Homeಕರ್ನಾಟಕದೇವೆಗೌಡರ ಕುಟುಂಬದ ಕುರಿತು ಸುಳ್ಳು ಸುದ್ದಿ ಪ್ರಕಟ: ವಿಶ್ವೇಶ್ವರ್ ಭಟ್ ಮೇಲೆ ಎಫ್‍ಐಆರ್ ದಾಖಲು

ದೇವೆಗೌಡರ ಕುಟುಂಬದ ಕುರಿತು ಸುಳ್ಳು ಸುದ್ದಿ ಪ್ರಕಟ: ವಿಶ್ವೇಶ್ವರ್ ಭಟ್ ಮೇಲೆ ಎಫ್‍ಐಆರ್ ದಾಖಲು

ಪ್ರದೀಪ್ ಕುಮಾರ್ ಎಸ್‍ಪಿ ಎಂಬುವವರು ಮೇ 26ರಂದು ನೀಡಿರುವ ದೂರಿನ ಅನ್ವಯ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಲೋಕಸಭಾ ಚುನಾವಣೆಯ ಸೋಲಿನ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಕುಡಿದು ಮೈಸೂರಿನಲ್ಲಿ ರಂಪಾಟ ಮಾಡಿದ್ದಾರೆ. ಅಲ್ಲದೇ ತನ್ನ ತಾತ ದೇವೇಗೌಡರಿಗೆ ಕರೆ ಮಾಡಿ ನನ್ನ ಸೋಲಿಗೆ ನೀವೇ ಕಾರಣ, ನನ್ನನ್ನು ಚಕ್ರವ್ಯೂಹದಲ್ಲಿ ಸಿಕ್ಕಿಸಿಬಿಟ್ಟಿದ್ದೀರಿ ಎಂದೆಲ್ಲಾ ಸುಳ್ಳು ಸುದ್ದಿ ಪ್ರಕಟಿಸಿದ್ದ ವಿಶ್ವವಾಣಿ ಪತ್ರಿಕೆಯ ಸಂಪಾದಕ ವಿಶ್ವೇಶ್ವರ್ ಭಟ್ ಮತ್ತು ಸಿಬ್ಬಂದಿಗಳ ಮೇಲೆ ಮಾನಹಾನಿ ಪ್ರಕರಣದಲ್ಲಿ ಎಫ್‍ಐಆರ್ ದಾಖಲಾಗಿದೆ.

ಪ್ರದೀಪ್ ಕುಮಾರ್ ಎಸ್‍ಪಿ ಎಂಬುವವರು ಮೇ 26ರಂದು ನೀಡಿರುವ ದೂರಿನ ಅನ್ವಯ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ವಿಶ್ವವಾಣಿ ಪತ್ರಿಕೆಯು ದೇವೇಗೌಡರ ಮತ್ತು ನಿಖಿಲ್ ಕುಮಾರಸ್ವಾಮಿಯವರ ತೇಜೋವಧೆ ಮಾಡಲೇಂದೆ ಸುಳ್ಳು ವರದಿ ಪ್ರಕಟಿಸಲಾಗಿದೆ ಎಂದು ದೂರಿದ್ದಾರೆ.

ಒಬ್ಬ ಮಹಿಳೆ ವಿರುದ್ಧ ಸೋತಿದ್ದು ನನಗೆ ಅವಮಾನವಾಗಿದೆ, ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ, ಹಾಗೂ ಹೆಚ್.ಡಿ ದೇವೆಗೌಡರ ಬಗ್ಗೆ ‘ಗೌಡರ ಮೊಮ್ಮಕ್ಕಳ ಗದ್ದಲ ಗೊಂದಲ’ ಎಂದೆಲ್ಲಾ ಅಪಪ್ರಚಾರ ಮಾಡಲಾಗಿದೆ. ನಿಖಿಲ್ ಕುಮಾರಸ್ವಾಮಿ ದೇವೇಗೌಡರಿಗೆ ಬೆದರಿಕೆ ಕೂಗಟ ಮಾಡಿದ್ದಾರೆ ಎನ್ನುವ ರೀತಿಯಲ್ಲಿ ವಿಶ್ವವಾಣಿ ಪತ್ರಿಕೆಯಲ್ಲಿ, ಇದೊಂದು ಪೂರ್ವನಿಯೋಜಿತ ಒಳಸಂಚಿನ ಪ್ರಕಟಣೆಯಾಗಿದ್ದು, ಉಹಾಪೋಹ ಕಲ್ಪನೆಯ ಪ್ರಕಟಣೆಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರು ಸಲ್ಲಿಸಿದ್ದರು.

