HomeUncategorized"ವಿಷಯಾಂತರ" ಸಣ್ಣ ಕತೆ...

“ವಿಷಯಾಂತರ” ಸಣ್ಣ ಕತೆ…

- Advertisement -
- Advertisement -

ತುಮಕೂರಿನ ಒಂದು ರಸ್ತೆ. ರಸ್ತೆ ಬದಿಯಲ್ಲಿ ದೊಂಬರಾಟ ನಡೆಯುತ್ತಿತ್ತು. ಒಬ್ಬ ವ್ಯಕ್ತಿ ಒಂದು ಉದ್ದದ ಕಟ್ಟಿಗೆಯ ಕಂಬವೊಂದನ್ನು ತನ್ನ ಬಾಯಲ್ಲಿ ಎತ್ತಿಹಿಡಿದಿದ್ದ. ಆ ಕೋಲಿನ ತುದಿಯಲ್ಲಿ ಒಂದು ಪುಟ್ಟ ಮಗು, ಒಂದು ವರ್ಷದ್ದಿರಬಹುದು. ಆ ಮಗುವನ್ನು ಕೋಲಿನ ತುದಿಯಲ್ಲಿ ಇರಿಸಿ ಬ್ಯಾಲೆನ್ಸ್ ಮಾಡಿದ. ಸುತ್ತ ಒಂದು ಹದಿನೈದು ಜನರು ನೋಡುತ್ತಿದ್ದರು. ಆ ಕೋಲನ್ನು ಸಾವಕಾಶವಾಗಿ ಕೆಳಗಿಳಿಸಿ ಮಗುವನ್ನು ಹಿಡಿದುಕೊಂಡ. ಪುಟ್ಟ ಬಾಲಕಿಯೊಬ್ಬಳು ತಂತಿಯ ಮೇಲೆ ನಡೆದು ತನ್ನ ಬ್ಯಾಲೆನ್ಸ್ ಪ್ರದರ್ಶಿಸಿದಳು. ಆ ವ್ಯಕ್ತಿ ಅವಳು ನಡೆದಾಡುತ್ತಿದ್ದಂತೆ ಕೆಳಗಿನಿಂದ ಹಿಂಬಾಲಿಸುತ್ತಿದ್ದ. ತನ್ನ ನಡೆದಾಟವನ್ನು ಯಶಸ್ವಿಯಾಗಿ ಮುಗಿಸಿ ಕೆಳಗಿಳಿದಳು. ಅಷ್ಟರಲ್ಲಿ ಒಬ್ಬ ಮಧ್ಯವಯಸ್ಕ ವ್ಯಕ್ತಿಯೂ ನೋಡುಗರಲ್ಲಿ ಬಂದು ಸೇರಿದ್ದ. ಅವನು ನೋಡುಗರ ಕಡೆ ಒಂದು ಸಲ ಕಣ್ಣಾಡಿಸಿದ. ನೋಡುಗರಲ್ಲಿ ಅಷ್ಟೇನೂ ಉತ್ಸಾಹ ಕಂಡುಬರುತ್ತಿರಲಿಲ್ಲ. ಒಂದೆರಡು ಚಪ್ಪಾಳೆ ಕೇಳಿತೇನೋ ಎನ್ನುವಷ್ಟು ಕಡಿಮೆಯಾಗಿತ್ತು ನೋಡುಗರ ಉತ್ಸಾಹ. ದೊಂಬರಾಟ ಮಾಡುವ ಜನರಿಗೂ ಉತ್ಸಾಹದ ಕೊರತೆ ಕಾಣಿಸಿತ್ತೋ ಇಲ್ಲವೋ, ಅವರು ತಮ್ಮ ಆಟವನ್ನು ಮುಂದುವರೆಸಿದರು. ಇತ್ತ ರಸ್ತೆಯಲ್ಲಿ ಹೆಚ್ಚಿನ ಜನರು ತಮ್ಮ ಸಂಚಾರವನ್ನು ಮುಂದುವರೆಸಿದ್ದರು. ನಡೆದುಕೊಂಡು ಹೋಗುವವರು ಒಂದು ಸಲ ಕಣ್ಣು ಹಾಯಿಸಿ ಮುಂದುಹೋದರೆ, ವಾಹನದಲ್ಲಿರುವವರಿಗೆ ಈ ಆಟ ಕಾಣಲೇ ಇಲ್ಲ.

