Homeಕರ್ನಾಟಕದೇವೆಗೌಡರ ಕುಟುಂಬದ ಕುರಿತು ಸುಳ್ಳು ಸುದ್ದಿ ಪ್ರಕಟ: ವಿಶ್ವೇಶ್ವರ್ ಭಟ್ ಮೇಲೆ ಎಫ್‍ಐಆರ್ ದಾಖಲು

ದೇವೆಗೌಡರ ಕುಟುಂಬದ ಕುರಿತು ಸುಳ್ಳು ಸುದ್ದಿ ಪ್ರಕಟ: ವಿಶ್ವೇಶ್ವರ್ ಭಟ್ ಮೇಲೆ ಎಫ್‍ಐಆರ್ ದಾಖಲು

ಪ್ರದೀಪ್ ಕುಮಾರ್ ಎಸ್‍ಪಿ ಎಂಬುವವರು ಮೇ 26ರಂದು ನೀಡಿರುವ ದೂರಿನ ಅನ್ವಯ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಲೋಕಸಭಾ ಚುನಾವಣೆಯ ಸೋಲಿನ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಕುಡಿದು ಮೈಸೂರಿನಲ್ಲಿ ರಂಪಾಟ ಮಾಡಿದ್ದಾರೆ. ಅಲ್ಲದೇ ತನ್ನ ತಾತ ದೇವೇಗೌಡರಿಗೆ ಕರೆ ಮಾಡಿ ನನ್ನ ಸೋಲಿಗೆ ನೀವೇ ಕಾರಣ, ನನ್ನನ್ನು ಚಕ್ರವ್ಯೂಹದಲ್ಲಿ ಸಿಕ್ಕಿಸಿಬಿಟ್ಟಿದ್ದೀರಿ ಎಂದೆಲ್ಲಾ ಸುಳ್ಳು ಸುದ್ದಿ ಪ್ರಕಟಿಸಿದ್ದ ವಿಶ್ವವಾಣಿ ಪತ್ರಿಕೆಯ ಸಂಪಾದಕ ವಿಶ್ವೇಶ್ವರ್ ಭಟ್ ಮತ್ತು ಸಿಬ್ಬಂದಿಗಳ ಮೇಲೆ ಮಾನಹಾನಿ ಪ್ರಕರಣದಲ್ಲಿ ಎಫ್‍ಐಆರ್ ದಾಖಲಾಗಿದೆ.

ಪ್ರದೀಪ್ ಕುಮಾರ್ ಎಸ್‍ಪಿ ಎಂಬುವವರು ಮೇ 26ರಂದು ನೀಡಿರುವ ದೂರಿನ ಅನ್ವಯ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ವಿಶ್ವವಾಣಿ ಪತ್ರಿಕೆಯು ದೇವೇಗೌಡರ ಮತ್ತು ನಿಖಿಲ್ ಕುಮಾರಸ್ವಾಮಿಯವರ ತೇಜೋವಧೆ ಮಾಡಲೇಂದೆ ಸುಳ್ಳು ವರದಿ ಪ್ರಕಟಿಸಲಾಗಿದೆ ಎಂದು ದೂರಿದ್ದಾರೆ.

ಒಬ್ಬ ಮಹಿಳೆ ವಿರುದ್ಧ ಸೋತಿದ್ದು ನನಗೆ ಅವಮಾನವಾಗಿದೆ, ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ, ಹಾಗೂ ಹೆಚ್.ಡಿ ದೇವೆಗೌಡರ ಬಗ್ಗೆ ‘ಗೌಡರ ಮೊಮ್ಮಕ್ಕಳ ಗದ್ದಲ ಗೊಂದಲ’ ಎಂದೆಲ್ಲಾ ಅಪಪ್ರಚಾರ ಮಾಡಲಾಗಿದೆ. ನಿಖಿಲ್ ಕುಮಾರಸ್ವಾಮಿ ದೇವೇಗೌಡರಿಗೆ ಬೆದರಿಕೆ ಕೂಗಟ ಮಾಡಿದ್ದಾರೆ ಎನ್ನುವ ರೀತಿಯಲ್ಲಿ ವಿಶ್ವವಾಣಿ ಪತ್ರಿಕೆಯಲ್ಲಿ, ಇದೊಂದು ಪೂರ್ವನಿಯೋಜಿತ ಒಳಸಂಚಿನ ಪ್ರಕಟಣೆಯಾಗಿದ್ದು, ಉಹಾಪೋಹ ಕಲ್ಪನೆಯ ಪ್ರಕಟಣೆಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರು ಸಲ್ಲಿಸಿದ್ದರು.

