Homeಮುಖಪುಟ4 ವರ್ಷದ ಹುಡುಗಿಯ ಕ್ಯಾನ್ಸರ್ ಔಷಧಿಗಾಗಿ ವ್ಯಕ್ತಿಯೊಬ್ಬ 150 ಕಿ.ಮೀ ಪ್ರಯಾಣಿಸಿದ ಕಥೆ.

4 ವರ್ಷದ ಹುಡುಗಿಯ ಕ್ಯಾನ್ಸರ್ ಔಷಧಿಗಾಗಿ ವ್ಯಕ್ತಿಯೊಬ್ಬ 150 ಕಿ.ಮೀ ಪ್ರಯಾಣಿಸಿದ ಕಥೆ.

- Advertisement -
- Advertisement -

21 ದಿನಗಳ ಲಾಕ್‌ಡೌನ್ ನಮ್ಮಲ್ಲಿ ಹಲವರ ಮೇಲೆ ಕಠಿಣ ಪರಿಣಾಮ ಬೀರಿರಬಹುದು. ಏಕೆಂದರೆ ಒಂದು ದಿನ ಹೊರಗಡೆ ಹೋಗದೆ ಬದುಕುವುದು ಹೇಗೆ ಎಂದು ನಾವು ಆಶ್ಚರ್ಯ ಪಡುತ್ತೇವೆ. ಆದರೆ ಕೆಲವು ಕಾಯಿಲೆಗಳಿಂದಾಗಿ ಅಕ್ಷರಶಃ ಇನ್ನೊಂದು ಹೆಚ್ಚು ದಿನ ಬದುಕಲು ಹೋರಾಡುತ್ತಿರುವವರಿಗೆ ಈ ಲಾಕ್‌ಡೌನ್‌ ವಿಶೇಷವಾಗಿ ಕ್ರೂರವಾಗಬಹುದು. ರಕ್ತದ ಕ್ಯಾನ್ಸರ್ ಹೊಂದಿರುವ ನಾಲ್ಕು ವರ್ಷದ ನೂರ್ (ಹೆಸರು ಬದಲಾಯಿಸಲಾಗಿದೆ) ಆ ಎರಡನೇ ವಿಭಾಗದಲ್ಲಿ ಸೇರುತ್ತಾಳೆ. ಈ ಕುರಿತು ದಿ ನ್ಯೂಸ್‌ ಮಿನಿಟ್‌ ಪ್ರಕಟಿಸಿದ ಬರಹದ ಕನ್ನಡ ಅನುವಾದ ಇಲ್ಲಿದೆ.

ಪ್ರತಿ ತಿಂಗಳು ನೂರ್‌ಳನ್ನು ತಿರುವನಂತಪುರಂನ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರಕ್ಕೆ, ತನ್ನ ಊರಾದ ಆಲಪ್ಪುಳದಿಂದ ಕೀಮೋಥೆರಪಿ ಚಿಕಿತ್ಸೆಗಾಗಿ ಕರೆದೊಯ್ಯಲಾಗುತ್ತಿತ್ತು. ಆದರೆ ಮಾರ್ಚ್‌ನಲ್ಲಿ ರಾಷ್ಟ್ರವ್ಯಾಪಿ ಲಾಕ್‌ಡೌನ್ ವಿಧಿಸಲಾಗಿದ್ದರಿಂದ ಆಸ್ಪತ್ರೆಯು ನೂರ್‌ಳ ಚಿಕಿತ್ಸೆಯನ್ನು ರದ್ದುಗೊಳಿಸಿದ್ದಲ್ಲದೆ, ಅವರ ಕುಟುಂಬವು ಔಷಧಿಗಳನ್ನು ಖರೀದಿಸಲು ದೂರದ ತಿರುವನಂತಪುರಂಗೆ ಪ್ರಯಾಣಿಸಲಾಗದೆ ಚಿಂತಿತರಾಗಿತ್ತು.

