Homeಮುಖಪುಟ4 ವರ್ಷದ ಹುಡುಗಿಯ ಕ್ಯಾನ್ಸರ್ ಔಷಧಿಗಾಗಿ ವ್ಯಕ್ತಿಯೊಬ್ಬ 150 ಕಿ.ಮೀ ಪ್ರಯಾಣಿಸಿದ ಕಥೆ.

4 ವರ್ಷದ ಹುಡುಗಿಯ ಕ್ಯಾನ್ಸರ್ ಔಷಧಿಗಾಗಿ ವ್ಯಕ್ತಿಯೊಬ್ಬ 150 ಕಿ.ಮೀ ಪ್ರಯಾಣಿಸಿದ ಕಥೆ.

- Advertisement -
- Advertisement -

21 ದಿನಗಳ ಲಾಕ್‌ಡೌನ್ ನಮ್ಮಲ್ಲಿ ಹಲವರ ಮೇಲೆ ಕಠಿಣ ಪರಿಣಾಮ ಬೀರಿರಬಹುದು. ಏಕೆಂದರೆ ಒಂದು ದಿನ ಹೊರಗಡೆ ಹೋಗದೆ ಬದುಕುವುದು ಹೇಗೆ ಎಂದು ನಾವು ಆಶ್ಚರ್ಯ ಪಡುತ್ತೇವೆ. ಆದರೆ ಕೆಲವು ಕಾಯಿಲೆಗಳಿಂದಾಗಿ ಅಕ್ಷರಶಃ ಇನ್ನೊಂದು ಹೆಚ್ಚು ದಿನ ಬದುಕಲು ಹೋರಾಡುತ್ತಿರುವವರಿಗೆ ಈ ಲಾಕ್‌ಡೌನ್‌ ವಿಶೇಷವಾಗಿ ಕ್ರೂರವಾಗಬಹುದು. ರಕ್ತದ ಕ್ಯಾನ್ಸರ್ ಹೊಂದಿರುವ ನಾಲ್ಕು ವರ್ಷದ ನೂರ್ (ಹೆಸರು ಬದಲಾಯಿಸಲಾಗಿದೆ) ಆ ಎರಡನೇ ವಿಭಾಗದಲ್ಲಿ ಸೇರುತ್ತಾಳೆ. ಈ ಕುರಿತು ದಿ ನ್ಯೂಸ್‌ ಮಿನಿಟ್‌ ಪ್ರಕಟಿಸಿದ ಬರಹದ ಕನ್ನಡ ಅನುವಾದ ಇಲ್ಲಿದೆ.

ಪ್ರತಿ ತಿಂಗಳು ನೂರ್‌ಳನ್ನು ತಿರುವನಂತಪುರಂನ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರಕ್ಕೆ, ತನ್ನ ಊರಾದ ಆಲಪ್ಪುಳದಿಂದ ಕೀಮೋಥೆರಪಿ ಚಿಕಿತ್ಸೆಗಾಗಿ ಕರೆದೊಯ್ಯಲಾಗುತ್ತಿತ್ತು. ಆದರೆ ಮಾರ್ಚ್‌ನಲ್ಲಿ ರಾಷ್ಟ್ರವ್ಯಾಪಿ ಲಾಕ್‌ಡೌನ್ ವಿಧಿಸಲಾಗಿದ್ದರಿಂದ ಆಸ್ಪತ್ರೆಯು ನೂರ್‌ಳ ಚಿಕಿತ್ಸೆಯನ್ನು ರದ್ದುಗೊಳಿಸಿದ್ದಲ್ಲದೆ, ಅವರ ಕುಟುಂಬವು ಔಷಧಿಗಳನ್ನು ಖರೀದಿಸಲು ದೂರದ ತಿರುವನಂತಪುರಂಗೆ ಪ್ರಯಾಣಿಸಲಾಗದೆ ಚಿಂತಿತರಾಗಿತ್ತು.