ಈ ಕುರಿತು ಎನ್‍ಡಿಟಿವಿಯೊಂದಿಗೆ ಪ್ರತಿಕ್ರಿಯಿಸಿರುವ ವಿಶ್ವೇಶ್ವರ್ ಭಟ್ ನಾನು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಮರುದಿನ ತಂದೆಯ ನೋವು ಎಂದು ಅವರ ಹೇಳಿಕೆಯನ್ನು ಸಹ ವರದಿ ಪ್ರಕಟಿಸಿದ್ದೇನೆ ಎಂದು ಸಮರ್ಥನೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಅಲ್ಲದೇ ನಿಖಿಲ್ ಕುಮಾರಸ್ವಾಮಿ ನನಗೆ ಎರಡು ಬಾರಿ ಕರೆ ಮಾಡಿದ್ದರು. ಎರಡನೇ ಸಲ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಬೆದರಿಕೆ ಹಾಕಿದರು ಎಂದು ದೂರಿದ್ದಾರೆ. ಅಲ್ಲದೇ ನಾನು ಬಿಜೆಪಿ ಪರವಾಗಿ ಇಲ್ಲ, ಅದು ವಿರೋಧ ಪಕ್ಷದಲ್ಲಿರುವ ಕಾರಣ ನನ್ನನ್ನ ಬೆಂಬಲಿಸುತ್ತಿದೆ ಅಷ್ಟೇ ಎಂದಿದ್ದಾರೆ.

ಈ ಕುರಿತು ಗೃಹ ಸಚಿವ ಎಂ.ಬಿ ಪಾಟೀಲ್ ಪ್ರತಿಕ್ರಿಯಿಸಿದ್ದು ಮಾಧ್ಯಮಗಳು ಫೋರ್ಜರಿ ಮಾಡಿದರೆ ಅದು ತಪ್ಪು. ಅಂತಹ ಮಾಧ್ಯಮವನ್ನು ಯಾರು ರಕ್ಷಿಸಿದರೆ ಅದಕ್ಕಿಂತ ನಾಚಿಕೆ ಮತ್ತೊಂದಿಲ್ಲ, ಇದರ ಕುರಿತು ತನಿಖೆ ನಡೆಯುತ್ತಿದೆ, ನಾನು ಮಧ್ಯ ಪ್ರವೇಶಿಸುವುದಿಲ್ಲ ಎಂದಿದ್ದಾರೆ.

ಒಬ್ಬ ಸಂಪಾದಕನ ಮೇಲೆ ಎಫ್‍ಐಆರ್ ದಾಖಲಾಗಿದೆ. ಅದು ಸಹ ಸುಳ್ಳು ಸುದ್ದಿ ಪ್ರಕಟಿಸಿರುವ ಕಾರಣಕ್ಕಾಗಿ. ಯಾವ ಕನ್ನಡ ಚಾನೆಲ್‍ಗಳು ಕೂಡ ಇದನ್ನು ಸುದ್ದಿ ಮಾಡುತ್ತಿಲ್ಲ ಏಕೆ? ಎಂದು ಹಲವಾರು ನೆಟ್ಟಿಗರು ಸೋಷಿಯಲ್ ಮೀಡಿಯಾದಲ್ಲಿ ಕಿಡಿ ಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಸಂಪಾದಕರ ಜೊತೆ ಈ ಖಾವಿ ತೊಟ್ಟ ಎರಡೆರಡು ಅತ್ಯಾಚಾರದ ಆರೋಪ ಹೊತ್ತಿರುವ ಈ ಕ್ಷಣಕ್ಕೂ ಬೇಲ್ ಮೇಲೆ ತಿರುಗುತ್ತಿರುವ ಈ ಸ್ವಾಮೀಜಿಯನ್ನು ಬಂಧಿಸಬೇಕು. ಯಾಕೆಂದರೆ ಇವನು ಈ ಪತ್ರಿಕೆಯ ಬೇನಾಮಿ ಪಾಲುದಾರ. ಸರಿಯಾಗಿ ಒದ್ದು ವಿಚಾರಣೆ ಮಾಡಿದರೆ ಗೌರಿ ಲಂಕೇಶ್ ಹತ್ಯೆಯಲ್ಲಿ ಈತನ ಪಾತ್ರವು ಬಯಲಾಗುತ್ತದೆ.

LEAVE A REPLY

Please enter your comment!
Please enter your name here

- Advertisment -

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...