Homeಮುಖಪುಟ4 ವರ್ಷದ ಹುಡುಗಿಯ ಕ್ಯಾನ್ಸರ್ ಔಷಧಿಗಾಗಿ ವ್ಯಕ್ತಿಯೊಬ್ಬ 150 ಕಿ.ಮೀ ಪ್ರಯಾಣಿಸಿದ ಕಥೆ.

4 ವರ್ಷದ ಹುಡುಗಿಯ ಕ್ಯಾನ್ಸರ್ ಔಷಧಿಗಾಗಿ ವ್ಯಕ್ತಿಯೊಬ್ಬ 150 ಕಿ.ಮೀ ಪ್ರಯಾಣಿಸಿದ ಕಥೆ.

- Advertisement -
- Advertisement -

21 ದಿನಗಳ ಲಾಕ್‌ಡೌನ್ ನಮ್ಮಲ್ಲಿ ಹಲವರ ಮೇಲೆ ಕಠಿಣ ಪರಿಣಾಮ ಬೀರಿರಬಹುದು. ಏಕೆಂದರೆ ಒಂದು ದಿನ ಹೊರಗಡೆ ಹೋಗದೆ ಬದುಕುವುದು ಹೇಗೆ ಎಂದು ನಾವು ಆಶ್ಚರ್ಯ ಪಡುತ್ತೇವೆ. ಆದರೆ ಕೆಲವು ಕಾಯಿಲೆಗಳಿಂದಾಗಿ ಅಕ್ಷರಶಃ ಇನ್ನೊಂದು ಹೆಚ್ಚು ದಿನ ಬದುಕಲು ಹೋರಾಡುತ್ತಿರುವವರಿಗೆ ಈ ಲಾಕ್‌ಡೌನ್‌ ವಿಶೇಷವಾಗಿ ಕ್ರೂರವಾಗಬಹುದು. ರಕ್ತದ ಕ್ಯಾನ್ಸರ್ ಹೊಂದಿರುವ ನಾಲ್ಕು ವರ್ಷದ ನೂರ್ (ಹೆಸರು ಬದಲಾಯಿಸಲಾಗಿದೆ) ಆ ಎರಡನೇ ವಿಭಾಗದಲ್ಲಿ ಸೇರುತ್ತಾಳೆ. ಈ ಕುರಿತು ದಿ ನ್ಯೂಸ್‌ ಮಿನಿಟ್‌ ಪ್ರಕಟಿಸಿದ ಬರಹದ ಕನ್ನಡ ಅನುವಾದ ಇಲ್ಲಿದೆ.

ಪ್ರತಿ ತಿಂಗಳು ನೂರ್‌ಳನ್ನು ತಿರುವನಂತಪುರಂನ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರಕ್ಕೆ, ತನ್ನ ಊರಾದ ಆಲಪ್ಪುಳದಿಂದ ಕೀಮೋಥೆರಪಿ ಚಿಕಿತ್ಸೆಗಾಗಿ ಕರೆದೊಯ್ಯಲಾಗುತ್ತಿತ್ತು. ಆದರೆ ಮಾರ್ಚ್‌ನಲ್ಲಿ ರಾಷ್ಟ್ರವ್ಯಾಪಿ ಲಾಕ್‌ಡೌನ್ ವಿಧಿಸಲಾಗಿದ್ದರಿಂದ ಆಸ್ಪತ್ರೆಯು ನೂರ್‌ಳ ಚಿಕಿತ್ಸೆಯನ್ನು ರದ್ದುಗೊಳಿಸಿದ್ದಲ್ಲದೆ, ಅವರ ಕುಟುಂಬವು ಔಷಧಿಗಳನ್ನು ಖರೀದಿಸಲು ದೂರದ ತಿರುವನಂತಪುರಂಗೆ ಪ್ರಯಾಣಿಸಲಾಗದೆ ಚಿಂತಿತರಾಗಿತ್ತು.

