Homeಮುಖಪುಟ4 ವರ್ಷದ ಹುಡುಗಿಯ ಕ್ಯಾನ್ಸರ್ ಔಷಧಿಗಾಗಿ ವ್ಯಕ್ತಿಯೊಬ್ಬ 150 ಕಿ.ಮೀ ಪ್ರಯಾಣಿಸಿದ ಕಥೆ.

4 ವರ್ಷದ ಹುಡುಗಿಯ ಕ್ಯಾನ್ಸರ್ ಔಷಧಿಗಾಗಿ ವ್ಯಕ್ತಿಯೊಬ್ಬ 150 ಕಿ.ಮೀ ಪ್ರಯಾಣಿಸಿದ ಕಥೆ.

- Advertisement -
- Advertisement -

21 ದಿನಗಳ ಲಾಕ್‌ಡೌನ್ ನಮ್ಮಲ್ಲಿ ಹಲವರ ಮೇಲೆ ಕಠಿಣ ಪರಿಣಾಮ ಬೀರಿರಬಹುದು. ಏಕೆಂದರೆ ಒಂದು ದಿನ ಹೊರಗಡೆ ಹೋಗದೆ ಬದುಕುವುದು ಹೇಗೆ ಎಂದು ನಾವು ಆಶ್ಚರ್ಯ ಪಡುತ್ತೇವೆ. ಆದರೆ ಕೆಲವು ಕಾಯಿಲೆಗಳಿಂದಾಗಿ ಅಕ್ಷರಶಃ ಇನ್ನೊಂದು ಹೆಚ್ಚು ದಿನ ಬದುಕಲು ಹೋರಾಡುತ್ತಿರುವವರಿಗೆ ಈ ಲಾಕ್‌ಡೌನ್‌ ವಿಶೇಷವಾಗಿ ಕ್ರೂರವಾಗಬಹುದು. ರಕ್ತದ ಕ್ಯಾನ್ಸರ್ ಹೊಂದಿರುವ ನಾಲ್ಕು ವರ್ಷದ ನೂರ್ (ಹೆಸರು ಬದಲಾಯಿಸಲಾಗಿದೆ) ಆ ಎರಡನೇ ವಿಭಾಗದಲ್ಲಿ ಸೇರುತ್ತಾಳೆ. ಈ ಕುರಿತು ದಿ ನ್ಯೂಸ್‌ ಮಿನಿಟ್‌ ಪ್ರಕಟಿಸಿದ ಬರಹದ ಕನ್ನಡ ಅನುವಾದ ಇಲ್ಲಿದೆ.

ಪ್ರತಿ ತಿಂಗಳು ನೂರ್‌ಳನ್ನು ತಿರುವನಂತಪುರಂನ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರಕ್ಕೆ, ತನ್ನ ಊರಾದ ಆಲಪ್ಪುಳದಿಂದ ಕೀಮೋಥೆರಪಿ ಚಿಕಿತ್ಸೆಗಾಗಿ ಕರೆದೊಯ್ಯಲಾಗುತ್ತಿತ್ತು. ಆದರೆ ಮಾರ್ಚ್‌ನಲ್ಲಿ ರಾಷ್ಟ್ರವ್ಯಾಪಿ ಲಾಕ್‌ಡೌನ್ ವಿಧಿಸಲಾಗಿದ್ದರಿಂದ ಆಸ್ಪತ್ರೆಯು ನೂರ್‌ಳ ಚಿಕಿತ್ಸೆಯನ್ನು ರದ್ದುಗೊಳಿಸಿದ್ದಲ್ಲದೆ, ಅವರ ಕುಟುಂಬವು ಔಷಧಿಗಳನ್ನು ಖರೀದಿಸಲು ದೂರದ ತಿರುವನಂತಪುರಂಗೆ ಪ್ರಯಾಣಿಸಲಾಗದೆ ಚಿಂತಿತರಾಗಿತ್ತು.

