HomeUncategorized"ವಿಷಯಾಂತರ" ಸಣ್ಣ ಕತೆ...

“ವಿಷಯಾಂತರ” ಸಣ್ಣ ಕತೆ…

- Advertisement -
- Advertisement -

ತುಮಕೂರಿನ ಒಂದು ರಸ್ತೆ. ರಸ್ತೆ ಬದಿಯಲ್ಲಿ ದೊಂಬರಾಟ ನಡೆಯುತ್ತಿತ್ತು. ಒಬ್ಬ ವ್ಯಕ್ತಿ ಒಂದು ಉದ್ದದ ಕಟ್ಟಿಗೆಯ ಕಂಬವೊಂದನ್ನು ತನ್ನ ಬಾಯಲ್ಲಿ ಎತ್ತಿಹಿಡಿದಿದ್ದ. ಆ ಕೋಲಿನ ತುದಿಯಲ್ಲಿ ಒಂದು ಪುಟ್ಟ ಮಗು, ಒಂದು ವರ್ಷದ್ದಿರಬಹುದು. ಆ ಮಗುವನ್ನು ಕೋಲಿನ ತುದಿಯಲ್ಲಿ ಇರಿಸಿ ಬ್ಯಾಲೆನ್ಸ್ ಮಾಡಿದ. ಸುತ್ತ ಒಂದು ಹದಿನೈದು ಜನರು ನೋಡುತ್ತಿದ್ದರು. ಆ ಕೋಲನ್ನು ಸಾವಕಾಶವಾಗಿ ಕೆಳಗಿಳಿಸಿ ಮಗುವನ್ನು ಹಿಡಿದುಕೊಂಡ. ಪುಟ್ಟ ಬಾಲಕಿಯೊಬ್ಬಳು ತಂತಿಯ ಮೇಲೆ ನಡೆದು ತನ್ನ ಬ್ಯಾಲೆನ್ಸ್ ಪ್ರದರ್ಶಿಸಿದಳು. ಆ ವ್ಯಕ್ತಿ ಅವಳು ನಡೆದಾಡುತ್ತಿದ್ದಂತೆ ಕೆಳಗಿನಿಂದ ಹಿಂಬಾಲಿಸುತ್ತಿದ್ದ. ತನ್ನ ನಡೆದಾಟವನ್ನು ಯಶಸ್ವಿಯಾಗಿ ಮುಗಿಸಿ ಕೆಳಗಿಳಿದಳು. ಅಷ್ಟರಲ್ಲಿ ಒಬ್ಬ ಮಧ್ಯವಯಸ್ಕ ವ್ಯಕ್ತಿಯೂ ನೋಡುಗರಲ್ಲಿ ಬಂದು ಸೇರಿದ್ದ. ಅವನು ನೋಡುಗರ ಕಡೆ ಒಂದು ಸಲ ಕಣ್ಣಾಡಿಸಿದ. ನೋಡುಗರಲ್ಲಿ ಅಷ್ಟೇನೂ ಉತ್ಸಾಹ ಕಂಡುಬರುತ್ತಿರಲಿಲ್ಲ. ಒಂದೆರಡು ಚಪ್ಪಾಳೆ ಕೇಳಿತೇನೋ ಎನ್ನುವಷ್ಟು ಕಡಿಮೆಯಾಗಿತ್ತು ನೋಡುಗರ ಉತ್ಸಾಹ. ದೊಂಬರಾಟ ಮಾಡುವ ಜನರಿಗೂ ಉತ್ಸಾಹದ ಕೊರತೆ ಕಾಣಿಸಿತ್ತೋ ಇಲ್ಲವೋ, ಅವರು ತಮ್ಮ ಆಟವನ್ನು ಮುಂದುವರೆಸಿದರು. ಇತ್ತ ರಸ್ತೆಯಲ್ಲಿ ಹೆಚ್ಚಿನ ಜನರು ತಮ್ಮ ಸಂಚಾರವನ್ನು ಮುಂದುವರೆಸಿದ್ದರು. ನಡೆದುಕೊಂಡು ಹೋಗುವವರು ಒಂದು ಸಲ ಕಣ್ಣು ಹಾಯಿಸಿ ಮುಂದುಹೋದರೆ, ವಾಹನದಲ್ಲಿರುವವರಿಗೆ ಈ ಆಟ ಕಾಣಲೇ ಇಲ್ಲ.