ಈ ಕುರಿತು ಎನ್‍ಡಿಟಿವಿಯೊಂದಿಗೆ ಪ್ರತಿಕ್ರಿಯಿಸಿರುವ ವಿಶ್ವೇಶ್ವರ್ ಭಟ್ ನಾನು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಮರುದಿನ ತಂದೆಯ ನೋವು ಎಂದು ಅವರ ಹೇಳಿಕೆಯನ್ನು ಸಹ ವರದಿ ಪ್ರಕಟಿಸಿದ್ದೇನೆ ಎಂದು ಸಮರ್ಥನೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಅಲ್ಲದೇ ನಿಖಿಲ್ ಕುಮಾರಸ್ವಾಮಿ ನನಗೆ ಎರಡು ಬಾರಿ ಕರೆ ಮಾಡಿದ್ದರು. ಎರಡನೇ ಸಲ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಬೆದರಿಕೆ ಹಾಕಿದರು ಎಂದು ದೂರಿದ್ದಾರೆ. ಅಲ್ಲದೇ ನಾನು ಬಿಜೆಪಿ ಪರವಾಗಿ ಇಲ್ಲ, ಅದು ವಿರೋಧ ಪಕ್ಷದಲ್ಲಿರುವ ಕಾರಣ ನನ್ನನ್ನ ಬೆಂಬಲಿಸುತ್ತಿದೆ ಅಷ್ಟೇ ಎಂದಿದ್ದಾರೆ.

ಈ ಕುರಿತು ಗೃಹ ಸಚಿವ ಎಂ.ಬಿ ಪಾಟೀಲ್ ಪ್ರತಿಕ್ರಿಯಿಸಿದ್ದು ಮಾಧ್ಯಮಗಳು ಫೋರ್ಜರಿ ಮಾಡಿದರೆ ಅದು ತಪ್ಪು. ಅಂತಹ ಮಾಧ್ಯಮವನ್ನು ಯಾರು ರಕ್ಷಿಸಿದರೆ ಅದಕ್ಕಿಂತ ನಾಚಿಕೆ ಮತ್ತೊಂದಿಲ್ಲ, ಇದರ ಕುರಿತು ತನಿಖೆ ನಡೆಯುತ್ತಿದೆ, ನಾನು ಮಧ್ಯ ಪ್ರವೇಶಿಸುವುದಿಲ್ಲ ಎಂದಿದ್ದಾರೆ.

ಒಬ್ಬ ಸಂಪಾದಕನ ಮೇಲೆ ಎಫ್‍ಐಆರ್ ದಾಖಲಾಗಿದೆ. ಅದು ಸಹ ಸುಳ್ಳು ಸುದ್ದಿ ಪ್ರಕಟಿಸಿರುವ ಕಾರಣಕ್ಕಾಗಿ. ಯಾವ ಕನ್ನಡ ಚಾನೆಲ್‍ಗಳು ಕೂಡ ಇದನ್ನು ಸುದ್ದಿ ಮಾಡುತ್ತಿಲ್ಲ ಏಕೆ? ಎಂದು ಹಲವಾರು ನೆಟ್ಟಿಗರು ಸೋಷಿಯಲ್ ಮೀಡಿಯಾದಲ್ಲಿ ಕಿಡಿ ಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಸಂಪಾದಕರ ಜೊತೆ ಈ ಖಾವಿ ತೊಟ್ಟ ಎರಡೆರಡು ಅತ್ಯಾಚಾರದ ಆರೋಪ ಹೊತ್ತಿರುವ ಈ ಕ್ಷಣಕ್ಕೂ ಬೇಲ್ ಮೇಲೆ ತಿರುಗುತ್ತಿರುವ ಈ ಸ್ವಾಮೀಜಿಯನ್ನು ಬಂಧಿಸಬೇಕು. ಯಾಕೆಂದರೆ ಇವನು ಈ ಪತ್ರಿಕೆಯ ಬೇನಾಮಿ ಪಾಲುದಾರ. ಸರಿಯಾಗಿ ಒದ್ದು ವಿಚಾರಣೆ ಮಾಡಿದರೆ ಗೌರಿ ಲಂಕೇಶ್ ಹತ್ಯೆಯಲ್ಲಿ ಈತನ ಪಾತ್ರವು ಬಯಲಾಗುತ್ತದೆ.

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...