ಇಂತಹ ಕಷ್ಟಕರ ಸಮಯದಲ್ಲಿ ಅವರ ನೆರೆಮನೆಯಲ್ಲಿದ್ದ ವ್ಯಕ್ತಿ ಮತ್ತು ಪೊಲೀಸ್‌ ಅಧಿಕಾರಿಯೊಬ್ಬ ಮಾನವೀಯತೆಯ ರೂಪದಲ್ಲಿ ಒದಗಿಬಂದಿದ್ದಾರೆ. ಆ ಮಗುವಿನೊಂದಿಗೆ ಅವರಿಗೆ ಯಾವುದೇ ಸಂಬಂಧವಿಲ್ಲದಿದ್ದರೂ, ಆಕೆಯ ಜೀವ ಉಳಿಸುವ ಸಲುವಾಗಿ ಮಾರ್ಚ್ 31 ರಂದು ತಿರುವನಂತಪುರಂ ವೈದ್ಯಕೀಯ ಕಾಲೇಜು ಆಸ್ಪತ್ರೆಯ ವೈದ್ಯಕೀಯ ಸಾರ್ಜೆಂಟ್ ಆಗಿರುವ ಕೆ.ಪಿ.ವಿಷ್ಣು ಅವರು ತಮ್ಮ ಬೈಕ್‌ನಲ್ಲಿ 150 ಕಿ.ಮೀ ಪ್ರಯಾಣಿಸಿ ತಮ್ಮ ಕೈಯಿಂದ ಹಣ ಹಾಕಿ ಔಷಧಿ ಖರೀದಿಸಿ ಆ ಕುಟುಂಬಕ್ಕೆ ನೀಡಿದ್ದಾರೆ. ಔಷಧಿ ಕೈಸೇರುವವರೆಗೂ ವಿಷ್ಣುವಿನ ಈ ಸಾಹಸ ನೂರ್‌ಳ ಕುಟುಂಬಕ್ಕೆ ತಿಳಿದಿರಲಿಲ್ಲ.

ಆಲಪ್ಪುಳಾ ನಾರ್ತ್ ಸ್ಟೇಷನ್‌ನ ನಾಗರಿಕ ಪೊಲೀಸ್ ಅಧಿಕಾರಿ ಮತ್ತು ವಿಷ್ಣುವಿನ ನೆರೆಹೊರೆಯ ಆಂಟನಿ ರತೀಶ್, “ನಾನು ನೂರ್‌ನ ಕುಟುಂಬವನ್ನು ಕೆಲವು ತಿಂಗಳುಗಳಿಂದ ತಿಳಿದಿದ್ದೇನೆ. ಮಾರ್ಚ್ 30 ರಂದು, ಆಕೆಯ ತಾಯಿ ನನಗೆ ಕರೆ ಮಾಡಿ, ತನ್ನ ಮಗಳ ಕೀಮೋಥೆರಪಿಯನ್ನು ರದ್ದುಪಡಿಸಲಾಗಿದೆ ಮತ್ತು ವೈದ್ಯರು ಔಷಧಿ ತೆಗೆದುಕೊಳ್ಳುವುದನ್ನು ಮುಂದುವರೆಸಬೇಕೆಂದು ಕೇಳಿಕೊಂಡಿದ್ದಾರೆ. ಆದರೆ ಅವರ ಮನೆಯಲ್ಲಿ ಔಷಧಿ ಖಾಲಿಯಾಗಿತ್ತಲ್ಲದೇ ಆಲಪ್ಪುಳದಲ್ಲಿ ಎಲ್ಲಿಯೂ ಔಷಧಿಯನ್ನು ಸಿಗಲಿಲ್ಲ. ಅವರು ಲಾಕ್‌ಡೌನ್‌ ಸಮಯದಲ್ಲಿ ಔಷಧಿ ತರಲು ತಿರುವನಂತಪುರಂಗೆ ಕ್ಯಾಬ್ ತೆಗೆದುಕೊಳ್ಳುವಷ್ಟು ಹಣ ಹೊಂದಿಲ್ಲ” ಎಂದು ತಿಳಿಸಿದ್ದರು.