ಬಾಲಕಿ ಕೆಳಗಿಳಿದ ಮೇಲೆ, ದೊಂಬರಾಟದ ಆ ವ್ಯಕ್ತಿ ಹಣ ಸಂಗ್ರಹಿಸಲು ಆರಂಭಿಸಿದ. ನೋಡುಗರಾರೂ ಸ್ಥಿತಿವಂತರಂತೆ ಕಾಣುತ್ತಿರಲಿಲ್ಲ. ಆದರೂ ಕೆಲವರು ಐದು, ಹತ್ತು ರೂಪಾಯಿಗಳನ್ನು ಆ ವ್ಯಕ್ತಿಯ ಕೈಗಿಟ್ಟರು. ಒಂದು ಬ್ಯಾಗ್ ಅನ್ನು ಹೆಗಲಿಗೆ ಹಾಕಿ ನಿಂತಿದ್ದ ಮಧ್ಯ ವಯಸ್ಕ ವ್ಯಕ್ತಿಯ ಹತ್ತಿರ ದೊಂಬರಾಟದವನು ಬಂದ. ಆಗ ಆ ಮಧ್ಯವಯಸ್ಕ ವ್ಯಕ್ತಿ ನೂರರ ಒಂದು ನೋಟನ್ನು ಇತರರಿಗೆ ಕಾಣದಂತೆ ಕೈಗಿತ್ತ. ದೊಂಬರಾಟದವನು ಒಂದುಕ್ಷಣ ಅನುಮಾನದಿಂದ ನೋಡಿದ. ಈವಯ್ಯ ನೂರರ ನೋಟನ್ನು ಕೊಟ್ಟು ತೊಂಬತ್ತು ರೂಪಾಯಿ ಕೇಳುವನೋ ಎನ್ನುವಂತಿತ್ತು ಅವನ ನೋಟ. ಮಧ್ಯವಯಸ್ಕ ವ್ಯಕ್ತಿ ಒಂದುಕ್ಷಣ ತಡವರಿಸಿ ದೊಂಬರಾಟದವನ ಹತ್ತಿರಕ್ಕೆ ಬಂದು ಅವನನ್ನು ಅಪ್ಪಿಕೊಂಡ. ಅಪ್ಪಿಕೊಳ್ಳಲು ಹೊರಟಾಗ ಕಂಡ ಹಿಂಜರಿಕೆ ಅಪ್ಪಿಕೊಂಡಾಗ ಇರಲಿಲ್ಲ. ದೊಂಬರಾಟದವನೂ ಈ ಅಪರಿಚಿತ ವ್ಯಕ್ತಿಯ ಅಪ್ಪುಗೆಯನ್ನು ಸಹಜವೆಂಬಂತೆ ಸ್ವೀಕರಿಸಿದ.

ದೊಂಬರಾಟದವನ ಹೆಂಗಸು, ಅಪರಿಚಿತ ವ್ಯಕ್ತಿಯ ಕಣ್ಣಲ್ಲಿ ನೀರು ಜಿನುಗಿದ್ದು ಕಂಡಳು. ಇವನು ತಾನು ಭಾವುಕನಾದದ್ದು ಗೊತ್ತಾದೊಡನೇ ಸಾವರಿಸಿಕೊಂಡು ಮುಗುಳ್ನಕ್ಕ. ಹನಿ ಜಿನುಗತೊಡಗಿ ಅಲ್ಲಿಯ ಜನರು ಕಾಲ್ಕೀಳಲು ಶುರು ಮಾಡಿದರು. ಮಧ್ಯವಯಸ್ಕ ವ್ಯಕ್ತಿಯೂ ಹೊರಡಲು ಅಣಿಯಾದ. ‘ಒಂದೀಟು ಚಾ ಕುಡುದು ಹೋಗಣ್ಣ’ ಹೆಣ್ಣಿನ ಧ್ವನಿ ಕೇಳಿತು; ದೊಂಬರಾಟದ ಹೆಂಗಸು. ಹೊರಡಲು ಅಣಿಯಾದ ಮಧ್ಯವಯಸ್ಕ ವ್ಯಕ್ತಿ ನಿಂತ. ಪಕ್ಕದಲ್ಲಿಯ ಚಾದಂಗಡಿಯಲ್ಲಿ ಎಲ್ಲರೂ ಸೇರಿದರು. ‘ಎಲ್ಲರಿಗೂ ಚಾ ಕೊಡು’ ಎಂದು ಆದೇಶಿಸಿದ ಮಧ್ಯವಯಸ್ಕ ವ್ಯಕ್ತಿ. ಅಲ್ಲಿಯೇ ಇದ್ದ ಒಂದು ಕಟ್ಟಿಗೆಯ ಬೆಂಚಿನ ಮೇಲೆ ಕುಳಿತುಕೊಂಡ. ದೊಂಬರಾಟದವನೂ ಆ ಬೆಂಚಿನ ಇನ್ನೊಂದು ತುದಿಯಲ್ಲಿ ಕುಳಿತ. ಹೆಂಗಸು, ಮಗುವನ್ನು ತೊಡೆಯ ಮೇಲಿರಿಸಿ ನೆಲದ ಮೇಲೆ ಕುಳಿತು ಚಾ ಕುಡಿಯತೊಡಗಿದಳು. ಬಾಲಕಿ ಚಾ ಕುಡಿಯುತ್ತ ಈ ಅಪರಿಚಿತ ವ್ಯಕ್ತಿಯನ್ನು ನೋಡುತ್ತಿದ್ದಳು.