ಇಂತಹ ಕಷ್ಟಕರ ಸಮಯದಲ್ಲಿ ಅವರ ನೆರೆಮನೆಯಲ್ಲಿದ್ದ ವ್ಯಕ್ತಿ ಮತ್ತು ಪೊಲೀಸ್‌ ಅಧಿಕಾರಿಯೊಬ್ಬ ಮಾನವೀಯತೆಯ ರೂಪದಲ್ಲಿ ಒದಗಿಬಂದಿದ್ದಾರೆ. ಆ ಮಗುವಿನೊಂದಿಗೆ ಅವರಿಗೆ ಯಾವುದೇ ಸಂಬಂಧವಿಲ್ಲದಿದ್ದರೂ, ಆಕೆಯ ಜೀವ ಉಳಿಸುವ ಸಲುವಾಗಿ ಮಾರ್ಚ್ 31 ರಂದು ತಿರುವನಂತಪುರಂ ವೈದ್ಯಕೀಯ ಕಾಲೇಜು ಆಸ್ಪತ್ರೆಯ ವೈದ್ಯಕೀಯ ಸಾರ್ಜೆಂಟ್ ಆಗಿರುವ ಕೆ.ಪಿ.ವಿಷ್ಣು ಅವರು ತಮ್ಮ ಬೈಕ್‌ನಲ್ಲಿ 150 ಕಿ.ಮೀ ಪ್ರಯಾಣಿಸಿ ತಮ್ಮ ಕೈಯಿಂದ ಹಣ ಹಾಕಿ ಔಷಧಿ ಖರೀದಿಸಿ ಆ ಕುಟುಂಬಕ್ಕೆ ನೀಡಿದ್ದಾರೆ. ಔಷಧಿ ಕೈಸೇರುವವರೆಗೂ ವಿಷ್ಣುವಿನ ಈ ಸಾಹಸ ನೂರ್‌ಳ ಕುಟುಂಬಕ್ಕೆ ತಿಳಿದಿರಲಿಲ್ಲ.

ಆಲಪ್ಪುಳಾ ನಾರ್ತ್ ಸ್ಟೇಷನ್‌ನ ನಾಗರಿಕ ಪೊಲೀಸ್ ಅಧಿಕಾರಿ ಮತ್ತು ವಿಷ್ಣುವಿನ ನೆರೆಹೊರೆಯ ಆಂಟನಿ ರತೀಶ್, “ನಾನು ನೂರ್‌ನ ಕುಟುಂಬವನ್ನು ಕೆಲವು ತಿಂಗಳುಗಳಿಂದ ತಿಳಿದಿದ್ದೇನೆ. ಮಾರ್ಚ್ 30 ರಂದು, ಆಕೆಯ ತಾಯಿ ನನಗೆ ಕರೆ ಮಾಡಿ, ತನ್ನ ಮಗಳ ಕೀಮೋಥೆರಪಿಯನ್ನು ರದ್ದುಪಡಿಸಲಾಗಿದೆ ಮತ್ತು ವೈದ್ಯರು ಔಷಧಿ ತೆಗೆದುಕೊಳ್ಳುವುದನ್ನು ಮುಂದುವರೆಸಬೇಕೆಂದು ಕೇಳಿಕೊಂಡಿದ್ದಾರೆ. ಆದರೆ ಅವರ ಮನೆಯಲ್ಲಿ ಔಷಧಿ ಖಾಲಿಯಾಗಿತ್ತಲ್ಲದೇ ಆಲಪ್ಪುಳದಲ್ಲಿ ಎಲ್ಲಿಯೂ ಔಷಧಿಯನ್ನು ಸಿಗಲಿಲ್ಲ. ಅವರು ಲಾಕ್‌ಡೌನ್‌ ಸಮಯದಲ್ಲಿ ಔಷಧಿ ತರಲು ತಿರುವನಂತಪುರಂಗೆ ಕ್ಯಾಬ್ ತೆಗೆದುಕೊಳ್ಳುವಷ್ಟು ಹಣ ಹೊಂದಿಲ್ಲ” ಎಂದು ತಿಳಿಸಿದ್ದರು.