ಬಾಲಕಿ ಕೆಳಗಿಳಿದ ಮೇಲೆ, ದೊಂಬರಾಟದ ಆ ವ್ಯಕ್ತಿ ಹಣ ಸಂಗ್ರಹಿಸಲು ಆರಂಭಿಸಿದ. ನೋಡುಗರಾರೂ ಸ್ಥಿತಿವಂತರಂತೆ ಕಾಣುತ್ತಿರಲಿಲ್ಲ. ಆದರೂ ಕೆಲವರು ಐದು, ಹತ್ತು ರೂಪಾಯಿಗಳನ್ನು ಆ ವ್ಯಕ್ತಿಯ ಕೈಗಿಟ್ಟರು. ಒಂದು ಬ್ಯಾಗ್ ಅನ್ನು ಹೆಗಲಿಗೆ ಹಾಕಿ ನಿಂತಿದ್ದ ಮಧ್ಯ ವಯಸ್ಕ ವ್ಯಕ್ತಿಯ ಹತ್ತಿರ ದೊಂಬರಾಟದವನು ಬಂದ. ಆಗ ಆ ಮಧ್ಯವಯಸ್ಕ ವ್ಯಕ್ತಿ ನೂರರ ಒಂದು ನೋಟನ್ನು ಇತರರಿಗೆ ಕಾಣದಂತೆ ಕೈಗಿತ್ತ. ದೊಂಬರಾಟದವನು ಒಂದುಕ್ಷಣ ಅನುಮಾನದಿಂದ ನೋಡಿದ. ಈವಯ್ಯ ನೂರರ ನೋಟನ್ನು ಕೊಟ್ಟು ತೊಂಬತ್ತು ರೂಪಾಯಿ ಕೇಳುವನೋ ಎನ್ನುವಂತಿತ್ತು ಅವನ ನೋಟ. ಮಧ್ಯವಯಸ್ಕ ವ್ಯಕ್ತಿ ಒಂದುಕ್ಷಣ ತಡವರಿಸಿ ದೊಂಬರಾಟದವನ ಹತ್ತಿರಕ್ಕೆ ಬಂದು ಅವನನ್ನು ಅಪ್ಪಿಕೊಂಡ. ಅಪ್ಪಿಕೊಳ್ಳಲು ಹೊರಟಾಗ ಕಂಡ ಹಿಂಜರಿಕೆ ಅಪ್ಪಿಕೊಂಡಾಗ ಇರಲಿಲ್ಲ. ದೊಂಬರಾಟದವನೂ ಈ ಅಪರಿಚಿತ ವ್ಯಕ್ತಿಯ ಅಪ್ಪುಗೆಯನ್ನು ಸಹಜವೆಂಬಂತೆ ಸ್ವೀಕರಿಸಿದ.

ದೊಂಬರಾಟದವನ ಹೆಂಗಸು, ಅಪರಿಚಿತ ವ್ಯಕ್ತಿಯ ಕಣ್ಣಲ್ಲಿ ನೀರು ಜಿನುಗಿದ್ದು ಕಂಡಳು. ಇವನು ತಾನು ಭಾವುಕನಾದದ್ದು ಗೊತ್ತಾದೊಡನೇ ಸಾವರಿಸಿಕೊಂಡು ಮುಗುಳ್ನಕ್ಕ. ಹನಿ ಜಿನುಗತೊಡಗಿ ಅಲ್ಲಿಯ ಜನರು ಕಾಲ್ಕೀಳಲು ಶುರು ಮಾಡಿದರು. ಮಧ್ಯವಯಸ್ಕ ವ್ಯಕ್ತಿಯೂ ಹೊರಡಲು ಅಣಿಯಾದ. ‘ಒಂದೀಟು ಚಾ ಕುಡುದು ಹೋಗಣ್ಣ’ ಹೆಣ್ಣಿನ ಧ್ವನಿ ಕೇಳಿತು; ದೊಂಬರಾಟದ ಹೆಂಗಸು. ಹೊರಡಲು ಅಣಿಯಾದ ಮಧ್ಯವಯಸ್ಕ ವ್ಯಕ್ತಿ ನಿಂತ. ಪಕ್ಕದಲ್ಲಿಯ ಚಾದಂಗಡಿಯಲ್ಲಿ ಎಲ್ಲರೂ ಸೇರಿದರು. ‘ಎಲ್ಲರಿಗೂ ಚಾ ಕೊಡು’ ಎಂದು ಆದೇಶಿಸಿದ ಮಧ್ಯವಯಸ್ಕ ವ್ಯಕ್ತಿ. ಅಲ್ಲಿಯೇ ಇದ್ದ ಒಂದು ಕಟ್ಟಿಗೆಯ ಬೆಂಚಿನ ಮೇಲೆ ಕುಳಿತುಕೊಂಡ. ದೊಂಬರಾಟದವನೂ ಆ ಬೆಂಚಿನ ಇನ್ನೊಂದು ತುದಿಯಲ್ಲಿ ಕುಳಿತ. ಹೆಂಗಸು, ಮಗುವನ್ನು ತೊಡೆಯ ಮೇಲಿರಿಸಿ ನೆಲದ ಮೇಲೆ ಕುಳಿತು ಚಾ ಕುಡಿಯತೊಡಗಿದಳು. ಬಾಲಕಿ ಚಾ ಕುಡಿಯುತ್ತ ಈ ಅಪರಿಚಿತ ವ್ಯಕ್ತಿಯನ್ನು ನೋಡುತ್ತಿದ್ದಳು.