ಆ ನಂತರ ಅವರಿಗೆ ಹೇಗೆ ಸಹಾಯ ಮಾಡಬೇಕೆಂದು ಆಶ್ಚರ್ಯಪಟ್ಟ ರತೀಶ್, ತಿರುವನಂತಪುರಂ ವೈದ್ಯಕೀಯ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದ ತನ್ನ ನೆರೆಹೊರೆಯ ವಿಷ್ಣುವನ್ನು ಸಂಪರ್ಕಿಸಿದರು. ಆದರೆ ವಿಷ್ಣು ಆ ರಾತ್ರಿ ತಾನೇ ತಿರುವನಂತಪುರಕ್ಕೆ ತೆರಳಿದ್ದರು ಮತ್ತು ಅವರು ತಮ್ಮ ಕರ್ತವ್ಯವನ್ನು ಪೂರ್ಣಗೊಳಿಸುವವರೆಗೆ ಒಂದು ವಾರ ಅಲ್ಲಿಯೇ ಇರಲು ಯೋಜಿಸಿದ್ದರು.

“ನಾನು ಅವರಿಗೆ ಕರೆ ಮಾಡಿದಾಗ ಅವರು ತಿರುವನಂತಪುರಂ ತಲುಪಿದ್ದರು. ಪ್ರಾದೇಶಿಕ ಕ್ಯಾನ್ಸರ್ ಕೇಂದ್ರದಿಂದ ಔಷಧಿಯನ್ನು ಖರೀದಿಸಿ ಕೊಲ್ಲಂ ಜಿಲ್ಲೆಯವರೆಗೆ ಮಾತ್ರ ತಲುಪಿಸಬಹುದು ಎಂದು ಹೇಳಿದರು. ಆದರೆ ಮರುದಿನ ಬೆಳಿಗ್ಗೆ ಅವರು ಮನಸ್ಸು ಬದಲಿಸಿ 150 ಕಿಲೋಮೀಟರ್ ಸವಾರಿ ಮಾಡಿ, ನೂರ್‌ನ ಮನೆ ಬಾಗಿಲಿಗೆ ಹೋಗಿ ಔಷಧಿಗಳನ್ನು ತಲುಪಿಸಿದನು. ಆ ರಾತ್ರಿ ಅವನು ಮಲಗಿದ್ದನೆಂದು ನಾನು ಭಾವಿಸುವುದಿಲ್ಲ” ಎಂದು ರತೀಶ್ ಹೇಳುತ್ತಾರೆ.

ಮಾಜಿ ಪೊಲೀಸ್ ಅಧಿಕಾರಿಯಾಗಿದ್ದ 32 ವರ್ಷದ ಸಾರ್ಜೆಂಟ್ ವಿಷ್ಣು, ಔಷಧಿಗಳನ್ನು ವಿತರಿಸಿದ ನಂತರ ಆಲಪ್ಪುಳದಲ್ಲಿ ಒಂದು ದಿನ ಇದ್ದು ನಂತರ ತಿರುವನಂತಪುರಂಗೆ ಹಿಂತಿರುಗಿದ್ದಾರೆ.

ಲಾಕ್‌ಡೌನ್ ಹೊರತಾಗಿಯೂ ನೂರ್‌ಗೆ ಈಗ ಅಗತ್ಯ ಔಷಧಿಗಳು ಲಭ್ಯವಾದ್ದರಿಂದ, ಅವರ ಕುಟುಂಬವು ಸಂತೋಷದಲ್ಲಿದೆ. ಅತ್ಯಂತ ಅನಿರೀಕ್ಷಿತ ಮೂಲಗಳಿಂದ ಸಹಾಯ ಒದಗಿದ್ದಕ್ಕೆ ಅವರು ಕೃತಜ್ಞರಾಗಿದ್ದಾರೆ.

“ನಾನು ಪ್ರತಿ ಬಾರಿ ನನ್ನ ನಮಾಜ್ ಮಾಡುವಾಗ ಈ ಇಬ್ಬರು ಪುರುಷರ ಬಗ್ಗೆ ಯೋಚಿಸುತ್ತೇನೆ. ಅಲ್ಲಾಹನು ಯಾವಾಗಲೂ ಅವರನ್ನು ಆಶೀರ್ವದಿಸುವನು ”ಎಂದು ನೂರ್ ತಾಯಿ ಮಲಯಾಳಂ ಪತ್ರಿಕೆಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...