HomeUncategorized"ವಿಷಯಾಂತರ" ಸಣ್ಣ ಕತೆ...

“ವಿಷಯಾಂತರ” ಸಣ್ಣ ಕತೆ…

- Advertisement -
- Advertisement -

ತುಮಕೂರಿನ ಒಂದು ರಸ್ತೆ. ರಸ್ತೆ ಬದಿಯಲ್ಲಿ ದೊಂಬರಾಟ ನಡೆಯುತ್ತಿತ್ತು. ಒಬ್ಬ ವ್ಯಕ್ತಿ ಒಂದು ಉದ್ದದ ಕಟ್ಟಿಗೆಯ ಕಂಬವೊಂದನ್ನು ತನ್ನ ಬಾಯಲ್ಲಿ ಎತ್ತಿಹಿಡಿದಿದ್ದ. ಆ ಕೋಲಿನ ತುದಿಯಲ್ಲಿ ಒಂದು ಪುಟ್ಟ ಮಗು, ಒಂದು ವರ್ಷದ್ದಿರಬಹುದು. ಆ ಮಗುವನ್ನು ಕೋಲಿನ ತುದಿಯಲ್ಲಿ ಇರಿಸಿ ಬ್ಯಾಲೆನ್ಸ್ ಮಾಡಿದ. ಸುತ್ತ ಒಂದು ಹದಿನೈದು ಜನರು ನೋಡುತ್ತಿದ್ದರು. ಆ ಕೋಲನ್ನು ಸಾವಕಾಶವಾಗಿ ಕೆಳಗಿಳಿಸಿ ಮಗುವನ್ನು ಹಿಡಿದುಕೊಂಡ. ಪುಟ್ಟ ಬಾಲಕಿಯೊಬ್ಬಳು ತಂತಿಯ ಮೇಲೆ ನಡೆದು ತನ್ನ ಬ್ಯಾಲೆನ್ಸ್ ಪ್ರದರ್ಶಿಸಿದಳು. ಆ ವ್ಯಕ್ತಿ ಅವಳು ನಡೆದಾಡುತ್ತಿದ್ದಂತೆ ಕೆಳಗಿನಿಂದ ಹಿಂಬಾಲಿಸುತ್ತಿದ್ದ. ತನ್ನ ನಡೆದಾಟವನ್ನು ಯಶಸ್ವಿಯಾಗಿ ಮುಗಿಸಿ ಕೆಳಗಿಳಿದಳು. ಅಷ್ಟರಲ್ಲಿ ಒಬ್ಬ ಮಧ್ಯವಯಸ್ಕ ವ್ಯಕ್ತಿಯೂ ನೋಡುಗರಲ್ಲಿ ಬಂದು ಸೇರಿದ್ದ. ಅವನು ನೋಡುಗರ ಕಡೆ ಒಂದು ಸಲ ಕಣ್ಣಾಡಿಸಿದ. ನೋಡುಗರಲ್ಲಿ ಅಷ್ಟೇನೂ ಉತ್ಸಾಹ ಕಂಡುಬರುತ್ತಿರಲಿಲ್ಲ. ಒಂದೆರಡು ಚಪ್ಪಾಳೆ ಕೇಳಿತೇನೋ ಎನ್ನುವಷ್ಟು ಕಡಿಮೆಯಾಗಿತ್ತು ನೋಡುಗರ ಉತ್ಸಾಹ. ದೊಂಬರಾಟ ಮಾಡುವ ಜನರಿಗೂ ಉತ್ಸಾಹದ ಕೊರತೆ ಕಾಣಿಸಿತ್ತೋ ಇಲ್ಲವೋ, ಅವರು ತಮ್ಮ ಆಟವನ್ನು ಮುಂದುವರೆಸಿದರು. ಇತ್ತ ರಸ್ತೆಯಲ್ಲಿ ಹೆಚ್ಚಿನ ಜನರು ತಮ್ಮ ಸಂಚಾರವನ್ನು ಮುಂದುವರೆಸಿದ್ದರು. ನಡೆದುಕೊಂಡು ಹೋಗುವವರು ಒಂದು ಸಲ ಕಣ್ಣು ಹಾಯಿಸಿ ಮುಂದುಹೋದರೆ, ವಾಹನದಲ್ಲಿರುವವರಿಗೆ ಈ ಆಟ ಕಾಣಲೇ ಇಲ್ಲ.

