Homeಕರ್ನಾಟಕದೇವೆಗೌಡರ ಕುಟುಂಬದ ಕುರಿತು ಸುಳ್ಳು ಸುದ್ದಿ ಪ್ರಕಟ: ವಿಶ್ವೇಶ್ವರ್ ಭಟ್ ಮೇಲೆ ಎಫ್‍ಐಆರ್ ದಾಖಲು

ದೇವೆಗೌಡರ ಕುಟುಂಬದ ಕುರಿತು ಸುಳ್ಳು ಸುದ್ದಿ ಪ್ರಕಟ: ವಿಶ್ವೇಶ್ವರ್ ಭಟ್ ಮೇಲೆ ಎಫ್‍ಐಆರ್ ದಾಖಲು

ಪ್ರದೀಪ್ ಕುಮಾರ್ ಎಸ್‍ಪಿ ಎಂಬುವವರು ಮೇ 26ರಂದು ನೀಡಿರುವ ದೂರಿನ ಅನ್ವಯ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಲೋಕಸಭಾ ಚುನಾವಣೆಯ ಸೋಲಿನ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಕುಡಿದು ಮೈಸೂರಿನಲ್ಲಿ ರಂಪಾಟ ಮಾಡಿದ್ದಾರೆ. ಅಲ್ಲದೇ ತನ್ನ ತಾತ ದೇವೇಗೌಡರಿಗೆ ಕರೆ ಮಾಡಿ ನನ್ನ ಸೋಲಿಗೆ ನೀವೇ ಕಾರಣ, ನನ್ನನ್ನು ಚಕ್ರವ್ಯೂಹದಲ್ಲಿ ಸಿಕ್ಕಿಸಿಬಿಟ್ಟಿದ್ದೀರಿ ಎಂದೆಲ್ಲಾ ಸುಳ್ಳು ಸುದ್ದಿ ಪ್ರಕಟಿಸಿದ್ದ ವಿಶ್ವವಾಣಿ ಪತ್ರಿಕೆಯ ಸಂಪಾದಕ ವಿಶ್ವೇಶ್ವರ್ ಭಟ್ ಮತ್ತು ಸಿಬ್ಬಂದಿಗಳ ಮೇಲೆ ಮಾನಹಾನಿ ಪ್ರಕರಣದಲ್ಲಿ ಎಫ್‍ಐಆರ್ ದಾಖಲಾಗಿದೆ.

ಪ್ರದೀಪ್ ಕುಮಾರ್ ಎಸ್‍ಪಿ ಎಂಬುವವರು ಮೇ 26ರಂದು ನೀಡಿರುವ ದೂರಿನ ಅನ್ವಯ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ವಿಶ್ವವಾಣಿ ಪತ್ರಿಕೆಯು ದೇವೇಗೌಡರ ಮತ್ತು ನಿಖಿಲ್ ಕುಮಾರಸ್ವಾಮಿಯವರ ತೇಜೋವಧೆ ಮಾಡಲೇಂದೆ ಸುಳ್ಳು ವರದಿ ಪ್ರಕಟಿಸಲಾಗಿದೆ ಎಂದು ದೂರಿದ್ದಾರೆ.

ಒಬ್ಬ ಮಹಿಳೆ ವಿರುದ್ಧ ಸೋತಿದ್ದು ನನಗೆ ಅವಮಾನವಾಗಿದೆ, ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ, ಹಾಗೂ ಹೆಚ್.ಡಿ ದೇವೆಗೌಡರ ಬಗ್ಗೆ ‘ಗೌಡರ ಮೊಮ್ಮಕ್ಕಳ ಗದ್ದಲ ಗೊಂದಲ’ ಎಂದೆಲ್ಲಾ ಅಪಪ್ರಚಾರ ಮಾಡಲಾಗಿದೆ. ನಿಖಿಲ್ ಕುಮಾರಸ್ವಾಮಿ ದೇವೇಗೌಡರಿಗೆ ಬೆದರಿಕೆ ಕೂಗಟ ಮಾಡಿದ್ದಾರೆ ಎನ್ನುವ ರೀತಿಯಲ್ಲಿ ವಿಶ್ವವಾಣಿ ಪತ್ರಿಕೆಯಲ್ಲಿ, ಇದೊಂದು ಪೂರ್ವನಿಯೋಜಿತ ಒಳಸಂಚಿನ ಪ್ರಕಟಣೆಯಾಗಿದ್ದು, ಉಹಾಪೋಹ ಕಲ್ಪನೆಯ ಪ್ರಕಟಣೆಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರು ಸಲ್ಲಿಸಿದ್ದರು.