ದೊಂಬರಾಟದವ ಮತ್ತು ಮಧ್ಯವಯಸ್ಕ ಇಬ್ಬರೂ ಪರಸ್ಪರ ನೋಡಿದರು. ದೊಂಬರಾಟದವನು ಒಂದು ಮಾಸಿದ ಬನಿಯನ್ನು, ಒಂದು ಹಳೆಯ ಪ್ಯಾಂಟ್ ಹಾಕಿಕೊಂಡಿದ್ದ. ಸುಮಾರು ಮೂವತ್ತು ವಯಸ್ಸಾಗಿರಬಹುದು ಆದರೆ ನಲವತ್ತರ ಅಂಚಿನಲ್ಲಿದ್ದಂತೆ ಕಾಣುತ್ತಿದ್ದ. ಜೀವನವಿಡೀ ದೈಹಿಕ ಶ್ರಮ ಮಾಡಿದ್ದು ಒಂದು ಸಲ ನೋಡಿದರೇ ಗೊತ್ತಾಗುತ್ತಿತ್ತು. ಶುಭ್ರವಾದ ಅಂಗಿ, ಕರಿ ಶೂಸ್, ಕರಿ ಪ್ಯಾಂಟ್ ಹಾಕಿಕೊಂಡಿದ್ದ ಈ ಮಧ್ಯವಯಸ್ಕ ವ್ಯಕ್ತಿ ಚಾ ಬಿಸಿಯಾಗಿದ್ದರೂ ಬೇಗ ಬೇಗ ಕುಡಿಯುತ್ತಿದ್ದ. ಒಂದು ರೀತಿಯ ಮುಜುಗರ ಎದ್ದು ಕಾಣುತ್ತಿತ್ತು. ಈಗತಾನೆ ತಂತಿಯ ಮೇಲೆ ನಡೆದ ಬಾಲಕಿ ತನ್ನ ಕಡೆ ನೋಡುತ್ತಿದ್ದನ್ನು ಗಮನಿಸಿ ಮುಗುಳ್ನಕ್ಕ. ‘ಯಾವೂರು ನಿಮ್ದು?’ ಕೇಳಿದ ದೊಂಬರಾಟದವ. ‘ಮೈಸೂರು’ ಎಂದು ತಡವರಿಸಿ ಉತ್ತರ ಬಂತು. ಚಾ ಗ್ಲಾಸು ಖಾಲಿಯಾದೊಡನೇ ಐವತ್ತು ರೂಪಾಯಿಗಳನ್ನು ಚಾದಂಗಡಿಯವನ ಕೈಗಿತ್ತು, ‘ಬರ್ತೀನಿ’ ಎಂದು ಎದ್ದು ಹೊರಟ. ಮಳೆ ನಿಂತಿತ್ತು. ಚಾ ಕುಡಿದು ದೊಂಬರಾಟದವರೂ ಎದ್ದರು. ಚಾದಂಗಡಿಯನ್ನು ಕಾರಣವಿಲ್ಲದೇ ನಕ್ಕ.

ತನ್ನ ಹುಚ್ಚುತನಕ್ಕೆ ಖುಷಿಪಟ್ಟುಕೊಂಡು ಬಿರಬಿರನೇ ಹೆಜ್ಜೆ ಹಾಕುತ್ತಿದ್ದ ಆ ಮಧ್ಯವಯಸ್ಕ. ಇತ್ತ ದೊಂಬರಾಟದವರು ತಮ್ಮ ಸಾಮಾನುಗಳನ್ನು ಒಂದೆಡೆ ಕಲೆಹಾಕುವಲ್ಲಿ ತೊಡಗಿಸಿಕೊಂಡರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...