ಬಾಲಕಿ ಕೆಳಗಿಳಿದ ಮೇಲೆ, ದೊಂಬರಾಟದ ಆ ವ್ಯಕ್ತಿ ಹಣ ಸಂಗ್ರಹಿಸಲು ಆರಂಭಿಸಿದ. ನೋಡುಗರಾರೂ ಸ್ಥಿತಿವಂತರಂತೆ ಕಾಣುತ್ತಿರಲಿಲ್ಲ. ಆದರೂ ಕೆಲವರು ಐದು, ಹತ್ತು ರೂಪಾಯಿಗಳನ್ನು ಆ ವ್ಯಕ್ತಿಯ ಕೈಗಿಟ್ಟರು. ಒಂದು ಬ್ಯಾಗ್ ಅನ್ನು ಹೆಗಲಿಗೆ ಹಾಕಿ ನಿಂತಿದ್ದ ಮಧ್ಯ ವಯಸ್ಕ ವ್ಯಕ್ತಿಯ ಹತ್ತಿರ ದೊಂಬರಾಟದವನು ಬಂದ. ಆಗ ಆ ಮಧ್ಯವಯಸ್ಕ ವ್ಯಕ್ತಿ ನೂರರ ಒಂದು ನೋಟನ್ನು ಇತರರಿಗೆ ಕಾಣದಂತೆ ಕೈಗಿತ್ತ. ದೊಂಬರಾಟದವನು ಒಂದುಕ್ಷಣ ಅನುಮಾನದಿಂದ ನೋಡಿದ. ಈವಯ್ಯ ನೂರರ ನೋಟನ್ನು ಕೊಟ್ಟು ತೊಂಬತ್ತು ರೂಪಾಯಿ ಕೇಳುವನೋ ಎನ್ನುವಂತಿತ್ತು ಅವನ ನೋಟ. ಮಧ್ಯವಯಸ್ಕ ವ್ಯಕ್ತಿ ಒಂದುಕ್ಷಣ ತಡವರಿಸಿ ದೊಂಬರಾಟದವನ ಹತ್ತಿರಕ್ಕೆ ಬಂದು ಅವನನ್ನು ಅಪ್ಪಿಕೊಂಡ. ಅಪ್ಪಿಕೊಳ್ಳಲು ಹೊರಟಾಗ ಕಂಡ ಹಿಂಜರಿಕೆ ಅಪ್ಪಿಕೊಂಡಾಗ ಇರಲಿಲ್ಲ. ದೊಂಬರಾಟದವನೂ ಈ ಅಪರಿಚಿತ ವ್ಯಕ್ತಿಯ ಅಪ್ಪುಗೆಯನ್ನು ಸಹಜವೆಂಬಂತೆ ಸ್ವೀಕರಿಸಿದ.

ದೊಂಬರಾಟದವನ ಹೆಂಗಸು, ಅಪರಿಚಿತ ವ್ಯಕ್ತಿಯ ಕಣ್ಣಲ್ಲಿ ನೀರು ಜಿನುಗಿದ್ದು ಕಂಡಳು. ಇವನು ತಾನು ಭಾವುಕನಾದದ್ದು ಗೊತ್ತಾದೊಡನೇ ಸಾವರಿಸಿಕೊಂಡು ಮುಗುಳ್ನಕ್ಕ. ಹನಿ ಜಿನುಗತೊಡಗಿ ಅಲ್ಲಿಯ ಜನರು ಕಾಲ್ಕೀಳಲು ಶುರು ಮಾಡಿದರು. ಮಧ್ಯವಯಸ್ಕ ವ್ಯಕ್ತಿಯೂ ಹೊರಡಲು ಅಣಿಯಾದ. ‘ಒಂದೀಟು ಚಾ ಕುಡುದು ಹೋಗಣ್ಣ’ ಹೆಣ್ಣಿನ ಧ್ವನಿ ಕೇಳಿತು; ದೊಂಬರಾಟದ ಹೆಂಗಸು. ಹೊರಡಲು ಅಣಿಯಾದ ಮಧ್ಯವಯಸ್ಕ ವ್ಯಕ್ತಿ ನಿಂತ. ಪಕ್ಕದಲ್ಲಿಯ ಚಾದಂಗಡಿಯಲ್ಲಿ ಎಲ್ಲರೂ ಸೇರಿದರು. ‘ಎಲ್ಲರಿಗೂ ಚಾ ಕೊಡು’ ಎಂದು ಆದೇಶಿಸಿದ ಮಧ್ಯವಯಸ್ಕ ವ್ಯಕ್ತಿ. ಅಲ್ಲಿಯೇ ಇದ್ದ ಒಂದು ಕಟ್ಟಿಗೆಯ ಬೆಂಚಿನ ಮೇಲೆ ಕುಳಿತುಕೊಂಡ. ದೊಂಬರಾಟದವನೂ ಆ ಬೆಂಚಿನ ಇನ್ನೊಂದು ತುದಿಯಲ್ಲಿ ಕುಳಿತ. ಹೆಂಗಸು, ಮಗುವನ್ನು ತೊಡೆಯ ಮೇಲಿರಿಸಿ ನೆಲದ ಮೇಲೆ ಕುಳಿತು ಚಾ ಕುಡಿಯತೊಡಗಿದಳು. ಬಾಲಕಿ ಚಾ ಕುಡಿಯುತ್ತ ಈ ಅಪರಿಚಿತ ವ್ಯಕ್ತಿಯನ್ನು ನೋಡುತ್ತಿದ್ದಳು.