ಇಂತಹ ಕಷ್ಟಕರ ಸಮಯದಲ್ಲಿ ಅವರ ನೆರೆಮನೆಯಲ್ಲಿದ್ದ ವ್ಯಕ್ತಿ ಮತ್ತು ಪೊಲೀಸ್‌ ಅಧಿಕಾರಿಯೊಬ್ಬ ಮಾನವೀಯತೆಯ ರೂಪದಲ್ಲಿ ಒದಗಿಬಂದಿದ್ದಾರೆ. ಆ ಮಗುವಿನೊಂದಿಗೆ ಅವರಿಗೆ ಯಾವುದೇ ಸಂಬಂಧವಿಲ್ಲದಿದ್ದರೂ, ಆಕೆಯ ಜೀವ ಉಳಿಸುವ ಸಲುವಾಗಿ ಮಾರ್ಚ್ 31 ರಂದು ತಿರುವನಂತಪುರಂ ವೈದ್ಯಕೀಯ ಕಾಲೇಜು ಆಸ್ಪತ್ರೆಯ ವೈದ್ಯಕೀಯ ಸಾರ್ಜೆಂಟ್ ಆಗಿರುವ ಕೆ.ಪಿ.ವಿಷ್ಣು ಅವರು ತಮ್ಮ ಬೈಕ್‌ನಲ್ಲಿ 150 ಕಿ.ಮೀ ಪ್ರಯಾಣಿಸಿ ತಮ್ಮ ಕೈಯಿಂದ ಹಣ ಹಾಕಿ ಔಷಧಿ ಖರೀದಿಸಿ ಆ ಕುಟುಂಬಕ್ಕೆ ನೀಡಿದ್ದಾರೆ. ಔಷಧಿ ಕೈಸೇರುವವರೆಗೂ ವಿಷ್ಣುವಿನ ಈ ಸಾಹಸ ನೂರ್‌ಳ ಕುಟುಂಬಕ್ಕೆ ತಿಳಿದಿರಲಿಲ್ಲ.

ಆಲಪ್ಪುಳಾ ನಾರ್ತ್ ಸ್ಟೇಷನ್‌ನ ನಾಗರಿಕ ಪೊಲೀಸ್ ಅಧಿಕಾರಿ ಮತ್ತು ವಿಷ್ಣುವಿನ ನೆರೆಹೊರೆಯ ಆಂಟನಿ ರತೀಶ್, “ನಾನು ನೂರ್‌ನ ಕುಟುಂಬವನ್ನು ಕೆಲವು ತಿಂಗಳುಗಳಿಂದ ತಿಳಿದಿದ್ದೇನೆ. ಮಾರ್ಚ್ 30 ರಂದು, ಆಕೆಯ ತಾಯಿ ನನಗೆ ಕರೆ ಮಾಡಿ, ತನ್ನ ಮಗಳ ಕೀಮೋಥೆರಪಿಯನ್ನು ರದ್ದುಪಡಿಸಲಾಗಿದೆ ಮತ್ತು ವೈದ್ಯರು ಔಷಧಿ ತೆಗೆದುಕೊಳ್ಳುವುದನ್ನು ಮುಂದುವರೆಸಬೇಕೆಂದು ಕೇಳಿಕೊಂಡಿದ್ದಾರೆ. ಆದರೆ ಅವರ ಮನೆಯಲ್ಲಿ ಔಷಧಿ ಖಾಲಿಯಾಗಿತ್ತಲ್ಲದೇ ಆಲಪ್ಪುಳದಲ್ಲಿ ಎಲ್ಲಿಯೂ ಔಷಧಿಯನ್ನು ಸಿಗಲಿಲ್ಲ. ಅವರು ಲಾಕ್‌ಡೌನ್‌ ಸಮಯದಲ್ಲಿ ಔಷಧಿ ತರಲು ತಿರುವನಂತಪುರಂಗೆ ಕ್ಯಾಬ್ ತೆಗೆದುಕೊಳ್ಳುವಷ್ಟು ಹಣ ಹೊಂದಿಲ್ಲ” ಎಂದು ತಿಳಿಸಿದ್ದರು.