ಇಂತಹ ಕಷ್ಟಕರ ಸಮಯದಲ್ಲಿ ಅವರ ನೆರೆಮನೆಯಲ್ಲಿದ್ದ ವ್ಯಕ್ತಿ ಮತ್ತು ಪೊಲೀಸ್‌ ಅಧಿಕಾರಿಯೊಬ್ಬ ಮಾನವೀಯತೆಯ ರೂಪದಲ್ಲಿ ಒದಗಿಬಂದಿದ್ದಾರೆ. ಆ ಮಗುವಿನೊಂದಿಗೆ ಅವರಿಗೆ ಯಾವುದೇ ಸಂಬಂಧವಿಲ್ಲದಿದ್ದರೂ, ಆಕೆಯ ಜೀವ ಉಳಿಸುವ ಸಲುವಾಗಿ ಮಾರ್ಚ್ 31 ರಂದು ತಿರುವನಂತಪುರಂ ವೈದ್ಯಕೀಯ ಕಾಲೇಜು ಆಸ್ಪತ್ರೆಯ ವೈದ್ಯಕೀಯ ಸಾರ್ಜೆಂಟ್ ಆಗಿರುವ ಕೆ.ಪಿ.ವಿಷ್ಣು ಅವರು ತಮ್ಮ ಬೈಕ್‌ನಲ್ಲಿ 150 ಕಿ.ಮೀ ಪ್ರಯಾಣಿಸಿ ತಮ್ಮ ಕೈಯಿಂದ ಹಣ ಹಾಕಿ ಔಷಧಿ ಖರೀದಿಸಿ ಆ ಕುಟುಂಬಕ್ಕೆ ನೀಡಿದ್ದಾರೆ. ಔಷಧಿ ಕೈಸೇರುವವರೆಗೂ ವಿಷ್ಣುವಿನ ಈ ಸಾಹಸ ನೂರ್‌ಳ ಕುಟುಂಬಕ್ಕೆ ತಿಳಿದಿರಲಿಲ್ಲ.

ಆಲಪ್ಪುಳಾ ನಾರ್ತ್ ಸ್ಟೇಷನ್‌ನ ನಾಗರಿಕ ಪೊಲೀಸ್ ಅಧಿಕಾರಿ ಮತ್ತು ವಿಷ್ಣುವಿನ ನೆರೆಹೊರೆಯ ಆಂಟನಿ ರತೀಶ್, “ನಾನು ನೂರ್‌ನ ಕುಟುಂಬವನ್ನು ಕೆಲವು ತಿಂಗಳುಗಳಿಂದ ತಿಳಿದಿದ್ದೇನೆ. ಮಾರ್ಚ್ 30 ರಂದು, ಆಕೆಯ ತಾಯಿ ನನಗೆ ಕರೆ ಮಾಡಿ, ತನ್ನ ಮಗಳ ಕೀಮೋಥೆರಪಿಯನ್ನು ರದ್ದುಪಡಿಸಲಾಗಿದೆ ಮತ್ತು ವೈದ್ಯರು ಔಷಧಿ ತೆಗೆದುಕೊಳ್ಳುವುದನ್ನು ಮುಂದುವರೆಸಬೇಕೆಂದು ಕೇಳಿಕೊಂಡಿದ್ದಾರೆ. ಆದರೆ ಅವರ ಮನೆಯಲ್ಲಿ ಔಷಧಿ ಖಾಲಿಯಾಗಿತ್ತಲ್ಲದೇ ಆಲಪ್ಪುಳದಲ್ಲಿ ಎಲ್ಲಿಯೂ ಔಷಧಿಯನ್ನು ಸಿಗಲಿಲ್ಲ. ಅವರು ಲಾಕ್‌ಡೌನ್‌ ಸಮಯದಲ್ಲಿ ಔಷಧಿ ತರಲು ತಿರುವನಂತಪುರಂಗೆ ಕ್ಯಾಬ್ ತೆಗೆದುಕೊಳ್ಳುವಷ್ಟು ಹಣ ಹೊಂದಿಲ್ಲ” ಎಂದು ತಿಳಿಸಿದ್ದರು.

