಷಣ ತಡವರಿಸಿ ದೊಂಬರಾಟದವನ ಹತ್ತಿರಕ್ಕೆ ಬಂದು ಅವನನ್ನು ಅಪ್ಪಿಕೊಂಡ. ಅಪ್ಪಿಕೊಳ್ಳಲು ಹೊರಟಾಗ ಕಂಡ ಹಿಂಜರಿಕೆ ಅಪ್ಪಿಕೊಂಡಾಗ ಇರಲಿಲ್ಲ. ದೊಂಬರಾಟದವನೂ ಈ ಅಪರಿಚಿತ ವ್ಯಕ್ತಿಯ ಅಪ್ಪುಗೆಯನ್ನು ಸಹಜವೆಂಬಂತೆ ಸ್ವೀಕರಿಸಿದ.

ದೊಂಬರಾಟದವನ ಹೆಂಗಸು, ಅಪರಿಚಿತ ವ್ಯಕ್ತಿಯ ಕಣ್ಣಲ್ಲಿ ನೀರು ಜಿನುಗಿದ್ದು ಕಂಡಳು. ಇವನು ತಾನು ಭಾವುಕನಾದದ್ದು ಗೊತ್ತಾದೊಡನೇ ಸಾವರಿಸಿಕೊಂಡು ಮುಗುಳ್ನಕ್ಕ. ಹನಿ ಜಿನುಗತೊಡಗಿ ಅಲ್ಲಿಯ ಜನರು ಕಾಲ್ಕೀಳಲು ಶುರು ಮಾಡಿದರು. ಮಧ್ಯವಯಸ್ಕ ವ್ಯಕ್ತಿಯೂ ಹೊರಡಲು ಅಣಿಯಾದ. ‘ಒಂದೀಟು ಚಾ ಕುಡುದು ಹೋಗಣ್ಣ’ ಹೆಣ್ಣಿನ ಧ್ವನಿ ಕೇಳಿತು; ದೊಂಬರಾಟದ ಹೆಂಗಸು. ಹೊರಡಲು ಅಣಿಯಾದ ಮಧ್ಯವಯಸ್ಕ ವ್ಯಕ್ತಿ ನಿಂತ. ಪಕ್ಕದಲ್ಲಿಯ ಚಾದಂಗಡಿಯಲ್ಲಿ ಎಲ್ಲರೂ ಸೇರಿದರು. ‘ಎಲ್ಲರಿಗೂ ಚಾ ಕೊಡು’ ಎಂದು ಆದೇಶಿಸಿದ ಮಧ್ಯವಯಸ್ಕ ವ್ಯಕ್ತಿ. ಅಲ್ಲಿಯೇ ಇದ್ದ ಒಂದು ಕಟ್ಟಿಗೆಯ ಬೆಂಚಿನ ಮೇಲೆ ಕುಳಿತುಕೊಂಡ. ದೊಂಬರಾಟದವನೂ ಆ ಬೆಂಚಿನ ಇನ್ನೊಂದು ತುದಿಯಲ್ಲಿ ಕುಳಿತ. ಹೆಂಗಸು, ಮಗುವನ್ನು ತೊಡೆಯ ಮೇಲಿರಿಸಿ ನೆಲದ ಮೇಲೆ ಕುಳಿತು ಚಾ ಕುಡಿಯತೊಡಗಿದಳು. ಬಾಲಕಿ ಚಾ ಕುಡಿಯುತ್ತ ಈ ಅಪರಿಚಿತ ವ್ಯಕ್ತಿಯನ್ನು ನೋಡುತ್ತಿದ್ದಳು.

ದೊಂಬರಾಟದವ ಮತ್ತು ಮಧ್ಯವಯಸ್ಕ ಇಬ್ಬರೂ ಪರಸ್ಪರ ನೋಡಿದರು. ದೊಂಬರಾಟದವನು ಒಂದು ಮಾಸಿದ ಬನಿಯನ್ನು, ಒಂದು ಹಳೆಯ ಪ್ಯಾಂಟ್ ಹಾಕಿಕೊಂಡಿದ್ದ. ಸುಮಾರು ಮೂವತ್ತು ವಯಸ್ಸಾಗಿರಬಹುದು ಆದರೆ ನಲವತ್ತರ ಅಂಚಿನಲ್ಲಿದ್ದಂತೆ ಕಾಣುತ್ತಿದ್ದ. ಜೀವನವಿಡೀ ದೈಹಿಕ ಶ್ರಮ ಮಾಡಿದ್ದು ಒಂದು ಸಲ ನೋಡಿದರೇ ಗೊತ್ತಾಗುತ್ತಿತ್ತು. ಶುಭ್ರವಾದ ಅಂಗಿ, ಕರಿ ಶೂಸ್, ಕರಿ ಪ್ಯಾಂಟ್ ಹಾಕಿಕೊಂಡಿದ್ದ ಈ ಮಧ್ಯವಯಸ್ಕ ವ್ಯಕ್ತಿ ಚಾ ಬಿಸಿಯಾಗಿದ್ದರೂ ಬೇಗ ಬೇಗ ಕುಡಿಯುತ್ತಿದ್ದ. ಒಂದು ರೀತಿಯ ಮುಜುಗರ ಎದ್ದು ಕಾಣುತ್ತಿತ್ತು. ಈಗತಾನೆ ತಂತಿಯ ಮೇಲೆ ನಡೆದ ಬಾಲಕಿ ತನ್ನ ಕಡೆ ನೋಡುತ್ತಿದ್ದನ್ನು ಗಮನಿಸಿ ಮುಗುಳ್ನಕ್ಕ. ‘ಯಾವೂರು ನಿಮ್ದು?’ ಕೇಳಿದ ದೊಂಬರಾಟದವ. ‘ಮೈಸೂರು’ ಎಂದು ತಡವರಿಸಿ ಉತ್ತರ ಬಂತು. ಚಾ ಗ್ಲಾಸು ಖಾಲಿಯಾದೊಡನೇ ಐವತ್ತು ರೂಪಾಯಿಗಳನ್ನು ಚಾದಂಗಡಿಯವನ ಕೈಗಿತ್ತು, ‘ಬರ್ತೀನಿ’ ಎಂದು ಎದ್ದು ಹೊರಟ. ಮಳೆ ನಿಂತಿತ್ತು. ಚಾ ಕುಡಿದು ದೊಂಬರಾಟದವರೂ ಎದ್ದರು. ಚಾದಂಗಡಿಯನ್ನು ಕಾರಣವಿಲ್ಲದೇ ನಕ್ಕ.

ತನ್ನ ಹುಚ್ಚುತನಕ್ಕೆ ಖುಷಿಪಟ್ಟುಕೊಂಡು ಬಿರಬಿರನೇ ಹೆಜ್ಜೆ ಹಾಕುತ್ತಿದ್ದ ಆ ಮಧ್ಯವಯಸ್ಕ. ಇತ್ತ ದೊಂಬರಾಟದವರು ತಮ್ಮ ಸಾಮಾನುಗಳನ್ನು ಒಂದೆಡೆ ಕಲೆಹಾಕುವಲ್ಲಿ ತೊಡಗಿಸಿಕೊಂಡರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...