ದೊಂಬರಾಟದವ ಮತ್ತು ಮಧ್ಯವಯಸ್ಕ ಇಬ್ಬರೂ ಪರಸ್ಪರ ನೋಡಿದರು. ದೊಂಬರಾಟದವನು ಒಂದು ಮಾಸಿದ ಬನಿಯನ್ನು, ಒಂದು ಹಳೆಯ ಪ್ಯಾಂಟ್ ಹಾಕಿಕೊಂಡಿದ್ದ. ಸುಮಾರು ಮೂವತ್ತು ವಯಸ್ಸಾಗಿರಬಹುದು ಆದರೆ ನಲವತ್ತರ ಅಂಚಿನಲ್ಲಿದ್ದಂತೆ ಕಾಣುತ್ತಿದ್ದ. ಜೀವನವಿಡೀ ದೈಹಿಕ ಶ್ರಮ ಮಾಡಿದ್ದು ಒಂದು ಸಲ ನೋಡಿದರೇ ಗೊತ್ತಾಗುತ್ತಿತ್ತು. ಶುಭ್ರವಾದ ಅಂಗಿ, ಕರಿ ಶೂಸ್, ಕರಿ ಪ್ಯಾಂಟ್ ಹಾಕಿಕೊಂಡಿದ್ದ ಈ ಮಧ್ಯವಯಸ್ಕ ವ್ಯಕ್ತಿ ಚಾ ಬಿಸಿಯಾಗಿದ್ದರೂ ಬೇಗ ಬೇಗ ಕುಡಿಯುತ್ತಿದ್ದ. ಒಂದು ರೀತಿಯ ಮುಜುಗರ ಎದ್ದು ಕಾಣುತ್ತಿತ್ತು. ಈಗತಾನೆ ತಂತಿಯ ಮೇಲೆ ನಡೆದ ಬಾಲಕಿ ತನ್ನ ಕಡೆ ನೋಡುತ್ತಿದ್ದನ್ನು ಗಮನಿಸಿ ಮುಗುಳ್ನಕ್ಕ. ‘ಯಾವೂರು ನಿಮ್ದು?’ ಕೇಳಿದ ದೊಂಬರಾಟದವ. ‘ಮೈಸೂರು’ ಎಂದು ತಡವರಿಸಿ ಉತ್ತರ ಬಂತು. ಚಾ ಗ್ಲಾಸು ಖಾಲಿಯಾದೊಡನೇ ಐವತ್ತು ರೂಪಾಯಿಗಳನ್ನು ಚಾದಂಗಡಿಯವನ ಕೈಗಿತ್ತು, ‘ಬರ್ತೀನಿ’ ಎಂದು ಎದ್ದು ಹೊರಟ. ಮಳೆ ನಿಂತಿತ್ತು. ಚಾ ಕುಡಿದು ದೊಂಬರಾಟದವರೂ ಎದ್ದರು. ಚಾದಂಗಡಿಯನ್ನು ಕಾರಣವಿಲ್ಲದೇ ನಕ್ಕ.

ತನ್ನ ಹುಚ್ಚುತನಕ್ಕೆ ಖುಷಿಪಟ್ಟುಕೊಂಡು ಬಿರಬಿರನೇ ಹೆಜ್ಜೆ ಹಾಕುತ್ತಿದ್ದ ಆ ಮಧ್ಯವಯಸ್ಕ. ಇತ್ತ ದೊಂಬರಾಟದವರು ತಮ್ಮ ಸಾಮಾನುಗಳನ್ನು ಒಂದೆಡೆ ಕಲೆಹಾಕುವಲ್ಲಿ ತೊಡಗಿಸಿಕೊಂಡರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...