ಈ ಕುರಿತು ಎನ್‍ಡಿಟಿವಿಯೊಂದಿಗೆ ಪ್ರತಿಕ್ರಿಯಿಸಿರುವ ವಿಶ್ವೇಶ್ವರ್ ಭಟ್ ನಾನು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಮರುದಿನ ತಂದೆಯ ನೋವು ಎಂದು ಅವರ ಹೇಳಿಕೆಯನ್ನು ಸಹ ವರದಿ ಪ್ರಕಟಿಸಿದ್ದೇನೆ ಎಂದು ಸಮರ್ಥನೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಅಲ್ಲದೇ ನಿಖಿಲ್ ಕುಮಾರಸ್ವಾಮಿ ನನಗೆ ಎರಡು ಬಾರಿ ಕರೆ ಮಾಡಿದ್ದರು. ಎರಡನೇ ಸಲ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಬೆದರಿಕೆ ಹಾಕಿದರು ಎಂದು ದೂರಿದ್ದಾರೆ. ಅಲ್ಲದೇ ನಾನು ಬಿಜೆಪಿ ಪರವಾಗಿ ಇಲ್ಲ, ಅದು ವಿರೋಧ ಪಕ್ಷದಲ್ಲಿರುವ ಕಾರಣ ನನ್ನನ್ನ ಬೆಂಬಲಿಸುತ್ತಿದೆ ಅಷ್ಟೇ ಎಂದಿದ್ದಾರೆ.

ಈ ಕುರಿತು ಗೃಹ ಸಚಿವ ಎಂ.ಬಿ ಪಾಟೀಲ್ ಪ್ರತಿಕ್ರಿಯಿಸಿದ್ದು ಮಾಧ್ಯಮಗಳು ಫೋರ್ಜರಿ ಮಾಡಿದರೆ ಅದು ತಪ್ಪು. ಅಂತಹ ಮಾಧ್ಯಮವನ್ನು ಯಾರು ರಕ್ಷಿಸಿದರೆ ಅದಕ್ಕಿಂತ ನಾಚಿಕೆ ಮತ್ತೊಂದಿಲ್ಲ, ಇದರ ಕುರಿತು ತನಿಖೆ ನಡೆಯುತ್ತಿದೆ, ನಾನು ಮಧ್ಯ ಪ್ರವೇಶಿಸುವುದಿಲ್ಲ ಎಂದಿದ್ದಾರೆ.

ಒಬ್ಬ ಸಂಪಾದಕನ ಮೇಲೆ ಎಫ್‍ಐಆರ್ ದಾಖಲಾಗಿದೆ. ಅದು ಸಹ ಸುಳ್ಳು ಸುದ್ದಿ ಪ್ರಕಟಿಸಿರುವ ಕಾರಣಕ್ಕಾಗಿ. ಯಾವ ಕನ್ನಡ ಚಾನೆಲ್‍ಗಳು ಕೂಡ ಇದನ್ನು ಸುದ್ದಿ ಮಾಡುತ್ತಿಲ್ಲ ಏಕೆ? ಎಂದು ಹಲವಾರು ನೆಟ್ಟಿಗರು ಸೋಷಿಯಲ್ ಮೀಡಿಯಾದಲ್ಲಿ ಕಿಡಿ ಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಸಂಪಾದಕರ ಜೊತೆ ಈ ಖಾವಿ ತೊಟ್ಟ ಎರಡೆರಡು ಅತ್ಯಾಚಾರದ ಆರೋಪ ಹೊತ್ತಿರುವ ಈ ಕ್ಷಣಕ್ಕೂ ಬೇಲ್ ಮೇಲೆ ತಿರುಗುತ್ತಿರುವ ಈ ಸ್ವಾಮೀಜಿಯನ್ನು ಬಂಧಿಸಬೇಕು. ಯಾಕೆಂದರೆ ಇವನು ಈ ಪತ್ರಿಕೆಯ ಬೇನಾಮಿ ಪಾಲುದಾರ. ಸರಿಯಾಗಿ ಒದ್ದು ವಿಚಾರಣೆ ಮಾಡಿದರೆ ಗೌರಿ ಲಂಕೇಶ್ ಹತ್ಯೆಯಲ್ಲಿ ಈತನ ಪಾತ್ರವು ಬಯಲಾಗುತ್ತದೆ.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...