Homeಕರ್ನಾಟಕದೇವೆಗೌಡರ ಕುಟುಂಬದ ಕುರಿತು ಸುಳ್ಳು ಸುದ್ದಿ ಪ್ರಕಟ: ವಿಶ್ವೇಶ್ವರ್ ಭಟ್ ಮೇಲೆ ಎಫ್‍ಐಆರ್ ದಾಖಲು

ದೇವೆಗೌಡರ ಕುಟುಂಬದ ಕುರಿತು ಸುಳ್ಳು ಸುದ್ದಿ ಪ್ರಕಟ: ವಿಶ್ವೇಶ್ವರ್ ಭಟ್ ಮೇಲೆ ಎಫ್‍ಐಆರ್ ದಾಖಲು

ಪ್ರದೀಪ್ ಕುಮಾರ್ ಎಸ್‍ಪಿ ಎಂಬುವವರು ಮೇ 26ರಂದು ನೀಡಿರುವ ದೂರಿನ ಅನ್ವಯ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಲೋಕಸಭಾ ಚುನಾವಣೆಯ ಸೋಲಿನ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಕುಡಿದು ಮೈಸೂರಿನಲ್ಲಿ ರಂಪಾಟ ಮಾಡಿದ್ದಾರೆ. ಅಲ್ಲದೇ ತನ್ನ ತಾತ ದೇವೇಗೌಡರಿಗೆ ಕರೆ ಮಾಡಿ ನನ್ನ ಸೋಲಿಗೆ ನೀವೇ ಕಾರಣ, ನನ್ನನ್ನು ಚಕ್ರವ್ಯೂಹದಲ್ಲಿ ಸಿಕ್ಕಿಸಿಬಿಟ್ಟಿದ್ದೀರಿ ಎಂದೆಲ್ಲಾ ಸುಳ್ಳು ಸುದ್ದಿ ಪ್ರಕಟಿಸಿದ್ದ ವಿಶ್ವವಾಣಿ ಪತ್ರಿಕೆಯ ಸಂಪಾದಕ ವಿಶ್ವೇಶ್ವರ್ ಭಟ್ ಮತ್ತು ಸಿಬ್ಬಂದಿಗಳ ಮೇಲೆ ಮಾನಹಾನಿ ಪ್ರಕರಣದಲ್ಲಿ ಎಫ್‍ಐಆರ್ ದಾಖಲಾಗಿದೆ.

ಪ್ರದೀಪ್ ಕುಮಾರ್ ಎಸ್‍ಪಿ ಎಂಬುವವರು ಮೇ 26ರಂದು ನೀಡಿರುವ ದೂರಿನ ಅನ್ವಯ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ವಿಶ್ವವಾಣಿ ಪತ್ರಿಕೆಯು ದೇವೇಗೌಡರ ಮತ್ತು ನಿಖಿಲ್ ಕುಮಾರಸ್ವಾಮಿಯವರ ತೇಜೋವಧೆ ಮಾಡಲೇಂದೆ ಸುಳ್ಳು ವರದಿ ಪ್ರಕಟಿಸಲಾಗಿದೆ ಎಂದು ದೂರಿದ್ದಾರೆ.

ಒಬ್ಬ ಮಹಿಳೆ ವಿರುದ್ಧ ಸೋತಿದ್ದು ನನಗೆ ಅವಮಾನವಾಗಿದೆ, ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ, ಹಾಗೂ ಹೆಚ್.ಡಿ ದೇವೆಗೌಡರ ಬಗ್ಗೆ ‘ಗೌಡರ ಮೊಮ್ಮಕ್ಕಳ ಗದ್ದಲ ಗೊಂದಲ’ ಎಂದೆಲ್ಲಾ ಅಪಪ್ರಚಾರ ಮಾಡಲಾಗಿದೆ. ನಿಖಿಲ್ ಕುಮಾರಸ್ವಾಮಿ ದೇವೇಗೌಡರಿಗೆ ಬೆದರಿಕೆ ಕೂಗಟ ಮಾಡಿದ್ದಾರೆ ಎನ್ನುವ ರೀತಿಯಲ್ಲಿ ವಿಶ್ವವಾಣಿ ಪತ್ರಿಕೆಯಲ್ಲಿ, ಇದೊಂದು ಪೂರ್ವನಿಯೋಜಿತ ಒಳಸಂಚಿನ ಪ್ರಕಟಣೆಯಾಗಿದ್ದು, ಉಹಾಪೋಹ ಕಲ್ಪನೆಯ ಪ್ರಕಟಣೆಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರು ಸಲ್ಲಿಸಿದ್ದರು.