ದೊಂಬರಾಟದವ ಮತ್ತು ಮಧ್ಯವಯಸ್ಕ ಇಬ್ಬರೂ ಪರಸ್ಪರ ನೋಡಿದರು. ದೊಂಬರಾಟದವನು ಒಂದು ಮಾಸಿದ ಬನಿಯನ್ನು, ಒಂದು ಹಳೆಯ ಪ್ಯಾಂಟ್ ಹಾಕಿಕೊಂಡಿದ್ದ. ಸುಮಾರು ಮೂವತ್ತು ವಯಸ್ಸಾಗಿರಬಹುದು ಆದರೆ ನಲವತ್ತರ ಅಂಚಿನಲ್ಲಿದ್ದಂತೆ ಕಾಣುತ್ತಿದ್ದ. ಜೀವನವಿಡೀ ದೈಹಿಕ ಶ್ರಮ ಮಾಡಿದ್ದು ಒಂದು ಸಲ ನೋಡಿದರೇ ಗೊತ್ತಾಗುತ್ತಿತ್ತು. ಶುಭ್ರವಾದ ಅಂಗಿ, ಕರಿ ಶೂಸ್, ಕರಿ ಪ್ಯಾಂಟ್ ಹಾಕಿಕೊಂಡಿದ್ದ ಈ ಮಧ್ಯವಯಸ್ಕ ವ್ಯಕ್ತಿ ಚಾ ಬಿಸಿಯಾಗಿದ್ದರೂ ಬೇಗ ಬೇಗ ಕುಡಿಯುತ್ತಿದ್ದ. ಒಂದು ರೀತಿಯ ಮುಜುಗರ ಎದ್ದು ಕಾಣುತ್ತಿತ್ತು. ಈಗತಾನೆ ತಂತಿಯ ಮೇಲೆ ನಡೆದ ಬಾಲಕಿ ತನ್ನ ಕಡೆ ನೋಡುತ್ತಿದ್ದನ್ನು ಗಮನಿಸಿ ಮುಗುಳ್ನಕ್ಕ. ‘ಯಾವೂರು ನಿಮ್ದು?’ ಕೇಳಿದ ದೊಂಬರಾಟದವ. ‘ಮೈಸೂರು’ ಎಂದು ತಡವರಿಸಿ ಉತ್ತರ ಬಂತು. ಚಾ ಗ್ಲಾಸು ಖಾಲಿಯಾದೊಡನೇ ಐವತ್ತು ರೂಪಾಯಿಗಳನ್ನು ಚಾದಂಗಡಿಯವನ ಕೈಗಿತ್ತು, ‘ಬರ್ತೀನಿ’ ಎಂದು ಎದ್ದು ಹೊರಟ. ಮಳೆ ನಿಂತಿತ್ತು. ಚಾ ಕುಡಿದು ದೊಂಬರಾಟದವರೂ ಎದ್ದರು. ಚಾದಂಗಡಿಯನ್ನು ಕಾರಣವಿಲ್ಲದೇ ನಕ್ಕ.

ತನ್ನ ಹುಚ್ಚುತನಕ್ಕೆ ಖುಷಿಪಟ್ಟುಕೊಂಡು ಬಿರಬಿರನೇ ಹೆಜ್ಜೆ ಹಾಕುತ್ತಿದ್ದ ಆ ಮಧ್ಯವಯಸ್ಕ. ಇತ್ತ ದೊಂಬರಾಟದವರು ತಮ್ಮ ಸಾಮಾನುಗಳನ್ನು ಒಂದೆಡೆ ಕಲೆಹಾಕುವಲ್ಲಿ ತೊಡಗಿಸಿಕೊಂಡರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...