ಆ ನಂತರ ಅವರಿಗೆ ಹೇಗೆ ಸಹಾಯ ಮಾಡಬೇಕೆಂದು ಆಶ್ಚರ್ಯಪಟ್ಟ ರತೀಶ್, ತಿರುವನಂತಪುರಂ ವೈದ್ಯಕೀಯ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದ ತನ್ನ ನೆರೆಹೊರೆಯ ವಿಷ್ಣುವನ್ನು ಸಂಪರ್ಕಿಸಿದರು. ಆದರೆ ವಿಷ್ಣು ಆ ರಾತ್ರಿ ತಾನೇ ತಿರುವನಂತಪುರಕ್ಕೆ ತೆರಳಿದ್ದರು ಮತ್ತು ಅವರು ತಮ್ಮ ಕರ್ತವ್ಯವನ್ನು ಪೂರ್ಣಗೊಳಿಸುವವರೆಗೆ ಒಂದು ವಾರ ಅಲ್ಲಿಯೇ ಇರಲು ಯೋಜಿಸಿದ್ದರು.

“ನಾನು ಅವರಿಗೆ ಕರೆ ಮಾಡಿದಾಗ ಅವರು ತಿರುವನಂತಪುರಂ ತಲುಪಿದ್ದರು. ಪ್ರಾದೇಶಿಕ ಕ್ಯಾನ್ಸರ್ ಕೇಂದ್ರದಿಂದ ಔಷಧಿಯನ್ನು ಖರೀದಿಸಿ ಕೊಲ್ಲಂ ಜಿಲ್ಲೆಯವರೆಗೆ ಮಾತ್ರ ತಲುಪಿಸಬಹುದು ಎಂದು ಹೇಳಿದರು. ಆದರೆ ಮರುದಿನ ಬೆಳಿಗ್ಗೆ ಅವರು ಮನಸ್ಸು ಬದಲಿಸಿ 150 ಕಿಲೋಮೀಟರ್ ಸವಾರಿ ಮಾಡಿ, ನೂರ್‌ನ ಮನೆ ಬಾಗಿಲಿಗೆ ಹೋಗಿ ಔಷಧಿಗಳನ್ನು ತಲುಪಿಸಿದನು. ಆ ರಾತ್ರಿ ಅವನು ಮಲಗಿದ್ದನೆಂದು ನಾನು ಭಾವಿಸುವುದಿಲ್ಲ” ಎಂದು ರತೀಶ್ ಹೇಳುತ್ತಾರೆ.

ಮಾಜಿ ಪೊಲೀಸ್ ಅಧಿಕಾರಿಯಾಗಿದ್ದ 32 ವರ್ಷದ ಸಾರ್ಜೆಂಟ್ ವಿಷ್ಣು, ಔಷಧಿಗಳನ್ನು ವಿತರಿಸಿದ ನಂತರ ಆಲಪ್ಪುಳದಲ್ಲಿ ಒಂದು ದಿನ ಇದ್ದು ನಂತರ ತಿರುವನಂತಪುರಂಗೆ ಹಿಂತಿರುಗಿದ್ದಾರೆ.

ಲಾಕ್‌ಡೌನ್ ಹೊರತಾಗಿಯೂ ನೂರ್‌ಗೆ ಈಗ ಅಗತ್ಯ ಔಷಧಿಗಳು ಲಭ್ಯವಾದ್ದರಿಂದ, ಅವರ ಕುಟುಂಬವು ಸಂತೋಷದಲ್ಲಿದೆ. ಅತ್ಯಂತ ಅನಿರೀಕ್ಷಿತ ಮೂಲಗಳಿಂದ ಸಹಾಯ ಒದಗಿದ್ದಕ್ಕೆ ಅವರು ಕೃತಜ್ಞರಾಗಿದ್ದಾರೆ.

“ನಾನು ಪ್ರತಿ ಬಾರಿ ನನ್ನ ನಮಾಜ್ ಮಾಡುವಾಗ ಈ ಇಬ್ಬರು ಪುರುಷರ ಬಗ್ಗೆ ಯೋಚಿಸುತ್ತೇನೆ. ಅಲ್ಲಾಹನು ಯಾವಾಗಲೂ ಅವರನ್ನು ಆಶೀರ್ವದಿಸುವನು ”ಎಂದು ನೂರ್ ತಾಯಿ ಮಲಯಾಳಂ ಪತ್ರಿಕೆಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...