ಈ ಕುರಿತು ಎನ್‍ಡಿಟಿವಿಯೊಂದಿಗೆ ಪ್ರತಿಕ್ರಿಯಿಸಿರುವ ವಿಶ್ವೇಶ್ವರ್ ಭಟ್ ನಾನು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಮರುದಿನ ತಂದೆಯ ನೋವು ಎಂದು ಅವರ ಹೇಳಿಕೆಯನ್ನು ಸಹ ವರದಿ ಪ್ರಕಟಿಸಿದ್ದೇನೆ ಎಂದು ಸಮರ್ಥನೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಅಲ್ಲದೇ ನಿಖಿಲ್ ಕುಮಾರಸ್ವಾಮಿ ನನಗೆ ಎರಡು ಬಾರಿ ಕರೆ ಮಾಡಿದ್ದರು. ಎರಡನೇ ಸಲ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಬೆದರಿಕೆ ಹಾಕಿದರು ಎಂದು ದೂರಿದ್ದಾರೆ. ಅಲ್ಲದೇ ನಾನು ಬಿಜೆಪಿ ಪರವಾಗಿ ಇಲ್ಲ, ಅದು ವಿರೋಧ ಪಕ್ಷದಲ್ಲಿರುವ ಕಾರಣ ನನ್ನನ್ನ ಬೆಂಬಲಿಸುತ್ತಿದೆ ಅಷ್ಟೇ ಎಂದಿದ್ದಾರೆ.

ಈ ಕುರಿತು ಗೃಹ ಸಚಿವ ಎಂ.ಬಿ ಪಾಟೀಲ್ ಪ್ರತಿಕ್ರಿಯಿಸಿದ್ದು ಮಾಧ್ಯಮಗಳು ಫೋರ್ಜರಿ ಮಾಡಿದರೆ ಅದು ತಪ್ಪು. ಅಂತಹ ಮಾಧ್ಯಮವನ್ನು ಯಾರು ರಕ್ಷಿಸಿದರೆ ಅದಕ್ಕಿಂತ ನಾಚಿಕೆ ಮತ್ತೊಂದಿಲ್ಲ, ಇದರ ಕುರಿತು ತನಿಖೆ ನಡೆಯುತ್ತಿದೆ, ನಾನು ಮಧ್ಯ ಪ್ರವೇಶಿಸುವುದಿಲ್ಲ ಎಂದಿದ್ದಾರೆ.

ಒಬ್ಬ ಸಂಪಾದಕನ ಮೇಲೆ ಎಫ್‍ಐಆರ್ ದಾಖಲಾಗಿದೆ. ಅದು ಸಹ ಸುಳ್ಳು ಸುದ್ದಿ ಪ್ರಕಟಿಸಿರುವ ಕಾರಣಕ್ಕಾಗಿ. ಯಾವ ಕನ್ನಡ ಚಾನೆಲ್‍ಗಳು ಕೂಡ ಇದನ್ನು ಸುದ್ದಿ ಮಾಡುತ್ತಿಲ್ಲ ಏಕೆ? ಎಂದು ಹಲವಾರು ನೆಟ್ಟಿಗರು ಸೋಷಿಯಲ್ ಮೀಡಿಯಾದಲ್ಲಿ ಕಿಡಿ ಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಸಂಪಾದಕರ ಜೊತೆ ಈ ಖಾವಿ ತೊಟ್ಟ ಎರಡೆರಡು ಅತ್ಯಾಚಾರದ ಆರೋಪ ಹೊತ್ತಿರುವ ಈ ಕ್ಷಣಕ್ಕೂ ಬೇಲ್ ಮೇಲೆ ತಿರುಗುತ್ತಿರುವ ಈ ಸ್ವಾಮೀಜಿಯನ್ನು ಬಂಧಿಸಬೇಕು. ಯಾಕೆಂದರೆ ಇವನು ಈ ಪತ್ರಿಕೆಯ ಬೇನಾಮಿ ಪಾಲುದಾರ. ಸರಿಯಾಗಿ ಒದ್ದು ವಿಚಾರಣೆ ಮಾಡಿದರೆ ಗೌರಿ ಲಂಕೇಶ್ ಹತ್ಯೆಯಲ್ಲಿ ಈತನ ಪಾತ್ರವು ಬಯಲಾಗುತ್ತದೆ.

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...