ಆ ನಂತರ ಅವರಿಗೆ ಹೇಗೆ ಸಹಾಯ ಮಾಡಬೇಕೆಂದು ಆಶ್ಚರ್ಯಪಟ್ಟ ರತೀಶ್, ತಿರುವನಂತಪುರಂ ವೈದ್ಯಕೀಯ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದ ತನ್ನ ನೆರೆಹೊರೆಯ ವಿಷ್ಣುವನ್ನು ಸಂಪರ್ಕಿಸಿದರು. ಆದರೆ ವಿಷ್ಣು ಆ ರಾತ್ರಿ ತಾನೇ ತಿರುವನಂತಪುರಕ್ಕೆ ತೆರಳಿದ್ದರು ಮತ್ತು ಅವರು ತಮ್ಮ ಕರ್ತವ್ಯವನ್ನು ಪೂರ್ಣಗೊಳಿಸುವವರೆಗೆ ಒಂದು ವಾರ ಅಲ್ಲಿಯೇ ಇರಲು ಯೋಜಿಸಿದ್ದರು.

“ನಾನು ಅವರಿಗೆ ಕರೆ ಮಾಡಿದಾಗ ಅವರು ತಿರುವನಂತಪುರಂ ತಲುಪಿದ್ದರು. ಪ್ರಾದೇಶಿಕ ಕ್ಯಾನ್ಸರ್ ಕೇಂದ್ರದಿಂದ ಔಷಧಿಯನ್ನು ಖರೀದಿಸಿ ಕೊಲ್ಲಂ ಜಿಲ್ಲೆಯವರೆಗೆ ಮಾತ್ರ ತಲುಪಿಸಬಹುದು ಎಂದು ಹೇಳಿದರು. ಆದರೆ ಮರುದಿನ ಬೆಳಿಗ್ಗೆ ಅವರು ಮನಸ್ಸು ಬದಲಿಸಿ 150 ಕಿಲೋಮೀಟರ್ ಸವಾರಿ ಮಾಡಿ, ನೂರ್‌ನ ಮನೆ ಬಾಗಿಲಿಗೆ ಹೋಗಿ ಔಷಧಿಗಳನ್ನು ತಲುಪಿಸಿದನು. ಆ ರಾತ್ರಿ ಅವನು ಮಲಗಿದ್ದನೆಂದು ನಾನು ಭಾವಿಸುವುದಿಲ್ಲ” ಎಂದು ರತೀಶ್ ಹೇಳುತ್ತಾರೆ.

ಮಾಜಿ ಪೊಲೀಸ್ ಅಧಿಕಾರಿಯಾಗಿದ್ದ 32 ವರ್ಷದ ಸಾರ್ಜೆಂಟ್ ವಿಷ್ಣು, ಔಷಧಿಗಳನ್ನು ವಿತರಿಸಿದ ನಂತರ ಆಲಪ್ಪುಳದಲ್ಲಿ ಒಂದು ದಿನ ಇದ್ದು ನಂತರ ತಿರುವನಂತಪುರಂಗೆ ಹಿಂತಿರುಗಿದ್ದಾರೆ.

ಲಾಕ್‌ಡೌನ್ ಹೊರತಾಗಿಯೂ ನೂರ್‌ಗೆ ಈಗ ಅಗತ್ಯ ಔಷಧಿಗಳು ಲಭ್ಯವಾದ್ದರಿಂದ, ಅವರ ಕುಟುಂಬವು ಸಂತೋಷದಲ್ಲಿದೆ. ಅತ್ಯಂತ ಅನಿರೀಕ್ಷಿತ ಮೂಲಗಳಿಂದ ಸಹಾಯ ಒದಗಿದ್ದಕ್ಕೆ ಅವರು ಕೃತಜ್ಞರಾಗಿದ್ದಾರೆ.

“ನಾನು ಪ್ರತಿ ಬಾರಿ ನನ್ನ ನಮಾಜ್ ಮಾಡುವಾಗ ಈ ಇಬ್ಬರು ಪುರುಷರ ಬಗ್ಗೆ ಯೋಚಿಸುತ್ತೇನೆ. ಅಲ್ಲಾಹನು ಯಾವಾಗಲೂ ಅವರನ್ನು ಆಶೀರ್ವದಿಸುವನು ”ಎಂದು ನೂರ್ ತಾಯಿ ಮಲಯಾಳಂ ಪತ್ರಿಕೆಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...