ಆ ನಂತರ ಅವರಿಗೆ ಹೇಗೆ ಸಹಾಯ ಮಾಡಬೇಕೆಂದು ಆಶ್ಚರ್ಯಪಟ್ಟ ರತೀಶ್, ತಿರುವನಂತಪುರಂ ವೈದ್ಯಕೀಯ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದ ತನ್ನ ನೆರೆಹೊರೆಯ ವಿಷ್ಣುವನ್ನು ಸಂಪರ್ಕಿಸಿದರು. ಆದರೆ ವಿಷ್ಣು ಆ ರಾತ್ರಿ ತಾನೇ ತಿರುವನಂತಪುರಕ್ಕೆ ತೆರಳಿದ್ದರು ಮತ್ತು ಅವರು ತಮ್ಮ ಕರ್ತವ್ಯವನ್ನು ಪೂರ್ಣಗೊಳಿಸುವವರೆಗೆ ಒಂದು ವಾರ ಅಲ್ಲಿಯೇ ಇರಲು ಯೋಜಿಸಿದ್ದರು.

“ನಾನು ಅವರಿಗೆ ಕರೆ ಮಾಡಿದಾಗ ಅವರು ತಿರುವನಂತಪುರಂ ತಲುಪಿದ್ದರು. ಪ್ರಾದೇಶಿಕ ಕ್ಯಾನ್ಸರ್ ಕೇಂದ್ರದಿಂದ ಔಷಧಿಯನ್ನು ಖರೀದಿಸಿ ಕೊಲ್ಲಂ ಜಿಲ್ಲೆಯವರೆಗೆ ಮಾತ್ರ ತಲುಪಿಸಬಹುದು ಎಂದು ಹೇಳಿದರು. ಆದರೆ ಮರುದಿನ ಬೆಳಿಗ್ಗೆ ಅವರು ಮನಸ್ಸು ಬದಲಿಸಿ 150 ಕಿಲೋಮೀಟರ್ ಸವಾರಿ ಮಾಡಿ, ನೂರ್‌ನ ಮನೆ ಬಾಗಿಲಿಗೆ ಹೋಗಿ ಔಷಧಿಗಳನ್ನು ತಲುಪಿಸಿದನು. ಆ ರಾತ್ರಿ ಅವನು ಮಲಗಿದ್ದನೆಂದು ನಾನು ಭಾವಿಸುವುದಿಲ್ಲ” ಎಂದು ರತೀಶ್ ಹೇಳುತ್ತಾರೆ.

ಮಾಜಿ ಪೊಲೀಸ್ ಅಧಿಕಾರಿಯಾಗಿದ್ದ 32 ವರ್ಷದ ಸಾರ್ಜೆಂಟ್ ವಿಷ್ಣು, ಔಷಧಿಗಳನ್ನು ವಿತರಿಸಿದ ನಂತರ ಆಲಪ್ಪುಳದಲ್ಲಿ ಒಂದು ದಿನ ಇದ್ದು ನಂತರ ತಿರುವನಂತಪುರಂಗೆ ಹಿಂತಿರುಗಿದ್ದಾರೆ.

ಲಾಕ್‌ಡೌನ್ ಹೊರತಾಗಿಯೂ ನೂರ್‌ಗೆ ಈಗ ಅಗತ್ಯ ಔಷಧಿಗಳು ಲಭ್ಯವಾದ್ದರಿಂದ, ಅವರ ಕುಟುಂಬವು ಸಂತೋಷದಲ್ಲಿದೆ. ಅತ್ಯಂತ ಅನಿರೀಕ್ಷಿತ ಮೂಲಗಳಿಂದ ಸಹಾಯ ಒದಗಿದ್ದಕ್ಕೆ ಅವರು ಕೃತಜ್ಞರಾಗಿದ್ದಾರೆ.

“ನಾನು ಪ್ರತಿ ಬಾರಿ ನನ್ನ ನಮಾಜ್ ಮಾಡುವಾಗ ಈ ಇಬ್ಬರು ಪುರುಷರ ಬಗ್ಗೆ ಯೋಚಿಸುತ್ತೇನೆ. ಅಲ್ಲಾಹನು ಯಾವಾಗಲೂ ಅವರನ್ನು ಆಶೀರ್ವದಿಸುವನು ”ಎಂದು ನೂರ್ ತಾಯಿ ಮಲಯಾಳಂ ಪತ್ರಿಕೆಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...